ವಿಷಯಕ್ಕೆ ಹೋಗಿ

ಬೋರ್ ವೆಲ್ ಹಾವಳಿಯಿಂದ ಪುರಾತನ ಬಾವಿಗಳು ಮಾಯ : ದೇವರಾಜರೆಡ್ಡಿ ನೀರಿನ ಸಂರಕ್ಷಣೆಗೆ ಮಳೆ ಕೊಯ್ಲು ಸೂಕ್ತ ಮಾರ್ಗ

ನೀರಿನ ಅಶ್ರಯ ತಾಣಗಳಾಗಿದ್ದ ಕೆರೆ,ಕಟ್ಟೆ,ಬಾವಿಗಳು ಬರಿದಾಗಿ ನೀರಿಗಾಗಿ ಜನ ಹಾಹಾಕಾರ ಪಡುವಂತಹ ಚಿಂತಾಜನಕ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಹೆಚ್ಚುತ್ತಿರುವ ಬೋರ್ ವೆಲ್ ಗಳು ಕಾರಣವಾಗಿದ್ದು ಅಂತರ್ಜಲ ಬತ್ತಿ ನೀರಿನ ಆಶ್ರಯತಾಣಗಳು ಮಾಯವಾಗುತ್ತಿವೆ ಎಂದು ಚಿತ್ರದುರ್ಗದ ಖ್ಯಾತ ಭೂಗರ್ಭ ಶಾಸ್ತ್ರಜ್ಞ ದೇವರಾಜರೆಡ್ಡಿ ವಿಷಾಧಿಸಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಮಳೆ ನೀರು ಕೊಯ್ಲು-ಕೃತಕ ಬರಕ್ಕೆ ಶಾಶ್ವತ ಪರಿಹಾರ" ವಿಷಯ ಕುರಿತು ಭೂಗರ್ಭ ಶಾಸ್ತ್ರಜ್ಞ ದೇವರಾಜರೆಡ್ಡಿ ಉಪನ್ಯಾಸ ನೀಡಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬೆಂಗಳೂರಿನ ಬಿ.ಕೃಷ್ಣಪ್ಪ ಟ್ರಸ್ಟ್, ರೈತಸಂಘದ ಸಹಯೋಗದಲ್ಲಿ " ನೀರು-ನೀರು-ನೀರು, ನೀರೆಲ್ಲವೂ ತೀರ್ಥ- ತೀರ್ಥವೆಲ್ಲವೂ ನೀರು " ವಿಷಯದಡಿ ನಡೆದ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ : ಮಳೆ ನೀರು ಕೊಯ್ಲು-ಕೃತಕ ಬರಕ್ಕೆ ಶಾಶ್ವತ ಪರಿಹಾರ" ವಿಷಯ ಕುರಿತು ಉಪನ್ಯಾಸ ನೀಡಿದರು.
ಅತಿ ಹೆಚ್ಚು ಬೋರ್ ವೆಲ್ ಗಳನ್ನು ಕೊರೆಸಿ ಭೂಮಿಯಲ್ಲಿನ ನೀರನ್ನು ಹೀರುವ ಮೂಲಕ ಭೂಮಿಯನ್ನು ಬರಡಾಗುವಂತೆ ಮಾಡುತ್ತಿದ್ದೇವೆ ಹಾಗೂ ಇದರಿಂದಾಗಿ ಭೂಮಿಯಲ್ಲಿ ಫಲವತ್ತತೆ ಕಡಿಮೆಯಾಗುವಂತೆ ಮಾಡುತ್ತಿದ್ದೇವೆ ಎಂದರು. ಕಳೆದ ೪೦ ವರ್ಷದಿಂದ ಈಚೆಗೆ ಬೋರ್ ವೆಲ್ ಗಳ ಹಾವಳಿ ಹೆಚ್ಚಿದ್ದು ಯಾವುದೇ ಹಂಗಿಲ್ಲದೆ ಸಾವಿರಾರು ಅಡಿವರೆಗೂ ಭೂಮಿಯನ್ನು ಕೊರೆಯುವ ಕಾರ್ಯ ಮಾಡುತ್ತಿದ್ದೇವೆ ಇದರಿಂದ ಹೆಚ್ಚಿನ ದುಷ್ಫರಿಣಾಮ ಎದುರಾಗಲಿದ್ದು ಮುಂದೊಂದು ದಿನ ಭಾರಿ ಪ್ರಮಾಣದ ಭೂ ಕುಸಿತ ಉಂಟಾಗುವ ಸಂಭವವಿದೆ ಎಂದು ಎಚ್ಚರಿಸಿದರು.
ಪ್ರಪಂಚದಲ್ಲೇ ಹೆಚ್ಚು ಮಳೆಯಾಗುವ ದೇಶಗಳ ಸಾಲಿನಲ್ಲಿ ಭಾರತಕ್ಕೆ ೨ ನೇ ಸ್ಥಾವವಿದ್ದರೂ ಸಹ ನಾವು ಜಲ ಮರುಪೂರಣ ಮಾಡದೆ ಅನಗತ್ಯವಾಗಿ ಬಳಸುತ್ತಾ ನೀರಿಗಾಗಿ ಪರದಾಡುತ್ತಿದ್ದೇವೆ ಎಂದರು. ನೀರಿನ ಸಂರಕ್ಷಣೆ ಮಾಡುವಲ್ಲಿ ನಾವು ಎಚ್ಚೆತ್ತುಕೊಳ್ಳದೇಹೋದರೆ ಇಂದು ೨೦ ರೂ ಗೆ ೧ ಲೀ ನೀರು ಸಿಗುತ್ತಿದೆ ಮುಂದೊಂದು ದಿನ ಇನ್ನೂ ಅಧಿಕ ಬೆಲೆ ತೆತ್ತಬೇಕಾಗುತ್ತದೆ ಎಂದರು.
ಮಳೆ ನೀರು ಕೊಯ್ಲ : ನೀರಿನ ಸಂರಕ್ಷಣೆಯಲ್ಲಿ ಮಳೆ ನೀರುಕೊಯ್ಲ ಪ್ರಮುಖವಾಗಿದ್ದು ಮಳೆಗಾಲದಲ್ಲಿ ಸಿಗುವ ನೀರನ್ನು ಭೂಮಿಗೆ ಇಂಗುವಂತೆ ಮಾಡಿಬೇಕು.ತೋಟ, ಹೊಲಗಳಲ್ಲಿ ಒಡ್ಡು, ಬದು, ಚೆಕ್ ಡ್ಯಾಂ, ಇಂಗುಗುಂಡಿಗಳನ್ನು ನಿರ್ಮಿಸುವ ಮೂಲಕ ನೀರು ವ್ಯರ್ಥವಾಗಿ ಹರಿದು ಹೋಗುವುದನ್ನು ತಡೆದು ಭೂಮಿಗೆ ಇಂಗುವಂತೆ ಮಾಡಿ ಎಂದು ಸಲಹೆ ನೀಡಿದರು.ನಾವು ನಿತ್ಯ ಬಳಸುವ ನೀರಿನಲ್ಲಿ ಅನೇಕ ವಿಷಯುಕ್ತ ಅಂಶಗಳಿದ್ದು ಅದನ್ನೇ ಬಳಸುತ್ತೇವೆ ಹೊರತು ಆರೋಗ್ಯಕ್ಕೆ ಯಾವುದೇ ತೊಂದರೆ ಉಂಟುಮಾಡದ ಮಳೆ ನೀರನ್ನು ಕುಡಿಯಲು ಹೆಚ್ಚು ಮಂದಿ ಮುಂದಾಗುತ್ತಿಲ್ಲ ಎಂದರು. ಮಳೆ ನೀರನ್ನು ಹೆಚ್ಚು ಖರ್ಚಿಲ್ಲದೆ ನಾವೇ ಸ್ವತ: ಸಂಸ್ಕರಣೆ ಮಾಡಿ ಕುಡಿಯಲು ಬಳಸಬಹುದಾಗಿದ್ದು ಒಮ್ಮೆ ಸಂಸ್ಕರಿಸಿದ ಮಳೆ ನೀರನ್ನು ಐದಾರು ವರ್ಷಗಳ ಕಾಲ ಕುಡಿಯಬಹುದು ಯಾವುದೇ ತೊಂದರೆಯಾಗುವುದಿಲ್ಲ ಎಂದರು. ಒಂದು ಬೋರ್ ವೆಲ್ ನಿಂತು ಹೋಯಿತೆಂದು ಮತ್ತೊಂದು ಬೋರ್ ವೆಲ್ ಕೊರೆಸುವ ಬದಲು ಆ ಬೋರ್ ವೆಲ್ ಸುತ್ತ ಮಳೆ ನೀರು ಇಂಗುವ ವ್ಯವಸ್ಥೆ ಮಾಡುವ ಕಾರ್ಯಮಾಡುವಂತೆ ತಿಳಿಸಿದರು.
ನೀರಿನ ಅನಗತ್ಯ ಬಳಕೆ ಬೇಡ : ನೀರಿಗೆ ತನ್ನದೇ ಆದ ಮೌಲ್ಯವಿದ್ದು ಅದರ ಬಳಕೆ ಮಾಡುವಲ್ಲಿಯೂ ಸಹ ಎಚ್ಚರವಹಿಸಬೇಕು, ಅನಗತ್ಯವಾಗಿ ನೀರನ್ನು ಪೋಲು ಮಾಡುವ ಬದಲು ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಬೇಕು ಎಂದರು. ನಮ್ಮಲ್ಲೇ ದೊರೆಯುವ ನೀರನ್ನು ಬಳಸಿ ಅನೇಕ ವಿದೇಶಿ ಕಂಪನಿಗಳು ಬಗೆಬಗೆಯ ಪಾನೀಯಗಳನ್ನು ತಯಾರಿಸಿ ಅಧಿಕ ಬೆಲೆಗೆ ನಮಗೆ ಮಾರುತ್ತಿದ್ದಾರೆ ಎಂದರು. ಜೀವಜಲವಾಗಿರುವ ನೀರಿನ ಸದ್ಬಳಕೆ ಮಾಡುವಲ್ಲಿ ಎಲ್ಲರೂ ಸಾಗಬೇಕು ಎಂದು ತಿಳಿಸಿದರು.

ಪ್ರಾಚಾರ್ಯ ಬಿಳಿಗಿರಿ ಕೃಷ್ಣಮೂರ್ತಿ, ಉಪನ್ಯಾಸಕರಾದ ಶಂಕರಲಿಂಗಯ್ಯ, ಇಬ್ರಾಹಿಂ, ಹನುಂತಪ್ಪ, ಶ್ರೀನಿವಾಸ್, ಶಿವಯ್ಯ, ಚಂದ್ರಮೌಳಿ,ಕುಮಾರಸ್ವಾಮಿ, ಗ್ರಂಥಪಾಲಕ ಲೋಕೇಶ್ ಸೇರಿದಂತೆ ರೈತತಸಂಘದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...