ವಿಷಯಕ್ಕೆ ಹೋಗಿ

ರಾಜ್ಯ ಬಜೆಟ್ ಬಗ್ಗೆ ಇವರೇನು ಹೇಳುತ್ತಾರೆ ಕೇಳಿ

ಇಂದಿನ ಬಜೆಟ್ ನಲ್ಲಿ ಗ್ರಾಮೀಣ ಪ್ರದೇಶದ ಹಾಗೂ ರೈತಾಪಿವರ್ಗ , ಹಿಂದುಳಿದ ವರ್ಗದವರ ಬಗ್ಗೆ ಹೆಚ್ಚಿನ ಅದ್ಯತೆ ನೀಡುವ ಬಗ್ಗೆ ಕುತೂಹಲ ತಾಳಿದ್ದ ಜನತೆಗೆ ಸಿದ್ದರಾಮಯ್ಯನವರ ಬಜೆಟ್ ಹೆಚ್ಚಿನ ನಿರಾಸೆ ಮೂಡಿಸದೆ ಅನುಕೂಲ ಮಾಡಿಕೊಟ್ಟಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಸತತ ಹತ್ತನೇ ಬಾರಿ ದಾಖಲೆ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿಕೊಂಡಿದ್ದ ಹುಳಿಯಾರಿನ ಜನತೆಯಿಂದ ವ್ಯಕ್ತವಾದ ಪ್ರತಿಕ್ರಿಯೆ ಹೀಗಿದೆ.

ತೆಂಗು ಉತ್ಪಾದಕರ ಅಭಿವೃದ್ಧಿಗೆ ಉತ್ತೇಜನ ನೀಡುವುದಾಗಿ ಈ ಬಜೆಟ್ ನಲ್ಲಿ ಹೇಳಿರುವುದು ಸ್ವಾಗತಾರ್ಹ, ತೆಂಗು ಬೆಳೆಗಾರರ ಸಮಗ್ರ ಅಭಿವೃದ್ದಿಗೆ ಪಣತೊಟ್ಟಿರುವ ಸರ್ಕಾರ ತೆಂಗುಬೆಳೆಗಾರರ ಬಹು ವರ್ಷದ ಬೇಡಿಕೆಯಾದ ನೀರಾ ಇಳಿಸುವ ನಿರ್ಧಾರಕ್ಕೆ ಒಪ್ಪಿಗೆ ನೀಡಿರುವುದು ಅಶಾದಾಯಕ ಬೆಳವಣಿಗೆ : ಮೋಹನ್ ,ತೆಂಗುಬೆಳೆಗಾರ,ಹುಳಿಯಾರು.



ಕೃಷಿ ಆಧಾರಿತ ಕೊಳವೆ ಬಾವಿ ವಿಫಲವಾದರೆ ಸಾಲಮನ್ನಾ ಮಾಡುವುದಾಗಿ ಹೇಳಿದೆ.ಅಲ್ಲದೆ ಕೃಷಿ, ತೋಟಗಾರಿಕಾ ಬೆಳೆಗಳಿಗೆ ವೈಜ್ಞಾನಿಕ ದರ ನಿಗದಿಗೆ ಕೃಷಿ ಬೆಲೆ ಆಯೋಗ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹವಾಗಿದ್ದು, ಇದು ಕೇವಲ ಆಶ್ವಾಸನೆಯಾಗದೆ ಜಾರಿಯಾಗಬೇಕು : 
 ಕೆಂಕೆರೆಸತೀಶ್, ಹಸಿರುಸೇನೆ ಕಾರ್ಯದರ್ಶಿ.

.



ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ. 2015-16ನ್ನು ಕನ್ನಡ ವರ್ಷವೆಂದು ಘೋಷಣೆ ಮಾಡಿ ಇದಕ್ಕಾಗಿ 10 ಕೋಟಿ ರೂ ಮೀಸಲಿಟ್ಟಿರುವುದಾಗಿ ಟಿವಿಯಲ್ಲಿ ಕೇಳಲ್ಪಟ್ಟೆ . ಘೋಷಣೆಯಂತೆ ಹಣ ಬಿಡುಗಡೆ ಮಾಡಿದಲ್ಲಿ ಪರಿಷತ್ ನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಅನುಕೂಲವಾಗುತ್ತದೆ : 
ತ.ಶಿ.ಬಸವಮೂರ್ತಿ. ಹುಳಿಯಾರು ಹೋಬಳಿ ಕಸಾಪ.




ಪ್ರಮುಖ ೨೫ ಎಪಿಎಂಸಿ ಮಾರುಕಟ್ಟೆಗಳ ಆಧುನೀಕರಣಕ್ಕೆ ಮುಂದಾಗಿರುವುದು ವ್ಯಾಪಾರಿಗಳಿಗೆ ಹಾಗೂ ರವಾನೆದಾರರಿಗೆ ಅನುಕೂಲ ಕಲ್ಪಿಸಿದಂತಾಗಿದೆ : 
ಎಲ್.ಆರ್.ಬಾಲಾಜಿ, ಹುಳಿಯಾರು ಎಪಿಎಂಸಿ ವರ್ತಕ.




 ಆನ್‌ಲೈನ್ ಮೂಲಕ ಭೂ ಪರಿವರ್ತನೆ ಪ್ರಕ್ರಿಯೆಗೆ ಚಾಲನೆ ಹಾಗೂ ತಾಲ್ಲೂಕ್ , ಜಿಲ್ಲಾಧಿಕಾರಿಗಳ ಕಛೇರಿಗಳಲ್ಲಿ ಕಾಗದ ರಹಿತ ವ್ಯವಸ್ಥೆಗೆ ಮುಂದಾಗಿರುವುದು ಏನೂ ತಿಳಿಯದ ಗ್ರಾಮೀಣ ಪ್ರದೇಶದವರಿಗೆ ವರದಾನದ ಬದಲು ಅನಾನುಕೂಲ ಹೆಚ್ಚಿದಂತಾಗುತ್ತದೆ : 
ರವಿಕುಮಾರ್ , ಜೋಡಿತಿರುಮಲಾಪುರ.



ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದು ಅದಕ್ಕೂ ಹೆಚ್ಚಿನದಾಗಿ ಮೇ 1ರಿಂದ ಹೊಸಪಡಿತರ ಚೀಟಿಗೆ ಅವಕಾಶ ನೀಡುತ್ತಿರುವುದು ಜನಸಾಮಾನ್ಯರಿಗೆ ಅನುಕೂಲಮಾಡಿದಂತಾಗಿದೆ :
ಹನುಮಂತಪ್ಪ , ತಾಲ್ಲೂಕ್ ದಲಿತ ಸಹಾಯವಾಣಿ ಅಧ್ಯಕ್ಷ.






ಡಿಸೇಲ್, ಪೆಟ್ರೋಲ್ ಬೆಲೆ ದಿನೇದಿನೆ ಏರುತ್ತಲೇ ಇದ್ದು ಅದರ ಬೆನ್ನಲ್ಲೇ ಮತ್ತೆ ಸೆಸ್ ಶೇ.1ರಷ್ಟು ಏರಿಕೆ ಮಾಡಿರುವುದು ಸರಕು ಸಾಗಾಣೆ ಹಾಗೂ ಪ್ರಯಾಣ ದರದ ಮೇಲೆ ಪರಿಣಾಮ ಬೀರುತ್ತದೆ:
ರಂಗನಾಥ್ ಪ್ರಸಾದ್ ,ಲಾರಿ ಮಾಲೀಕರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.