ವಿಷಯಕ್ಕೆ ಹೋಗಿ

ಹೆದ್ದಾರಿಪಕ್ಕಕ್ಕೆ ಮಣ್ಣು : ಸಂಚಾರ ಬಲು ದುಸ್ಥರ

ಕೆಂಕೆರೆ,ಹುಳಿಯಾರು, ದೊಡ್ಡಬಿದರೆ, ಚಿಕ್ಕನಾಯಕನಹಳ್ಳಿ ಮಾರ್ಗದ ಹೆದ್ದಾರಿಯಲ್ಲಿ ಕಳೆದೊಂದು ವಾರದಿಂದ ರಸ್ತೆ ದುರಸ್ಥಿ ಕಾರ್ಯ ಸಾಗುತ್ತಿದ್ದು ಸದ್ಯಕ್ಕೆ ರಸ್ತೆ ಅಕ್ಕಪಕ್ಕ ಮಣ್ಣು ಹಾಕುವ ಕೆಲಸ ಸಾಗಿದ್ದು, ಸಮರ್ಪಕವಾಗಿ ನಡೆಯದ ಕಾರ್ಯದಿಂದಾಗಿ ದ್ವಿಚಕ್ರ ಹಾಗೂ ಪಾದಾಚಾರಿಗಳಿಗೆ ಸಂಚಾರಕ್ಕೆ ತೊಂದರೆಯಾಗಿದ್ದು ಸ್ವಲ್ಪ ಹೆಚ್ಚುಕಡಿಮೆಯಾದರೂ ಅಪಾಯ ಕಟ್ಟಿಟ್ಟಬುತ್ತಿಯಾಗಿದೆ.
ಹುಳಿಯಾರು-ಚಿ.ನಾ.ಹಳ್ಳಿ ಹೆದ್ದಾರಿಯ ರಸ್ತೆ ಇಕ್ಕೆಲದಲ್ಲಿ ಮಣ್ಣು ಹಾಕಿ ಡೋಸ್ ಮಾಡದೆ ಬಿಟ್ಟಿರುವ ದಪ್ಪ ದಪ್ಪ ಮಣ್ಣುಹೆಂಟೆಗಳು.
ಹುಳಿಯಾರು ಮೂಲಕ ಹಾದು ಹೋಗಿರುವ ರಸ್ತೆ ಸಾಕಷ್ಟು ಕಡೆ ಗುಂಡಿ ಬಿದ್ದು ಸಂಚಾರ ದುಸ್ಥರವಾಗಿತ್ತು. ಈ ಬಗ್ಗೆ ಸಾಕಷ್ಟು ಬಾರಿ ಗಮನ ಸೆಳೆದಿದ್ದರಿಂದಲೋ ಏನೋ ರಸ್ತೆ ದುರಸ್ತಿಕಾರ್ಯ ಪ್ರಾರಂಭವಾಗಿ ಕೆಲವೆಡೆ ಗುಂಡಿ ಮುಚ್ಚುವ ಕಾರ್ಯ ಸಾಗಿದರೆ, ಮತ್ತೆಕೆಲವೆಡೆ ರಸ್ತೆಯ ಇಕ್ಕೆಲಗಳಲ್ಲೂ ಬಿದ್ದಿದ್ದ ಕೊರಕಲಿಗೆ ಮಣ್ಣು ಮುಚ್ಚುವ ( ಶೋಲ್ಡರ್ ವರ್ಕ್) ಕಾರ್ಯ ಸಾಗಿದೆ. ಕರ್ನಾಟಕ ಸ್ಟೇಟ್ ಹೈವೇಸ್ ಇಂಪ್ರೂವ್ ಮೆಂಟ್ ಪ್ರಾಜೆಕ್ಟ್ ಅಂದರೆ ಕೆ-ಶಿಪ್ ನವರು ಸದ್ಯ ಜಿಲ್ಲೆಯ ಗಡಿಭಾಗವಾದ ಕುದುರೆಕಣಿವೆಯಿಂದ ಆದಿ ಚುಂಚನಗಿರಿವರೆಗೆ ದುರಸ್ಥಿ ಹಾಗೂ ನಿರ್ವಹಣ ಕಾರ್ಯಕ್ಕೆ ಮುಂದಾಗಿದ್ದಾರೆ.
ರಸ್ತೆಯ ಗುಂಡಿ ಮುಚ್ಚುವುದು,ಜಂಗಲ್ ಸವರುವುದು ಹಾಗೂ ಶೋಲ್ಡರ್ ವರ್ಕ್ ಕಾಮಗಾರಿ ನಡೆಯಲಿದ್ದು , ಕಳೆದೊಂದು ವಾರದಿಂದ ಡಾಂಬರ್ ರಸ್ತೆಯ ಇಕ್ಕೆಲಗಳಲ್ಲೂ ಕೊರಕಲು ಬಿದ್ದಿರುವೆಡೆ ಮಣ್ಣು ತುಂಬುವ ಕಾರ್ಯ ಆರಂಭಿಸಿದ್ದಾರೆ. ರಸ್ತೆಯ ಅಕ್ಕಪಕ್ಕದಲ್ಲಿರುವ ಮಣ್ಣನ್ನು ಹಿಟಾಚಿ ಮೂಲಕ ತೆಗೆದು ರಸ್ತೆ ಬದಿಗೆ ಹಾಕಿ ಕೆಲವೆಡೆ ಡೋಸರ್ ಮೂಲಕ ಮಟ್ಟ ಮಾಡುತ್ತಿದ್ದರೆ ಬಹುತೇಕ ಕಡೆ ಹಾಗೆಯೇ ಬಿಟ್ಟಿದ್ದು ಸಮಸ್ಯೆಗೆ ಕಾರಣವಾಗಿದೆ.
ರಸ್ತೆಯ ಎರಡು ಬದಿಯಲ್ಲಿ ಹಾಕಿರುವ ಮಣ್ಣು ಗುಡ್ಡೆಯಾಗಿ ಬಿದಿದ್ದು ಎದುರಿನಿಂದ ವಾಹನ ಬಂದಲ್ಲಿ ದ್ವಿಚಕ್ರವಾಹನದವರು ಕೆಳಗಿಳಿಯಲು ಪರದಾಡುವಂತಾಗಿದೆ.ಅಲ್ಲದೆ ರಸ್ತೆ ಪಕ್ಕದ ಗುಂಡಿಗಳಿಂದಲೇ ಕರಲು ಮಣ್ಣು ಹಾಕುತ್ತಿದ್ದು , ಯಾವೊಂದು ವಾಹನ ಹೋದರು ಆಳೆತ್ತರಕ್ಕೆ ಧೂಳೆದ್ದು ಎದುರಿನಿಂದ ಬರುವ ವಾಹನವೂ ಕಾಣದಂತಾಗಿ ಪ್ರಯಾಣ ದುಸ್ಥರವಾಗಿ ಪರಿಣಮಿಸಿದೆ. ನೀರು ಹಾಕಿ ರೋಲ್ ಮಾಡಬೇಕಿದ್ದರೂ ಕೇವಲ ಡೋಸರ್ ಮೂಲಕವೇ ಮಣ್ಣನ್ನು ಮಟ್ಟಮಾಡುವ ಕಾರ್ಯ ಮಾಡುತ್ತಿದ್ದು ಇದರಿಂದ ಮಣ್ಣು ಬಿಗಿಯಾಗಿ ಕೂರದೆ ವಾಹನಗಳ ಜಾರಿಕೆಗೆ ಕಾರಣವಾಗಿದೆ. ಮಣ್ಣು ಸುರಿದ ತಕ್ಷಣವೇ ಮಟ್ಟ ಮಾಡಿ ಬಿಗಿ ಮಾಡದಿದ್ದಲ್ಲಿ ಪ್ರಾಣಾಪಾಯವಾಗುವ ಸಂಭವ ಸಾಕಷ್ಟಿದೆ. ನಿರ್ವಹಣೆ ಹೊತ್ತಿರುವ ಗುತ್ತಿಗೆದಾರರು ಕೂಡಲೇ ಈ ಬಗ್ಗೆ ಗಮನಹರಿಸುವ ಅವಶ್ಯಕತೆಯಿದೆ.
---------

ರಸ್ತೆ ಬದಿಯಲ್ಲಿನ ಗುಂಡಿಗಳಿಂದ ಮಣ್ಣನ್ನು ತೆಗೆದು ಹಾಕುವ ಬದಲು ಬೇರೆಡೆಯಿಂದ ಬಿಗಿಯಾದ ಕೆಮ್ಮಣ್ಣನ್ನು ತಂದು ಹಾಕಿ ರೋಡ್ ರೋಲರ್ ನಲ್ಲಿ ಬಿಗಿ ಮಾಡಿದೆ ರಸ್ತೆ ಬದಿ ಮಣ್ಣನ್ನೇ ಹಾಕಿ ಕಾಟಾಚಾರದ ಕೆಲಸ ಮಾಡುತ್ತಿದ್ದಾರೆ ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರುವೆ : ನವೀನ್, ತಾ.ಪಂ.ಸದಸ್ಯ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...