ವಿಷಯಕ್ಕೆ ಹೋಗಿ

ಎರಡನೇ ದಿನಕ್ಕೆ ಕಾಲಿಟ್ಟ ಧರಣಿ : ಇತ್ತ ಸುಳಿಯದ ಅಧಿಕಾರಿಗಳು ಧರಣಿ ಸ್ಥಳದಲ್ಲೇ ಅಡುಗೆ : ಸ್ಪಂದಿಸದಿದ್ದರೆ ಅಹೋರಾತ್ರಿ ಧರಣಿ

ಖಾತ್ರಿ ಯೋಜನೆಯಡಿ ನಿರ್ಮಿಸಿರುವ ದನದಕೊಟ್ಟಿಗೆಮನೆ ಬಿಲ್ ಪಾವತಿಸಿಲ್ಲ ಹಾಗೂ ಬಸವೇಶ್ವರನಗರ ಬಡಾವಣೆಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿಲ್ಲವೆಂದು ಅರೋಪಿಸಿ ಸೋಮವಾರ ಪಂಚಾಯ್ತಿಗೆ ಬೀಗಹಾಕುವ ಮೂಲಕ ಪ್ರಾರಂಭವಾದ ಪ್ರತಿಭಟನೆ ಮಂಗಳವಾರವೂ ನಡೆಯಿತು.
ಹುಳಿಯಾರು ಗ್ರಾ.ಪಂ. ಮುಂದೆಯೇ ಅಡುಗೆ ಮಾಡಿ ಪ್ರತಿಭಟಿಸುತ್ತಿರುವ ಬಸವೇಶ್ವರ ನಗರ ನಿವಾಸಿಗಳು.
ಸೋಮವಾರದಂದು ಗ್ರಾ.ಪಂ.ಕಛೇರಿಗೆ ಬೀಗ ಹಾಕಿ ಪ್ರತಿಭಟಿಸುತ್ತಿದ್ದ ಧರಣಿನಿರತರರು ಪೊಲೀಸರ ಮಾತಿನನಂತೆ ಬೀಗ ತೆಗೆದರಾದರೂ ಸಹ ತಮ್ಮ ಪಟ್ಟು ಬಿಡದೆ ಪಂಚಾಯ್ತಿ ಅಧಿಕಾರಿಗಳು ಸ್ಥಳಕ್ಕೆ ಬಂದು ತಮ್ಮ ಸಮಸ್ಯೆ ಬಗೆಹರಿಸಲಿ ಎಂದು ಪ್ರತಿಭಟನೆಯನ್ನು ಮುಂದುವರೆಸಿದ್ದರು. ಸಂಜೆಯ ನಂತರ ಬಂದ ಪಿಡಿಓ ಮಂಗಳವಾರ ಬೆಳಿಗ್ಗೆ ಕಛೇರಿಯಲ್ಲಿಗೆ ಬಂದು ದನದಕೊಟ್ಟಿಗೆಯ ಬಿಲ್ ನೀಡುತ್ತೇವೆ ಎಂದು ಹೇಳಿದ್ದರು. ಅವರ ಮಾತಿನಂತೆ ಬಸವೇಶ್ವರನಗರ ನಿವಾಸಿಗಳು ಮಂಗಳವಾರ ಬೆಳಿಗ್ಗೆ ಗ್ರಾ.ಪಂ ಹತ್ತಿರ ಬಂದಾಗ ಪಿಡಿಓ ಆಗಲಿ ಕಂಪ್ಯೂಟರ್ ಅಪರೇಟರ್ ಆಗಲಿ ಇಲ್ಲದ್ದನ್ನು ಕಂಡು ಆಕ್ರೋಶಿತರಾಗಿ ಕೂಡಲೇ ಪ್ರತಿಭಟನೆಗೆ ಮುಂದಾದರು.
ಪಿಡಿಓ ಅವರಿಗೆ ಪೋನ್ ಮಾಡಿ ಪಂಚಾಯ್ತಿಗೆ ಬರುತ್ತೇನೆಂದು ಹೇಳಿದ್ದರಲ್ಲ ಎಂದು ಕೇಳಿದರೆ ಚಿಕ್ಕನಾಯಕನಹಳ್ಳಿಯಲ್ಲಿ ಕೂತು ಖಾತ್ರಿ ಯೋಜನೆಯ ಬಿಲ್ ಪಾವತಿ ಮಾಡುತ್ತಿರುವುದಾಗಿ ತಿಳಿಸುತ್ತಾರೆ. ಖಾತ್ರಿ ಯೋಜನೆಯಡಿ ದನದಕೊಟ್ಟಿಗೆಗೆ ೩೫ಸಾವಿರ ಪಾವತಿ ಮಾಡಬೇಕಿದ್ದು , ಕೇವಲ ೧೬ಸಾವಿರ ಕೊಡುವುದಾಗಿ ಹೇಳಿದ್ದ ಪಿಡಿಓ ಇದೀಗ ಪ್ರತಿಭಟನೆ ನಂತರ ೧೯ಸಾವಿರ ಹಾಕುತ್ತಿರುವುದಾಗಿ ಹೇಳುತ್ತಿದ್ದು, ಪಂಚಾಯ್ತಿ ಹತ್ತಿರ ಬಾರದೆ ಎಲ್ಲೋ ಕುಳಿತು ಅಧಿಕಾರ ನಡೆಸುತ್ತಿದ್ದಾರೆ ಎಂದು ಎಸ್.ಎಸ್.ಆರ್. ಚಿದಾನಂದಮೂರ್ತಿ ಆರೋಪಿಸಿದರು.
ಹುಳಿಯಾರು ಪಂಚಾಯ್ತಿಯಲ್ಲೇ ಕಂಪ್ಯೂಟರ್ ವ್ಯವಸ್ಥೆಯಿದ್ದು ಇಲ್ಲಿಯೇ ಥಂಬ್ ಇಂಪ್ರೆಷನ್ ಕೊಟ್ಟು ಬಾಕಿ ಇರುವ ಬಿಲ್ಲನ್ನು ಪಾವತಿಸಬಹುದಾಗಿದ್ದ ಪಿಡಿಓ ಅವರು ತಮ್ಮ ಕೆಲಸದ ಅವಧಿಯಲ್ಲೇ ಚಿ.ನಾ.ಹಳ್ಳಿಗೆ ಹೋಗಿರುವುದು ಎಷ್ಟರಮಟ್ಟಿಗೆ ಸರಿ ಈ ಬಗ್ಗೆ ಮೇಲಾಧಿಕಗಳು ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ವಿಶ್ವನಾಥ್ ತಿಳಿಸಿದರು.
ಧರಣಿ ಸ್ಥಳದಲ್ಲೆ ಅಡುಗೆ : ಮಂಗಳವಾರ ಬೆಳಿಗ್ಗಿನಿಂದ ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರು ಪಂಚಾಯ್ತಿ ಮುಂದೆಯೇ ಅಡುಗೆ ತಯಾರಿಸಿ ಎಲ್ಲೂ ಕದಲಡೆ ಪ್ರತಿಭಟಿಸಿದರು. ಇಓ ಹಾಗೂ ಪಿಡಿಓ ಅವರುಗಳು ಸ್ಥಳಕ್ಕೆ ಬಂದು ತಮ್ಮ ಸಮಸ್ಯೆಯನ್ನು ಬಗೆಹರಿಸುವವರೆಗೂ ತಮ್ಮ ಧರಣಿಯನ್ನು ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಧರಣಿನಿರತರು ಈಗಲೂ ಸ್ಪಂದಿಸದಿದ್ದರೆ ಉಗ್ರರೀತಿಯ ಪ್ರತಿಭಟನೆಗೆ ಮುಂದಾಗುವುದಾಗಿ ಎಚ್ಚರಿಸಿದ್ದಾರೆ.

ಪ್ರತಿಭಟನೆಯಲ್ಲಿ ಶಶಿಧರ್,ಜಯಣ್ಣ,ಚನ್ನಬಸವಯ್ಯ,ಪ್ರಭು,ಕುಮಾರ,ಓಂಕಾರಮೂರ್ತಿ,ಈಶ್ವರಯ್ಯ,ಬಸವರಾಜು,ಬಸವೇಶ್ವರನಗರದ ನಿವಾಸಿಗಳು ಸೇರಿದಂತೆ ಪಟ್ಟಣದ ಸಾರ್ವಜನಿಕರು ಪಾಲ್ಗೊಂಡಿದ್ದರು.
 ಪಂಚಾಯ್ತಿಯ ಪಿಡಿಓ ತಮ್ಮಿಷ್ಟದಂತೆ ಆಡಳಿತ ನಡೆಸುತ್ತಿದ್ದು ,ಏನೋ ಒಂದು ಕುಂಟು ನೆಪ ಹೇಳುತ್ತಿದ್ದಾರೆ. ಧರಣಿ ಸ್ಥಳಕ್ಕೆ ಬಂದು ಖಾತ್ರಿ ಕಾಮಗಾರಿಗಳ ಸಂಪೂರ್ಣ ಬಿಲ್ ನೀಡುವವರೆಗೂ ನಮ್ಮ ಪ್ರತಿಭಟನೆ ಅಹೋರಾತ್ರಿ ಮುಂದುವರೆಯಲಿದೆ : ಪಟೇಲ್ ರಾಜ್ ಕುಮಾರ್, ಲಿಂಗಾಯಿತ ಬೀದಿ ನಿವಾಸಿ.ಹುಳಿಯಾರು.

ದನದಕೊಟ್ಟಿಗೆಮನೆ ನಿರ್ಮಿಸಿ ಸೂಕ್ತ ದಾಖಲೆಗಳನ್ನು ನೀಡಿದ್ದು, ಕಂಪ್ಯೂಟರ್ ನಲ್ಲಿ ಎಂಟ್ರಿ ಮಾಡುವಾಗ ತಪ್ಪು ಎಂಟ್ರಿ ಮಾಡಿ ಒಂದು ವರ್ಷ ಕಳೆಯುತ್ತಾ ಬಂದರೂ ಅದನ್ನು ಸರಿಪಡಿಸಿ ಬಿಲ್ ನೀಡದೆ ಇದುವರೆಗೂ ಪಂಚಾಯ್ತಿ ಬಾಗಿಲಿಗೆ ಅಲೆಸುತ್ತಿದ್ದಾರೆ : ಮೈಲಾರಿ, ಸೋಮಜ್ಜನಪಾಳ್ಯ.
-----------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...