ವಿಷಯಕ್ಕೆ ಹೋಗಿ

ಆಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಸಚಿವರ ಎಚ್ಚರಿಕೆ ಪಾಲನೆಯಾಗುವುದೆ?

ವರದಿ : ಡಿ.ಆರ್.ನರೇಂದ್ರಬಾಬು
ಹುಳಿಯಾರು : ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಮಾಡಿಕೊಳ್ಳಲು ಇದೇ ತಿಂಗಳ ೩೧ ಅಂತಿಮ ಗಡುವು ನೀಡಿದ್ದು, ಅರ್ಜಿಸಲ್ಲಿಸಿ ಹಣ ಪಾವತಿಸಿ ಸಕ್ರಮಗೊಳಿಸಿಕೊಳ್ಳದವರ ಆಕ್ರಮ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಇಲಾಖೆ ಮುಂದಾಗುವುದೆ ಎಂಬ ಪ್ರಶ್ನೆ ಪಂಪ್ ಸೆಟ್ ದಾರರಲ್ಲಿ ಮೂಡಿದೆ.
ಹುಳಿಯಾರಿನ ಬೆಸ್ಕಾಂ ಕಛೇರಿ ಮುಂದೆ ಆಕ್ರಮ-ಸಕ್ರಮದ ಬಗ್ಗೆ ಪ್ರಚಾರ ಕಾಣದಿರುವುದು.
ಅಕ್ರಮ-ಸಕ್ರಮ ಯೋಜನೆಯಡಿ ಇಂದು ಅರ್ಜಿಸಲ್ಲಿಸಲು ಕಡೆಯ ದಿನವಾಗಿದ್ದು ಕೃಷಿ ಬಳಕೆಯ ಅಕ್ರಮ ಕೃಷಿ ಪಂಪ್‌ ಸೆಟ್‌ಗಳನ್ನು ಸಕ್ರಮ ಮಾಡಿಕೊಳ್ಳದಿದ್ದರೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಹೇಳುತ್ತಾ ಬಂದಿದ್ದರೂ ಸಹ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿಕೊಳ್ಳಲು ರೈತರಲ್ಲಿ ನಿರಾಸಕ್ತಿ ಕಂಡುಬರುತ್ತಿದೆ. ಅಲ್ಲದೆ ಈ ಬಗ್ಗೆ ರೈತರಿಗೆ ಅರಿವುಂಟು ಮಾಡಬೇಕಿದ್ದ ಬೆಸ್ಕಾಂ ಕೂಡ ರೈತರಿಗೆ ಯಾವುದೇ ಸೂಚನೆಯನ್ನೂ ನೀಡದೆ ಕೇವಲ ಕಚೇರಿಯ ಫಲಕದಲ್ಲಿ ಪ್ರಕಟಣೆಗಷ್ಟೆ ಸೀಮಿತಗೊಳಿಸಿಕೊಂಡಿದ್ದು ಹಿನ್ನಡೆಗೆ ಕಾರಣವಾಗಿದೆ.
ಅಂತಿಮ ದಿನ ಸಮೀಪಿಸುತ್ತಿದ್ದರೂ ಸಹ ಹೋಬಳಿಯ ಬೆಸ್ಕಾಂ ಇಲಾಖೆಯಿಂದ ಯಾವುದೇ ಪ್ರಚಾರ ಕಂಡುಬರದೆಯಿದ್ದು ರೈತರಿಗೆ ಈ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯದಂತಾಗಿದೆ.
ಸದ್ಯ ಕೃಷಿ ಚಟುವಟಿಕೆ ಕೂಡ ವಾಣಿಜ್ಯಕರಣವಾಗಿದ್ದು ಪ್ರತಿಯೊಬ್ಬ ರೈತರು ತಮ್ಮ ಜಮೀನಿನಲ್ಲಿ ಬೋರ್ ವೆಲ್ ಹಾಕಿಸಿಕೊಳ್ಳುವುದು ಮಾಮೂಲಿಯಾಗಿದೆ. ಪ್ರತಿಯೊಬ್ಬರು ಜಮೀನಿನಲ್ಲೂ ಕನಿಷ್ಠ ಎರಡರಿಂದ ಮೂರು ಬೋರ್ ವೆಲ್ ಇದ್ದರೂ ಸಹ ವಿದ್ಯುತ್ ಸಂಪರ್ಕಕ್ಕೆ ಪರದಾಡುವ ಸ್ಥಿತಿ ಇದೆ. ಹತ್ತಿರದ ಟಿಸಿಯಿಂದ ವಿದ್ಯುತ್ ಸಂಪರ್ಕವನ್ನು ತಾವೇ ಪಡೆದುಕೊಳ್ಳುವ ರೈತರು ಇದಕ್ಕಾಗಿ ಇಲಾಖೆಯನ್ನೇನು ಸಂಪರ್ಕಿಸುವುದಿಲ್ಲ. ಕೃಷಿ ಬಳಕೆಗೆ ಬಳಸುವ ವಿದ್ಯುತ್ ಉಚಿತವಾದ್ದರಿಂದ ಈ ಬಗ್ಗೆ ಇಲಾಖೆಯವರೂ ಸಹ ಯಾವೊಬ್ಬ ರೈತರಿಗೂ ಇದು ಆಕ್ರಮ ಸಂಪರ್ಕ ಎಂದು ಹೇಳಲು ಮುಂದಾಗುವುದಿಲ್ಲ. ಇದನ್ನು ಕಡಿತಗೊಳಿಸಿದಲ್ಲಿ ರೈತರು ಗಲಾಟೆಮಾಡುತ್ತಾರೆಂಬ ದೃಷ್ಟಿಯಿಂದ ಇದರ ಬಗ್ಗೆ ಇಲಾಖೆಯವರೂ ತಲೆ ಕೆಡಿಸಿಕೊಳ್ಳುತ್ತಿಲ್ಲ.
ರೈತರು ಬೋರ್ ವೆಲ್ ನೀರನ್ನವಲಂಬಿಸಿ ಬೆಳೆ ಬೆಳೆಯುತ್ತಿದ್ದು ಇದನ್ನೇ ನಂಬಿ ತಮ್ಮ ಜೀವನ ಸಾಗಿಸುತ್ತಿದ್ದಾರೆ.ಹೋಬಳಿ ವ್ಯಾಪ್ತಿಯಲ್ಲಿ ಸುಮಾರು ೭೦೨೨ ಬೋರ್ ವೆಲ್ ಗಳು ನೊಂದಾಯಿತವಾಗಿದೆ. ಸರಿಸುಮಾರು ಇಷ್ಟೆ ಆಕ್ರಮ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡವರಿದ್ದು ಪ್ರತಿಯೊಬ್ಬರು ಹತ್ತಿರದ ಟಿಸಿ ಯಿಂದ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ಕೃಷಿ ಚಟುವಟಿಕೆಗಳಿಗೆ ತೊಡಗಿಕೊಂಡಿದ್ದಾರೆ. ಅಧಿಕೃತವಾಗಿ ಅನುಮತಿ ಪಡೆದವರು ಹಾಗೂ ಅನಧಿಕೃತವಾಗಿ ವಿದ್ಯುತ್ ಸಂಪರ್ಕಪಡೆದವರೂ ಇಬ್ಬರೂ ಸಹ ಯಾವುದೇ ಅಡ್ಡಿಯಿಲ್ಲದೆ ವಿದ್ಯುತ್ ಸಂಪರ್ಕ ಪಡೆದುಕೊಂಡು ಪಂಪ್ ಸೆಟ್ ಗಳನ್ನು ಓಡಿಸುತ್ತಿದ್ದಾರೆ.
ಇದೀಗ ಸರ್ಕಾರ ಅಕ್ರಮ - ಸಕ್ರಮದಲ್ಲಿ ರೈತರ ಪಂಪ್ ಸೆಟ್ ಗಳನ್ನು ಸಕ್ರಮ ಮಾಡಲು ಮುಂದಾಗಿ ಸಕ್ರಮಗೊಳಿಸದವರಿಗೆ ವಿದ್ಯುತ್ ನೀಡುವುದಿಲ್ಲ ಎಂದು ಹೇಳಿರುವುದು ರೈತರನ್ನು ಕಂಗಾಲಾಗುವಂತೆ ಮಾಡಿದೆ.
ಒಟ್ಟಾರೆ ಅಕ್ರಮ-ಸಕ್ರಮದ ಬಗ್ಗೆ ಸೂಕ್ತ ಪ್ರಚಾರ ಹಾಗೂ ಕಡ್ಡಾಯವಾಗಿ ಹಣ ಪಾವತಿಸಿ ಸಕ್ರಮಗೊಳಿಸಿಕೊಂಡವರಿಗೆ ಮಾತ್ರ ವಿದ್ಯುತ್ ಎಂಬ ಆದೇಶವಿಲ್ಲದಿರುವುದರಿಂದ ಬಳಕೆದಾರರಲ್ಲಿ ಗೊಂದಲವನ್ನುಂಟು ಮಾಡಿದೆ. ಹಣ ಕಟ್ಟಿ ಸಕ್ರಮ ಮಾಡಿಕೊಳ್ಳುವುದೋ, ಈಗ ಹೇಗೆ ಪಂಪ್ ಸೆಟ್ ಓಡಿಸುತ್ತಿದ್ದೇವ್ ಹಾಗೇಯೇ ಮುಂದುವರೆಯುವುದೋ ಎಂಬ ಮನೋಭಾವ ಎಲ್ಲರಲ್ಲೂ ಮೂಡಿದ್ದು ನಾಳೆಯಿಂದ ಇಲಾಖೆ ಕ್ರಮ ಏನೆಂಬುದನ್ನು ಕಾದುನೋಡಬೇಕಿದೆ.
------------------

ಅಕ್ರಮ-ಸಕ್ರಮ ಯೋಜನೆಯಡಿ ರೈತರು ಪಂಪ್ ಸೆಟ್ ಗಳನ್ನು ಸಕ್ರಮ ಮಾಡಿಕೊಳಬೇಕು ಎಂದು ಆದೇಶವನ್ನು ಪ್ರತಿ ವರ್ಷವೂ ಹೊರಡಿಸುತ್ತಿದ್ದಾರೆ ಹೊರತು ಅದರ ಪ್ರಯೋಜನವೇನು ಎಂಬುದು ಇದುವರೆಗೂ ತಿಳಿದಿಲ್ಲ. ನಾವು ದುಡ್ಡುಕಟ್ಟುವುದರಿಂದ ಹೆಚ್ಚಿನ ಪ್ರಯೋಜನವೇನಿಲ್ಲ. ಹಣ ಕಟ್ಟುವವರು , ಹಣಕಟ್ಟದಿರುವವರು ಇಬ್ಬರೂ ವಿದ್ಯುತ್ ಸಂಪರ್ಕ ಪಡೆಯಲು ಯಾವುದೆ ಅಡ್ಡಿ ಇರುವುದಿಲ್ಲ : ಬಸವಣ್ಣ ದೊಡ್ಡಬಿದರೆ.     

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.