ವಿಷಯಕ್ಕೆ ಹೋಗಿ

ಬಜೆಟ್ ನಲ್ಲಿ ನೀರಾ ಭಾಗ್ಯ ಘೋಷಣೆ ಎಲ್ಲರಿಗೂ ದೊರೆಯಲಿದೆ ನೀರಾ ಪೇಯ

ವರದಿ : ಡಿ.ಆರ್.ನರೇಂದ್ರಬಾಬು
ಹುಳಿಯಾರು: ರಾಜ್ಯದಲ್ಲಿ ಕಳೆದೊಂದು ದಶಕದಿಂದ ನೀರಾ ಹೋರಾಟದಲ್ಲಿ ತೊಡಗಿಕೊಂಡಿದ್ದ ತೆಂಗುಬೆಳೆಗಾರರ ಬೇಡಿಕೆಗೆ ಸ್ಪಂದಿಸಿರುವ ಸಿದ್ದರಾಮಯ್ಯನವರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ನೀರಾನೀತಿ ರೂಪಿಸಿ ನೀರಾ ಇಳಿಸಲು ಅನುಮತಿ ನೀಡಲು ಮುಂದಾಗಿರುವುದು ತೆಂಗುಬೆಳೆಗಾರರಲ್ಲಿ ಹರ್ಷತಂದಿದೆ.
ನೀರಾ ಇಳಿಸುತ್ತಿರುವುದು ( ಸಂಗ್ರಹಚಿತ್ರ)
ಏನಿದು ನೀರಾ : ನೀರಾ ತೆಂಗಿನ ಮರದಿಂದ ಉತ್ಪತ್ತಿಯಾಗುವ ಆರೋಗ್ಯಕರ ಪೇಯವಾಗಿದೆ. ತೆಂಗಿನಮರದ ಸುಳಿಯಭಾಗದಲ್ಲಿ ಎಳೆಯ ಹೊಂಬಾಳೆಯ ತುದಿ ಕತ್ತರಿಸಿದಾಗ ಅದರಿಂದ ಸುರಿಯುವ ರಸವೇ ನೀರಾವಾಗಿದ್ದು ಇದನ್ನು ಶೇಖರಿಸಿ ಸೂರ್ಯೋದಯದ ಮುನ್ನವೇ ಸೇವಿಸಿದಲ್ಲಿ ಆರೋಗ್ಯಕರವಾಗಿರುತ್ತದೆ. ಸೂರ್ಯೋದಯದ ನಂತರ ಇದು ಹುಳಿ ಹೆಂಡವಾಗಿ ಪರಿವರ್ತನೆಯಾಗುವುದರಿಂದ ಇದನ್ನು ಸಾರಾಯಿ ಎಂದೇ ಪರಿಗಣಿಸಲಾಗುತ್ತದೆ. ಅಬಕಾರಿ ಕಾಯ್ದೆಯಡಿ ಇದನ್ನು ಸಾರಾಯಿ ಎಂದೇ ಪರಿಗಣಿಸಿದ್ದು ಸಾರ್ವಜನಿಕವಾಗಿ ಮಾರುವಂತಿಲ್ಲ ಎಂದು ಸೂಚಿಸಿದೆ.
ಆಲ್ಕೋಹಾಲಾ? : ನೀರಾ ಹಾಗೂ ನೀರಾ ಇಳಿಸಿ ಮಾರಾಟ ಮಾಡುವುದರ ಬಗ್ಗೆ ಸಾಕಷ್ಟು ಗೊಂದಲಗಳಿದ್ದು ನೀರಾ ಮತ್ತು ಬರಿಸುವ ಪೇಯ ಇದನ್ನು ಕೆಲವೇ ಗಂಟೆಯೋಳಗೆ ಕುಡಿಯದೆ ಹೋದಲ್ಲಿ ಮದ್ಯವಾಗಿ ಪರಿವರ್ತನೆಯಾಗುವ ಕಾರಣದಿಂದ ಇದನ್ನು ಅಬಕಾರಿ ಇಲಾಖೆ ವ್ಯಾಪ್ತಿಗೆ ಸೇರಿದಿದ್ದು ಸಾಕಷ್ಟು ಸಮಸ್ಯೆಗೆ ಕಾರಣವಾಗಿದೆ. ಇದೊಂದೆ ಕಾರಣದಿಂದಾಗಿ ನೀರಾ ಮಾರಾಟ ಬಲು ದುಸ್ಥರವಾಗಿದ್ದು , ತೆಂಗಿನಮರದಿಂದ ಇಳಿಸಿದ ಕೆಲವೇ ಗಂಟೆಗಳಲ್ಲಿ ಮದ್ಯವಾಗುವ ಇದನ್ನು ಸಂಸ್ಕರಿಸಿ ಮಾರಾಟ ಮಾಡುವುದಕ್ಕೆ ಸಮಗ್ರನೀತಿ ರೂಪಿಸಬೇಕೆಂದು ಹಾಗೂ ಅಬಕಾರಿ ತಿದ್ದುಪಡಿಗೆ ಬದಲಾವಣೆ ತರಬೇಕೆಂದು ತೆಂಗುಬೆಳೆಗಾರರ ಬಹುದಿನಗಳ ಬೇಡಿಕೆಯಾಗಿತ್ತು.
ನೀರಾ ನೈಸರ್ಗಿಕ ಪೇಯವಾಗಿದ್ದು ಅಲ್ಕೋಹಾಲ್ ಪ್ರಮಾಣ ಶೇ.೧ ರಷ್ಟಿದ್ದು, ವಿದೇಶಿ ತಂಪು ಪಾನೀಯಗಳ ಪ್ರಮಾಣಕ್ಕಿಂತ ಕಡಿಮೆ ಇದಾಗ್ಯೂ ತಡವಾದಲ್ಲಿ ಇದು ಸಾರಾಯಿಯಾಗುತ್ತದೆ ತಪ್ಪು ತಿಳುವಳಿಕೆ ಜನರಲ್ಲಿದೆ. ಇದನ್ನು ಹೋಗಲಾಡಿಸಿ ನೀರಾ ನೈಸರ್ಗಿಕ ತಾಜಾತನ ಕಳೆದುಕೊಳ್ಳದಂತೆ ಸಂರಕ್ಷಿಸಿಡಲು ಕೇಂದ್ರೀಯ ಆಹಾರ ಸಂಶೋಧನ ಸಂಸ್ಥೆ ತಂತ್ರಜ್ಞಾನ ಬಳಸಿಕೊಂಡು ಮಾರಾಟ ಮಾಡಬಹುದಾಗಿದೆ.
ಕಳೆದ ೧೦ ವರ್ಷದ ಹಿಂದೆ ತೆಂಗಿಗೆ ನುಸಿರೋಗ ತಗುಲಿದಾಗ ಕಂಗೆಟ್ಟಿದ ರೈತರಿಗೆ ನೀರಾ ಇಳಿಸುವುದು ಪರ್ಯಾಯವಾಗಿ ಕಂಡು ರೈತರು ನೀರಾ ತೆಗೆಯುವ ಮೂಲಕವಾದರೂ ಲಾಭ ಮಾಡಿಕೊಳ್ಳುವ ದೃಷ್ಠಿಯಿಂದ ನೀರಾ ನೀತಿ ಘೋಷಿಸುವಂತೆ ಒತ್ತಾಯಿಸಿದ್ದರು.ರೈತಸಂಘದ ಪುಟ್ಟಣ್ಣಯ್ಯ ಹಾಗೂ ಕೋಡಿಹಳ್ಳಿ ಚಂದ್ರಶೇಖರ್ ಅವರ ಬಣದ ಬೆಂಬಲದಿಂದ ಇದಕ್ಕಾಗಿ ಹೋರಾಟವೇ ಪ್ರಾರಂಭವಾಗಿತ್ತು. ಈ ಬಗ್ಗೆ ಸಿಹಿನೀರಾ ಪ್ರಸರಣಾ ಸಮಿತಿಯೊಂದನ್ನು ರಚಿಸಿಕೊಂಡು ಸರ್ಕಾರಕ್ಕೆ ಒತ್ತಡಕೂಡ ಹೇರಲಾಗಿತ್ತು.
ಸದ್ಯ ಸರ್ಕಾರ ಬಜೆಟ್ ನಲ್ಲಿ ನೀರಾಭಾಗ್ಯ ಘೋಷಿಸಿದ್ದು ಅಬಕಾರಿ ಕಾಯ್ದೆ ನಿರ್ಬಂಧ ಸಡಿಲಗೊಳಿಸಲು ಮುಂದಾಗಿರುವುದು ಸಹಜವಾಗಿಯೇ ನೀರಾ ಮಾರಾಟಗಾರರಲ್ಲಿ ಸಂತಸ ಮೂಡಿದೆ. ಸದ್ಯ ಈ ಘೋಷಣೆಯಿಂದ ಈಗಾಗಲೇ ಆಸ್ತಿತ್ವಕ್ಕೆ ಬಂದಿರುವ ೫ ತೆಂಗು ಉತ್ಪಾದಕ ಕಂಪನಿಗಳಲ್ಲಿ ಸಹಸ್ರಾರು ಉದ್ಯೋಗಗಳು ಸೃಷ್ಠಿಯಾಗಲಿದ್ದು ಸರ್ಕಾರಕ್ಕೆ ಕೋಟಿಗಟ್ಟಲೇ ಆದಾಯ ಬರಲಿದೆ ಎನ್ನುತ್ತಾರೆ ಸಿಹಿನೀರಾ ಪ್ರಸರಣಾ ಸಮಿತಿಯ ರಾಜ್ಯ ಸಂಚಾಲಕರಾದ ಅಣೇಕಟ್ಟೆ ವಿಶ್ವನಾಥ್.

ತೆಂಗುಬೆಳೆಗಾರರ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ನೆನ್ನೆತಾನೆ ನೀರಾ ಇಳಿಸಲು ಅನುಮತಿ ನೀಡುವುದಾಗಿ ಹೇಳಿದ್ದಾರೆ. ಇದಕ್ಕೆ ಪೂರಕವಾಗಿ ಅಬಕಾರಿ ಕಾಯ್ದೆಗೆ ತಿದ್ದುಪಡಿತರುವುದಾಗಿ ಘೋಷಿಸಿದ್ದಾರೆ. ಇಷ್ಟೆಲ್ಲಾ ಆಗಿದ್ದರೂ ಪಟ್ಟಣದಲ್ಲಿ ನೀರಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಪೋಲೀಸ್ ನವರು ಬಂಧಿಸಿದ್ದಾರೆ.
--------------------------------------------------
ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಂಗುಬೆಳೆಗಾರರ ಕಷ್ಟವನ್ನು ಅರಿತು ನೀರಾ ಇಳಿಸಲು ಹಾಗೂ ಮಾರಾಟಕ್ಕೆ ಅನುವು ಮಾಡಿಕೊಟ್ಟಿರುವುದು ಸಂಕಷ್ಟದಲ್ಲಿದ್ದ ತೆಂಗು ಬೆಳೆಗಾರರಿಗೆ ನೆರವಾದಂತಾಗಿದೆ : ರಾಜ್ಯ ಹಸಿರುಸೇನೆಯ ಕಾರ್ಯದರ್ಶಿ ಕೆಂಕೆರೆಸತೀಶ್ .
----------------------------------------------
ನೀರಾ ಮಾರಾಟ : ರೈತನ ಮೇಲೆ ಮೊಕದ್ದಮೆ
--------------

ರಾಜ್ಯ ಸರ್ಕಾರ ಒಂದೆಡೆ ಬಜೆಟ್ ನಲ್ಲಿ ನೀರಾ ಮಾರಾಟಕ್ಕೆ ಹಸಿರು ನಿಶಾನೆ ತೋರಿಸುತ್ತಿದ್ದರೆ ಮತ್ತೊಂದೆಡೆ ಅಬಕಾರಿ ಇಲಾಖೆಯವರು ನೀರಾ ಮಾರಲು ಮುಂದಾದ ರೈತನ ಮೇಲೆ ಮೊಕದ್ದಮೆ ಹೂಡಿರುವುದು ವಿಪರ್ಯಾಸವಾಗಿದೆ.ಹುಳಿಯಾರು ಸಮೀಪದ ಯರೇಹಳ್ಳಿ ತೋಟವೊಂದರ ಮೇಲೆ ದಾಳಿ ಮಾಡಿ ನೀರಾ ಮತ್ತು ಅದರ ಪರಿಕರಗಳನ್ನು ನಾಶಪಡಿಸಿದ್ದಲ್ಲದೆ ಇಳಿಸಿ ಮಾರಾಟದಲ್ಲಿ ತೊಡಗಿಕೊಂಡಿದ್ದ ಈರಣ್ಣ ಎಂಬಾತನ ಮೇಲೆ ಅಬಕಾರಿ ಇಲಾಖೆಯವರು ಶುಕ್ರವಾರ ಬೆಳಿಗ್ಗೆ ಕ್ರಮಕೈಗೊಂಡಿದ್ದಾರೆ.   

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...