ವಿಷಯಕ್ಕೆ ಹೋಗಿ

ಹದಗೆಟ್ಟ ರಸ್ತೆ : ವಾಹನ,ಜನ ಸಂಚಾರಕ್ಕೆ ನಿತ್ಯ ಕಿರಿಕಿರಿ ಮೌನವಹಿಸಿದ ಸ್ಥಳೀಯ ಆಡಳಿತ : ನಿತ್ಯ ಬಿದ್ದೇಳುತ್ತಿರುವ ಜನ

ಗ್ರಾ.ಪಂ. ವ್ಯಾಪ್ತಿಗೆ ಬರುವ ಸೋಮಜ್ಜನಪಾಳ್ಯ ಹಾಗೂ ಕೆ.ಸಿ.ಪಾಳ್ಯ ಮಾರ್ಗದ ರಸ್ತೆಯ ತುಂಬೆಲ್ಲಾ ಕೊರಕಲುಂಟಾಗಿ ಆಳುದ್ದ ಗುಂಡಿಯಾಗಿ ವಾಹನ, ಜನ ಸಂಚಾರಕ್ಕೆ ದುಸ್ಥರವಾಗಿದ್ದರೂ ಸಹ ಸ್ಥಳೀಯ ಪಂಚಾಯ್ತಿಯವರು ಮೌನವಹಿಸಿದ್ದಾರೆಂದು ಗ್ರಾಮಸ್ಥರು ದೂರಿದ್ದಾರೆ.
ಹುಳಿಯಾರು ಗ್ರಾ.ಪಂ.ವ್ಯಾಪ್ತಿಯ ಸೋಮಜ್ಜನಪಾಳ್ಯ-ಕೆ.ಸಿ.ಪಾಳ್ಯದ ಮಣ್ಣು ರಸ್ತೆಯಲ್ಲಿ ಕೊರಕಲುಂಟಾಗಿರುವುದನ್ನು ತೋರಿಸುತ್ತಿರುವ ಸ್ಥಳೀಯರು. 


ಸೋಮಜ್ಜನಪಾಳ್ಯದಿಂದ ಕೆ.ಸಿ.ಪಾಳ್ಯಕ್ಕೆ ಹೋಗಲು ಮಣ್ಣು ದಾರಿಯಿದ್ದು ಈ ಹಿಂದೆ ದಾರಿಯ ಇಕ್ಕೆಲಗಳಲ್ಲಿ ಮಳೆ ನೀರು ಹರಿಯುವಂತೆ ಡ್ರೈನೇಜ್ ತೆಗೆದಿದ್ದರು. ಈ ಡ್ರೈನೇಜ್ ಗಳೆಲ್ಲಾ ಮುಚ್ಚಿದ್ದರಿಂದ ಮಳೆ ನೀರೆಲ್ಲಾ ಮಣ್ಣು ರಸ್ತೆಯಲ್ಲೇ ಹರಿದು ಕೊರಕಲು ಬಿದಿದ್ದೆ. ಈ ದಾರಿಯಲ್ಲಿ ನಿತ್ಯ ಶಾಲೆಗೆ ಮಕ್ಕಳು ಹೋಗುತ್ತಾರೆ, ಬೈಕ್ ಸವಾರರು, ಕಾರು ಸೇರಿದಂತೆ ಸಣ್ಣಪುಟ್ಟ ವಾಹನಗಳು ಸಂಚರಿಸುತ್ತಿದ್ದು ಗುಂಡಿಯ ಮಧ್ಯದಲ್ಲೇ ಸಾಗುವಂತಹ ಪರಿಸ್ಥಿತಿ ಎದುರಾಗಿದೆ. ಬೈಕ್ ಸವಾರರು ಈ ದಾರಿಯಲ್ಲಿ ಸಾಗುವಾಗ ಆಯಾತಪ್ಪಿ ಬೈಕ್ ಸಮೇತ ಬಿದ್ದು ಕೈಕಾಲು ಮುರಿದು ಕೊಂಡು ಆಸ್ಪತ್ರೆಗೆ ದಾಖಲಾದ ಪ್ರಸಂಗಗಳು ನಡೆದಿವೆ. ಟಾಟಾ ಎಸಿಯಂತಹ ವಾಹನಗಳು ಈ ಗುಂಡಿ ಮಧ್ಯ ಚಲಿಸುವಾಗ ಸಿಕ್ಕಿ ಹಾಕಿಕೊಂಡು ಗಂಟೆಗಟ್ಟಲ್ಲೇ ದಾರಿ ಮಧ್ಯೆ ನಿಂತು ಸಂಚಾರಕ್ಕೆ ಅಡ್ಡಿಯುಂಟುಮಾಡುತ್ತಿವೆ. ರಸ್ತೆ ದುರಸ್ಥಿ ಬಗ್ಗೆ ಸ್ಥಳಿಯ ಆಡಳಿತದವರ ಗಮನಕ್ಕೆ ತಂದಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸ್ಥಳೀಯರು.
ಸಂಚಾರಕ್ಕೆ ದುಸ್ಥರವಾಗಿರುವ ಸೋಮಜ್ಜನಪಾಳ್ಯ-ಕೆ.ಸಿ.ಪಾಳ್ಯದ ಮಣ್ಣು ರಸ್ತೆ.
ಕೆ.ಸಿ.ಪಾಳ್ಯ ಹಾಗೂ ಸೊಮಜ್ಜನಪಾಳ್ಯದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ಇರುವ ಚರಂಡಿಯಲ್ಲಿ ನೀರು ಹರಿಯದೆ ನಿಂತ್ತಿದ್ದು ಸೊಳ್ಳೆಗಳಿಗೆ ಆಶ್ರಯ ತಾಣವಾಗಿ ಮಾರ್ಪಟ್ಟಿದೆ. ಕೆಲ ಬೀದಿಗಳಲ್ಲಿ ಚರಂಡಿಯೇ ಇಲ್ಲದೆ ಮನೆಯ ಶೌಚಾಲಯದ ನೀರೆಲ್ಲಾ ರಸ್ತೆಯಲ್ಲಿ ಹರಿಯುವಂತಾಗಿದ್ದು ಅವ್ಯವಸ್ಥೆಗೆ ದಾರಿ ಮಾಡಿಕೊಟ್ಟಿದೆ. ಎಲ್ಲೆಡೆ ಹಂದಿಜ್ವರ, ಚಿಕನ್ ಗುನ್ಯಾ ಸೇರಿದಂತೆ ಇನ್ನಿತರ ಮಾರಕ ರೋಗಗಳು ಉಲ್ಬಣಿಸುತ್ತಿದ್ದು ಇಲ್ಲಿನ ವಾತಾವರಣ ಇದಕ್ಕೆ ಪೂರಕವಾದಂತಿದೆ. ಗ್ರಾ.ಪಂ.ನವರು ಶೀಘ್ರವೇ ಈ ಬಗ್ಗೆ ಎಚ್ಚೆತ್ತು ಸೂಕ್ತ ಚರಂಡಿ ವ್ಯವಸ್ಥೆ ಹಾಗೂ ಹಾಲಿ ಇರುವ ಚರಂಡಿಗಳ ದುರಸ್ಥಿ ಮಾಡಿಸುವಂತೆ ಸ್ಥಳಿಯರಾದ ಮಹೇಶ್ ಒತ್ತಾಯಿಸಿದ್ದಾರೆ.
ಹುಳಿಯಾರು ಪಂಚಾಯ್ತಿ ವ್ಯಾಪ್ತಿಗೆ ಸೇರಿರುವ ಈ ರಸ್ತೆ ಅಭಿವೃದ್ದಿ ಮಾಡುವಲ್ಲಿ ಗ್ರಾ.ಪಂ.ನವರು ನಿರ್ಲಕ್ಷ್ಯ ತಾಳಿದ್ದು ಜನಸಾಮಾನ್ಯರನ್ನು ಸಂಕಷ್ಟಕ್ಕೀಡುಮಾಡಿದೆ. ಒಟ್ಟಾರೆ ತಾಲ್ಲೂಕಿನಲ್ಲೇ ದೊಡ್ಡಪಂಚಾಯ್ತಿ ಎಂಬ ಹೆಗ್ಗಳಿಕೆ ಹೊಂದಿದರೂ ಸಹ ಪಂಚಾಯ್ತಿ ವ್ಯಾಪ್ತಿಯ ಅನೇಕ ಸಣ್ಣಸಣ್ಣ ಹಳ್ಳಿಗಳ ರಸ್ತೆ, ಚರಂಡಿ ಸೇರಿದಂತೆ ಇನ್ನಿತ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವ ವಿಷಯದಲ್ಲಿ ಮಾತ್ರ ಇಂದಿಗೂ ಆಮೆಗತಿಯಲಿದ್ದು ಜನಸಾಮಾನ್ಯರ ಜೀವನದ ಜೊತೆ ಆಟವಾಡುತ್ತಿರುವುದು ಸೋಜಿಗದ ಸಂಗತಿಯಾಗಿದೆ.
--------------------

ದಾರಿಯಲ್ಲಿ ಕೊರಕಲು ಗುಂಡಿಬಿದ್ದು ಇಲ್ಲಿ ದಾರಿಯಾವುದು , ಚರಂಡಿ ಯಾವುದು ಎಂಬುದು ತಿಳಿಯದಂತಾಗಿದೆ. ಪಂಚಾಯ್ತಿಗೆ ಬರುವ ಅನುದಾನದಲ್ಲಿ ರಸ್ತೆ ಅಭಿವೃದ್ದಿ ಪಡಿಸುವ ಮೂಲಕ ಜನಸಂಚಾರಕ್ಕೆ ಅನುವುಮಾಡಿಕೊಡಿ : ನಿವೃತ್ತ ಉಪನ್ಯಾಸಕ ಎಸ್.ರಾಮಯ್ಯ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...