ವಿಷಯಕ್ಕೆ ಹೋಗಿ

ವೈಭವಯುತ ಕಾರೇಹಳ್ಳಿ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

ಹುಳಿಯಾರು ಹೋಬಳಿ ಕಾರೇಹಳ್ಳಿಯ ಇತಿಹಾಸ ಪ್ರಸಿದ್ದ ಶ್ರೀರಂಗನಾಥಸ್ವಾಮಿಯ ವೈಭವಯುತ ಬ್ರಹ್ಮರಥೋತ್ಸವ ಮಂಗಳವಾರ ಮಧ್ಯಾಹ್ನ ಅಪಾರ ಸಂಖ್ಯೆಯ ಭಕ್ತರ ಹರ್ಷೋದ್ಗಾರದಲ್ಲಿ ವಾದ್ಯಮೇಳಗಳೊಂದಿಗೆ ಜರುಗಿತು.
ಹುಳಿಯಾರು ಹೋಬಳಿ ಕಾರೇಹಳ್ಳಿಯ ಶ್ರೀರಂಗನಾಥಸ್ವಾಮಿಯ ಬ್ರಹ್ಮರಥೋತ್ಸವ ಮಂಗಳವಾರ ಮಧ್ಯಾಹ್ನ ಅಪಾರ ಸಂಖ್ಯೆಯ ಭಕ್ತರ ಹರ್ಷೋದ್ಗಾರದಲ್ಲಿ ವೈಭವಯುತವಾಗಿ ನಡೆಯಿತು.
ರಥೋತ್ಸವದ ಅಂಗವಾಗಿ ರಥವನ್ನು ಬಗೆಬಗೆ ಹೂ ಹಾರ, ಬಾವುಟಗಳಿಂದ ಸಿಂಗರಿಸಿದ್ದಲ್ಲದೆ, ಪುಣ್ಯಾಹ, ಅನ್ನಶಾಂತಿ ಸೇರಿದಂತೆ ವಿವಿಧ ಪೂಜೆಗಳನ್ನು ನಡೆಸಿದ್ದರು. ನಂತರ ರಂಗನಾಥಸ್ವಾಮಿಯ ಮೂಲಸ್ಥಾನದಿಂದ ಅಲಂಕೃತ ಉತ್ಸವ ಮೂರ್ತಿಯನ್ನು ಬೆನಕನಹಳ್ಳಿಯ ಕರಿಯಮ್ಮ, ಯರೇಹಳ್ಳಿಯ ಕೆಂಪಮ್ಮ ಹಾಗೂ ಹೊಯ್ಸಳಕಟ್ಟೆ ಕರಿಯಮ್ಮ ದೇವರು, ಕೆಂಚರಾಯ, ಭೂತಪ್ಪ ಹಾಗೂ ನಗಾರಿ ಹೊತ್ತ ಬಸವನೊಂದಿಗೆ ವಾದ್ಯ ಮೇಳದೊಂದಿಗೆ ರಥದಲ್ಲಿಗೆ ಕರೆದೊಯ್ಯಲಾಯಿತು. ರಥವನ್ನು ಪ್ರದಕ್ಷಿಣೆ ಬಂದು ಸ್ವಾಮಿಯನ್ನು ರಥಕ್ಕೇರಿಸಿ ರಥದ ಎದುರಿಗಿದ್ದ ಬಾಳೆಕಂದನ್ನು ತುಂಡರಿಸಿದ ನಂತರ ರಥವನ್ನೆಳೆಯಲಾಯಿತು. ರಥವನ್ನೆಳೆಯಲು ಕಾತುರದಿಂದಿದ್ದ ಭಕ್ತರು ಜೈಕಾರ ಹಾಕುತ್ತಾ ತೇರನ್ನೆಳೆದು ಸಂಭ್ರಮಿಸಿದರು. ದೂರದೂರುಗಳಿಂದ ಆಗಮಿಸಿದ ಭಕ್ತರು ಸ್ವಾಮಿಗೆ ಹಣ್ಣುಕಾಯಿ ಮಾಡಿಸಿ,ರಥಕ್ಕೆ ನಮಸ್ಕರಿಸುವ ಮೂಲಕ ತಮ್ಮ ಭಕ್ತಿಭಾವ ಅರ್ಪಿಸಿದರು.
ರಥೋತ್ಸವದ ನಂತರ ದಸೂಡಿಯ ಕೊಟ್ಟಿಗೆ ರಂಗೇಗೌಡರ ವಂಶಸ್ಥರಿಂದ ಬ್ರಾಹ್ಮಣರಿಗೆ ವಸಂತ, ಹುಳಿಯಾರಿನ ಸೀನಪ್ಪಶೆಟ್ಟರ ಮಕ್ಕಳು , ಸತ್ಯನಾರಾಯಣ ಮಕ್ಕಳಿಂದ ಆರ್ಯವೈಶ್ಯ ಮಂಡಳಿಯವರಿಗೆ, ತಿಮ್ಮನಹಳ್ಳಿಯ ಅಳ್ಳಪ್ಪ ವಂಶಸ್ಥರಿಂದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಉಚಿತ ಸಾಮೂಹಿಕ ವಿವಾಹ: ರಥೋತ್ಸವದ ಅಂಗವಾಗಿ ಇದೇ ಪ್ರಥಮಬಾರಿಗೆ ಸಾಮೂಹಿಕ ವಿವಾಹ ಆಯೋಜಿಸಲಾಗಿದ್ದು, ದಸೂಡಿಯ ಕೊಟ್ಟಿಗೆ ರಂಗೇಗೌಡರ ಮೊಮ್ಮಗ ಆರ್.ಜನಾರ್ಧನ್ ಅವರ ಸೇವಾರ್ಥದಲ್ಲಿ ನಡೆದ ವಿವಾಹ ಮಹೋತ್ಸವದಲ್ಲಿ ಮೂರು ಜೋಡಿಗಳು ಸಂಸಾರಿಕ ಜೀವನಕ್ಕೆ ಪಾದಾರ್ಪಣೆ ಮಾಡಿದರು.
ಗೋಪುರ ಕುಂಭಾಭಿಷೇಕ: ಮೇಲ್ಭಾಗದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನದ ನೂತನ ಗೋಪುರದ ಕುಂಭಾಭಿಷೇಕ ಹಾಗೂ ಕಳಸ ಪ್ರತಿಷ್ಠಾಪನೆ ಕಾರ್ಯ ಇದೇ ದಿನ ಯಶಸ್ವಿಯಾಗಿ ನೆರವೇರಿತು ಗೋಪುರದ ದಾನಿಗಳಾದ .ಶಿರಾದ ಹನುಮಂತ್ ಪೆಟ್ರೋಲ್ ಬಂಕ್ ಮಾಲೀಕರಾದ ಟಿ.ಆರ್.ಶ್ರೀರಂಗ ದಂಪತಿಗಳು ಉಪಸ್ಥಿತಿಯಲ್ಲಿ ಬೆಂಗಳೂರಿನ ಶ್ರೀಧರ ದೀಕ್ಷಿತ್ ಪೌರೋಹಿತ್ಯದಲ್ಲಿ ಪೂಜಾ ಕೈಂಕರ್ಯ ನಡೆಸಲಾಯಿತು. ಕಳಸ ಪ್ರತಿಷ್ಠಾಪನೆ ,ಸುದರ್ಶನ ಹೋಮ,ಲಕ್ಷ್ಮಿಹೋಮ ನೆರವೇರಿಸಿ ಪೂರ್ಣಾಹುತಿ ಸಮರ್ಪಿಸಲಾಯಿತು.

ಜಾತ್ರಾಮಹೋತ್ಸವಕ್ಕೆ ಉಪವಿಭಾಗಾಧಿಕಾರಿ ಡಾ.ಪ್ರಜ್ಞಾ ಅಮೆಂಬಳ, ತಹಸೀಲ್ದಾರ್ ಕಾಮಾಕ್ಷಮ್ಮ, ದೇವಸ್ಥಾನದ ಸ್ವಾಗತ ಸಮಿತಿ ಅಧ್ಯಕ್ಷ ದಸೂಡಿ ರಂಗಸ್ವಾಮಿ, ಸಮಿತಿಯ ಸದಸ್ಯರು ಹಾಗೂ ಹುಳಿಯಾರು,ಗಾಣಧಾಳು,ಹೊಯ್ಸಳಕಟ್ಟೆ,ದಸೂಡಿ,ಕೆಂಕೆರೆ,ಬಡಕೇಗುಡ್ಳು,ಮಾರುಹೊಳೆ,ತಿಮ್ಮನಹಳ್ಳಿ,ಕಲ್ಲೇನಹಳ್ಳಿ,ಲಕ್ಕೇನಹಳ್ಳಿ,ಯಗಚಿಹಳ್ಳಿ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಭಕ್ತಾಧಿಗಳು ಆಗಮಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.