ವಿಷಯಕ್ಕೆ ಹೋಗಿ

ಹುಳಿಯಾರು: ಯುಗಾದಿ ಹಬ್ಬಸಂತೆ ಬಲು ಜೋರು

ಹಿಂದೂ ಸಂಪ್ರದಾಯದ ಪ್ರಕಾರ ಹೊಸವರ್ಷವಾಗಿರುವ ಯುಗಾದಿಹಬ್ಬದ ಆಚರಣೆ ಅಂಗವಾಗಿ ಪಟ್ಟಣದಲ್ಲಿ ಗುರುವಾರ ನಡೆದ ಹಬ್ಬಸಂತೆ ಬಲು ಜೋರಾಗಿತ್ತು. ಸಂತೆಗೆ ಹಳ್ಳಿಗಳ ಜನ ತಂಡೋಪ ತಂಡವಾಗಿ ಆಗಮಿಸಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಕೊಂಡುಕೊಳ್ಳುವಲ್ಲಿ ಮಗ್ನರಾಗಿದ್ದರು.
 ಹುಳಿಯಾರಿನಲ್ಲಿ ಹಬ್ಬದ ಅಂಗವಾಗಿ ನಡೆದ ಹಬ್ಬ ಸಂತೆಯಲ್ಲಿ ಉಡುದಾರ ಮಾಡುತ್ತಿರುವುದು.

ಹಬ್ಬಸಂತೆಯಲ್ಲಿ ಹಬ್ಬಕ್ಕೆ ಬೇಕಾದ ಪದಾರ್ಥಗಳನ್ನು ಕೊಂಡು ವಾಪಸ್ಸ್ ಹಿಂತಿರುಗುತ್ತಿರುವ ಜನರು.



ಪಟ್ಟಣದ ಗಾಂಧಿಪೇಟೆ, ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಸಂತೆ ಸೇರಿದ್ದು ಎಲ್ಲಿ ಕಣ್ಣು ಹಾಯಿಸಿದರೂ ಜನರೇ ಕಾಣಿಸುತ್ತಿದ್ದರು. ಸಂತೆಯಲ್ಲಿನ ದಿನಸಿ ಅಂಗಡಿಗಳು, ಬಟ್ಟೆ ಅಂಗಡಿಗಳ ಬಳಿ ಹೆಚ್ಚು ಜನ ಜಮಾಯಿಸಿದ್ದರಲ್ಲದೆ, ತರಕಾರಿ ಅಂಗಡಿ, ಹಣ್ಣು, ಹೂ ಅಂಗಡಿಗಳಲ್ಲೂ ಸಹ ಮಾರಾಟ ಜೋರಾಗಿತ್ತು. ಯುಗಾದಿ ಹಬ್ಬದಂದು ಹೊಸಬಟ್ಟೆ ತೊಡುವ ಸಂಪ್ರದಾಯ ನಮ್ಮ ಹಳ್ಳಿಗರಲಿದ್ದು ಹಬ್ಬದ ದಿನ ಸಂಪೂರ್ಣ ಹೊಸದನ್ನು ಹಾಕಿಕೊಳ್ಳಬೇಕೆಂಬ ದೃಷ್ಠಿಯಿಂದ ಉಡುದಾರವನ್ನು ಸಹ ಕೊಂಡುಕೊಳ್ಳುತ್ತಿದ್ದು ಕಂಡುಬಂತು.
ಕಳೆದ ಹತ್ತು ವರ್ಷದಿಂದ ಉಡುದಾರದ ವ್ಯಾಪಾರ ಮಾಡುತ್ತಿದ್ದೇನೆ ಈ ಮೊದಲು ವ್ಯಾಪಾರ ಚೆನ್ನಾಗಿತ್ತು ಇತ್ತೀಚಿನ ದಿನಗಳಲ್ಲಿ ವ್ಯಾಪಾರ ಕುಸಿದಿದೆ ಅದರೂ ಹಿಂದಿನಿಂದ ಮಾಡಿಕೊಂಡು ಬಂದಿರುವುದರಿಂದ ಬಿಡದೆ ಉಡುದಾರದ ವ್ಯಾಪಾರ ಮಾಡುತ್ತಿದ್ದೇನೆ: ಕಲ್ಲಹಳ್ಳಿಯ ಗವಿರಂಗಯ್ಯ ಉಡುದಾರದ ವ್ಯಾಪಾರಿ.
ಯುಗಾದಿ ಉಡುದಾರ : ಹಬ್ಬದ ಅಂಗವಾಗಿ ಉಡುದಾರದ ವ್ಯಾಪಾರ ತಕ್ಕಮಟ್ಟಿಗಿದ್ದು, ಕೆಲ ವ್ಯಾಪಾರಸ್ಥರು ಉಡುದಾರದ ಕೆಂಪು ಹಾಗೂ ಕಪ್ಪು ಬಣ್ಣದ ದೊಡ್ಡಹುಂಡೆಗಳನ್ನು ತಂದು ೧೦ ರೂಗೆ ೨-೩ ಮಾರು ಎಂದು ಕೂಗುತ್ತಾ ಮಾರಾಟ ಮಾಡುತ್ತಿದ್ದರು. ಸಂತೆಯಲ್ಲಿ ಅಷ್ಟೆಅಲ್ಲದೆ ಪಟ್ಟಣದ ಬಸ್ ನಿಲ್ದಾಣ ಹಾಗೂ ಪ್ರಮುಖ ಬೀದಿಗಳಲ್ಲಿ ಯುಗಾದಿ ಉಡುದಾರ ಎಂದು ಕೂಗುತ್ತಾ ವ್ಯಾಪಾರ ಮಾಡುತ್ತಿದ್ದರು. ಶನಿವಾರ ಹಬ್ಬವಿದ್ದು ಶುಕ್ರವಾರವೂ ಸಹ ಉಡುದಾರದ ವ್ಯಾಪಾರ ಮಾಡುತ್ತೇವೆ ಲಾಭವೋ, ಲುಕ್ಸಾನವೋ ಹಿಂದಿನಿಂದ ಮಾಡಿಕೊಂಡು ಬಂದಿರುವುದು ಬಿಡಬಾರದೆಂದು ಉಡುದಾರದ ವ್ಯಾಪರ ಮಾಡಿಕೊಂಡು ಬರುತ್ತಿದ್ದೆವೆ. ಇನ್ನುಳಿದ ದಿನಗಳಲ್ಲಿ ಜಾತ್ರೆಯಲ್ಲಿ ಮಾರಾಟ ಮಾಡುತ್ತೇವೆ ಜಾತ್ರೆಯಿಲ್ಲದ ವೇಳೆ ಕೃಷಿ ಕಾರ್ಯಗಳನ್ನು ಮಾಡುತ್ತೇವೆ ಎಂದು ಉಡುದಾರದ ವ್ಯಾಪಾರಿ ಮಂಜಣ್ಣ ತಿಳಿಸುತ್ತಾರೆ.
ಬಟ್ಟೆಅಂಗಡಿಳು ರಶ್: ಯುಗಾದಿ ಹಬ್ಬದಲ್ಲಿ ಹೊಸಬಟ್ಟೆ ತೊಡುವುದು ಸಂಪ್ರದಾಯವಿರುವುದರಿಂದ ಹೊಸಬಟ್ಟೆ ಕೊಳ್ಳಲು ಜನರು ಜವಳಿ ಅಂಗಡಿಗಳತ್ತ ಮುಗಿಬಿದಿದ್ದರು. ಪಟ್ಟಣದ ಶ್ರೀರಾಮ ಹಾಲ್, ಎಸ್.ಅರ್.ಎಸ್. ರುಕ್ಮಿಣಿ ಹಾಲ್, ಜಗನಾಥ್ ರಾವ್, ಎಸ್.ಎಂ.ಎಸ್ ಟೆಕ್ಸ್ ಟೈಲ್ಸ್, ಮರುಳಸಿದ್ದೇಶ್ವರ ಟೆಕ್ಸ್ ಟೈಲ್ಸ್, ದಿನೇಶ್ ಕ್ಲಾತ್ ಸೆಂಟರ್, ದಾವಣಗೆರೆ ಟೆಕ್ಸ್ ಟೈಲ್ಸ್ ಸೇರಿದಂತೆ ಇನ್ನಿತರ ಬಟ್ಟ ಅಂಗಡಿಗಳಲ್ಲಿ ಜನಜಾತ್ರೆಯೇ ಸೇರಿತ್ತು. ಬಟ್ಟೆ ಅಂಗಡಿಗಳಲ್ಲದೆ ಬಸ್ ನಿಲ್ದಾಣ ಹಾಗೂ ಜನ ನಿಬಿಡಪ್ರದೇಶದಲ್ಲಿ ಟೆಂಟ್ ವ್ಯಾಪಾರಿಗಳ ರೆಡಿಮೆಡ್ ಬಟ್ಟೆಯ ಮಾರಾಟವೂ ಸಹ ಇತ್ತು. ದೊಡ್ಡವರ ಬಟ್ಟೆಗಿಂತ ಮಕ್ಕಳ ರೆಡಿಮೆಡ್ ಬಟ್ಟೆಗಳ ಬೆಲೆ ತುಸು ಹೆಚ್ಚಾಗಿದ್ದರೂ ಸಹ ಹಬ್ಬದ ನೆಪದಲ್ಲಿ ಕೊಂಡುಕೊಳ್ಳುತ್ತಿದ್ದರು.ಮಹಿಳೆಯರು ಹಾಗೂ ಯುವತಿಯರು ಬಟ್ಟೆಗಳಿಗೆ ತಕ್ಕಂತೆ ಅಲಂಕಾರಿಕ, ಸೌಂದರ್ಯ ವರ್ಧಕ ವಸ್ತುಗಳ ಹುಡುಕಾಟದಲ್ಲಿ ತೊಡಗಿದ್ದರು. ಫ್ಯಾನ್ಸಿ, ಬಳೆ ಅಂಗಡಿಗಳಲ್ಲಿ ಮಹಿಳೆಯರದ್ದೆ ಸದ್ದಾಗಿತ್ತು.
ಹುಳಿಯಾರಿನಲ್ಲಿ ಯುಗಾದಿಹಬ್ಬದ ಅಂಗವಾಗಿ ನಡೆದ ಹಬ್ಬ ಸಂತೆಯಲ್ಲಿ ದಿನಸಿ ಪದಾರ್ಥಗಳನ್ನು ಕೊಂಡುಕೊಳ್ಳುತ್ತಿರುವ ಜನರು.
ಹುಳಿಯಾರು ಸುತ್ತಮುತ್ತಲ ಹಳ್ಳಿಯವರು ಆಟೋ, ಟಾಟಾಏಸ್ ವಾಹನದಲ್ಲಿ ಆಗಮಿಸಿದ್ದು ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಕೊಂಡು ಸಂಜೆ ನಂತರ ವಾಪಸ್ ಹಿಂತಿರುಗುತ್ತಿದ್ದರಲ್ಲದೆ ಬಸ್ ಗಳು ಸಹ ರಶ್ ಆಗಿದ್ದು ಬಸ್ ನಿಲ್ದಾಣದ ತುಂಬೆಲ್ಲಾ ಜನ ಜಾತ್ರೆಯೇ ಕಂಡುಬಂತು.

ಸಂತೆಗೆ ಹೆಚ್ಚು ಆಗಮಿಸಿದ್ದ ಹಿನ್ನಲೆಯಲ್ಲಿ ಕಳ್ಳತನ ಆಗುವ ಸಂಧರ್ಭ ಬರುವುದರಿಂದ ತಮ್ಮ ಲಗೇಜು ಹಾಗೂ ಹಣದ ಬಗ್ಗೆ ಜಾಗೃತಿವಹಿಸುವಂತೆ ಪೊಲೀಸ್ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಚಾರ ನಡೆಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...