ವಿಷಯಕ್ಕೆ ಹೋಗಿ

ಹುಳಿಯಾರು : ರಾಮನವಮಿ ಪ್ರಯುಕ್ತ ಪಾನಕಪನಿವಾರ ಸಂಭ್ರಮ

ಹುಳಿಯಾರು ಪಟ್ಟಣದ ವಿವಿಧ ದೇವಾಲಯಗಳಲ್ಲಿ ಹಾಗೂ ಸುತ್ತಮುತ್ತಲ ಸೀಗೆಬಾಗಿ,ಹೊಸಹಳ್ಳಿ, ಕೆಂಕೆರೆ, ತಿರುಮಲಾಪುರ,ದಸೂಡಿ,ನಂದಿಹಳ್ಳಿ ಗ್ರಾಮಗಳ ದೇವಾಲಯಗಳಲ್ಲಿ ಶನಿವಾರ ರಾಮನವಮಿಯ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನಡೆಸಿ ಪಾನಕ,ಮಜ್ಜಿಗೆ ವಿತರಿಸುವ ಮೂಲಕ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಹುಳಿಯಾರಿನಲ್ಲಿ ರಾಮನವಮಿ ಅಂಗವಾಗಿ ಲಿಂಗಪ್ಪನಪಾಳ್ಯದ ಶ್ರೀರಾಮದೇವರನ್ನು ಗ್ರಾಮದೇವತೆಗಳಾದ ದುರ್ಗಮ್ಮ, ಹುಳಿಯಾರಮ್ಮನವರೊಂದಿಗೆ ಮೆರವಣೆಯಲ್ಲಿ ಆಂಜನೇಯಸ್ವಾಮಿ ದೇವಾಲಯಕ್ಕೆ ಕರೆದೊಯ್ಯಲಾಯಿತು.
ಪಟ್ಟಣದ ಆಂಜನೇಯಸ್ವಾಮಿ ದೇವಾಲಯದಲ್ಲಿ ಶನಿವಾರ ಮುಂಜಾನೆ ಪೂಜೆ, ಹೋಮ ಹಾಗೂ ಮಹಾಮಂಗಳಾರತಿ ನಡೆಸಲಾಯಿತು. ಆಂಜನೇಯಸ್ವಾಮಿಗೆ ಭಕ್ತರೊಬ್ಬರು ಬೆಳ್ಳಿಯ ವಜ್ರಾಂಗಿ ಸಮರ್ಪಿಸಿದ ಹಿನ್ನಲೆಯಲ್ಲಿ ಅರ್ಚಕ ಶ್ರೀಧರ್ ಅವರಿಂದ ಹೋಮಹವನಾದಿಗಳು ನಡೆಯಿತು. ಇದೇ ಸಂದರ್ಭದಲ್ಲಿ ಬೆಲುಗೂರಿನ ಬಿಂಧುಮಾಧವ ಸ್ವಾಮಿಯವರು ದೇವಾಲಯಕ್ಕೆ ಆಗಮಿಸಿ ಭಕ್ತಾಧಿಗಳಿಗೆ ಆಶೀರ್ವಚನ ನೀಡಿದರು. ರಾಮಭಜನೆ ನಂತರ ದೇವಾಲಯ ಸಮಿತಿ ಹಾಗೂ ಜೈ ಮಾರುತಿ ಯುವಕ ಸೇವಾ ಛಾರಿಟಬಲ್ ಟ್ರಸ್ಟ್ ವತಿಯಿಂದ ಭಕ್ತಾಧಿಗಳಿಗೆ ಪಾನಕ,ಮಜ್ಜಿಗೆ,ಕಡಲೆಕಾಳು ಉಸ್ಲಿ ವಿತರಿಸಲಾಯಿತು.
 ಹುಳಿಯಾರಿನ ಆಂಜನೇಯಸ್ವಾಮಿ ದೇವಾಲಯದಲ್ಲಿ ರಾಮನವಮಿ ಅಂಗವಾಗಿ ಜೈ ಮಾರುತಿ ಯುವಕ ಸೇವಾ ಛಾರಿಟಬಲ್ ಟ್ರಸ್ಟ್ ನ ಯುವಕರು ಪಾನಕ,ಮಜ್ಜಿಗೆ ವಿತರಿಸಿದರು.
ಪಟ್ಟಣದ ಸೀತಾರಾಮ ಕಲ್ಯಾಣಮಂದಿರದಲ್ಲಿ ವಿಪ್ರಸಂಘದಿಂದ ಶ್ರಿರಾಮಮೂರ್ತಿಗೆ ಪೂಜೆ ಸಲ್ಲಿಸಿ,ಮಹಿಳ ಸಂಘದಿಂದ ಭಜನೆ ಮಾಡಿ,ಗೊಜ್ಜವಲಕ್ಕಿ, ಪಾನಕ,ಮಜ್ಜಿಗೆ ವಿತರಿಸಲಾಯಿತು. ವಾಸವಿ ದೇವಾಲಯದಲ್ಲಿ ಆರ್ಯವೈಶ್ಯ ಮಂಡಳಿಯವರಿಂದ, ಅನಂತಶಯನ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವಾಲಯ ಸಮಿತಿಯವರಿಂದ ರಾಮನವಮಿ ಆಚರಿಸಿ ಪಾನಕ,ಕೋಸಂಬರಿ ವಿತರಿಸಲಾಯಿತು.

ರಾಮನವಮಿಯನ್ನು ಊರಹಬ್ಬವಾಗಿ ಇಂದಿಗೂ ಆಚರಿಸಿಕೊಂಡು ಬರುತ್ತಿರುವ ಲಿಂಗಪ್ಪನಪಾಳ್ಯದಿಂದ ಪ್ರತೀತಿಯಂತೆ ಈ ವರ್ಷವೂ ಸಹ ಶ್ರೀರಾಮದೇವರ ಉತ್ಸವ ಮೂರ್ತಿಯನ್ನು ಹುಳಿಯಾರಿನ ಗ್ರಾಮದೇವತೆಗಳಾದ ದುರ್ಗಮ್ಮ,ಹುಳಿಯಾರಮ್ಮನವರೊಂದಿಗೆ ಬಸವನ ನಗಾರಿ ಸಮೇತ ಸಕಲವಾದ್ಯದೊಂದಿಗೆ ರಂಗನಾಥಸ್ವಾಮಿ ಭಜನಾ ತಂಡದವರ ರಾಮಭಜನಾ ಗಾಯನದೊಂದಿಗೆ ಆಂಜನೇಯಸ್ವಾಮಿ ದೇವಾಲಯಕ್ಕೆ ಕರೆತರಲಾಯಿತು. ನಂತರ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿ ಪಾನಕ ವಿತರಿಸಲಾಯಿತು. ನಂತರ ಸ್ವಾಮಿಯವರನ್ನು ಮೆರವಣೆಯಲ್ಲಿ ಶನೇಶ್ವಸ್ವಾಮಿ,ರಂಗನಾಥಸ್ವಾಮಿ ದೇವಾಲಯಗಳಿಗೆ ಕರೆದೊಯ್ದು ಅಲ್ಲಿಯೂ ಸಹ ಪೂಜೆ ಸಲ್ಲಿಸಿ ಪಾನಕಪನಿವಾರ ವಿತರಣೆ ನಡೆಸಲಾಯಿತು. ನಂತರ ಉರಿ ಬಿಸಿಲನ್ನು ಲೆಕ್ಕಿಸದೆ ದೇವರುಗಳನ್ನು ಲಿಂಗಪ್ಪನಪಾಳ್ಯಕ್ಕೆ ವಾಪಸ್ಸು ಕರೆದೊಯ್ಯಲಾಯಿತು. ಈ ವೇಳೆ ಪಾಳ್ಯದ ದುರ್ಗಪ್ಪ, ಬೀರಪ್ಪ,ನಾಗರಾಜು, ಜೈ ಮಾರುತಿ ಯುವಕ ಸೇವಾ ಛಾರಿಟಬಲ್ ಟ್ರಸ್ಟ್ ನ ಅಶೋಕ್ ಬಾಬು, ಮೆಡಿಕಲ್ ಚನ್ನಬಸವಯ್ಯ, ದಯಾನಂದ್, ರಾಜು, ಮಂಜುನಾಥ್, ಸತೀಶ್, ಬಡಗಿ ರಾಮಣ್ಣ,ಲೋಕೇಶ್, ಮನು, ಎಸ್.ಬಿ.ಎಂ ಗ್ರೋಪ್ಸ್ ನ ಸದಸ್ಯರು ಸೇರಿದಂತೆ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...