ವಿಷಯಕ್ಕೆ ಹೋಗಿ

ಬೋರ್ ವೆಲ್ ಹಾವಳಿಯಿಂದ ಪುರಾತನ ಬಾವಿಗಳು ಮಾಯ : ದೇವರಾಜರೆಡ್ಡಿ ನೀರಿನ ಸಂರಕ್ಷಣೆಗೆ ಮಳೆ ಕೊಯ್ಲು ಸೂಕ್ತ ಮಾರ್ಗ

ನೀರಿನ ಅಶ್ರಯ ತಾಣಗಳಾಗಿದ್ದ ಕೆರೆ,ಕಟ್ಟೆ,ಬಾವಿಗಳು ಬರಿದಾಗಿ ನೀರಿಗಾಗಿ ಜನ ಹಾಹಾಕಾರ ಪಡುವಂತಹ ಚಿಂತಾಜನಕ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಹೆಚ್ಚುತ್ತಿರುವ ಬೋರ್ ವೆಲ್ ಗಳು ಕಾರಣವಾಗಿದ್ದು ಅಂತರ್ಜಲ ಬತ್ತಿ ನೀರಿನ ಆಶ್ರಯತಾಣಗಳು ಮಾಯವಾಗುತ್ತಿವೆ ಎಂದು ಚಿತ್ರದುರ್ಗದ ಖ್ಯಾತ ಭೂಗರ್ಭ ಶಾಸ್ತ್ರಜ್ಞ ದೇವರಾಜರೆಡ್ಡಿ ವಿಷಾಧಿಸಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಮಳೆ ನೀರು ಕೊಯ್ಲು-ಕೃತಕ ಬರಕ್ಕೆ ಶಾಶ್ವತ ಪರಿಹಾರ" ವಿಷಯ ಕುರಿತು ಭೂಗರ್ಭ ಶಾಸ್ತ್ರಜ್ಞ ದೇವರಾಜರೆಡ್ಡಿ ಉಪನ್ಯಾಸ ನೀಡಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬೆಂಗಳೂರಿನ ಬಿ.ಕೃಷ್ಣಪ್ಪ ಟ್ರಸ್ಟ್, ರೈತಸಂಘದ ಸಹಯೋಗದಲ್ಲಿ " ನೀರು-ನೀರು-ನೀರು, ನೀರೆಲ್ಲವೂ ತೀರ್ಥ- ತೀರ್ಥವೆಲ್ಲವೂ ನೀರು " ವಿಷಯದಡಿ ನಡೆದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ : ಮಳೆ ನೀರು ಕೊಯ್ಲು-ಕೃತಕ ಬರಕ್ಕೆ ಶಾಶ್ವತ ಪರಿಹಾರ" ವಿಷಯ ಕುರಿತು ಉಪನ್ಯಾಸ ನೀಡಿದರು.
ಅತಿ ಹೆಚ್ಚು ಬೋರ್ ವೆಲ್ ಗಳನ್ನು ಕೊರೆಸಿ ಭೂಮಿಯಲ್ಲಿನ ನೀರನ್ನು ಹೀರುವ ಮೂಲಕ ಭೂಮಿಯನ್ನು ಬರಡಾಗುವಂತೆ ಮಾಡುತ್ತಿದ್ದೇವೆ ಹಾಗೂ ಇದರಿಂದಾಗಿ ಭೂಮಿಯಲ್ಲಿ ಫಲವತ್ತತೆ ಕಡಿಮೆಯಾಗುವಂತೆ ಮಾಡುತ್ತಿದ್ದೇವೆ ಎಂದರು. ಕಳೆದ ೪೦ ವರ್ಷದಿಂದ ಈಚೆಗೆ ಬೋರ್ ವೆಲ್ ಗಳ ಹಾವಳಿ ಹೆಚ್ಚಿದ್ದು ಯಾವುದೇ ಹಂಗಿಲ್ಲದೆ ಸಾವಿರಾರು ಅಡಿವರೆಗೂ ಭೂಮಿಯನ್ನು ಕೊರೆಯುವ ಕಾರ್ಯ ಮಾಡುತ್ತಿದ್ದೇವೆ ಇದರಿಂದ ಹೆಚ್ಚಿನ ದುಷ್ಫರಿಣಾಮ ಎದುರಾಗಲಿದ್ದು ಮುಂದೊಂದು ದಿನ ಭಾರಿ ಪ್ರಮಾಣದ ಭೂ ಕುಸಿತ ಉಂಟಾಗುವ ಸಂಭವವಿದೆ ಎಂದು ಎಚ್ಚರಿಸಿದರು.
ಪ್ರಪಂಚದಲ್ಲೇ ಹೆಚ್ಚು ಮಳೆಯಾಗುವ ದೇಶಗಳ ಸಾಲಿನಲ್ಲಿ ಭಾರತಕ್ಕೆ ೨ ನೇ ಸ್ಥಾವವಿದ್ದರೂ ಸಹ ನಾವು ಜಲ ಮರುಪೂರಣ ಮಾಡದೆ ಅನಗತ್ಯವಾಗಿ ಬಳಸುತ್ತಾ ನೀರಿಗಾಗಿ ಪರದಾಡುತ್ತಿದ್ದೇವೆ ಎಂದರು. ನೀರಿನ ಸಂರಕ್ಷಣೆ ಮಾಡುವಲ್ಲಿ ನಾವು ಎಚ್ಚೆತ್ತುಕೊಳ್ಳದೇಹೋದರೆ ಇಂದು ೨೦ ರೂ ಗೆ ೧ ಲೀ ನೀರು ಸಿಗುತ್ತಿದೆ ಮುಂದೊಂದು ದಿನ ಇನ್ನೂ ಅಧಿಕ ಬೆಲೆ ತೆತ್ತಬೇಕಾಗುತ್ತದೆ ಎಂದರು.
ಮಳೆ ನೀರು ಕೊಯ್ಲ : ನೀರಿನ ಸಂರಕ್ಷಣೆಯಲ್ಲಿ ಮಳೆ ನೀರುಕೊಯ್ಲ ಪ್ರಮುಖವಾಗಿದ್ದು ಮಳೆಗಾಲದಲ್ಲಿ ಸಿಗುವ ನೀರನ್ನು ಭೂಮಿಗೆ ಇಂಗುವಂತೆ ಮಾಡಿಬೇಕು.ತೋಟ, ಹೊಲಗಳಲ್ಲಿ ಒಡ್ಡು, ಬದು, ಚೆಕ್ ಡ್ಯಾಂ, ಇಂಗುಗುಂಡಿಗಳನ್ನು ನಿರ್ಮಿಸುವ ಮೂಲಕ ನೀರು ವ್ಯರ್ಥವಾಗಿ ಹರಿದು ಹೋಗುವುದನ್ನು ತಡೆದು ಭೂಮಿಗೆ ಇಂಗುವಂತೆ ಮಾಡಿ ಎಂದು ಸಲಹೆ ನೀಡಿದರು.ನಾವು ನಿತ್ಯ ಬಳಸುವ ನೀರಿನಲ್ಲಿ ಅನೇಕ ವಿಷಯುಕ್ತ ಅಂಶಗಳಿದ್ದು ಅದನ್ನೇ ಬಳಸುತ್ತೇವೆ ಹೊರತು ಆರೋಗ್ಯಕ್ಕೆ ಯಾವುದೇ ತೊಂದರೆ ಉಂಟುಮಾಡದ ಮಳೆ ನೀರನ್ನು ಕುಡಿಯಲು ಹೆಚ್ಚು ಮಂದಿ ಮುಂದಾಗುತ್ತಿಲ್ಲ ಎಂದರು. ಮಳೆ ನೀರನ್ನು ಹೆಚ್ಚು ಖರ್ಚಿಲ್ಲದೆ ನಾವೇ ಸ್ವತ: ಸಂಸ್ಕರಣೆ ಮಾಡಿ ಕುಡಿಯಲು ಬಳಸಬಹುದಾಗಿದ್ದು ಒಮ್ಮೆ ಸಂಸ್ಕರಿಸಿದ ಮಳೆ ನೀರನ್ನು ಐದಾರು ವರ್ಷಗಳ ಕಾಲ ಕುಡಿಯಬಹುದು ಯಾವುದೇ ತೊಂದರೆಯಾಗುವುದಿಲ್ಲ ಎಂದರು. ಒಂದು ಬೋರ್ ವೆಲ್ ನಿಂತು ಹೋಯಿತೆಂದು ಮತ್ತೊಂದು ಬೋರ್ ವೆಲ್ ಕೊರೆಸುವ ಬದಲು ಆ ಬೋರ್ ವೆಲ್ ಸುತ್ತ ಮಳೆ ನೀರು ಇಂಗುವ ವ್ಯವಸ್ಥೆ ಮಾಡುವ ಕಾರ್ಯಮಾಡುವಂತೆ ತಿಳಿಸಿದರು.
ನೀರಿನ ಅನಗತ್ಯ ಬಳಕೆ ಬೇಡ : ನೀರಿಗೆ ತನ್ನದೇ ಆದ ಮೌಲ್ಯವಿದ್ದು ಅದರ ಬಳಕೆ ಮಾಡುವಲ್ಲಿಯೂ ಸಹ ಎಚ್ಚರವಹಿಸಬೇಕು, ಅನಗತ್ಯವಾಗಿ ನೀರನ್ನು ಪೋಲು ಮಾಡುವ ಬದಲು ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಬೇಕು ಎಂದರು. ನಮ್ಮಲ್ಲೇ ದೊರೆಯುವ ನೀರನ್ನು ಬಳಸಿ ಅನೇಕ ವಿದೇಶಿ ಕಂಪನಿಗಳು ಬಗೆಬಗೆಯ ಪಾನೀಯಗಳನ್ನು ತಯಾರಿಸಿ ಅಧಿಕ ಬೆಲೆಗೆ ನಮಗೆ ಮಾರುತ್ತಿದ್ದಾರೆ ಎಂದರು. ಜೀವಜಲವಾಗಿರುವ ನೀರಿನ ಸದ್ಬಳಕೆ ಮಾಡುವಲ್ಲಿ ಎಲ್ಲರೂ ಸಾಗಬೇಕು ಎಂದು ತಿಳಿಸಿದರು.

ಪ್ರಾಚಾರ್ಯ ಬಿಳಿಗಿರಿ ಕೃಷ್ಣಮೂರ್ತಿ, ಉಪನ್ಯಾಸಕರಾದ ಶಂಕರಲಿಂಗಯ್ಯ, ಇಬ್ರಾಹಿಂ, ಹನುಂತಪ್ಪ, ಶ್ರೀನಿವಾಸ್, ಶಿವಯ್ಯ, ಚಂದ್ರಮೌಳಿ,ಕುಮಾರಸ್ವಾಮಿ, ಗ್ರಂಥಪಾಲಕ ಲೋಕೇಶ್ ಸೇರಿದಂತೆ ರೈತತಸಂಘದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...