ವಿಷಯಕ್ಕೆ ಹೋಗಿ

ಇನ್ನೆರಡು ವಾರದಲ್ಲಿ ರಸ್ತೆಯ ಪ್ಯಾಚ್ ವರ್ಕ್ ಪ್ರಾರಂಭ : ಸಂಸದ

ಹುಳಿಯಾರು-ಶಿರಾ ಹಾಗೂ ಹುಳಿಯಾರು-ಪಂಚನಹಳ್ಳಿ ರಸ್ತೆ ಮಾರ್ಗ ದುಸ್ಥರವಾಗಿದ್ದು ಸಂಚಾರಕ್ಕೆ ತೊಡಕಾಗಿದೆ ಎಂಬುದು ತಮ್ಮ ಗಮನಕ್ಕೆ ಬಂದಿದ್ದು ಈಗಾಗಲೇ ಪಿಡಬ್ಯೂಡಿ ಇಂಜಿನಿಯರ್ ಅವರೊಂದಿಗೆ ಚರ್ಚಿಸಿದ್ದೇನೆ. ಇನ್ನೆರಡು ವಾರದಲ್ಲಿ ಈ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತದೆ ಎಂದು ಸಂಸದ ಎಸ್.ಪಿ.ಮುದ್ದುಹನುಮೇಗೌಡ ತಿಳಿಸಿದರು.
ಹುಳಿಯಾರಿನ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸದ ಎಸ್.ಪಿ.ಮುದ್ದುಹನುಮೇಗೌಡ ಹಾಗೂ ಕಾಂಗ್ರೆಸ್ಸ್ ಮುಖಂಡ ಸಾಸಲು ಸತೀಶ್.
ಹುಳಿಯಾರಿನ ಪರಿವೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಮಂಗಳೂರಿನಿಂದ ತಮಿಳುನಾಡಿನ ವಿಲ್ಲುಪುರಂಗೆ ಸಂಪರ್ಕ ಕಲ್ಪಿಸುವ ಈ ರಾಷ್ಟ್ರೀಯ ಹೆದ್ದಾರಿ ಹುಳಿಯಾರು ಮಾರ್ಗವಾಗಿ ಹಾದು ಹೋಗಿದ್ದು ಈಗಾಗಲೇ ರಸ್ತೆ ಕಾಮಗಾರಿಗೆ ಟೆಂಡರ್ ಕರೆದು ಕಾಮಗಾರಿ ಅಲ್ಲಲ್ಲಿ ನಡೆದಿದೆ.ಆದರೆ ಟೆಂಡರ್ ಪಡೆದ ಕಂಟ್ರಾಕ್ಟರ್ ರಸ್ತೆ ಕೆಲಸವನ್ನು ಅರ್ಧಕ್ಕೆ ನಿಲ್ಲಿಸಿರುವುದರಿಂದ ಆತನನ್ನು ಸರ್ಕಾರ ಬ್ಲಾಕ್ ಲಿಸ್ಟ್ ಗೆ ಸೇರಿಸಿದ್ದು, ರೀ ಟೆಂಡರ್ ಕರೆಯಲು ಯೋಜನೆ ರೂಪಿಸಿದೆ ಎಂದರು. ಸದ್ಯ ಹೊಸ ಟೆಂಡರ್ ಆಗುವತನಕ ರಸ್ತೆಯಲ್ಲಿನ ಗುಂಡಿಗಳನ್ನು ಡಾಂಬಾರ್ ಹಾಕಿ ಮುಚ್ಚುವಂತೆ ಪಿಡಬ್ಯೂಡಿ ಇಂಜಿನಿಯರ್ ಗೆ ತಿಳಿಸಿದ್ದು ಕೆಲಸ ಶೀಘ್ರದಲ್ಲೇ ನಡೆಯಲಿದೆ ಎಂದರು.
ಹುಳಿಯಾರು ಮಾರ್ಗವಾಗಿ ರೈಲ್ವೆ ಮಾರ್ಗದ ಕಾಮಗಾರಿ ನಡೆಯಲಿದ್ದು ಈ ಬಾರಿಯ ಬಜೆಟ್ ನಲ್ಲಿ ಸೇರಿಸಿ ಅನುದಾನ ಮಂಜೂರು ಮಾಡಿಸುವುದಾಗಿ ಜೊತೆಗೆ ತುಮಕೂರು- ಅರಸೀಕೆರೆ ನಡುವೆ ಇರುವ ಸಿಂಗಲ್ ರೈಲ್ವೆ ಮಾರ್ಗವನ್ನು ಡಬ್ಲಿಂಗ್ ಮಾರ್ಗ ಮಾಡಿಸುವ ಯೋಜನೆಯಿದೆ ಎಂದರು. ಪಟ್ಟಣದ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಹಾಗೂ ಆಸ್ಪತ್ರೆಯ ಸ್ವಚ್ಚತೆ ಬಗ್ಗೆ ತಮ್ಮ ಗಮನಕ್ಕೆ ಬಂದಿದ್ದು ಸೂಕ್ತ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.
ಕಂದಾಯ ಇಲಾಖೆಯಲ್ಲಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಂಸದರ ಮುಂದಿಟ್ಟಾಗ ಸ್ಥಳದಲ್ಲೇ ಇದ್ದ ತಹಸೀಲ್ದಾರ್ ಅವರನ್ನು ಕರೆಸಿ ತಾಲ್ಲೂಕು ಕಛೇರಿ ಹಾಗೂ ನಾಡಕಛೇರಿಯಲ್ಲಿ ಯಾವ ಅಧಿಕಾರಿ ರೈತರ ಹಾಗೂ ಸಾರ್ವಜನಿಕರೊಂದಿಗೆ ಉತ್ತಮರೀತಿಯಲ್ಲಿ ನಡೆದುಕೊಳ್ಳುವುದಿಲ್ಲ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಇಲ್ಲವಾದಲ್ಲಿ ಸಾರ್ವಜನಿಕರಿಂದಲ್ಲೇ ಲಿಖಿತರೂಪದ ದಾಖಲೆ ಪಡೆದು ಅಧಿಕಾರಿಗಳ ಮೇಲೆ ತಾವೇ ಶಿಸ್ತುಕ್ರಮ ಜರುಗಿಸುವುದಾಗಿ ತಿಳಿಸಿದರು.
ಸ್ಥಳಾವಕಾಶದ ಭರವಸೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ತೆರವಾದ ಅಂಗಡಿದಾರರು ತಮಗೆ ಸ್ಥಳಾವಕಾಶ ಮಾಡಿಕೊಡಿ ಸಂಸದರಲ್ಲಿ ಮನವಿ ಮಾಡಿದರು. ಕೋರ್ಟ್ ಆದೇಶದಂತೆ ಅಂಗಡಿಗಳನ್ನು ಕಂದಾಯ ಇಲಾಖೆಯವರು ತೆರವು ಮಾಡಿದ್ದಾರೆ. ಮತ್ತೆ ಅದೇ ಜಾಗದಲ್ಲಿ ತಳ್ಳುವ ಗಾಡಿಗಳನ್ನಾಗಲಿ ಅಥವಾ ತಾತ್ಕಾಲಿಕ ಅಂಗಡಿಗಳನ್ನು ಇಡುವಂತೆ ಹೇಳುವ ಅಧಿಕಾರ ತಮಗಿಲ್ಲ. ಪಟ್ಟಣದಲ್ಲಿ ಅಂಗಡಿಗಳನ್ನಿಡಲು ಸೂಕ್ತ ಜಾಗವನ್ನು ಗುರ್ತಿಸಿ ಶೀಘ್ರದಲ್ಲೇ ಸ್ಥಳಾವಕಾಶ ಮಾಡಿಕೊಡುವ ಭರವಸೆ ನೀಡಿದ್ದಾರೆ. ಅಂಗಡಿದಾರರು ತಮಗೆ ಅಂಗಡಿಗಳನ್ನು ಇಟ್ಟುಕೊಳ್ಳಲು ಸರ್ಕಾರಿ ಜಾಗದಲ್ಲಿ ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳು, ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಯವರಿಗೆ ಮನವಿ ಸಲ್ಲಿಸಿ ಆ ಬಗ್ಗೆ ತಾವು ಗಮನಹರಿಸುವುದಾಗಿ ತಿಳಿಸಿದರು.

ಈ ವೇಳೆ ಮುಖಂಡರಾದ ಸಾಸಲು ಸತೀಶ್, ತಾಲ್ಲೂಕ್ ಯುವಕಾಂಗ್ರೆಸ್ಸ್ ಅಧ್ಯಕ್ಷ ಹೊಸಳ್ಳಿ ಅಶೋಕ್, ಎಪಿಎಂಸಿ ನಿರ್ದೇಶಕ ಸಿದ್ರಾಮಯ್ಯ, ಚಿ.ನಾ.ಹಳ್ಳಿ ಪಿಎಲ್.ಡಿ ಬ್ಯಾಂಕ್ ನ ನಿರ್ದೇಶಕ ಕೆ.ಸಿ.ಶಿವಕುಮಾರ್, ರಹಮತ್ ಉಲ್ಲಾ, ಮೋಹನ್ ಕುಮಾರ್ ರೈ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.