ವಿಷಯಕ್ಕೆ ಹೋಗಿ

ಆಡಂಬರದ ಮದುವೆಗಳ ಆಚರಣೆ ಬೇಡ : ಮುರುಘ ಶರಣರು ವಚನ ಮಾಂಗಲ್ಯದ ಮೂಲಕ ದಾಂಪತ್ಯಕ್ಕೆ

ಪ್ರಸ್ತುತದಲ್ಲಿ ಮದುವೆ ಸಮಾರಂಭಗಳು ಹೆಚ್ಚು ಆಡಂಬರದಿಂದ ನಡೆಯುತ್ತಿವೆ ಹೊರತು ಅದರಿಂದ ಯಾವುದೇ ರೀತಿಯ ಪ್ರಯೋಜವಾಗುತ್ತಿಲ್ಲ ಅಂತಹ ಆಡಂಬರದ ಮದುವೆಆಚರಣೆ ಮಾಡುವ ಬದಲು ಸರಳವಾಗಿ ಮದುವೆ ಸಮಾರಂಭಗಳನ್ನು ಕೈಗೊಳ್ಳುವಂತೆ ಚಿತ್ರದುರ್ಗ ಮುರುಘಮಠದ ಡಾ.ಶಿವಮೂರ್ತಿ ಮುರುಘ ಶರಣರು ಕರೆ ನೀಡಿದರು.
ಹುಳಿಯಾರು ಹೋಬಳಿ ಕೆಂಕೆರೆ ಸಮೀಪದ ಗ್ಯಾರಳ್ಳದಲ್ಲಿ ಮುರುಘಮಠದ ಡಾ.ಶಿವಮೂರ್ತಿ ಮುರುಘ ಶರಣ ಸಮ್ಮುಖದಲ್ಲಿ ವಚನಮಾಂಗಲ್ಯ ವಿವಾಹ ನಡೆಯಿತು


ಹುಳಿಯಾರು ಹೋಬಳಿ ಕೆಂಕೆರೆ ಸಮೀಪದ ಗ್ಯಾರಳ್ಳದ ಕೆ.ಪಿ.ಮಲ್ಲೇಶ್ ಅವರ ಮನೆಯಲ್ಲಿ ಭಾನುವಾರ ನಡೆದ ರೂಪಾ ಮತ್ತು ನವೀನ್ ಅವರ ವಚನಮಾಂಗಲ್ಯ ಕಲ್ಯಾಣ ಮಹೋತ್ಸವದಲ್ಲಿ ವಧುವರರಿಗೆ ಪ್ರತಿಜ್ಞಾವಿಧಿ ಬೋಧಿಸಿ ಆಶೀರ್ವಚನ ನೀಡಿ ಮಾತನಾಡಿದರು.
ಬಸವಾದಿ ಶರಣರು ತಿಳಿಸಿರುವಂತೆ ಸಮಾಜದಲ್ಲಿ ಎಲ್ಲರೂ ಒಂದೇ ಹೆಣ್ಣು-ಗಂಡು ಇಬ್ಬರೂ ಸಮಾನರೇ ಆಗಿದ್ದು ಒಬ್ಬರಿಗೊಬ್ಬರು ಅರ್ಥ ಮಾಡಿಕೊಂಡು ನಡೆಯುವುದೇ ಸಂಸಾರ ಎಂದು ತಿಳಿಸಿದರು. ಜೀವನದಲ್ಲಿ ಎಲ್ಲದಕ್ಕಿಂತ ಮುಖ್ಯ ಉತ್ತಮ ಆರೋಗ್ಯವಾಗಿದ್ದು ನಾವು ನಮ್ಮದೇಹದ ಆರೋಗ್ಯದ ಹೆಚ್ಚು ಗಮನಕೊಡಬೇಕು ಎಂದರಲ್ಲದೆ ಮಾನವರ ನಡುವಿನ ಸಂಬಂಧದಲ್ಲಿ ಬಿರುಕುಂಟಾಗುತ್ತಿದ್ದು ತಂದೆ,ತಾಯಿ,ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡಿ ಸಂಸಾರಗಳಲ್ಲಿ ಸುಖಶಾಂತಿ ಕಣ್ಮರೆಯಾಗುತ್ತಿದೆ ಎಂದರು. ಸತಿಪತಿಗಳಿಬ್ಬರು ತಮ್ಮನ್ನು ತಾವು ಅರಿತು ಮತ್ತೊಬ್ಬರಿಗೆ ಆದರ್ಶವಾಗಿ ಬಾಳುವಂತೆ ಆಶೀರ್ವದಿಸಿದರು ಹಾಗೂ ಮುಂದಿನ ದಿನಗಳಲ್ಲಿ ವಚನ ಮಾಂಗಲ್ಯದಂತಹ ಸರಳ ವಿವಾಹಗಳು ಹೆಚ್ಚೆಚ್ಚು ನಡೆಯಲಿ ಎಂದು ಆಶಿಸಿದರು.

ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ ತಮ್ಮ ಉಪನ್ಯಾದಲ್ಲಿ ಇಂದಿನ ಮದುವೆ ಸಮಾರಂಭಗಳಿಗಿಂತ ವಚನ ಮಾಂಗಲ್ಯದ ಮದುವೆ ಭಿನ್ನವಾಗಿದೆ. ವಧುವರರು ಸಂಬಂಧಿಕರ , ಜನರ ಮುಂದೆ ವಚನ ನೀಡುವ ಮೂಲಕ ಮದುವೆ ಆಚರಿಸಿಕೊಳ್ಳುತ್ತಿರುವುದು ಇಂದಿನ ಸಮುದಾಯದರನ್ನು ಇತ್ತ ಸೆಳೆಯುವಂತೆ ಮಾಡಿದೆ ಎಂದರು. ಈ ಮದುವೆಯಲ್ಲಿ ಅರ್ಥವಾಗದ ಮಂತ್ರಗಳ ಬದಲಿಗೆ ಸಭಿಕರೆದುರು ಸರಳವಾಗಿ ಹೆಣ್ಣುಗಂಡು ಪರಸ್ಪರ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಹೊಂದಾಣಿಕೆಯಲ್ಲಿ ಜೀವನ ಸಾಗಿಸುವ ಪ್ರಮಾಣ ಮಾಡುವ ಮೂಲಕ ದಾಂಪತ್ಯಕ್ಕೆ ಕಾಲಿಟ್ಟಿರುವುದು ಶುಭ ಸೂಚಕವಾಗಿದ್ದು ಇದು ಎಲ್ಲರಿಗೂ ಮಾದರಿಯಾಗಲಿ ಎಂದರು.
-------------
ಬಸವಣ್ಣ ರೂಪಿಸಿದ ವಚನಮಾಂಗಲ್ಯ ಸರಳತೆ ಮತ್ತು ವೈಚಾರಿಕತೆಯಿಂದ ಕೂಡಿದ್ದು ಇಂದಿನ ವಿವಾಹ ಸಮಾರಂಭದಲ್ಲಿ ಅದನ್ನು ಅಳವಡಿಸಿಕೊಂಡಿರುವುದು ಮಾದರಿಯಾಗಿದೆ. ವಧುವರರೇ ಆಮಂತ್ರಿತರ ಬಳಿ ಸಾಗಿ ಆಶೀರ್ವಾದ ಪಡೆಯುವುದು ವಚನ ಮಾಂಗಲ್ಯದ ವಿಭಿನ್ನತೆಯಾಗಿದೆ : ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ
------------

ಸರಳ ವಿವಾಹ ನನ್ನಾಸೆಯಾಗಿದ್ದು ಮೌಢ್ಯತೆ ದೂರವಿಟ್ಟು ಸರಳತೆಗೆ ಹತ್ತಿರವಾಗಿದ್ದ ವಚನ ಮಾಂಗಲ್ಯ ನನ್ನ ಕನಸಾಗಿತ್ತು ನನ್ನ ಕನಸು ನನಸು ಮಾಡಿದ ನನ್ನ ತಂದೆತಾಯಿಗೆ ಋಣಿಯಾಗಿರುವೆ : ರೂಪಾ , ವಧು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...