ವಿಷಯಕ್ಕೆ ಹೋಗಿ

ಆಡಂಬರದ ಮದುವೆಗಳ ಆಚರಣೆ ಬೇಡ : ಮುರುಘ ಶರಣರು ವಚನ ಮಾಂಗಲ್ಯದ ಮೂಲಕ ದಾಂಪತ್ಯಕ್ಕೆ

ಪ್ರಸ್ತುತದಲ್ಲಿ ಮದುವೆ ಸಮಾರಂಭಗಳು ಹೆಚ್ಚು ಆಡಂಬರದಿಂದ ನಡೆಯುತ್ತಿವೆ ಹೊರತು ಅದರಿಂದ ಯಾವುದೇ ರೀತಿಯ ಪ್ರಯೋಜವಾಗುತ್ತಿಲ್ಲ ಅಂತಹ ಆಡಂಬರದ ಮದುವೆಆಚರಣೆ ಮಾಡುವ ಬದಲು ಸರಳವಾಗಿ ಮದುವೆ ಸಮಾರಂಭಗಳನ್ನು ಕೈಗೊಳ್ಳುವಂತೆ ಚಿತ್ರದುರ್ಗ ಮುರುಘಮಠದ ಡಾ.ಶಿವಮೂರ್ತಿ ಮುರುಘ ಶರಣರು ಕರೆ ನೀಡಿದರು.
ಹುಳಿಯಾರು ಹೋಬಳಿ ಕೆಂಕೆರೆ ಸಮೀಪದ ಗ್ಯಾರಳ್ಳದಲ್ಲಿ ಮುರುಘಮಠದ ಡಾ.ಶಿವಮೂರ್ತಿ ಮುರುಘ ಶರಣ ಸಮ್ಮುಖದಲ್ಲಿ ವಚನಮಾಂಗಲ್ಯ ವಿವಾಹ ನಡೆಯಿತು


ಹುಳಿಯಾರು ಹೋಬಳಿ ಕೆಂಕೆರೆ ಸಮೀಪದ ಗ್ಯಾರಳ್ಳದ ಕೆ.ಪಿ.ಮಲ್ಲೇಶ್ ಅವರ ಮನೆಯಲ್ಲಿ ಭಾನುವಾರ ನಡೆದ ರೂಪಾ ಮತ್ತು ನವೀನ್ ಅವರ ವಚನಮಾಂಗಲ್ಯ ಕಲ್ಯಾಣ ಮಹೋತ್ಸವದಲ್ಲಿ ವಧುವರರಿಗೆ ಪ್ರತಿಜ್ಞಾವಿಧಿ ಬೋಧಿಸಿ ಆಶೀರ್ವಚನ ನೀಡಿ ಮಾತನಾಡಿದರು.
ಬಸವಾದಿ ಶರಣರು ತಿಳಿಸಿರುವಂತೆ ಸಮಾಜದಲ್ಲಿ ಎಲ್ಲರೂ ಒಂದೇ ಹೆಣ್ಣು-ಗಂಡು ಇಬ್ಬರೂ ಸಮಾನರೇ ಆಗಿದ್ದು ಒಬ್ಬರಿಗೊಬ್ಬರು ಅರ್ಥ ಮಾಡಿಕೊಂಡು ನಡೆಯುವುದೇ ಸಂಸಾರ ಎಂದು ತಿಳಿಸಿದರು. ಜೀವನದಲ್ಲಿ ಎಲ್ಲದಕ್ಕಿಂತ ಮುಖ್ಯ ಉತ್ತಮ ಆರೋಗ್ಯವಾಗಿದ್ದು ನಾವು ನಮ್ಮದೇಹದ ಆರೋಗ್ಯದ ಹೆಚ್ಚು ಗಮನಕೊಡಬೇಕು ಎಂದರಲ್ಲದೆ ಮಾನವರ ನಡುವಿನ ಸಂಬಂಧದಲ್ಲಿ ಬಿರುಕುಂಟಾಗುತ್ತಿದ್ದು ತಂದೆ,ತಾಯಿ,ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡಿ ಸಂಸಾರಗಳಲ್ಲಿ ಸುಖಶಾಂತಿ ಕಣ್ಮರೆಯಾಗುತ್ತಿದೆ ಎಂದರು. ಸತಿಪತಿಗಳಿಬ್ಬರು ತಮ್ಮನ್ನು ತಾವು ಅರಿತು ಮತ್ತೊಬ್ಬರಿಗೆ ಆದರ್ಶವಾಗಿ ಬಾಳುವಂತೆ ಆಶೀರ್ವದಿಸಿದರು ಹಾಗೂ ಮುಂದಿನ ದಿನಗಳಲ್ಲಿ ವಚನ ಮಾಂಗಲ್ಯದಂತಹ ಸರಳ ವಿವಾಹಗಳು ಹೆಚ್ಚೆಚ್ಚು ನಡೆಯಲಿ ಎಂದು ಆಶಿಸಿದರು.

ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ ತಮ್ಮ ಉಪನ್ಯಾದಲ್ಲಿ ಇಂದಿನ ಮದುವೆ ಸಮಾರಂಭಗಳಿಗಿಂತ ವಚನ ಮಾಂಗಲ್ಯದ ಮದುವೆ ಭಿನ್ನವಾಗಿದೆ. ವಧುವರರು ಸಂಬಂಧಿಕರ , ಜನರ ಮುಂದೆ ವಚನ ನೀಡುವ ಮೂಲಕ ಮದುವೆ ಆಚರಿಸಿಕೊಳ್ಳುತ್ತಿರುವುದು ಇಂದಿನ ಸಮುದಾಯದರನ್ನು ಇತ್ತ ಸೆಳೆಯುವಂತೆ ಮಾಡಿದೆ ಎಂದರು. ಈ ಮದುವೆಯಲ್ಲಿ ಅರ್ಥವಾಗದ ಮಂತ್ರಗಳ ಬದಲಿಗೆ ಸಭಿಕರೆದುರು ಸರಳವಾಗಿ ಹೆಣ್ಣುಗಂಡು ಪರಸ್ಪರ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಹೊಂದಾಣಿಕೆಯಲ್ಲಿ ಜೀವನ ಸಾಗಿಸುವ ಪ್ರಮಾಣ ಮಾಡುವ ಮೂಲಕ ದಾಂಪತ್ಯಕ್ಕೆ ಕಾಲಿಟ್ಟಿರುವುದು ಶುಭ ಸೂಚಕವಾಗಿದ್ದು ಇದು ಎಲ್ಲರಿಗೂ ಮಾದರಿಯಾಗಲಿ ಎಂದರು.
-------------
ಬಸವಣ್ಣ ರೂಪಿಸಿದ ವಚನಮಾಂಗಲ್ಯ ಸರಳತೆ ಮತ್ತು ವೈಚಾರಿಕತೆಯಿಂದ ಕೂಡಿದ್ದು ಇಂದಿನ ವಿವಾಹ ಸಮಾರಂಭದಲ್ಲಿ ಅದನ್ನು ಅಳವಡಿಸಿಕೊಂಡಿರುವುದು ಮಾದರಿಯಾಗಿದೆ. ವಧುವರರೇ ಆಮಂತ್ರಿತರ ಬಳಿ ಸಾಗಿ ಆಶೀರ್ವಾದ ಪಡೆಯುವುದು ವಚನ ಮಾಂಗಲ್ಯದ ವಿಭಿನ್ನತೆಯಾಗಿದೆ : ಸಾಹಿತಿ ಕೃಷ್ಣಮೂರ್ತಿ ಬಿಳಿಗೆರೆ
------------

ಸರಳ ವಿವಾಹ ನನ್ನಾಸೆಯಾಗಿದ್ದು ಮೌಢ್ಯತೆ ದೂರವಿಟ್ಟು ಸರಳತೆಗೆ ಹತ್ತಿರವಾಗಿದ್ದ ವಚನ ಮಾಂಗಲ್ಯ ನನ್ನ ಕನಸಾಗಿತ್ತು ನನ್ನ ಕನಸು ನನಸು ಮಾಡಿದ ನನ್ನ ತಂದೆತಾಯಿಗೆ ಋಣಿಯಾಗಿರುವೆ : ರೂಪಾ , ವಧು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...