ವಿಷಯಕ್ಕೆ ಹೋಗಿ

ಮಹಿಳೆಯರೇ ಜಾಗೃತರಾಗಿ ಮುನ್ನಡೆಯಿರಿ : ಶ್ರೀಮತಿ ಮಲ್ಲಿಗೆ

ಪ್ರಸ್ತುತದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಸಮಾಜದಲ್ಲಿ ಮಹಿಳೆ ಶೋಷಣೆಗೊಳಗಾಗುತ್ತಿದ್ದಾಳೆ ಇಂತಹದನ್ನು ಮೆಟ್ಟಿನಿಂತು, ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಮಹಿಳೆಯರು ಜಾಗೃತರಾಗುವ ಮೂಲಕ ಮುನ್ನಡೆಯಬೇಕೆಂದು ಮಂಡ್ಯದ ಮಹಿಳಾ ಮುನ್ನಡೆ ಸಂಘಟನೆಯ ಶ್ರೀಮತಿ ಮಲ್ಲಿಗೆ ಕರೆನೀಡಿದರು
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಂಡ್ಯದ ಮಹಿಳಾ ಮುನ್ನಡೆ ಸಂಘದ ಶ್ರೀಮತಿ ಮಲ್ಲಿಗೆ ಉಪನ್ಯಾಸ ನೀಡಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೃಜನ ಮಹಿಳಾ ವೇದಿಕೆ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಹಿಳಾ ದೌರ್ಜನ್ಯ ಹಾಗೂ ಮಹಿಳೆಯ ಸ್ಥಾನ ಕುರಿತು ಉಪನ್ಯಾಸ ನೀಡಿದರು.
ಇತ್ತೀಚಿನ ದಿನಗಳಲ್ಲಿ ಮಹಿಳಾ ದಿನಾಚರಣೆಯನ್ನು ಕೆಲ ಪ್ರತಿಷ್ಠ ತ ಕಂಪನಿಗಳು, ಸಿನಿಮಾ ತಾರೆಯತು ಮೋಜಿಗಾಗಿ ಆಚರಿಸುತ್ತಿದ್ದು ಮಹಿಳಾ ದಿನಾಚರಣೆಯ ಮಹತ್ವಕ್ಕೆ ಧಕ್ಕೆ ತರುತ್ತಿದ್ದಾರೆ ಇಂತಹದ ವಿರುದ್ದ ಇಂದಿನ ಯುವಪೀಳಿಗೆ ದನಿಎತ್ತಬೇಕು ಎಂದರು. ಮಹಿಳಾ ಶಿಕ್ಷಣಕ್ಕಾಗಿ ಅನೇಕ ವರ್ಷ ಹೋರಾಟ ನಡೆಸಿದ ಸಾವಿತ್ರಿಬಾಯಿಪುಲೆ ಅವರ ಸಾಧನೆಯನ್ನು ಸ್ಮರಿಸುತ್ತಾ , ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಬಹುದಾಗಿದ್ದು, ಪ್ರತಿಯೊಬ್ಬ ಹೆಣ್ಣುಮಗುವನ್ನು ಶಿಕ್ಷಿತರನ್ನಾಗಿ ಮಾಡುವಂತೆ ತಿಳಿಸಿದರು.
ಮಹಿಳೆಯ ಸುರಕ್ಷತೆಯ ದೃಷ್ಠಿಯಿಂದ ಕಠಿಣ ಕಾನೂನಿದ್ದರೂ ಸಹ ಮಹಿಳೆ ಶೋಷಣೆಗೆ ಒಳಗಾಗುತ್ತಿರುವುದು ಗಂಭೀರ ಸಂಗತಿಯಾಗಿದೆ. ಇದಕ್ಕೆ ಕಾರಣವನ್ನು ಹುಡುಕುತ್ತಾ ಹೊರಟರೆ ಮಾನವರ ವಿಕೃತ ಮನೋಭಾವವೇ ಆಗಿದ್ದು , ಅಂತಹ ಮನೋಭಾವನೆಯನ್ನು ಬದಲಾಯಿಸಿ ಸಮಾಜದ ಪ್ರತಿಯೊಬ್ಬರಲ್ಲೂ ಸಮಾನರೂ, ಹೆಣ್ಣುಮಕ್ಕಳನ್ನು ಗೌರವಿಸಬೇಕು ಎಂಬ ವಿಶಾಲ ಮನೋಭಾವ ಮೂಡುವಂತೆ ಮಾಡಬೇಕು ಎಂದರು. ಇಂದಿನ ಅನೇಕ ಬಂಡವಾಳಶಾಹಿಗಳು ತಮ್ಮದೇ ಆದ ಕಂಪನಿಗಳನ್ನು ಹೊಂದಿದ್ದು ಯುವಪೀಳಿಗೆಯ ಹಾದಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಸೂಕ್ತ ನಿಲುವುಕೈಗೊಳ್ಳುವ ಮೂಲಕ ಯುವಪೀಳಿಗೆಯ ಬೆಳವಣಿಗೆಯ ಬಗ್ಗೆ ಕಾಳಜಿ ತೋರಿಸಬೇಕು ಎಂದರು.

ಈ ವೇಳೆ ಪ್ರಾಂಶುಪಾಲ ಕೃಷ್ಣಮೂರ್ತಿಬಿಳಿಗೆರೆ, ಮಧುಗಿರಿ ವಿಜ್ಞಾನ ಕೇಂದ್ರದ ಅಧ್ಯಕ್ಷ ರಾಮಕೃಷ್ಣಪ್ಪ, ಚಿ.ನಾ.ಹಳ್ಳಿ ಸೃಜನಾ ಮಹಿಳಾ ವೇದಿಕೆಯ ಅಧ್ಯಕ್ಷೆ ಇಂದಿರಮ್ಮ, ಜಯಲಕ್ಷ್ಮಿ,ಶಶಿಕಲಾ, ಉಪನ್ಯಾಸಕಿ ಡಾ.ದಿನಮಣಿ, ಮಹಿಳಾ ಮುನ್ನಡೆ ಸಂಘದ ಪೂರ್ಣಿಮಾ,ಹುಳಿಯಾರು-ಕೆಂಕೆರೆ ಪ್ರೌಢಶಾಲೆಯ ಉಪಪ್ರಾಂಶುಪಾಲೆ ಇಂದಿರಾ, ಉಪನ್ಯಾಸಕಿಯರಾದ ವಿನುತಾಶ್ರೀ,ವಿಜಿಯಮ್ಮ, ವಿನುತಾ.ಕೆ.ಎಂ, ಉಪನ್ಯಾಸಕರಾದ ಶಂಕರಲಿಂಗಯ್ಯ, ಅಶೋಕ್, ಹನುಂತಪ್ಪ, ಶಿವಯ್ಯ, ಚಂದ್ರಮೌಳಿ,ಕುಮಾರ್, ಗ್ರಂಥಪಾಲಕ ಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...