ವಿಷಯಕ್ಕೆ ಹೋಗಿ

ಕೆರೆ ಜಾಗದಲ್ಲಿ ಮತ್ತೆ ತಲೆ ಎತ್ತಿದ ಪೆಟ್ಟಿಗೆ ಅಂಗಡಿಗಳು ತೆರವಿಗೆ ಪೊಲೀಸರಿಂದ ನೋಟೀಸ್

ಒತ್ತುವರಿ ತೆರವಿನಿಂದ ತೆರನಾಗಿದ್ದ ಪಟ್ಟಣದ ಬಸ್ ನಿಲ್ದಾಣದ ಕೆರೆ ಜಾಗದಲ್ಲಿ ಮತ್ತೆ ಅನಧಿಕೃತವಾಗಿ ರಾತ್ರೋರಾತ್ರಿ ಪೆಟ್ಟಿಗೆ ಅಂಗಡಿಗಳು ತಲೆ ಎತ್ತಿದ್ದು ಅವುಗಳನ್ನು ತೆರವುಗೊಳಿಸುವಂತೆ ಪೊಲೀಸ್ ಇಲಾಖೆಯವರು ಭಾನುವಾರ ನೋಟೀಸ್ ನೀಡಿದ್ದಾರೆ.
ಹುಳಿಯಾರು ಪಟ್ಟಣದ ಬಸ್ ನಿಲ್ದಾಣದ ಬಳಿ ಅನಧಿಕೃತವಾಗಿ ತಲೆಎತ್ತಿದ್ದ ಪೆಟ್ಟಿಗೆ ಅಂಗಡಿಗಳು.
ಬಸ್ ನಿಲ್ದಾಣದ ಈ ಕೆರೆಜಾಗವನ್ನು ಒತ್ತುವರಿ ಮಾಡಿಕೊಂಡು ನೂರಾರು ಅಂಗಡಿಗಳನ್ನು ತೆರೆದಿದ್ದರು. ಕೆರೆ ಒತ್ತುವರಿ ಜಾಗ ತೆರವಿನ ಹಿನ್ನಲೆಯಲ್ಲಿ ಹಾಗೂ ಸುಪ್ರಿಂಕೋರ್ಟ್ ಆದೇಶದ ಮೇರೆಗೆ ಇತ್ತೀಚೆಗೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸಮಕ್ಷಮದಲ್ಲಿ ಈ ಅಂಗಡಿಗಳನ್ನು ತೆರವುಗೊಳಿಸಿ ಕೆರೆ ಜಾಗವನ್ನು ವಿಶಾಲಗೊಳಿಸಲಾಗಿತ್ತು. ಅಲ್ಲದೆ ಈ ಜಾಗದಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ನಿರ್ಬಂಧ ಸಹ ಹೇರಲಾಗಿ ಯಾರೂ ಈ ಜಾಗದಲ್ಲಿ ಮತ್ತೆ ಅಂಗಡಿಯಿಡಲು ಮುಂದಾಗಿರಲಿಲ್ಲ.
ಇದೀಗ ಪಟ್ಟಣದ ಬಸ್ ನಿಲ್ದಾಣದ ಅಭಿವೃದ್ಧಿಕಾರ್ಯ ನಡೆಯುತ್ತಿದ್ದು, ಪ್ರಯಾಣಿಕರು ಕೂರಲು ಹಾಗೂ ನಿಲ್ಲುವ ಸ್ಥಳದಲ್ಲಿ ಕೆಲವರು ಹೂ,ಬಾಳೆಹಣ್ಣು, ಟೀ ಅಂಗಡಿ, ಎಲೆ,ಅಡಿಕೆ ಅಂಗಡಿಯಂತಹ ಸಣ್ಣಪುಟ್ಟ ಅಂಗಡಿಗಳನ್ನು ಅನಧಿಕೃತವಾಗಿ ಇಟ್ಟುಕೊಂಡಿದ್ದರು. ಇದೀಗ ಈ ಜಾಗದಲ್ಲಿ ನೆಲಹಾಸಿನ ಕಲ್ಲು ಹಾಕುವ ಕಾರ್ಯ ಪ್ರಗತಿಯಲ್ಲಿದ್ದು ಅಂಗಡಿಯನ್ನು ತೆಗೆಸಿದ್ದಾರೆ. ಈ ಸ್ಥಳದಿಂದ ಅಂಗಡಿಗಳನ್ನು ತೆಗೆದ ಅಂಗಡಿದಾರರು ತಮ್ಮ ಅಂಗಡಿಗಳನ್ನು ಇತ್ತೀಚೆಗೆ ತಾನೇ ತೆರವುಗೊಂಡು ವಿಶಾಲವಾಗಿದ್ದ ಕೆರೆ ಜಾಗಕ್ಕೆ ವರ್ಗಾಯಿಸಿಕೊಂಡು ತಮ್ಮ ವ್ಯಾಪರಕ್ಕೆ ಮುಂದಾಗಿದ್ದಾರೆ.
ಕೆರೆ ಜಾಗದಲ್ಲಿ ಅಂಗಡಿಯನ್ನಿಟ್ಟುಕೊಂಡು ತೆರವಾದ ಬಳಿಕ ಬೇರೆಡೆಗೆ ಹೋಗಿದ್ದ ಅಂಗಡಿದಾರರು ಇದನ್ನು ಕಂಡು ತಮ್ಮನ್ನು ಇಲ್ಲಿಂದ ತೆಗಿಸಿ ಇದೀಗ ಇವರು ಅಂಗಡಿ ಇಟ್ಟುಕೊಂಡಿದ್ದಾರಲ್ಲದೆಂದು ಅವರು ಸಹ ಅಂಗಡಿಯಿಡುವುದಾಗಿ ಬಂದು ಸಣ್ಣಪುಟ್ಟ ಪೆಟ್ಟಿಗಳನ್ನು ಇಟ್ಟಿದ್ದು, ಮತ್ತೆ ಕೆರೆ ಅಂಗಳದಲ್ಲಿ ಗೂಡಂಗಳು ತಲೆ ಎತ್ತುವಂತಾಗಿದೆ.
ಅಂಗಡಿ ತೆರವುಗೊಳಿಸುವಂತೆ ಅಂಗಡಿದಾರರಿಗೆ ಪೊಲೀಸ್ ಇಲಾಖೆಯಿಂದ ನೀಡಿರುವ ನೋಟೀಸ್.
ಇದನ್ನು ಗಮನಿಸಿದ ಪೊಲೀಸರು ಕೆರೆಜಾಗದಲ್ಲಿ ಯಾರ ಅನುಮತಿಯಿಲ್ಲದೆ ಇಟ್ಟಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ ನೋಟೀಸ್ ನೀಡಿರುವುದಲ್ಲದೆ, ತಪ್ಪಿದಲ್ಲಿ ಕಾನೂನುಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಪರವಾನಿಗೆಯಿಲ್ಲದೆ, ಯಾರ ಸಮ್ಮತಿಯೂ ಇಲ್ಲದೆ ಅತಿಕ್ರಮವಾಗಿ ಕೆರೆ ಜಾಗದಲ್ಲಿ ಅಂಗಡಿಗಳನ್ನು ಇಟ್ಟುಕೊಂಡಿರುವುದು ಕಾನೂನುಬಾಹಿರವಾಗಿದ್ದು, ನೋಟೀಸ್ ನಂತೆ ಅಂಗಡಿ ತೆರವುಗೊಳಿಸದೆ ಹೋದಲ್ಲಿ ಸೂಕ್ತ ಕಾನೂನುರೀತ್ಯಾ ಕ್ರಮ ಜರುಗಿಸಿ ನ್ಯಾಯಾಲಯಕ್ಕೆ ವರದಿಸಲ್ಲಿಸಲಾಗುವುದು ಎಂದು ಬಿ.ಪ್ರವೀಣ್ ಕುಮಾರ್ ತಿಳಿಸಿದರು.
--------------

ನಾವು ಮೊದಲಿನಿಂದಲೂ ಇಲ್ಲಿಯೇ ಅಂಗಡಿಗಳನ್ನಿಟ್ಟುಕೊಂಡು ವ್ಯಾಪಾರ ಮಾಡಿ ಬದುಕುತ್ತಿದ್ದೆವು, ಸ್ವಲ್ಪವೂ ಕರುಣೆಯಿಲ್ಲದೆ ನಮ್ಮನ್ನು ಇಲ್ಲಿಂದ ತೆರವುಗೊಳಿಸಿ ಇದೀಗ ಬೇರೆಯವರು ಇದೇ ಜಾಗದಲ್ಲಿ ಅಂಗಡಿಯಿಡಲು ಮುಂದಾಗಿದ್ದಾರೆ ಇದರಿಂದ ನಾವೂ ಸಹ ಅನಿವಾರ್ಯವಾಗಿ ಅಂಗಡಿಗಳನಿಡುವ ಪ್ರಯತ್ನ ಮಾಡಿದ್ದೇವೆ : ಕೋಳಿಶ್ರೀನಿವಾಸ್. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.