ವಿಷಯಕ್ಕೆ ಹೋಗಿ

ಹುಳಿಯಾರು ಅಂದಾನಪ್ಪನ ಸೊಸೈಟಿಯಲ್ಲಿ ರಂಗೇರಿದ ಮತದಾನ ಪಂಚಾಯ್ತಿ ಚುನಾವಣೆಯನ್ನು ಮೀರಿಸಿದ ಸಹಕಾರ ಸಂಘದ ಚುನಾವಣೆ

ಹುಳಿಯಾರು  ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಆಂದಾನಪ್ಪನ ಸೊಸೈಟಿ) ೨೦೧೫ ರಿಂದ ೨೦೨೦ನೇ ಸಾಲಿನ ೫ ವರ್ಷದ ಅವಧಿಗೆ ೧೦ ನಿರ್ದೇಶಕರ ಆಯ್ಕೆಗಾಗಿ ಭಾನುವಾರ ನಡೆದ ಚುನಾವಣೆ ಬಿರುಸಿನಿಂದ ಕೂಡಿದ್ದು ಹೆಚ್ಚಿನ ಷೇರುದಾರರು ಮತಚಲಾಯಿಸಿದರು.
ಹುಳಿಯಾರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಸೇರಿದ ಅಪಾರ ಜನಸ್ತೋಮ.


ಸಾಲಗಾರರ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ೪ ಸ್ಥಾನ, ಹಿಂದುಳಿದವರ್ಗದಿಂದ ೨ ಸ್ಥಾನ, ಪರಿಶಿಷ್ಟಜಾತಿ ಮತ್ತು ಪಂಗಡದಿಂದ ೧ ಸ್ಥಾನ ಹಾಗೂ ಮಹಿಳೆ ಮೀಸಲು ೨ ಸ್ಥಾನ ಸೇರಿ ೯ ನಿರ್ದೇಶಕರು ಆಯ್ಕೆಯಾಗಬೇಕಿದ್ದು ೨೧ ಮಂದಿ ಕಣದಲ್ಲಿದ್ದರೆ, ಸಾಲಪಡೆಯದವರ ಕ್ಷೇತ್ರಕ್ಕೆ ಒಬ್ಬ ನಿರ್ದೇಶಕನ ಆಯ್ಕೆ ನಡೆಯಬೇಕಿದ್ದು ೫ ಮಂದಿ ಕಣದಲ್ಲಿದ್ದರು.
ಹುಳಿಯಾರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಮತಚಲಾಯಿಸಲು ಸರದಿ ಸಾಲಿನಲ್ಲಿ ನಿಂತಿರುವ ಷೇರು ದಾರರು.
ಈ ಹಿಂದಿನ ಚುನಾವಣೆಗಳಿಗಿಂತ ಈ ಬಾರಿಯ ಚುನಾವಣೆ ಹೆಚ್ಚು ಕಾವುಪಡೆದಿದ್ದು ಸಂಘದ ಕಛೇರಿಯ ಮುಂದಿನ ರಸ್ತೆಯ ತುಂಬ ಹೆಚ್ಚು ಜನಸ್ತೋಮ ಕಂಡುಬಂತು. ಸೊಸೈಟಿಯ ಒಟ್ಟು ೧೨೬೦ ಷೇರುದಾರರಲ್ಲಿ ಸಾಲಪಡೆದವರ ಕ್ಷೇತ್ರಕ್ಕೆ ೫೪೦ ಮಂದಿ ಹಾಗೂ ಸಾಪಪಡೆಯದವರ ಕ್ಷೇತ್ರಕ್ಕೆ ೭೨೦ ಮಂದಿ ಮತ ಚಲಾಯಿಸಬೇಕಿತ್ತು. ಈ ಬಾರಿ ೧೦ ಮಂದಿ ನಿರ್ದೇಶಕರ ಆಯ್ಕೆಗಾಗಿ ಒಟ್ಟು ೨೬ ಜನ ಕಣದಲ್ಲಿದ್ದರು. ಆ ಪೈಕಿ ಸಾಲಪಡೆದವರ ಕ್ಷೇತದ ೯ ನಿರ್ದೇಶಕರಿಗೆ ೨೧ ಮಂದಿ ಆಕಾಂಕ್ಷಿಗಳು ಕಣದಲ್ಲಿದ್ದರೆ, ಸಾಲರಹಿತ ಕ್ಷೇತ್ರದ ಒಬ್ಬ ನಿರ್ದೇಶಕನ ಆಯ್ಕೆಗೆ ೫ ಮಂದಿ ಚುನಾವಣಾ ಕಣದಲ್ಲಿದ್ದರು. ಸಾಲಪಡೆದ ಕ್ಷೇತ್ರದ ಷೇರುದಾರರು ೯ ಮತ ಹಾಗೂ ಸಾಲರಹಿತ ಕ್ಷೇತ್ರದ ಷೇರುದಾರರು ತಲಾ ಒಂದು ಮತ ಹಾಕಬೇಕಿತ್ತು.
ಭಾನುವಾರ ಬೆಳಿಗ್ಗೆ ಆರಂಭವಾದ ಚುನಾವಣೆ ಪ್ರಕ್ರಿಯೆ ಸಂಜೆ೪ರ ವರೆಗೆ ನಡೆಯಿತು. ಅಭ್ಯರ್ಥಿಗಳು ಕಛೇರಿಯ ಅನತಿ ದೂರದಲ್ಲಿ ನಿಂತು ಷೇರುದಾರರಿಗೆ ತಮ್ಮ ಗುರುತಿರುವ ಬ್ಯಾಲೆಟ್ ಪತ್ರವನ್ನು ನೀಡಿ ತಮಗೆ ಮತಹಾಕುವಂತೆ ಕೇಳಿಕೊಳ್ಳುತ್ತಿದ್ದು ಸಾಮಾನ್ಯವಾಗಿತ್ತು. ಚುನಾವಣೆ ಹಿನ್ನಲೆಯಲ್ಲಿ ಪಟ್ಟಣದ ರಾಜ್ ಕುಮಾರ್ ರಸ್ತೆ ತುಂಬಾ ಜನಸ್ತೋಮ ಕಂಡುಬಂದು ಸಾರ್ವಜನಿಕರು ಸೊಸೈಟಿ ಎಲೆಕ್ಷನ್ನೂ ಎಂ.ಎಲ್.ಎ ಚುನಾವಣೆ ತರ ನಡೆಯುತ್ತಿದೆಯಲ್ಲಾ ಎಂದು ನಿಬ್ಬರರಾಗಿ ಮಾತಾಡುತ್ತಿದ್ದು ಸಹ ಕೇಳಿಬಂತು.

ಯಾವ ವರ್ಷವೂ ಸಹ ಈ ರೀತಿಯ ಬಿರುಸಿನ ಚುನಾವಣೆ ಈ ಸೊಸೈಟಿಯಲ್ಲಿ ನಡೆದಿರಲಿಲ್ಲ. ಈ ಸಂಖ್ಯೆಯ ಷೇರುದಾರರು ಹಿಂದೆದೂ ಮತದಾನ ಮಾಡಿರಲಿಲ್ಲ ಈ ಬಾರಿ ಸೊಸೈಟಿ ಚುನಾವಣೆಗೆ ಗ್ರಾ.ಪಂ.ಸದಸ್ಯರುಗಳು ಸ್ಪರ್ಧಿಸಿ ರಾಜಕೀಯದ ಗಾಳಿ ತಟ್ಟಿದ್ದು ಹೆಚ್ಚು ರಂಗು ಬರಲು ಕಾರಣವಾಗಿದೆ. ಸಾಲಗಾರರಲ್ಲದ ಕ್ಷೇತ್ರದಲ್ಲಿನ ಚುನಾವಣೆ ಹೆಚ್ಚಿನ ಕಾವು ಪಡೆದಿತ್ತು. ಎಲ್ಲಾ ಷೇರುದಾರರನ್ನು ಕರೆತಂದು ಮತದಾನ ಮಾಡಿಸಿದ್ದರಿಂದ ಕೆಲ ಸಮಯ ಸರದಿಯಲ್ಲಿ ನಿಂತು ಮತಚಲಾಯಿಸುವಂತಾಯಿತು. ಮಹೇಶಾಚಾರ್ ಚುನಾವಣಾಧಿಕಾರಿಯಾಗಿ ಆಗಮಿಸಿದ್ದು ಮತದಾನ ಮುಗಿದ ನಂತರ ಮತ ಎಣಿಕೆಗೆ ತೊಡಗಿದ್ದರು. ಪಿಎಸೈ ಪ್ರವೀಣ್ ಕುಮಾರ್ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.