ವಿಷಯಕ್ಕೆ ಹೋಗಿ

ಹೆದ್ದಾರಿಪಕ್ಕಕ್ಕೆ ಮಣ್ಣು : ಸಂಚಾರ ಬಲು ದುಸ್ಥರ

ಕೆಂಕೆರೆ,ಹುಳಿಯಾರು, ದೊಡ್ಡಬಿದರೆ, ಚಿಕ್ಕನಾಯಕನಹಳ್ಳಿ ಮಾರ್ಗದ ಹೆದ್ದಾರಿಯಲ್ಲಿ ಕಳೆದೊಂದು ವಾರದಿಂದ ರಸ್ತೆ ದುರಸ್ಥಿ ಕಾರ್ಯ ಸಾಗುತ್ತಿದ್ದು ಸದ್ಯಕ್ಕೆ ರಸ್ತೆ ಅಕ್ಕಪಕ್ಕ ಮಣ್ಣು ಹಾಕುವ ಕೆಲಸ ಸಾಗಿದ್ದು, ಸಮರ್ಪಕವಾಗಿ ನಡೆಯದ ಕಾರ್ಯದಿಂದಾಗಿ ದ್ವಿಚಕ್ರ ಹಾಗೂ ಪಾದಾಚಾರಿಗಳಿಗೆ ಸಂಚಾರಕ್ಕೆ ತೊಂದರೆಯಾಗಿದ್ದು ಸ್ವಲ್ಪ ಹೆಚ್ಚುಕಡಿಮೆಯಾದರೂ ಅಪಾಯ ಕಟ್ಟಿಟ್ಟಬುತ್ತಿಯಾಗಿದೆ.
ಹುಳಿಯಾರು-ಚಿ.ನಾ.ಹಳ್ಳಿ ಹೆದ್ದಾರಿಯ ರಸ್ತೆ ಇಕ್ಕೆಲದಲ್ಲಿ ಮಣ್ಣು ಹಾಕಿ ಡೋಸ್ ಮಾಡದೆ ಬಿಟ್ಟಿರುವ ದಪ್ಪ ದಪ್ಪ ಮಣ್ಣುಹೆಂಟೆಗಳು.
ಹುಳಿಯಾರು ಮೂಲಕ ಹಾದು ಹೋಗಿರುವ ರಸ್ತೆ ಸಾಕಷ್ಟು ಕಡೆ ಗುಂಡಿ ಬಿದ್ದು ಸಂಚಾರ ದುಸ್ಥರವಾಗಿತ್ತು. ಈ ಬಗ್ಗೆ ಸಾಕಷ್ಟು ಬಾರಿ ಗಮನ ಸೆಳೆದಿದ್ದರಿಂದಲೋ ಏನೋ ರಸ್ತೆ ದುರಸ್ತಿಕಾರ್ಯ ಪ್ರಾರಂಭವಾಗಿ ಕೆಲವೆಡೆ ಗುಂಡಿ ಮುಚ್ಚುವ ಕಾರ್ಯ ಸಾಗಿದರೆ, ಮತ್ತೆಕೆಲವೆಡೆ ರಸ್ತೆಯ ಇಕ್ಕೆಲಗಳಲ್ಲೂ ಬಿದ್ದಿದ್ದ ಕೊರಕಲಿಗೆ ಮಣ್ಣು ಮುಚ್ಚುವ ( ಶೋಲ್ಡರ್ ವರ್ಕ್) ಕಾರ್ಯ ಸಾಗಿದೆ. ಕರ್ನಾಟಕ ಸ್ಟೇಟ್ ಹೈವೇಸ್ ಇಂಪ್ರೂವ್ ಮೆಂಟ್ ಪ್ರಾಜೆಕ್ಟ್ ಅಂದರೆ ಕೆ-ಶಿಪ್ ನವರು ಸದ್ಯ ಜಿಲ್ಲೆಯ ಗಡಿಭಾಗವಾದ ಕುದುರೆಕಣಿವೆಯಿಂದ ಆದಿ ಚುಂಚನಗಿರಿವರೆಗೆ ದುರಸ್ಥಿ ಹಾಗೂ ನಿರ್ವಹಣ ಕಾರ್ಯಕ್ಕೆ ಮುಂದಾಗಿದ್ದಾರೆ.
ರಸ್ತೆಯ ಗುಂಡಿ ಮುಚ್ಚುವುದು,ಜಂಗಲ್ ಸವರುವುದು ಹಾಗೂ ಶೋಲ್ಡರ್ ವರ್ಕ್ ಕಾಮಗಾರಿ ನಡೆಯಲಿದ್ದು , ಕಳೆದೊಂದು ವಾರದಿಂದ ಡಾಂಬರ್ ರಸ್ತೆಯ ಇಕ್ಕೆಲಗಳಲ್ಲೂ ಕೊರಕಲು ಬಿದ್ದಿರುವೆಡೆ ಮಣ್ಣು ತುಂಬುವ ಕಾರ್ಯ ಆರಂಭಿಸಿದ್ದಾರೆ. ರಸ್ತೆಯ ಅಕ್ಕಪಕ್ಕದಲ್ಲಿರುವ ಮಣ್ಣನ್ನು ಹಿಟಾಚಿ ಮೂಲಕ ತೆಗೆದು ರಸ್ತೆ ಬದಿಗೆ ಹಾಕಿ ಕೆಲವೆಡೆ ಡೋಸರ್ ಮೂಲಕ ಮಟ್ಟ ಮಾಡುತ್ತಿದ್ದರೆ ಬಹುತೇಕ ಕಡೆ ಹಾಗೆಯೇ ಬಿಟ್ಟಿದ್ದು ಸಮಸ್ಯೆಗೆ ಕಾರಣವಾಗಿದೆ.
ರಸ್ತೆಯ ಎರಡು ಬದಿಯಲ್ಲಿ ಹಾಕಿರುವ ಮಣ್ಣು ಗುಡ್ಡೆಯಾಗಿ ಬಿದಿದ್ದು ಎದುರಿನಿಂದ ವಾಹನ ಬಂದಲ್ಲಿ ದ್ವಿಚಕ್ರವಾಹನದವರು ಕೆಳಗಿಳಿಯಲು ಪರದಾಡುವಂತಾಗಿದೆ.ಅಲ್ಲದೆ ರಸ್ತೆ ಪಕ್ಕದ ಗುಂಡಿಗಳಿಂದಲೇ ಕರಲು ಮಣ್ಣು ಹಾಕುತ್ತಿದ್ದು , ಯಾವೊಂದು ವಾಹನ ಹೋದರು ಆಳೆತ್ತರಕ್ಕೆ ಧೂಳೆದ್ದು ಎದುರಿನಿಂದ ಬರುವ ವಾಹನವೂ ಕಾಣದಂತಾಗಿ ಪ್ರಯಾಣ ದುಸ್ಥರವಾಗಿ ಪರಿಣಮಿಸಿದೆ. ನೀರು ಹಾಕಿ ರೋಲ್ ಮಾಡಬೇಕಿದ್ದರೂ ಕೇವಲ ಡೋಸರ್ ಮೂಲಕವೇ ಮಣ್ಣನ್ನು ಮಟ್ಟಮಾಡುವ ಕಾರ್ಯ ಮಾಡುತ್ತಿದ್ದು ಇದರಿಂದ ಮಣ್ಣು ಬಿಗಿಯಾಗಿ ಕೂರದೆ ವಾಹನಗಳ ಜಾರಿಕೆಗೆ ಕಾರಣವಾಗಿದೆ. ಮಣ್ಣು ಸುರಿದ ತಕ್ಷಣವೇ ಮಟ್ಟ ಮಾಡಿ ಬಿಗಿ ಮಾಡದಿದ್ದಲ್ಲಿ ಪ್ರಾಣಾಪಾಯವಾಗುವ ಸಂಭವ ಸಾಕಷ್ಟಿದೆ. ನಿರ್ವಹಣೆ ಹೊತ್ತಿರುವ ಗುತ್ತಿಗೆದಾರರು ಕೂಡಲೇ ಈ ಬಗ್ಗೆ ಗಮನಹರಿಸುವ ಅವಶ್ಯಕತೆಯಿದೆ.
---------

ರಸ್ತೆ ಬದಿಯಲ್ಲಿನ ಗುಂಡಿಗಳಿಂದ ಮಣ್ಣನ್ನು ತೆಗೆದು ಹಾಕುವ ಬದಲು ಬೇರೆಡೆಯಿಂದ ಬಿಗಿಯಾದ ಕೆಮ್ಮಣ್ಣನ್ನು ತಂದು ಹಾಕಿ ರೋಡ್ ರೋಲರ್ ನಲ್ಲಿ ಬಿಗಿ ಮಾಡಿದೆ ರಸ್ತೆ ಬದಿ ಮಣ್ಣನ್ನೇ ಹಾಕಿ ಕಾಟಾಚಾರದ ಕೆಲಸ ಮಾಡುತ್ತಿದ್ದಾರೆ ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರುವೆ : ನವೀನ್, ತಾ.ಪಂ.ಸದಸ್ಯ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...