ವಿಷಯಕ್ಕೆ ಹೋಗಿ

ಹುಳಿಯಾರು ಸುತ್ತಮುತ್ತ ಜೈತುಳುನಾಡ್ ಚಿತ್ರಿಕರಣ

ಹುಳಿಯಾರು  ಪಟ್ಟಣದ ನಂದಿಹಳ್ಳಿಯಲ್ಲಿ ತನ್ನ ಮಹೂರ್ತ ಕಾರ್ಯಕ್ರಮ ಆಚರಿಸಿಕೊಂಡ ತುಳುಭಾಷೆಯ ಜೈತುಳುನಾಡ್ ಚಿತ್ರದ ಪ್ರಥಮ ಹಂತದ ಚಿತ್ರೀಕರಣ ಹುಳಿಯಾರು ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಲೋಕೇಶನ್ ನಲ್ಲಿ ನಡೆಯಿತು.
ಜೈತುಳುನಾಡ್ ಚಿತ್ರ ತಂಡದೊಂದಿಗೆ ಸಹನಿರ್ಮಾಪಕ ನಂದಿಹಳ್ಳಿ ಶಿವಣ್ಣ,


ಹುಳಿಯಾರಿನವರೇ ಆದ ಪ್ರಥಮ ದರ್ಜೆ ಗುತ್ತಿಗೆದಾರರು ಹಾಗೂ ಜೆಡಿಎಸ್ ಮುಖಂಡರು ಆದ ನಂದಿಹಳ್ಳಿಯ ಶಿವಣ್ಣ ತೆಗೆಯುತ್ತಿರುವ ಪ್ರಥಮ ಚಿತ್ರ ಇದಾಗಿದ್ದು ಈ ಭಾಗದ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಈ ಚಿತ್ರ ತುಳುಭಾಷೆಯದ್ದಾಗಿದ್ದು ಫ್ರಾಂಕ್ ಫರ್ನಾಡಿಂಸ್, ಅಲಿ ನಿಜಾನ್ ಅಹಮದ್ ಹಾಗೂ ನಂದಿಹಳ್ಳಿಯ ಶಿವಣ್ಣ ಸೇರಿ ಚಿತ್ರ ನಿರ್ಮಿಸುತ್ತಿದ್ದಾರೆ. ಕಡಲ ಮಗೆ ಖ್ಯಾತಿಯ ಪ್ರವೀಣ್ ಈ ಚಿತ್ರ ನಿರ್ದೇಶಿಸಿದ್ದು ಆಕ್ಷನ್ ಕಟ್ ಹೇಳಿದ್ದಾರೆ. ನಾಯಕ ನಟನಾಗಿ ಅವಿನಾಶ್ ಶೆಟ್ಟಿ ಹಾಗೂ ನಾಯಕ ನಟಿಯಾಗಿ ಸೋನಾಲಿ ಮೊಂಥೆರೋ ಕಾಣಿಸಿಕೊಂಡರೆ, ಪೋಷಕ ಪಾತ್ರದಲ್ಲಿ ಭವ್ಯ, ಸ್ವಸ್ತಿಕ್ ಶಂಕರ್,ಅರವಿಂದ್ ಬೋಲಾರ್, ಮನಹೋಹನ ರೈ,ನಯನಗ್ರಹಣ್ ಸೇರಿದಂತೆ ಇತರರು ತಾರಾಗಣದಲ್ಲಿದ್ದಾರೆ. ಜೇಮ್ಸ್ ಮ್ಯೂಸಿಕ್ ನೀಡಿದ್ದು, ಥ್ರಿಲರ್ ಮಂಜು ಹಾಗೂ ಕೌರವ ವೆಂಕಟೇಶ್ ಸಾಹಸ ನೀಡಿದ್ದಾರೆ.
ಹುಳಿಯಾರು ಸಮೀಪದ ಬೋರನಕಣಿವೆ ಬಳಿ ಹಾಡಿನ ಚಿತ್ರೀಕರಣ ನಡೆಸುತ್ತಿರುವ ಚಿತ್ರತಂಡ.
ಮದನ್ ಹರಿಣಿ ನೃತ್ಯ ನಿರ್ದೇಶನ ಮಾಡುತ್ತಿದ್ದು ಚಿತ್ರದಲ್ಲಿನ ಒಂದು ಹಾಡಿಗೆ ಹುಳಿಯಾರಿನ ಸುತ್ತಮುತ್ತಲಿನ ನಂದಿಹಳ್ಳಿ, ಬೋರನಕಣಿವೆ ಜಲಾಶಯ, ಹಂದನಕೆರೆ, ಗವಿರಂಗನಾಥಸ್ವಾಮಿ ಬೆಟ್ಟ, ಕಂಚೀಪುರದ ಪ್ರದೇಶದಲ್ಲಿ ಹಾಡನ್ನು ಚಿತ್ರೀಕರಿಸಿಕೊಳ್ಳಲಾಗಿದೆ.
ಚಿತ್ರದಲ್ಲೇನಿದೆ: ದೇವಿಪುತ್ತೂರ್ ಕಥೆ ಹೆಣೆದಿದ್ದು ಎಸ್.ಎಸ್.ಡೇವಿಡ್ ಸಂಭಾಷಣೆ ನೀಡಿದ್ದಾರೆ. ಗೌರಿವೆಂಕಟೇಶ್ ತಮ್ಮ ಕ್ಯಾಮರಕಣ್ಣಲ್ಲಿ ಚಿತ್ರ ಸೆರೆಹಿಡಿದ್ದಾರೆ. ಉತ್ತಮ ಚಿತ್ರಕಥೆಯಿರುವ ಸಿನಿಮ ಇದಾಗಿದ್ದು, ಚಿತ್ರದಲ್ಲಿ ಸೆಂಟಿಮೆಂಟ್, ಪ್ರೇಮಕಥೆ, ಆಕ್ಷನ್ ಹಾಗೂ ಕಾಮಿಡಿ ಸಹ ಇದ್ದು ವೀಕ್ಷಕರಿಗೆ ಉತ್ತಮ ಸಂದೇಶ ನೀಡಲಿದೆ ಎನ್ನುತ್ತಾರೆ ಇದೇ ಊರಿನವರಾದ ಸಹನಿರ್ಮಾಪಕ ನಂದಿಹಳ್ಳಿಯ ರಾಜಸುಲೋಚನ ಶಿವಣ್ಣ. ಕಳೆದ ಹಲವು ವರ್ಷದಿಂದ ಸಿನಿಮಾ ನಿರ್ಮಾಣ ಮಾಡಬೇಕೆಂಬ ಹಂಬಲ ಈಡೇರಲಿದೆ ಎನ್ನುತಾರೆ ಅವರು. ಅಲ್ಲದೆ ನಮ್ಮ ಊರಿನ ಸುತ್ತಮುತ್ತಲೂ ಸಹ ಚಿತ್ರೀಕರಣಕ್ಕೆ ಉತ್ತಮ ಲೋಕೇಶನ್ ಗಳಿದ್ದು ಈ ಚಿತ್ರದ ಹೆಚ್ಚು ಭಾಗ ಚಿತ್ರೀಕರಣವನ್ನು ಸ್ಥಳೀಯರ ಸಹಕಾರದಿಂದ ಇಲ್ಲಿಯೇ ನಡೆಸುವುದಾಗಿ ತಿಳಿಸಿದರು. ಮೊದಲು ತುಳು ಭಾಷೆಯಲ್ಲಿ ಚಿತ್ರ ತೆರೆಕಾಣಲಿದ್ದು ನಂತರ ಕನ್ನಡ ಭಾಷೆಯಲ್ಲಿ ತಪ್ಪದೇ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.
ಗ್ರಾಮೀಣಭಾಗದಲ್ಲಿ ನಡೆಯುತ್ತಿರುವ ಚಿತ್ರೀಕರಣ ವೀಕ್ಷಿಸಲು ಹಾಗೂ ನಾಯಕನಟ ಅವಿನಾಶ್ ಶೆಟ್ಟಿ ಹಾಗೂ ನಟಿಯಾಗಿ ಸೋನಾಲಿ ಮೊಂಥೆರೋಅವರನ್ನು ನೋಡಲು ಜನ ಮುಗಿಬಿದಿದ್ದಾರೆ.

ಒಟ್ಟಾರೆ ಮೂರುಧರ್ಮೀಯರು ಸೇರಿ ಚಿತ್ರ ನಿರ್ಮಿಸುವ ಮೂಲಕ ಹೊಸ ಪ್ರಯತ್ನ ಮಾಡುತ್ತಿದ್ದು , ಮುಂದಿನ ಕೆಲ ತಿಂಗಳಲ್ಲಿ ಚಿತ್ರ ತೆರೆಕಾಣಲಿದ್ದು, ಪ್ರೇಕ್ಷಕರಿಗೆ ಹಾಗೂ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರ ಇದಾಗಿರಲಿ ಎಂದು ಅಶಿಶೋಣ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...