ವಿಷಯಕ್ಕೆ ಹೋಗಿ

ಇನ್ನೆರಡು ವಾರದಲ್ಲಿ ರಸ್ತೆಯ ಪ್ಯಾಚ್ ವರ್ಕ್ ಪ್ರಾರಂಭ : ಸಂಸದ

ಹುಳಿಯಾರು-ಶಿರಾ ಹಾಗೂ ಹುಳಿಯಾರು-ಪಂಚನಹಳ್ಳಿ ರಸ್ತೆ ಮಾರ್ಗ ದುಸ್ಥರವಾಗಿದ್ದು ಸಂಚಾರಕ್ಕೆ ತೊಡಕಾಗಿದೆ ಎಂಬುದು ತಮ್ಮ ಗಮನಕ್ಕೆ ಬಂದಿದ್ದು ಈಗಾಗಲೇ ಪಿಡಬ್ಯೂಡಿ ಇಂಜಿನಿಯರ್ ಅವರೊಂದಿಗೆ ಚರ್ಚಿಸಿದ್ದೇನೆ. ಇನ್ನೆರಡು ವಾರದಲ್ಲಿ ಈ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತದೆ ಎಂದು ಸಂಸದ ಎಸ್.ಪಿ.ಮುದ್ದುಹನುಮೇಗೌಡ ತಿಳಿಸಿದರು.
ಹುಳಿಯಾರಿನ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಎಸ್.ಪಿ.ಮುದ್ದುಹನುಮೇಗೌಡ ಹಾಗೂ ಕಾಂಗ್ರೆಸ್ಸ್ ಮುಖಂಡ ಸಾಸಲು ಸತೀಶ್.
ಹುಳಿಯಾರಿನ ಪರಿವೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಮಂಗಳೂರಿನಿಂದ ತಮಿಳುನಾಡಿನ ವಿಲ್ಲುಪುರಂಗೆ ಸಂಪರ್ಕ ಕಲ್ಪಿಸುವ ಈ ರಾಷ್ಟ್ರೀಯ ಹೆದ್ದಾರಿ ಹುಳಿಯಾರು ಮಾರ್ಗವಾಗಿ ಹಾದು ಹೋಗಿದ್ದು ಈಗಾಗಲೇ ರಸ್ತೆ ಕಾಮಗಾರಿಗೆ ಟೆಂಡರ್ ಕರೆದು ಕಾಮಗಾರಿ ಅಲ್ಲಲ್ಲಿ ನಡೆದಿದೆ.ಆದರೆ ಟೆಂಡರ್ ಪಡೆದ ಕಂಟ್ರಾಕ್ಟರ್ ರಸ್ತೆ ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿರುವುದರಿಂದ ಆತನನ್ನು ಸರ್ಕಾರ ಬ್ಲಾಕ್ ಲಿಸ್ಟ್ ಗೆ ಸೇರಿಸಿದ್ದು, ರೀ ಟೆಂಡರ್ ಕರೆಯಲು ಯೋಜನೆ ರೂಪಿಸಿದೆ ಎಂದರು. ಸದ್ಯ ಹೊಸ ಟೆಂಡರ್ ಆಗುವತನಕ ರಸ್ತೆಯಲ್ಲಿನ ಗುಂಡಿಗಳನ್ನು ಡಾಂಬಾರ್ ಹಾಕಿ ಮುಚ್ಚುವಂತೆ ಪಿಡಬ್ಯೂಡಿ ಇಂಜಿನಿಯರ್ ಗೆ ತಿಳಿಸಿದ್ದು ಕೆಲಸ ಶೀಘ್ರದಲ್ಲೇ ನಡೆಯಲಿದೆ ಎಂದರು.
ಹುಳಿಯಾರು ಮಾರ್ಗವಾಗಿ ರೈಲ್ವೆ ಮಾರ್ಗದ ಕಾಮಗಾರಿ ನಡೆಯಲಿದ್ದು ಈ ಬಾರಿಯ ಬಜೆಟ್ ನಲ್ಲಿ ಸೇರಿಸಿ ಅನುದಾನ ಮಂಜೂರು ಮಾಡಿಸುವುದಾಗಿ ಜೊತೆಗೆ ತುಮಕೂರು- ಅರಸೀಕೆರೆ ನಡುವೆ ಇರುವ ಸಿಂಗಲ್ ರೈಲ್ವೆ ಮಾರ್ಗವನ್ನು ಡಬ್ಲಿಂಗ್ ಮಾರ್ಗ ಮಾಡಿಸುವ ಯೋಜನೆಯಿದೆ ಎಂದರು. ಪಟ್ಟಣದ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಹಾಗೂ ಆಸ್ಪತ್ರೆಯ ಸ್ವಚ್ಚತೆ ಬಗ್ಗೆ ತಮ್ಮ ಗಮನಕ್ಕೆ ಬಂದಿದ್ದು ಸೂಕ್ತ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ಕಂದಾಯ ಇಲಾಖೆಯಲ್ಲಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಂಸದರ ಮುಂದಿಟ್ಟಾಗ ಸ್ಥಳದಲ್ಲೇ ಇದ್ದ ತಹಸೀಲ್ದಾರ್ ಅವರನ್ನು ಕರೆಸಿ ತಾಲ್ಲೂಕು ಕಛೇರಿ ಹಾಗೂ ನಾಡಕಛೇರಿಯಲ್ಲಿ ಯಾವ ಅಧಿಕಾರಿ ರೈತರ ಹಾಗೂ ಸಾರ್ವಜನಿಕರೊಂದಿಗೆ ಉತ್ತಮರೀತಿಯಲ್ಲಿ ನಡೆದುಕೊಳ್ಳುವುದಿಲ್ಲ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಇಲ್ಲವಾದಲ್ಲಿ ಸಾರ್ವಜನಿಕರಿಂದಲ್ಲೇ ಲಿಖಿತರೂಪದ ದಾಖಲೆ ಪಡೆದು ಅಧಿಕಾರಿಗಳ ಮೇಲೆ ತಾವೇ ಶಿಸ್ತುಕ್ರಮ ಜರುಗಿಸುವುದಾಗಿ ತಿಳಿಸಿದರು.
ಸ್ಥಳಾವಕಾಶದ ಭರವಸೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ತೆರವಾದ ಅಂಗಡಿದಾರರು ತಮಗೆ ಸ್ಥಳಾವಕಾಶ ಮಾಡಿಕೊಡಿ ಸಂಸದರಲ್ಲಿ ಮನವಿ ಮಾಡಿದರು. ಕೋರ್ಟ್ ಆದೇಶದಂತೆ ಅಂಗಡಿಗಳನ್ನು ಕಂದಾಯ ಇಲಾಖೆಯವರು ತೆರವು ಮಾಡಿದ್ದಾರೆ. ಮತ್ತೆ ಅದೇ ಜಾಗದಲ್ಲಿ ತಳ್ಳುವ ಗಾಡಿಗಳನ್ನಾಗಲಿ ಅಥವಾ ತಾತ್ಕಾಲಿಕ ಅಂಗಡಿಗಳನ್ನು ಇಡುವಂತೆ ಹೇಳುವ ಅಧಿಕಾರ ತಮಗಿಲ್ಲ. ಪಟ್ಟಣದಲ್ಲಿ ಅಂಗಡಿಗಳನ್ನಿಡಲು ಸೂಕ್ತ ಜಾಗವನ್ನು ಗುರ್ತಿಸಿ ಶೀಘ್ರದಲ್ಲೇ ಸ್ಥಳಾವಕಾಶ ಮಾಡಿಕೊಡುವ ಭರವಸೆ ನೀಡಿದ್ದಾರೆ. ಅಂಗಡಿದಾರರು ತಮಗೆ ಅಂಗಡಿಗಳನ್ನು ಇಟ್ಟುಕೊಳ್ಳಲು ಸರ್ಕಾರಿ ಜಾಗದಲ್ಲಿ ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳು, ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಯವರಿಗೆ ಮನವಿ ಸಲ್ಲಿಸಿ ಆ ಬಗ್ಗೆ ತಾವು ಗಮನಹರಿಸುವುದಾಗಿ ತಿಳಿಸಿದರು.

ಈ ವೇಳೆ ಮುಖಂಡರಾದ ಸಾಸಲು ಸತೀಶ್, ತಾಲ್ಲೂಕ್ ಯುವಕಾಂಗ್ರೆಸ್ಸ್ ಅಧ್ಯಕ್ಷ ಹೊಸಳ್ಳಿ ಅಶೋಕ್, ಎಪಿಎಂಸಿ ನಿರ್ದೇಶಕ ಸಿದ್ರಾಮಯ್ಯ, ಚಿ.ನಾ.ಹಳ್ಳಿ ಪಿಎಲ್.ಡಿ ಬ್ಯಾಂಕ್ ನ ನಿರ್ದೇಶಕ ಕೆ.ಸಿ.ಶಿವಕುಮಾರ್, ರಹಮತ್ ಉಲ್ಲಾ, ಮೋಹನ್ ಕುಮಾರ್ ರೈ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...