ವಿಷಯಕ್ಕೆ ಹೋಗಿ

ಹುಳಿಯಾರು: ಯುಗಾದಿ ಹಬ್ಬಸಂತೆ ಬಲು ಜೋರು

ಹಿಂದೂ ಸಂಪ್ರದಾಯದ ಪ್ರಕಾರ ಹೊಸವರ್ಷವಾಗಿರುವ ಯುಗಾದಿಹಬ್ಬದ ಆಚರಣೆ ಅಂಗವಾಗಿ ಪಟ್ಟಣದಲ್ಲಿ ಗುರುವಾರ ನಡೆದ ಹಬ್ಬಸಂತೆ ಬಲು ಜೋರಾಗಿತ್ತು. ಸಂತೆಗೆ ಹಳ್ಳಿಗಳ ಜನ ತಂಡೋಪ ತಂಡವಾಗಿ ಆಗಮಿಸಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಕೊಂಡುಕೊಳ್ಳುವಲ್ಲಿ ಮಗ್ನರಾಗಿದ್ದರು.
 ಹುಳಿಯಾರಿನಲ್ಲಿ ಹಬ್ಬದ ಅಂಗವಾಗಿ ನಡೆದ ಹಬ್ಬ ಸಂತೆಯಲ್ಲಿ ಉಡುದಾರ ಮಾಡುತ್ತಿರುವುದು.

ಹಬ್ಬಸಂತೆಯಲ್ಲಿ ಹಬ್ಬಕ್ಕೆ ಬೇಕಾದ ಪದಾರ್ಥಗಳನ್ನು ಕೊಂಡು ವಾಪಸ್ಸ್ ಹಿಂತಿರುಗುತ್ತಿರುವ ಜನರು.



ಪಟ್ಟಣದ ಗಾಂಧಿಪೇಟೆ, ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಸಂತೆ ಸೇರಿದ್ದು ಎಲ್ಲಿ ಕಣ್ಣು ಹಾಯಿಸಿದರೂ ಜನರೇ ಕಾಣಿಸುತ್ತಿದ್ದರು. ಸಂತೆಯಲ್ಲಿನ ದಿನಸಿ ಅಂಗಡಿಗಳು, ಬಟ್ಟೆ ಅಂಗಡಿಗಳ ಬಳಿ ಹೆಚ್ಚು ಜನ ಜಮಾಯಿಸಿದ್ದರಲ್ಲದೆ, ತರಕಾರಿ ಅಂಗಡಿ, ಹಣ್ಣು, ಹೂ ಅಂಗಡಿಗಳಲ್ಲೂ ಸಹ ಮಾರಾಟ ಜೋರಾಗಿತ್ತು. ಯುಗಾದಿ ಹಬ್ಬದಂದು ಹೊಸಬಟ್ಟೆ ತೊಡುವ ಸಂಪ್ರದಾಯ ನಮ್ಮ ಹಳ್ಳಿಗರಲಿದ್ದು ಹಬ್ಬದ ದಿನ ಸಂಪೂರ್ಣ ಹೊಸದನ್ನು ಹಾಕಿಕೊಳ್ಳಬೇಕೆಂಬ ದೃಷ್ಠಿಯಿಂದ ಉಡುದಾರವನ್ನು ಸಹ ಕೊಂಡುಕೊಳ್ಳುತ್ತಿದ್ದು ಕಂಡುಬಂತು.
ಕಳೆದ ಹತ್ತು ವರ್ಷದಿಂದ ಉಡುದಾರದ ವ್ಯಾಪಾರ ಮಾಡುತ್ತಿದ್ದೇನೆ ಈ ಮೊದಲು ವ್ಯಾಪಾರ ಚೆನ್ನಾಗಿತ್ತು ಇತ್ತೀಚಿನ ದಿನಗಳಲ್ಲಿ ವ್ಯಾಪಾರ ಕುಸಿದಿದೆ ಅದರೂ ಹಿಂದಿನಿಂದ ಮಾಡಿಕೊಂಡು ಬಂದಿರುವುದರಿಂದ ಬಿಡದೆ ಉಡುದಾರದ ವ್ಯಾಪಾರ ಮಾಡುತ್ತಿದ್ದೇನೆ: ಕಲ್ಲಹಳ್ಳಿಯ ಗವಿರಂಗಯ್ಯ ಉಡುದಾರದ ವ್ಯಾಪಾರಿ.
ಯುಗಾದಿ ಉಡುದಾರ : ಹಬ್ಬದ ಅಂಗವಾಗಿ ಉಡುದಾರದ ವ್ಯಾಪಾರ ತಕ್ಕಮಟ್ಟಿಗಿದ್ದು, ಕೆಲ ವ್ಯಾಪಾರಸ್ಥರು ಉಡುದಾರದ ಕೆಂಪು ಹಾಗೂ ಕಪ್ಪು ಬಣ್ಣದ ದೊಡ್ಡಹುಂಡೆಗಳನ್ನು ತಂದು ೧೦ ರೂಗೆ ೨-೩ ಮಾರು ಎಂದು ಕೂಗುತ್ತಾ ಮಾರಾಟ ಮಾಡುತ್ತಿದ್ದರು. ಸಂತೆಯಲ್ಲಿ ಅಷ್ಟೆಅಲ್ಲದೆ ಪಟ್ಟಣದ ಬಸ್ ನಿಲ್ದಾಣ ಹಾಗೂ ಪ್ರಮುಖ ಬೀದಿಗಳಲ್ಲಿ ಯುಗಾದಿ ಉಡುದಾರ ಎಂದು ಕೂಗುತ್ತಾ ವ್ಯಾಪಾರ ಮಾಡುತ್ತಿದ್ದರು. ಶನಿವಾರ ಹಬ್ಬವಿದ್ದು ಶುಕ್ರವಾರವೂ ಸಹ ಉಡುದಾರದ ವ್ಯಾಪಾರ ಮಾಡುತ್ತೇವೆ ಲಾಭವೋ, ಲುಕ್ಸಾನವೋ ಹಿಂದಿನಿಂದ ಮಾಡಿಕೊಂಡು ಬಂದಿರುವುದು ಬಿಡಬಾರದೆಂದು ಉಡುದಾರದ ವ್ಯಾಪರ ಮಾಡಿಕೊಂಡು ಬರುತ್ತಿದ್ದೆವೆ. ಇನ್ನುಳಿದ ದಿನಗಳಲ್ಲಿ ಜಾತ್ರೆಯಲ್ಲಿ ಮಾರಾಟ ಮಾಡುತ್ತೇವೆ ಜಾತ್ರೆಯಿಲ್ಲದ ವೇಳೆ ಕೃಷಿ ಕಾರ್ಯಗಳನ್ನು ಮಾಡುತ್ತೇವೆ ಎಂದು ಉಡುದಾರದ ವ್ಯಾಪಾರಿ ಮಂಜಣ್ಣ ತಿಳಿಸುತ್ತಾರೆ.
ಬಟ್ಟೆಅಂಗಡಿಳು ರಶ್: ಯುಗಾದಿ ಹಬ್ಬದಲ್ಲಿ ಹೊಸಬಟ್ಟೆ ತೊಡುವುದು ಸಂಪ್ರದಾಯವಿರುವುದರಿಂದ ಹೊಸಬಟ್ಟೆ ಕೊಳ್ಳಲು ಜನರು ಜವಳಿ ಅಂಗಡಿಗಳತ್ತ ಮುಗಿಬಿದಿದ್ದರು. ಪಟ್ಟಣದ ಶ್ರೀರಾಮ ಹಾಲ್, ಎಸ್.ಅರ್.ಎಸ್. ರುಕ್ಮಿಣಿ ಹಾಲ್, ಜಗನಾಥ್ ರಾವ್, ಎಸ್.ಎಂ.ಎಸ್ ಟೆಕ್ಸ್ ಟೈಲ್ಸ್, ಮರುಳಸಿದ್ದೇಶ್ವರ ಟೆಕ್ಸ್ ಟೈಲ್ಸ್, ದಿನೇಶ್ ಕ್ಲಾತ್ ಸೆಂಟರ್, ದಾವಣಗೆರೆ ಟೆಕ್ಸ್ ಟೈಲ್ಸ್ ಸೇರಿದಂತೆ ಇನ್ನಿತರ ಬಟ್ಟ ಅಂಗಡಿಗಳಲ್ಲಿ ಜನಜಾತ್ರೆಯೇ ಸೇರಿತ್ತು. ಬಟ್ಟೆ ಅಂಗಡಿಗಳಲ್ಲದೆ ಬಸ್ ನಿಲ್ದಾಣ ಹಾಗೂ ಜನ ನಿಬಿಡಪ್ರದೇಶದಲ್ಲಿ ಟೆಂಟ್ ವ್ಯಾಪಾರಿಗಳ ರೆಡಿಮೆಡ್ ಬಟ್ಟೆಯ ಮಾರಾಟವೂ ಸಹ ಇತ್ತು. ದೊಡ್ಡವರ ಬಟ್ಟೆಗಿಂತ ಮಕ್ಕಳ ರೆಡಿಮೆಡ್ ಬಟ್ಟೆಗಳ ಬೆಲೆ ತುಸು ಹೆಚ್ಚಾಗಿದ್ದರೂ ಸಹ ಹಬ್ಬದ ನೆಪದಲ್ಲಿ ಕೊಂಡುಕೊಳ್ಳುತ್ತಿದ್ದರು.ಮಹಿಳೆಯರು ಹಾಗೂ ಯುವತಿಯರು ಬಟ್ಟೆಗಳಿಗೆ ತಕ್ಕಂತೆ ಅಲಂಕಾರಿಕ, ಸೌಂದರ್ಯ ವರ್ಧಕ ವಸ್ತುಗಳ ಹುಡುಕಾಟದಲ್ಲಿ ತೊಡಗಿದ್ದರು. ಫ್ಯಾನ್ಸಿ, ಬಳೆ ಅಂಗಡಿಗಳಲ್ಲಿ ಮಹಿಳೆಯರದ್ದೆ ಸದ್ದಾಗಿತ್ತು.
ಹುಳಿಯಾರಿನಲ್ಲಿ ಯುಗಾದಿಹಬ್ಬದ ಅಂಗವಾಗಿ ನಡೆದ ಹಬ್ಬ ಸಂತೆಯಲ್ಲಿ ದಿನಸಿ ಪದಾರ್ಥಗಳನ್ನು ಕೊಂಡುಕೊಳ್ಳುತ್ತಿರುವ ಜನರು.
ಹುಳಿಯಾರು ಸುತ್ತಮುತ್ತಲ ಹಳ್ಳಿಯವರು ಆಟೋ, ಟಾಟಾಏಸ್ ವಾಹನದಲ್ಲಿ ಆಗಮಿಸಿದ್ದು ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಕೊಂಡು ಸಂಜೆ ನಂತರ ವಾಪಸ್ ಹಿಂತಿರುಗುತ್ತಿದ್ದರಲ್ಲದೆ ಬಸ್ ಗಳು ಸಹ ರಶ್ ಆಗಿದ್ದು ಬಸ್ ನಿಲ್ದಾಣದ ತುಂಬೆಲ್ಲಾ ಜನ ಜಾತ್ರೆಯೇ ಕಂಡುಬಂತು.

ಸಂತೆಗೆ ಹೆಚ್ಚು ಆಗಮಿಸಿದ್ದ ಹಿನ್ನಲೆಯಲ್ಲಿ ಕಳ್ಳತನ ಆಗುವ ಸಂಧರ್ಭ ಬರುವುದರಿಂದ ತಮ್ಮ ಲಗೇಜು ಹಾಗೂ ಹಣದ ಬಗ್ಗೆ ಜಾಗೃತಿವಹಿಸುವಂತೆ ಪೊಲೀಸ್ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಚಾರ ನಡೆಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...