ವಿಷಯಕ್ಕೆ ಹೋಗಿ

ವೈಭವಯುತ ಕಾರೇಹಳ್ಳಿ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

ಹುಳಿಯಾರು ಹೋಬಳಿ ಕಾರೇಹಳ್ಳಿಯ ಇತಿಹಾಸ ಪ್ರಸಿದ್ದ ಶ್ರೀರಂಗನಾಥಸ್ವಾಮಿಯ ವೈಭವಯುತ ಬ್ರಹ್ಮರಥೋತ್ಸವ ಮಂಗಳವಾರ ಮಧ್ಯಾಹ್ನ ಅಪಾರ ಸಂಖ್ಯೆಯ ಭಕ್ತರ ಹರ್ಷೋದ್ಗಾರದಲ್ಲಿ ವಾದ್ಯಮೇಳಗಳೊಂದಿಗೆ ಜರುಗಿತು.
ಹುಳಿಯಾರು ಹೋಬಳಿ ಕಾರೇಹಳ್ಳಿಯ ಶ್ರೀರಂಗನಾಥಸ್ವಾಮಿಯ ಬ್ರಹ್ಮರಥೋತ್ಸವ ಮಂಗಳವಾರ ಮಧ್ಯಾಹ್ನ ಅಪಾರ ಸಂಖ್ಯೆಯ ಭಕ್ತರ ಹರ್ಷೋದ್ಗಾರದಲ್ಲಿ ವೈಭವಯುತವಾಗಿ ನಡೆಯಿತು.
ರಥೋತ್ಸವದ ಅಂಗವಾಗಿ ರಥವನ್ನು ಬಗೆಬಗೆ ಹೂ ಹಾರ, ಬಾವುಟಗಳಿಂದ ಸಿಂಗರಿಸಿದ್ದಲ್ಲದೆ, ಪುಣ್ಯಾಹ, ಅನ್ನಶಾಂತಿ ಸೇರಿದಂತೆ ವಿವಿಧ ಪೂಜೆಗಳನ್ನು ನಡೆಸಿದ್ದರು. ನಂತರ ರಂಗನಾಥಸ್ವಾಮಿಯ ಮೂಲಸ್ಥಾನದಿಂದ ಅಲಂಕೃತ ಉತ್ಸವ ಮೂರ್ತಿಯನ್ನು ಬೆನಕನಹಳ್ಳಿಯ ಕರಿಯಮ್ಮ, ಯರೇಹಳ್ಳಿಯ ಕೆಂಪಮ್ಮ ಹಾಗೂ ಹೊಯ್ಸಳಕಟ್ಟೆ ಕರಿಯಮ್ಮ ದೇವರು, ಕೆಂಚರಾಯ, ಭೂತಪ್ಪ ಹಾಗೂ ನಗಾರಿ ಹೊತ್ತ ಬಸವನೊಂದಿಗೆ ವಾದ್ಯ ಮೇಳದೊಂದಿಗೆ ರಥದಲ್ಲಿಗೆ ಕರೆದೊಯ್ಯಲಾಯಿತು. ರಥವನ್ನು ಪ್ರದಕ್ಷಿಣೆ ಬಂದು ಸ್ವಾಮಿಯನ್ನು ರಥಕ್ಕೇರಿಸಿ ರಥದ ಎದುರಿಗಿದ್ದ ಬಾಳೆಕಂದನ್ನು ತುಂಡರಿಸಿದ ನಂತರ ರಥವನ್ನೆಳೆಯಲಾಯಿತು. ರಥವನ್ನೆಳೆಯಲು ಕಾತುರದಿಂದಿದ್ದ ಭಕ್ತರು ಜೈಕಾರ ಹಾಕುತ್ತಾ ತೇರನ್ನೆಳೆದು ಸಂಭ್ರಮಿಸಿದರು. ದೂರದೂರುಗಳಿಂದ ಆಗಮಿಸಿದ ಭಕ್ತರು ಸ್ವಾಮಿಗೆ ಹಣ್ಣುಕಾಯಿ ಮಾಡಿಸಿ,ರಥಕ್ಕೆ ನಮಸ್ಕರಿಸುವ ಮೂಲಕ ತಮ್ಮ ಭಕ್ತಿಭಾವ ಅರ್ಪಿಸಿದರು.
ರಥೋತ್ಸವದ ನಂತರ ದಸೂಡಿಯ ಕೊಟ್ಟಿಗೆ ರಂಗೇಗೌಡರ ವಂಶಸ್ಥರಿಂದ ಬ್ರಾಹ್ಮಣರಿಗೆ ವಸಂತ, ಹುಳಿಯಾರಿನ ಸೀನಪ್ಪಶೆಟ್ಟರ ಮಕ್ಕಳು , ಸತ್ಯನಾರಾಯಣ ಮಕ್ಕಳಿಂದ ಆರ್ಯವೈಶ್ಯ ಮಂಡಳಿಯವರಿಗೆ, ತಿಮ್ಮನಹಳ್ಳಿಯ ಅಳ್ಳಪ್ಪ ವಂಶಸ್ಥರಿಂದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಉಚಿತ ಸಾಮೂಹಿಕ ವಿವಾಹ: ರಥೋತ್ಸವದ ಅಂಗವಾಗಿ ಇದೇ ಪ್ರಥಮಬಾರಿಗೆ ಸಾಮೂಹಿಕ ವಿವಾಹ ಆಯೋಜಿಸಲಾಗಿದ್ದು, ದಸೂಡಿಯ ಕೊಟ್ಟಿಗೆ ರಂಗೇಗೌಡರ ಮೊಮ್ಮಗ ಆರ್.ಜನಾರ್ಧನ್ ಅವರ ಸೇವಾರ್ಥದಲ್ಲಿ ನಡೆದ ವಿವಾಹ ಮಹೋತ್ಸವದಲ್ಲಿ ಮೂರು ಜೋಡಿಗಳು ಸಂಸಾರಿಕ ಜೀವನಕ್ಕೆ ಪಾದಾರ್ಪಣೆ ಮಾಡಿದರು.
ಗೋಪುರ ಕುಂಭಾಭಿಷೇಕ: ಮೇಲ್ಭಾಗದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನದ ನೂತನ ಗೋಪುರದ ಕುಂಭಾಭಿಷೇಕ ಹಾಗೂ ಕಳಸ ಪ್ರತಿಷ್ಠಾಪನೆ ಕಾರ್ಯ ಇದೇ ದಿನ ಯಶಸ್ವಿಯಾಗಿ ನೆರವೇರಿತು ಗೋಪುರದ ದಾನಿಗಳಾದ .ಶಿರಾದ ಹನುಮಂತ್ ಪೆಟ್ರೋಲ್ ಬಂಕ್ ಮಾಲೀಕರಾದ ಟಿ.ಆರ್.ಶ್ರೀರಂಗ ದಂಪತಿಗಳು ಉಪಸ್ಥಿತಿಯಲ್ಲಿ ಬೆಂಗಳೂರಿನ ಶ್ರೀಧರ ದೀಕ್ಷಿತ್ ಪೌರೋಹಿತ್ಯದಲ್ಲಿ ಪೂಜಾ ಕೈಂಕರ್ಯ ನಡೆಸಲಾಯಿತು. ಕಳಸ ಪ್ರತಿಷ್ಠಾಪನೆ ,ಸುದರ್ಶನ ಹೋಮ,ಲಕ್ಷ್ಮಿಹೋಮ ನೆರವೇರಿಸಿ ಪೂರ್ಣಾಹುತಿ ಸಮರ್ಪಿಸಲಾಯಿತು.

ಜಾತ್ರಾಮಹೋತ್ಸವಕ್ಕೆ ಉಪವಿಭಾಗಾಧಿಕಾರಿ ಡಾ.ಪ್ರಜ್ಞಾ ಅಮೆಂಬಳ, ತಹಸೀಲ್ದಾರ್ ಕಾಮಾಕ್ಷಮ್ಮ, ದೇವಸ್ಥಾನದ ಸ್ವಾಗತ ಸಮಿತಿ ಅಧ್ಯಕ್ಷ ದಸೂಡಿ ರಂಗಸ್ವಾಮಿ, ಸಮಿತಿಯ ಸದಸ್ಯರು ಹಾಗೂ ಹುಳಿಯಾರು,ಗಾಣಧಾಳು,ಹೊಯ್ಸಳಕಟ್ಟೆ,ದಸೂಡಿ,ಕೆಂಕೆರೆ,ಬಡಕೇಗುಡ್ಳು,ಮಾರುಹೊಳೆ,ತಿಮ್ಮನಹಳ್ಳಿ,ಕಲ್ಲೇನಹಳ್ಳಿ,ಲಕ್ಕೇನಹಳ್ಳಿ,ಯಗಚಿಹಳ್ಳಿ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಭಕ್ತಾಧಿಗಳು ಆಗಮಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...