ವಿಷಯಕ್ಕೆ ಹೋಗಿ

ಎರಡನೇ ದಿನಕ್ಕೆ ಕಾಲಿಟ್ಟ ಧರಣಿ : ಇತ್ತ ಸುಳಿಯದ ಅಧಿಕಾರಿಗಳು ಧರಣಿ ಸ್ಥಳದಲ್ಲೇ ಅಡುಗೆ : ಸ್ಪಂದಿಸದಿದ್ದರೆ ಅಹೋರಾತ್ರಿ ಧರಣಿ

ಖಾತ್ರಿ ಯೋಜನೆಯಡಿ ನಿರ್ಮಿಸಿರುವ ದನದಕೊಟ್ಟಿಗೆಮನೆ ಬಿಲ್ ಪಾವತಿಸಿಲ್ಲ ಹಾಗೂ ಬಸವೇಶ್ವರನಗರ ಬಡಾವಣೆಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿಲ್ಲವೆಂದು ಅರೋಪಿಸಿ ಸೋಮವಾರ ಪಂಚಾಯ್ತಿಗೆ ಬೀಗಹಾಕುವ ಮೂಲಕ ಪ್ರಾರಂಭವಾದ ಪ್ರತಿಭಟನೆ ಮಂಗಳವಾರವೂ ನಡೆಯಿತು.
ಹುಳಿಯಾರು ಗ್ರಾ.ಪಂ. ಮುಂದೆಯೇ ಅಡುಗೆ ಮಾಡಿ ಪ್ರತಿಭಟಿಸುತ್ತಿರುವ ಬಸವೇಶ್ವರ ನಗರ ನಿವಾಸಿಗಳು.
ಸೋಮವಾರದಂದು ಗ್ರಾ.ಪಂ.ಕಛೇರಿಗೆ ಬೀಗ ಹಾಕಿ ಪ್ರತಿಭಟಿಸುತ್ತಿದ್ದ ಧರಣಿನಿರತರರು ಪೊಲೀಸರ ಮಾತಿನನಂತೆ ಬೀಗ ತೆಗೆದರಾದರೂ ಸಹ ತಮ್ಮ ಪಟ್ಟು ಬಿಡದೆ ಪಂಚಾಯ್ತಿ ಅಧಿಕಾರಿಗಳು ಸ್ಥಳಕ್ಕೆ ಬಂದು ತಮ್ಮ ಸಮಸ್ಯೆ ಬಗೆಹರಿಸಲಿ ಎಂದು ಪ್ರತಿಭಟನೆಯನ್ನು ಮುಂದುವರೆಸಿದ್ದರು. ಸಂಜೆಯ ನಂತರ ಬಂದ ಪಿಡಿಓ ಮಂಗಳವಾರ ಬೆಳಿಗ್ಗೆ ಕಛೇರಿಯಲ್ಲಿಗೆ ಬಂದು ದನದಕೊಟ್ಟಿಗೆಯ ಬಿಲ್ ನೀಡುತ್ತೇವೆ ಎಂದು ಹೇಳಿದ್ದರು. ಅವರ ಮಾತಿನಂತೆ ಬಸವೇಶ್ವರನಗರ ನಿವಾಸಿಗಳು ಮಂಗಳವಾರ ಬೆಳಿಗ್ಗೆ ಗ್ರಾ.ಪಂ ಹತ್ತಿರ ಬಂದಾಗ ಪಿಡಿಓ ಆಗಲಿ ಕಂಪ್ಯೂಟರ್ ಅಪರೇಟರ್ ಆಗಲಿ ಇಲ್ಲದ್ದನ್ನು ಕಂಡು ಆಕ್ರೋಶಿತರಾಗಿ ಕೂಡಲೇ ಪ್ರತಿಭಟನೆಗೆ ಮುಂದಾದರು.
ಪಿಡಿಓ ಅವರಿಗೆ ಪೋನ್ ಮಾಡಿ ಪಂಚಾಯ್ತಿಗೆ ಬರುತ್ತೇನೆಂದು ಹೇಳಿದ್ದರಲ್ಲ ಎಂದು ಕೇಳಿದರೆ ಚಿಕ್ಕನಾಯಕನಹಳ್ಳಿಯಲ್ಲಿ ಕೂತು ಖಾತ್ರಿ ಯೋಜನೆಯ ಬಿಲ್ ಪಾವತಿ ಮಾಡುತ್ತಿರುವುದಾಗಿ ತಿಳಿಸುತ್ತಾರೆ. ಖಾತ್ರಿ ಯೋಜನೆಯಡಿ ದನದಕೊಟ್ಟಿಗೆಗೆ ೩೫ಸಾವಿರ ಪಾವತಿ ಮಾಡಬೇಕಿದ್ದು , ಕೇವಲ ೧೬ಸಾವಿರ ಕೊಡುವುದಾಗಿ ಹೇಳಿದ್ದ ಪಿಡಿಓ ಇದೀಗ ಪ್ರತಿಭಟನೆ ನಂತರ ೧೯ಸಾವಿರ ಹಾಕುತ್ತಿರುವುದಾಗಿ ಹೇಳುತ್ತಿದ್ದು, ಪಂಚಾಯ್ತಿ ಹತ್ತಿರ ಬಾರದೆ ಎಲ್ಲೋ ಕುಳಿತು ಅಧಿಕಾರ ನಡೆಸುತ್ತಿದ್ದಾರೆ ಎಂದು ಎಸ್.ಎಸ್.ಆರ್. ಚಿದಾನಂದಮೂರ್ತಿ ಆರೋಪಿಸಿದರು.
ಹುಳಿಯಾರು ಪಂಚಾಯ್ತಿಯಲ್ಲೇ ಕಂಪ್ಯೂಟರ್ ವ್ಯವಸ್ಥೆಯಿದ್ದು ಇಲ್ಲಿಯೇ ಥಂಬ್ ಇಂಪ್ರೆಷನ್ ಕೊಟ್ಟು ಬಾಕಿ ಇರುವ ಬಿಲ್ಲನ್ನು ಪಾವತಿಸಬಹುದಾಗಿದ್ದ ಪಿಡಿಓ ಅವರು ತಮ್ಮ ಕೆಲಸದ ಅವಧಿಯಲ್ಲೇ ಚಿ.ನಾ.ಹಳ್ಳಿಗೆ ಹೋಗಿರುವುದು ಎಷ್ಟರಮಟ್ಟಿಗೆ ಸರಿ ಈ ಬಗ್ಗೆ ಮೇಲಾಧಿಕಗಳು ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ವಿಶ್ವನಾಥ್ ತಿಳಿಸಿದರು.
ಧರಣಿ ಸ್ಥಳದಲ್ಲೆ ಅಡುಗೆ : ಮಂಗಳವಾರ ಬೆಳಿಗ್ಗಿನಿಂದ ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರು ಪಂಚಾಯ್ತಿ ಮುಂದೆಯೇ ಅಡುಗೆ ತಯಾರಿಸಿ ಎಲ್ಲೂ ಕದಲಡೆ ಪ್ರತಿಭಟಿಸಿದರು. ಇಓ ಹಾಗೂ ಪಿಡಿಓ ಅವರುಗಳು ಸ್ಥಳಕ್ಕೆ ಬಂದು ತಮ್ಮ ಸಮಸ್ಯೆಯನ್ನು ಬಗೆಹರಿಸುವವರೆಗೂ ತಮ್ಮ ಧರಣಿಯನ್ನು ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಧರಣಿನಿರತರು ಈಗಲೂ ಸ್ಪಂದಿಸದಿದ್ದರೆ ಉಗ್ರರೀತಿಯ ಪ್ರತಿಭಟನೆಗೆ ಮುಂದಾಗುವುದಾಗಿ ಎಚ್ಚರಿಸಿದ್ದಾರೆ.

ಪ್ರತಿಭಟನೆಯಲ್ಲಿ ಶಶಿಧರ್,ಜಯಣ್ಣ,ಚನ್ನಬಸವಯ್ಯ,ಪ್ರಭು,ಕುಮಾರ,ಓಂಕಾರಮೂರ್ತಿ,ಈಶ್ವರಯ್ಯ,ಬಸವರಾಜು,ಬಸವೇಶ್ವರನಗರದ ನಿವಾಸಿಗಳು ಸೇರಿದಂತೆ ಪಟ್ಟಣದ ಸಾರ್ವಜನಿಕರು ಪಾಲ್ಗೊಂಡಿದ್ದರು.
 ಪಂಚಾಯ್ತಿಯ ಪಿಡಿಓ ತಮ್ಮಿಷ್ಟದಂತೆ ಆಡಳಿತ ನಡೆಸುತ್ತಿದ್ದು ,ಏನೋ ಒಂದು ಕುಂಟು ನೆಪ ಹೇಳುತ್ತಿದ್ದಾರೆ. ಧರಣಿ ಸ್ಥಳಕ್ಕೆ ಬಂದು ಖಾತ್ರಿ ಕಾಮಗಾರಿಗಳ ಸಂಪೂರ್ಣ ಬಿಲ್ ನೀಡುವವರೆಗೂ ನಮ್ಮ ಪ್ರತಿಭಟನೆ ಅಹೋರಾತ್ರಿ ಮುಂದುವರೆಯಲಿದೆ : ಪಟೇಲ್ ರಾಜ್ ಕುಮಾರ್, ಲಿಂಗಾಯಿತ ಬೀದಿ ನಿವಾಸಿ.ಹುಳಿಯಾರು.

ದನದಕೊಟ್ಟಿಗೆಮನೆ ನಿರ್ಮಿಸಿ ಸೂಕ್ತ ದಾಖಲೆಗಳನ್ನು ನೀಡಿದ್ದು, ಕಂಪ್ಯೂಟರ್ ನಲ್ಲಿ ಎಂಟ್ರಿ ಮಾಡುವಾಗ ತಪ್ಪು ಎಂಟ್ರಿ ಮಾಡಿ ಒಂದು ವರ್ಷ ಕಳೆಯುತ್ತಾ ಬಂದರೂ ಅದನ್ನು ಸರಿಪಡಿಸಿ ಬಿಲ್ ನೀಡದೆ ಇದುವರೆಗೂ ಪಂಚಾಯ್ತಿ ಬಾಗಿಲಿಗೆ ಅಲೆಸುತ್ತಿದ್ದಾರೆ : ಮೈಲಾರಿ, ಸೋಮಜ್ಜನಪಾಳ್ಯ.
-----------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.