ವಿಷಯಕ್ಕೆ ಹೋಗಿ

ರಾಜ್ಯ ಬಜೆಟ್ ಬಗ್ಗೆ ಇವರೇನು ಹೇಳುತ್ತಾರೆ ಕೇಳಿ

ಇಂದಿನ ಬಜೆಟ್ ನಲ್ಲಿ ಗ್ರಾಮೀಣ ಪ್ರದೇಶದ ಹಾಗೂ ರೈತಾಪಿವರ್ಗ , ಹಿಂದುಳಿದ ವರ್ಗದವರ ಬಗ್ಗೆ ಹೆಚ್ಚಿನ ಅದ್ಯತೆ ನೀಡುವ ಬಗ್ಗೆ ಕುತೂಹಲ ತಾಳಿದ್ದ ಜನತೆಗೆ ಸಿದ್ದರಾಮಯ್ಯನವರ ಬಜೆಟ್ ಹೆಚ್ಚಿನ ನಿರಾಸೆ ಮೂಡಿಸದೆ ಅನುಕೂಲ ಮಾಡಿಕೊಟ್ಟಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಸತತ ಹತ್ತನೇ ಬಾರಿ ದಾಖಲೆ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿಕೊಂಡಿದ್ದ ಹುಳಿಯಾರಿನ ಜನತೆಯಿಂದ ವ್ಯಕ್ತವಾದ ಪ್ರತಿಕ್ರಿಯೆ ಹೀಗಿದೆ.

ತೆಂಗು ಉತ್ಪಾದಕರ ಅಭಿವೃದ್ಧಿಗೆ ಉತ್ತೇಜನ ನೀಡುವುದಾಗಿ ಈ ಬಜೆಟ್ ನಲ್ಲಿ ಹೇಳಿರುವುದು ಸ್ವಾಗತಾರ್ಹ, ತೆಂಗು ಬೆಳೆಗಾರರ ಸಮಗ್ರ ಅಭಿವೃದ್ದಿಗೆ ಪಣತೊಟ್ಟಿರುವ ಸರ್ಕಾರ ತೆಂಗುಬೆಳೆಗಾರರ ಬಹು ವರ್ಷದ ಬೇಡಿಕೆಯಾದ ನೀರಾ ಇಳಿಸುವ ನಿರ್ಧಾರಕ್ಕೆ ಒಪ್ಪಿಗೆ ನೀಡಿರುವುದು ಅಶಾದಾಯಕ ಬೆಳವಣಿಗೆ : ಮೋಹನ್ ,ತೆಂಗುಬೆಳೆಗಾರ,ಹುಳಿಯಾರು.



ಕೃಷಿ ಆಧಾರಿತ ಕೊಳವೆ ಬಾವಿ ವಿಫಲವಾದರೆ ಸಾಲಮನ್ನಾ ಮಾಡುವುದಾಗಿ ಹೇಳಿದೆ.ಅಲ್ಲದೆ ಕೃಷಿ, ತೋಟಗಾರಿಕಾ ಬೆಳೆಗಳಿಗೆ ವೈಜ್ಞಾನಿಕ ದರ ನಿಗದಿಗೆ ಕೃಷಿ ಬೆಲೆ ಆಯೋಗ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹವಾಗಿದ್ದು, ಇದು ಕೇವಲ ಆಶ್ವಾಸನೆಯಾಗದೆ ಜಾರಿಯಾಗಬೇಕು : 
 ಕೆಂಕೆರೆಸತೀಶ್, ಹಸಿರುಸೇನೆ ಕಾರ್ಯದರ್ಶಿ.

.



ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ. 2015-16ನ್ನು ಕನ್ನಡ ವರ್ಷವೆಂದು ಘೋಷಣೆ ಮಾಡಿ ಇದಕ್ಕಾಗಿ 10 ಕೋಟಿ ರೂ ಮೀಸಲಿಟ್ಟಿರುವುದಾಗಿ ಟಿವಿಯಲ್ಲಿ ಕೇಳಲ್ಪಟ್ಟೆ . ಘೋಷಣೆಯಂತೆ ಹಣ ಬಿಡುಗಡೆ ಮಾಡಿದಲ್ಲಿ ಪರಿಷತ್ ನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಅನುಕೂಲವಾಗುತ್ತದೆ : 
ತ.ಶಿ.ಬಸವಮೂರ್ತಿ. ಹುಳಿಯಾರು ಹೋಬಳಿ ಕಸಾಪ.




ಪ್ರಮುಖ ೨೫ ಎಪಿಎಂಸಿ ಮಾರುಕಟ್ಟೆಗಳ ಆಧುನೀಕರಣಕ್ಕೆ ಮುಂದಾಗಿರುವುದು ವ್ಯಾಪಾರಿಗಳಿಗೆ ಹಾಗೂ ರವಾನೆದಾರರಿಗೆ ಅನುಕೂಲ ಕಲ್ಪಿಸಿದಂತಾಗಿದೆ : 
ಎಲ್.ಆರ್.ಬಾಲಾಜಿ, ಹುಳಿಯಾರು ಎಪಿಎಂಸಿ ವರ್ತಕ.




 ಆನ್‌ಲೈನ್ ಮೂಲಕ ಭೂ ಪರಿವರ್ತನೆ ಪ್ರಕ್ರಿಯೆಗೆ ಚಾಲನೆ ಹಾಗೂ ತಾಲ್ಲೂಕ್ , ಜಿಲ್ಲಾಧಿಕಾರಿಗಳ ಕಛೇರಿಗಳಲ್ಲಿ ಕಾಗದ ರಹಿತ ವ್ಯವಸ್ಥೆಗೆ ಮುಂದಾಗಿರುವುದು ಏನೂ ತಿಳಿಯದ ಗ್ರಾಮೀಣ ಪ್ರದೇಶದವರಿಗೆ ವರದಾನದ ಬದಲು ಅನಾನುಕೂಲ ಹೆಚ್ಚಿದಂತಾಗುತ್ತದೆ : 
ರವಿಕುಮಾರ್ , ಜೋಡಿತಿರುಮಲಾಪುರ.



ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದು ಅದಕ್ಕೂ ಹೆಚ್ಚಿನದಾಗಿ ಮೇ 1ರಿಂದ ಹೊಸಪಡಿತರ ಚೀಟಿಗೆ ಅವಕಾಶ ನೀಡುತ್ತಿರುವುದು ಜನಸಾಮಾನ್ಯರಿಗೆ ಅನುಕೂಲಮಾಡಿದಂತಾಗಿದೆ :
ಹನುಮಂತಪ್ಪ , ತಾಲ್ಲೂಕ್ ದಲಿತ ಸಹಾಯವಾಣಿ ಅಧ್ಯಕ್ಷ.






ಡಿಸೇಲ್, ಪೆಟ್ರೋಲ್ ಬೆಲೆ ದಿನೇದಿನೆ ಏರುತ್ತಲೇ ಇದ್ದು ಅದರ ಬೆನ್ನಲ್ಲೇ ಮತ್ತೆ ಸೆಸ್ ಶೇ.1ರಷ್ಟು ಏರಿಕೆ ಮಾಡಿರುವುದು ಸರಕು ಸಾಗಾಣೆ ಹಾಗೂ ಪ್ರಯಾಣ ದರದ ಮೇಲೆ ಪರಿಣಾಮ ಬೀರುತ್ತದೆ:
ರಂಗನಾಥ್ ಪ್ರಸಾದ್ ,ಲಾರಿ ಮಾಲೀಕರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...