ವಿಷಯಕ್ಕೆ ಹೋಗಿ

ಭಟ್ಟರಹಳ್ಳಿಯಲ್ಲಿ ಡೆಂಗ್ಯೂ ಭೀತಿ : ಆರೋಗ್ಯ ಇಲಾಖೆ, ಗ್ರಾ.ಪಂ.ನಿರ್ಲಕ್ಷ್ಯ

ಹುಳಿಯಾರು  ಹೋಬಳಿ ಭಟ್ಟರಹಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಇಲ್ಲಿನ ಹಲವಾರು ಜನ ಜ್ವರದಿಂದ ಬಳಲುತ್ತಿದ್ದು ಮೂವರು ಸಾವನಪ್ಪಿದ್ದು ಇದಕ್ಕೆ ಡೆಂಗ್ಯೂ ಕಾರಣವೆಂದು ಗ್ರಾಮಸ್ಥರಲ್ಲಿ ಭೀತಿಯುಂಟಾಗಿದ್ದು. ಆರೋಗ್ಯ ಇಲಾಖೆಯವರಾಗಲಿ ಸ್ಥಳೀಯ ಆಡಳಿತದವರಾಗಲಿ ಯಾವುದೇ ಕ್ರಮಕೈಗೊಳ್ಳದೆ ಪ್ರೇಕ್ಷಕರಂತೆ ನೋಡುತ್ತಿದ್ದಾರೆ.
ಡೆಂಗ್ಯೂ ನಿಂದ ಸಾವನಪ್ಪಿದೆ ಎಂದು ಹೇಳಲಾದ ಮಲ್ಲಿಕಾರ್ಜುನಯ್ಯ ಹಾಗೂ ದೇವಿರಮ್ಮ.
ಜನರಿಯಿಂದ ಈಚೆಗೆ ಜ್ವರದಿಂದ ಬಳಲುತ್ತಿದ್ದ ಇದೇ ಗ್ರಾಮದ ಶ್ರೀ ಸಿದ್ಧರಾಮೇಶ್ವರ ದೇವಸ್ಥಾನದ ಗೌಡರಾದ ಬಿ.ಎಸ್‌.ಕಾಂತರಾಜು(೪೮) , ಗ್ರಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನಯ್ಯ(೩೨) ಹಾಗೂ ಮೂರುದಿನ ಹಿಂದಷ್ಟೆ ದೇವಿರಮ್ಮ(೪೫) ಎಂಬುವರು ಸಾವನ್ನಪ್ಪಿದ್ದು , ಇವರುಗಳ ಮೆಡಿಕಲ್ ರಿಪೋರ್ಟ್ ನಲ್ಲಿ ಡೈಂಗ್ಯೂಜ್ವರದ ಕಾರಣ ನೀಡಲಾಗಿದೆ. ಇದರಿಂದ ಆತಂಕಗೊಂಡ ಸ್ಥಳೀಯರು ಆರೋಗ್ಯ ಇಲಾಖೆಯವರಿಗೆ ಹಾಗೂ ಸ್ಥಳೀಯ ಗ್ರಾ.ಪಂ.ಯವರಿಗೆ ತಿಳಿಸಿದರೂ ಸಹ ಉಪಯೋಗವಾಗಿಲ್ಲ. .ಅಲ್ಲದೆ ಈಗ ಗ್ರಾಮದಲ್ಲಿ ಜ್ವರಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು ಏಳು ಜನ ಹುಳಿಯಾರಿನ ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಟ್ಟರಹಳ್ಳಿಗೆ ಸಮೀಪವೆ ಇರುವ ಯಳನಡು ಆಸ್ಪತ್ರೆಯಲ್ಲಿ ಸೂಕ್ತಚಿಕಿತ್ಸೆ ಸಿಗುತ್ತಿಲ್ಲ ಹಾಗೂ ಜೌಷಧಿಗಳು ದೊರೆಯದೆ ಜನ ಪರದಾಡುವಂತಾಗಿದೆ.
ಗ್ರಾಮದಲ್ಲಿ ಅನೈರ್ಮಲ್ಯ ಹೆಚ್ಚಾಗಿದ್ದು ಗ್ರಾಮ ಪಂಚಾಯ್ತಿಯವರು ಸ್ವಚ್ಚತೆ ಬಗ್ಗೆ ಗಮನಹರಿಸಿಲ್ಲ ಅಲ್ಲದೆ ನಮ್ಮ ಗ್ರಾಮದಲ್ಲಿ ಹಲವರು ಜ್ವರದಿಂದ ಬಳಲುತ್ತಿದ್ದಾರೆ ಒಮ್ಮೆ ಬಂದು ಪರಿಶೀಲಿಸಿ ಎಂದು ತಾಲ್ಲೂಕ್ ವೈದ್ಯಾಧಿಕಾರಿಗಳಿಗೆ ಪೋನ್ ಮೂಲಕ ಕೇಳಿಕೊಂಡರೂ ಸಹ ಅವರು ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ಗ್ರಾಮದ ದಿನೇಶ್ ತಿಳಿಸುತ್ತಾರೆ.

ಗ್ರಾಮದಲ್ಲಿ ದಿನೇ ದಿನೇ ಜ್ವರಪೀಡಿತರ ಸಂಖ್ಯೆ ದ್ವಿಗುಣವಾಗುತ್ತಿದ್ದು ಶೀಘ್ರವೇ ಸೂಕ್ತ ಚಿಕಿತ್ಸಾಕ್ರಮ ಕೈಗೊಳ್ಳದೇ ಹೋದರೆ ಮತ್ತಷ್ಟು ಜನ ಸಾವಿಗೀಡಾಗುತ್ತಾರೆ ಇದಕ್ಕೆ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತದವರೇ ಹೊಣೆಯಾಗಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.