ವಿಷಯಕ್ಕೆ ಹೋಗಿ

ಆಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಸಚಿವರ ಎಚ್ಚರಿಕೆ ಪಾಲನೆಯಾಗುವುದೆ?

ವರದಿ : ಡಿ.ಆರ್.ನರೇಂದ್ರಬಾಬು
ಹುಳಿಯಾರು : ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಮಾಡಿಕೊಳ್ಳಲು ಇದೇ ತಿಂಗಳ ೩೧ ಅಂತಿಮ ಗಡುವು ನೀಡಿದ್ದು, ಅರ್ಜಿಸಲ್ಲಿಸಿ ಹಣ ಪಾವತಿಸಿ ಸಕ್ರಮಗೊಳಿಸಿಕೊಳ್ಳದವರ ಆಕ್ರಮ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಇಲಾಖೆ ಮುಂದಾಗುವುದೆ ಎಂಬ ಪ್ರಶ್ನೆ ಪಂಪ್ ಸೆಟ್ ದಾರರಲ್ಲಿ ಮೂಡಿದೆ.
ಹುಳಿಯಾರಿನ ಬೆಸ್ಕಾಂ ಕಛೇರಿ ಮುಂದೆ ಆಕ್ರಮ-ಸಕ್ರಮದ ಬಗ್ಗೆ ಪ್ರಚಾರ ಕಾಣದಿರುವುದು.
ಅಕ್ರಮ-ಸಕ್ರಮ ಯೋಜನೆಯಡಿ ಇಂದು ಅರ್ಜಿಸಲ್ಲಿಸಲು ಕಡೆಯ ದಿನವಾಗಿದ್ದು ಕೃಷಿ ಬಳಕೆಯ ಅಕ್ರಮ ಕೃಷಿ ಪಂಪ್‌ ಸೆಟ್‌ಗಳನ್ನು ಸಕ್ರಮ ಮಾಡಿಕೊಳ್ಳದಿದ್ದರೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಹೇಳುತ್ತಾ ಬಂದಿದ್ದರೂ ಸಹ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿಕೊಳ್ಳಲು ರೈತರಲ್ಲಿ ನಿರಾಸಕ್ತಿ ಕಂಡುಬರುತ್ತಿದೆ. ಅಲ್ಲದೆ ಈ ಬಗ್ಗೆ ರೈತರಿಗೆ ಅರಿವುಂಟು ಮಾಡಬೇಕಿದ್ದ ಬೆಸ್ಕಾಂ ಕೂಡ ರೈತರಿಗೆ ಯಾವುದೇ ಸೂಚನೆಯನ್ನೂ ನೀಡದೆ ಕೇವಲ ಕಚೇರಿಯ ಫಲಕದಲ್ಲಿ ಪ್ರಕಟಣೆಗಷ್ಟೆ ಸೀಮಿತಗೊಳಿಸಿಕೊಂಡಿದ್ದು ಹಿನ್ನಡೆಗೆ ಕಾರಣವಾಗಿದೆ.
ಅಂತಿಮ ದಿನ ಸಮೀಪಿಸುತ್ತಿದ್ದರೂ ಸಹ ಹೋಬಳಿಯ ಬೆಸ್ಕಾಂ ಇಲಾಖೆಯಿಂದ ಯಾವುದೇ ಪ್ರಚಾರ ಕಂಡುಬರದೆಯಿದ್ದು ರೈತರಿಗೆ ಈ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯದಂತಾಗಿದೆ.
ಸದ್ಯ ಕೃಷಿ ಚಟುವಟಿಕೆ ಕೂಡ ವಾಣಿಜ್ಯಕರಣವಾಗಿದ್ದು ಪ್ರತಿಯೊಬ್ಬ ರೈತರು ತಮ್ಮ ಜಮೀನಿನಲ್ಲಿ ಬೋರ್ ವೆಲ್ ಹಾಕಿಸಿಕೊಳ್ಳುವುದು ಮಾಮೂಲಿಯಾಗಿದೆ. ಪ್ರತಿಯೊಬ್ಬರು ಜಮೀನಿನಲ್ಲೂ ಕನಿಷ್ಠ ಎರಡರಿಂದ ಮೂರು ಬೋರ್ ವೆಲ್ ಇದ್ದರೂ ಸಹ ವಿದ್ಯುತ್ ಸಂಪರ್ಕಕ್ಕೆ ಪರದಾಡುವ ಸ್ಥಿತಿ ಇದೆ. ಹತ್ತಿರದ ಟಿಸಿಯಿಂದ ವಿದ್ಯುತ್ ಸಂಪರ್ಕವನ್ನು ತಾವೇ ಪಡೆದುಕೊಳ್ಳುವ ರೈತರು ಇದಕ್ಕಾಗಿ ಇಲಾಖೆಯನ್ನೇನು ಸಂಪರ್ಕಿಸುವುದಿಲ್ಲ. ಕೃಷಿ ಬಳಕೆಗೆ ಬಳಸುವ ವಿದ್ಯುತ್ ಉಚಿತವಾದ್ದರಿಂದ ಈ ಬಗ್ಗೆ ಇಲಾಖೆಯವರೂ ಸಹ ಯಾವೊಬ್ಬ ರೈತರಿಗೂ ಇದು ಆಕ್ರಮ ಸಂಪರ್ಕ ಎಂದು ಹೇಳಲು ಮುಂದಾಗುವುದಿಲ್ಲ. ಇದನ್ನು ಕಡಿತಗೊಳಿಸಿದಲ್ಲಿ ರೈತರು ಗಲಾಟೆಮಾಡುತ್ತಾರೆಂಬ ದೃಷ್ಟಿಯಿಂದ ಇದರ ಬಗ್ಗೆ ಇಲಾಖೆಯವರೂ ತಲೆ ಕೆಡಿಸಿಕೊಳ್ಳುತ್ತಿಲ್ಲ.
ರೈತರು ಬೋರ್ ವೆಲ್ ನೀರನ್ನವಲಂಬಿಸಿ ಬೆಳೆ ಬೆಳೆಯುತ್ತಿದ್ದು ಇದನ್ನೇ ನಂಬಿ ತಮ್ಮ ಜೀವನ ಸಾಗಿಸುತ್ತಿದ್ದಾರೆ.ಹೋಬಳಿ ವ್ಯಾಪ್ತಿಯಲ್ಲಿ ಸುಮಾರು ೭೦೨೨ ಬೋರ್ ವೆಲ್ ಗಳು ನೊಂದಾಯಿತವಾಗಿದೆ. ಸರಿಸುಮಾರು ಇಷ್ಟೆ ಆಕ್ರಮ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡವರಿದ್ದು ಪ್ರತಿಯೊಬ್ಬರು ಹತ್ತಿರದ ಟಿಸಿ ಯಿಂದ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ಕೃಷಿ ಚಟುವಟಿಕೆಗಳಿಗೆ ತೊಡಗಿಕೊಂಡಿದ್ದಾರೆ. ಅಧಿಕೃತವಾಗಿ ಅನುಮತಿ ಪಡೆದವರು ಹಾಗೂ ಅನಧಿಕೃತವಾಗಿ ವಿದ್ಯುತ್ ಸಂಪರ್ಕಪಡೆದವರೂ ಇಬ್ಬರೂ ಸಹ ಯಾವುದೇ ಅಡ್ಡಿಯಿಲ್ಲದೆ ವಿದ್ಯುತ್ ಸಂಪರ್ಕ ಪಡೆದುಕೊಂಡು ಪಂಪ್ ಸೆಟ್ ಗಳನ್ನು ಓಡಿಸುತ್ತಿದ್ದಾರೆ.
ಇದೀಗ ಸರ್ಕಾರ ಅಕ್ರಮ - ಸಕ್ರಮದಲ್ಲಿ ರೈತರ ಪಂಪ್ ಸೆಟ್ ಗಳನ್ನು ಸಕ್ರಮ ಮಾಡಲು ಮುಂದಾಗಿ ಸಕ್ರಮಗೊಳಿಸದವರಿಗೆ ವಿದ್ಯುತ್ ನೀಡುವುದಿಲ್ಲ ಎಂದು ಹೇಳಿರುವುದು ರೈತರನ್ನು ಕಂಗಾಲಾಗುವಂತೆ ಮಾಡಿದೆ.
ಒಟ್ಟಾರೆ ಅಕ್ರಮ-ಸಕ್ರಮದ ಬಗ್ಗೆ ಸೂಕ್ತ ಪ್ರಚಾರ ಹಾಗೂ ಕಡ್ಡಾಯವಾಗಿ ಹಣ ಪಾವತಿಸಿ ಸಕ್ರಮಗೊಳಿಸಿಕೊಂಡವರಿಗೆ ಮಾತ್ರ ವಿದ್ಯುತ್ ಎಂಬ ಆದೇಶವಿಲ್ಲದಿರುವುದರಿಂದ ಬಳಕೆದಾರರಲ್ಲಿ ಗೊಂದಲವನ್ನುಂಟು ಮಾಡಿದೆ. ಹಣ ಕಟ್ಟಿ ಸಕ್ರಮ ಮಾಡಿಕೊಳ್ಳುವುದೋ, ಈಗ ಹೇಗೆ ಪಂಪ್ ಸೆಟ್ ಓಡಿಸುತ್ತಿದ್ದೇವ್ ಹಾಗೇಯೇ ಮುಂದುವರೆಯುವುದೋ ಎಂಬ ಮನೋಭಾವ ಎಲ್ಲರಲ್ಲೂ ಮೂಡಿದ್ದು ನಾಳೆಯಿಂದ ಇಲಾಖೆ ಕ್ರಮ ಏನೆಂಬುದನ್ನು ಕಾದುನೋಡಬೇಕಿದೆ.
------------------

ಅಕ್ರಮ-ಸಕ್ರಮ ಯೋಜನೆಯಡಿ ರೈತರು ಪಂಪ್ ಸೆಟ್ ಗಳನ್ನು ಸಕ್ರಮ ಮಾಡಿಕೊಳಬೇಕು ಎಂದು ಆದೇಶವನ್ನು ಪ್ರತಿ ವರ್ಷವೂ ಹೊರಡಿಸುತ್ತಿದ್ದಾರೆ ಹೊರತು ಅದರ ಪ್ರಯೋಜನವೇನು ಎಂಬುದು ಇದುವರೆಗೂ ತಿಳಿದಿಲ್ಲ. ನಾವು ದುಡ್ಡುಕಟ್ಟುವುದರಿಂದ ಹೆಚ್ಚಿನ ಪ್ರಯೋಜನವೇನಿಲ್ಲ. ಹಣ ಕಟ್ಟುವವರು , ಹಣಕಟ್ಟದಿರುವವರು ಇಬ್ಬರೂ ವಿದ್ಯುತ್ ಸಂಪರ್ಕ ಪಡೆಯಲು ಯಾವುದೆ ಅಡ್ಡಿ ಇರುವುದಿಲ್ಲ : ಬಸವಣ್ಣ ದೊಡ್ಡಬಿದರೆ.     

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...