ವಿಷಯಕ್ಕೆ ಹೋಗಿ

ಬಜೆಟ್ ನಲ್ಲಿ ನೀರಾ ಭಾಗ್ಯ ಘೋಷಣೆ ಎಲ್ಲರಿಗೂ ದೊರೆಯಲಿದೆ ನೀರಾ ಪೇಯ

ವರದಿ : ಡಿ.ಆರ್.ನರೇಂದ್ರಬಾಬು
ಹುಳಿಯಾರು: ರಾಜ್ಯದಲ್ಲಿ ಕಳೆದೊಂದು ದಶಕದಿಂದ ನೀರಾ ಹೋರಾಟದಲ್ಲಿ ತೊಡಗಿಕೊಂಡಿದ್ದ ತೆಂಗುಬೆಳೆಗಾರರ ಬೇಡಿಕೆಗೆ ಸ್ಪಂದಿಸಿರುವ ಸಿದ್ದರಾಮಯ್ಯನವರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ನೀರಾನೀತಿ ರೂಪಿಸಿ ನೀರಾ ಇಳಿಸಲು ಅನುಮತಿ ನೀಡಲು ಮುಂದಾಗಿರುವುದು ತೆಂಗುಬೆಳೆಗಾರರಲ್ಲಿ ಹರ್ಷತಂದಿದೆ.
ನೀರಾ ಇಳಿಸುತ್ತಿರುವುದು ( ಸಂಗ್ರಹಚಿತ್ರ)
ಏನಿದು ನೀರಾ : ನೀರಾ ತೆಂಗಿನ ಮರದಿಂದ ಉತ್ಪತ್ತಿಯಾಗುವ ಆರೋಗ್ಯಕರ ಪೇಯವಾಗಿದೆ. ತೆಂಗಿನಮರದ ಸುಳಿಯಭಾಗದಲ್ಲಿ ಎಳೆಯ ಹೊಂಬಾಳೆಯ ತುದಿ ಕತ್ತರಿಸಿದಾಗ ಅದರಿಂದ ಸುರಿಯುವ ರಸವೇ ನೀರಾವಾಗಿದ್ದು ಇದನ್ನು ಶೇಖರಿಸಿ ಸೂರ್ಯೋದಯದ ಮುನ್ನವೇ ಸೇವಿಸಿದಲ್ಲಿ ಆರೋಗ್ಯಕರವಾಗಿರುತ್ತದೆ. ಸೂರ್ಯೋದಯದ ನಂತರ ಇದು ಹುಳಿ ಹೆಂಡವಾಗಿ ಪರಿವರ್ತನೆಯಾಗುವುದರಿಂದ ಇದನ್ನು ಸಾರಾಯಿ ಎಂದೇ ಪರಿಗಣಿಸಲಾಗುತ್ತದೆ. ಅಬಕಾರಿ ಕಾಯ್ದೆಯಡಿ ಇದನ್ನು ಸಾರಾಯಿ ಎಂದೇ ಪರಿಗಣಿಸಿದ್ದು ಸಾರ್ವಜನಿಕವಾಗಿ ಮಾರುವಂತಿಲ್ಲ ಎಂದು ಸೂಚಿಸಿದೆ.
ಆಲ್ಕೋಹಾಲಾ? : ನೀರಾ ಹಾಗೂ ನೀರಾ ಇಳಿಸಿ ಮಾರಾಟ ಮಾಡುವುದರ ಬಗ್ಗೆ ಸಾಕಷ್ಟು ಗೊಂದಲಗಳಿದ್ದು ನೀರಾ ಮತ್ತು ಬರಿಸುವ ಪೇಯ ಇದನ್ನು ಕೆಲವೇ ಗಂಟೆಯೋಳಗೆ ಕುಡಿಯದೆ ಹೋದಲ್ಲಿ ಮದ್ಯವಾಗಿ ಪರಿವರ್ತನೆಯಾಗುವ ಕಾರಣದಿಂದ ಇದನ್ನು ಅಬಕಾರಿ ಇಲಾಖೆ ವ್ಯಾಪ್ತಿಗೆ ಸೇರಿದಿದ್ದು ಸಾಕಷ್ಟು ಸಮಸ್ಯೆಗೆ ಕಾರಣವಾಗಿದೆ. ಇದೊಂದೆ ಕಾರಣದಿಂದಾಗಿ ನೀರಾ ಮಾರಾಟ ಬಲು ದುಸ್ಥರವಾಗಿದ್ದು , ತೆಂಗಿನಮರದಿಂದ ಇಳಿಸಿದ ಕೆಲವೇ ಗಂಟೆಗಳಲ್ಲಿ ಮದ್ಯವಾಗುವ ಇದನ್ನು ಸಂಸ್ಕರಿಸಿ ಮಾರಾಟ ಮಾಡುವುದಕ್ಕೆ ಸಮಗ್ರನೀತಿ ರೂಪಿಸಬೇಕೆಂದು ಹಾಗೂ ಅಬಕಾರಿ ತಿದ್ದುಪಡಿಗೆ ಬದಲಾವಣೆ ತರಬೇಕೆಂದು ತೆಂಗುಬೆಳೆಗಾರರ ಬಹುದಿನಗಳ ಬೇಡಿಕೆಯಾಗಿತ್ತು.
ನೀರಾ ನೈಸರ್ಗಿಕ ಪೇಯವಾಗಿದ್ದು ಅಲ್ಕೋಹಾಲ್ ಪ್ರಮಾಣ ಶೇ.೧ ರಷ್ಟಿದ್ದು, ವಿದೇಶಿ ತಂಪು ಪಾನೀಯಗಳ ಪ್ರಮಾಣಕ್ಕಿಂತ ಕಡಿಮೆ ಇದಾಗ್ಯೂ ತಡವಾದಲ್ಲಿ ಇದು ಸಾರಾಯಿಯಾಗುತ್ತದೆ ತಪ್ಪು ತಿಳುವಳಿಕೆ ಜನರಲ್ಲಿದೆ. ಇದನ್ನು ಹೋಗಲಾಡಿಸಿ ನೀರಾ ನೈಸರ್ಗಿಕ ತಾಜಾತನ ಕಳೆದುಕೊಳ್ಳದಂತೆ ಸಂರಕ್ಷಿಸಿಡಲು ಕೇಂದ್ರೀಯ ಆಹಾರ ಸಂಶೋಧನ ಸಂಸ್ಥೆ ತಂತ್ರಜ್ಞಾನ ಬಳಸಿಕೊಂಡು ಮಾರಾಟ ಮಾಡಬಹುದಾಗಿದೆ.
ಕಳೆದ ೧೦ ವರ್ಷದ ಹಿಂದೆ ತೆಂಗಿಗೆ ನುಸಿರೋಗ ತಗುಲಿದಾಗ ಕಂಗೆಟ್ಟಿದ ರೈತರಿಗೆ ನೀರಾ ಇಳಿಸುವುದು ಪರ್ಯಾಯವಾಗಿ ಕಂಡು ರೈತರು ನೀರಾ ತೆಗೆಯುವ ಮೂಲಕವಾದರೂ ಲಾಭ ಮಾಡಿಕೊಳ್ಳುವ ದೃಷ್ಠಿಯಿಂದ ನೀರಾ ನೀತಿ ಘೋಷಿಸುವಂತೆ ಒತ್ತಾಯಿಸಿದ್ದರು.ರೈತಸಂಘದ ಪುಟ್ಟಣ್ಣಯ್ಯ ಹಾಗೂ ಕೋಡಿಹಳ್ಳಿ ಚಂದ್ರಶೇಖರ್ ಅವರ ಬಣದ ಬೆಂಬಲದಿಂದ ಇದಕ್ಕಾಗಿ ಹೋರಾಟವೇ ಪ್ರಾರಂಭವಾಗಿತ್ತು. ಈ ಬಗ್ಗೆ ಸಿಹಿನೀರಾ ಪ್ರಸರಣಾ ಸಮಿತಿಯೊಂದನ್ನು ರಚಿಸಿಕೊಂಡು ಸರ್ಕಾರಕ್ಕೆ ಒತ್ತಡಕೂಡ ಹೇರಲಾಗಿತ್ತು.
ಸದ್ಯ ಸರ್ಕಾರ ಬಜೆಟ್ ನಲ್ಲಿ ನೀರಾಭಾಗ್ಯ ಘೋಷಿಸಿದ್ದು ಅಬಕಾರಿ ಕಾಯ್ದೆ ನಿರ್ಬಂಧ ಸಡಿಲಗೊಳಿಸಲು ಮುಂದಾಗಿರುವುದು ಸಹಜವಾಗಿಯೇ ನೀರಾ ಮಾರಾಟಗಾರರಲ್ಲಿ ಸಂತಸ ಮೂಡಿದೆ. ಸದ್ಯ ಈ ಘೋಷಣೆಯಿಂದ ಈಗಾಗಲೇ ಆಸ್ತಿತ್ವಕ್ಕೆ ಬಂದಿರುವ ೫ ತೆಂಗು ಉತ್ಪಾದಕ ಕಂಪನಿಗಳಲ್ಲಿ ಸಹಸ್ರಾರು ಉದ್ಯೋಗಗಳು ಸೃಷ್ಠಿಯಾಗಲಿದ್ದು ಸರ್ಕಾರಕ್ಕೆ ಕೋಟಿಗಟ್ಟಲೇ ಆದಾಯ ಬರಲಿದೆ ಎನ್ನುತ್ತಾರೆ ಸಿಹಿನೀರಾ ಪ್ರಸರಣಾ ಸಮಿತಿಯ ರಾಜ್ಯ ಸಂಚಾಲಕರಾದ ಅಣೇಕಟ್ಟೆ ವಿಶ್ವನಾಥ್.

ತೆಂಗುಬೆಳೆಗಾರರ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ನೆನ್ನೆತಾನೆ ನೀರಾ ಇಳಿಸಲು ಅನುಮತಿ ನೀಡುವುದಾಗಿ ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ಅಬಕಾರಿ ಕಾಯ್ದೆಗೆ ತಿದ್ದುಪಡಿತರುವುದಾಗಿ ಘೋಷಿಸಿದ್ದಾರೆ. ಇಷ್ಟೆಲ್ಲಾ ಆಗಿದ್ದರೂ ಪಟ್ಟಣದಲ್ಲಿ ನೀರಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಪೋಲೀಸ್ ನವರು ಬಂಧಿಸಿದ್ದಾರೆ.
--------------------------------------------------
ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಂಗುಬೆಳೆಗಾರರ ಕಷ್ಟವನ್ನು ಅರಿತು ನೀರಾ ಇಳಿಸಲು ಹಾಗೂ ಮಾರಾಟಕ್ಕೆ ಅನುವು ಮಾಡಿಕೊಟ್ಟಿರುವುದು ಸಂಕಷ್ಟದಲ್ಲಿದ್ದ ತೆಂಗು ಬೆಳೆಗಾರರಿಗೆ ನೆರವಾದಂತಾಗಿದೆ : ರಾಜ್ಯ ಹಸಿರುಸೇನೆಯ ಕಾರ್ಯದರ್ಶಿ ಕೆಂಕೆರೆಸತೀಶ್ .
----------------------------------------------
ನೀರಾ ಮಾರಾಟ : ರೈತನ ಮೇಲೆ ಮೊಕದ್ದಮೆ
--------------

ರಾಜ್ಯ ಸರ್ಕಾರ ಒಂದೆಡೆ ಬಜೆಟ್ ನಲ್ಲಿ ನೀರಾ ಮಾರಾಟಕ್ಕೆ ಹಸಿರು ನಿಶಾನೆ ತೋರಿಸುತ್ತಿದ್ದರೆ ಮತ್ತೊಂದೆಡೆ ಅಬಕಾರಿ ಇಲಾಖೆಯವರು ನೀರಾ ಮಾರಲು ಮುಂದಾದ ರೈತನ ಮೇಲೆ ಮೊಕದ್ದಮೆ ಹೂಡಿರುವುದು ವಿಪರ್ಯಾಸವಾಗಿದೆ.ಹುಳಿಯಾರು ಸಮೀಪದ ಯರೇಹಳ್ಳಿ ತೋಟವೊಂದರ ಮೇಲೆ ದಾಳಿ ಮಾಡಿ ನೀರಾ ಮತ್ತು ಅದರ ಪರಿಕರಗಳನ್ನು ನಾಶಪಡಿಸಿದ್ದಲ್ಲದೆ ಇಳಿಸಿ ಮಾರಾಟದಲ್ಲಿ ತೊಡಗಿಕೊಂಡಿದ್ದ ಈರಣ್ಣ ಎಂಬಾತನ ಮೇಲೆ ಅಬಕಾರಿ ಇಲಾಖೆಯವರು ಶುಕ್ರವಾರ ಬೆಳಿಗ್ಗೆ ಕ್ರಮಕೈಗೊಂಡಿದ್ದಾರೆ.   

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.