ವಿಷಯಕ್ಕೆ ಹೋಗಿ

ಹುಳಿಯಾರು ಸುತ್ತಮುತ್ತ ಜೈತುಳುನಾಡ್ ಚಿತ್ರಿಕರಣ

ಹುಳಿಯಾರು  ಪಟ್ಟಣದ ನಂದಿಹಳ್ಳಿಯಲ್ಲಿ ತನ್ನ ಮಹೂರ್ತ ಕಾರ್ಯಕ್ರಮ ಆಚರಿಸಿಕೊಂಡ ತುಳುಭಾಷೆಯ ಜೈತುಳುನಾಡ್ ಚಿತ್ರದ ಪ್ರಥಮ ಹಂತದ ಚಿತ್ರೀಕರಣ ಹುಳಿಯಾರು ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಲೋಕೇಶನ್ ನಲ್ಲಿ ನಡೆಯಿತು.
ಜೈತುಳುನಾಡ್ ಚಿತ್ರ ತಂಡದೊಂದಿಗೆ ಸಹನಿರ್ಮಾಪಕ ನಂದಿಹಳ್ಳಿ ಶಿವಣ್ಣ,


ಹುಳಿಯಾರಿನವರೇ ಆದ ಪ್ರಥಮ ದರ್ಜೆ ಗುತ್ತಿಗೆದಾರರು ಹಾಗೂ ಜೆಡಿಎಸ್ ಮುಖಂಡರು ಆದ ನಂದಿಹಳ್ಳಿಯ ಶಿವಣ್ಣ ತೆಗೆಯುತ್ತಿರುವ ಪ್ರಥಮ ಚಿತ್ರ ಇದಾಗಿದ್ದು ಈ ಭಾಗದ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಈ ಚಿತ್ರ ತುಳುಭಾಷೆಯದ್ದಾಗಿದ್ದು ಫ್ರಾಂಕ್ ಫರ್ನಾಡಿಂಸ್, ಅಲಿ ನಿಜಾನ್ ಅಹಮದ್ ಹಾಗೂ ನಂದಿಹಳ್ಳಿಯ ಶಿವಣ್ಣ ಸೇರಿ ಚಿತ್ರ ನಿರ್ಮಿಸುತ್ತಿದ್ದಾರೆ. ಕಡಲ ಮಗೆ ಖ್ಯಾತಿಯ ಪ್ರವೀಣ್ ಈ ಚಿತ್ರ ನಿರ್ದೇಶಿಸಿದ್ದು ಆಕ್ಷನ್ ಕಟ್ ಹೇಳಿದ್ದಾರೆ. ನಾಯಕ ನಟನಾಗಿ ಅವಿನಾಶ್ ಶೆಟ್ಟಿ ಹಾಗೂ ನಾಯಕ ನಟಿಯಾಗಿ ಸೋನಾಲಿ ಮೊಂಥೆರೋ ಕಾಣಿಸಿಕೊಂಡರೆ, ಪೋಷಕ ಪಾತ್ರದಲ್ಲಿ ಭವ್ಯ, ಸ್ವಸ್ತಿಕ್ ಶಂಕರ್,ಅರವಿಂದ್ ಬೋಲಾರ್, ಮನಹೋಹನ ರೈ,ನಯನಗ್ರಹಣ್ ಸೇರಿದಂತೆ ಇತರರು ತಾರಾಗಣದಲ್ಲಿದ್ದಾರೆ. ಜೇಮ್ಸ್ ಮ್ಯೂಸಿಕ್ ನೀಡಿದ್ದು, ಥ್ರಿಲರ್ ಮಂಜು ಹಾಗೂ ಕೌರವ ವೆಂಕಟೇಶ್ ಸಾಹಸ ನೀಡಿದ್ದಾರೆ.
ಹುಳಿಯಾರು ಸಮೀಪದ ಬೋರನಕಣಿವೆ ಬಳಿ ಹಾಡಿನ ಚಿತ್ರೀಕರಣ ನಡೆಸುತ್ತಿರುವ ಚಿತ್ರತಂಡ.
ಮದನ್ ಹರಿಣಿ ನೃತ್ಯ ನಿರ್ದೇಶನ ಮಾಡುತ್ತಿದ್ದು ಚಿತ್ರದಲ್ಲಿನ ಒಂದು ಹಾಡಿಗೆ ಹುಳಿಯಾರಿನ ಸುತ್ತಮುತ್ತಲಿನ ನಂದಿಹಳ್ಳಿ, ಬೋರನಕಣಿವೆ ಜಲಾಶಯ, ಹಂದನಕೆರೆ, ಗವಿರಂಗನಾಥಸ್ವಾಮಿ ಬೆಟ್ಟ, ಕಂಚೀಪುರದ ಪ್ರದೇಶದಲ್ಲಿ ಹಾಡನ್ನು ಚಿತ್ರೀಕರಿಸಿಕೊಳ್ಳಲಾಗಿದೆ.
ಚಿತ್ರದಲ್ಲೇನಿದೆ: ದೇವಿಪುತ್ತೂರ್ ಕಥೆ ಹೆಣೆದಿದ್ದು ಎಸ್.ಎಸ್.ಡೇವಿಡ್ ಸಂಭಾಷಣೆ ನೀಡಿದ್ದಾರೆ. ಗೌರಿವೆಂಕಟೇಶ್ ತಮ್ಮ ಕ್ಯಾಮರಕಣ್ಣಲ್ಲಿ ಚಿತ್ರ ಸೆರೆಹಿಡಿದ್ದಾರೆ. ಉತ್ತಮ ಚಿತ್ರಕಥೆಯಿರುವ ಸಿನಿಮ ಇದಾಗಿದ್ದು, ಚಿತ್ರದಲ್ಲಿ ಸೆಂಟಿಮೆಂಟ್, ಪ್ರೇಮಕಥೆ, ಆಕ್ಷನ್ ಹಾಗೂ ಕಾಮಿಡಿ ಸಹ ಇದ್ದು ವೀಕ್ಷಕರಿಗೆ ಉತ್ತಮ ಸಂದೇಶ ನೀಡಲಿದೆ ಎನ್ನುತ್ತಾರೆ ಇದೇ ಊರಿನವರಾದ ಸಹನಿರ್ಮಾಪಕ ನಂದಿಹಳ್ಳಿಯ ರಾಜಸುಲೋಚನ ಶಿವಣ್ಣ. ಕಳೆದ ಹಲವು ವರ್ಷದಿಂದ ಸಿನಿಮಾ ನಿರ್ಮಾಣ ಮಾಡಬೇಕೆಂಬ ಹಂಬಲ ಈಡೇರಲಿದೆ ಎನ್ನುತಾರೆ ಅವರು. ಅಲ್ಲದೆ ನಮ್ಮ ಊರಿನ ಸುತ್ತಮುತ್ತಲೂ ಸಹ ಚಿತ್ರೀಕರಣಕ್ಕೆ ಉತ್ತಮ ಲೋಕೇಶನ್ ಗಳಿದ್ದು ಈ ಚಿತ್ರದ ಹೆಚ್ಚು ಭಾಗ ಚಿತ್ರೀಕರಣವನ್ನು ಸ್ಥಳೀಯರ ಸಹಕಾರದಿಂದ ಇಲ್ಲಿಯೇ ನಡೆಸುವುದಾಗಿ ತಿಳಿಸಿದರು. ಮೊದಲು ತುಳು ಭಾಷೆಯಲ್ಲಿ ಚಿತ್ರ ತೆರೆಕಾಣಲಿದ್ದು ನಂತರ ಕನ್ನಡ ಭಾಷೆಯಲ್ಲಿ ತಪ್ಪದೇ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.
ಗ್ರಾಮೀಣಭಾಗದಲ್ಲಿ ನಡೆಯುತ್ತಿರುವ ಚಿತ್ರೀಕರಣ ವೀಕ್ಷಿಸಲು ಹಾಗೂ ನಾಯಕನಟ ಅವಿನಾಶ್ ಶೆಟ್ಟಿ ಹಾಗೂ ನಟಿಯಾಗಿ ಸೋನಾಲಿ ಮೊಂಥೆರೋಅವರನ್ನು ನೋಡಲು ಜನ ಮುಗಿಬಿದಿದ್ದಾರೆ.

ಒಟ್ಟಾರೆ ಮೂರುಧರ್ಮೀಯರು ಸೇರಿ ಚಿತ್ರ ನಿರ್ಮಿಸುವ ಮೂಲಕ ಹೊಸ ಪ್ರಯತ್ನ ಮಾಡುತ್ತಿದ್ದು , ಮುಂದಿನ ಕೆಲ ತಿಂಗಳಲ್ಲಿ ಚಿತ್ರ ತೆರೆಕಾಣಲಿದ್ದು, ಪ್ರೇಕ್ಷಕರಿಗೆ ಹಾಗೂ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಿತ್ರ ಇದಾಗಿರಲಿ ಎಂದು ಅಶಿಶೋಣ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...