ವಿಷಯಕ್ಕೆ ಹೋಗಿ

ಕೆರೆ ಜಾಗದಲ್ಲಿ ಮತ್ತೆ ತಲೆ ಎತ್ತಿದ ಪೆಟ್ಟಿಗೆ ಅಂಗಡಿಗಳು ತೆರವಿಗೆ ಪೊಲೀಸರಿಂದ ನೋಟೀಸ್

ಒತ್ತುವರಿ ತೆರವಿನಿಂದ ತೆರನಾಗಿದ್ದ ಪಟ್ಟಣದ ಬಸ್ ನಿಲ್ದಾಣದ ಕೆರೆ ಜಾಗದಲ್ಲಿ ಮತ್ತೆ ಅನಧಿಕೃತವಾಗಿ ರಾತ್ರೋರಾತ್ರಿ ಪೆಟ್ಟಿಗೆ ಅಂಗಡಿಗಳು ತಲೆ ಎತ್ತಿದ್ದು ಅವುಗಳನ್ನು ತೆರವುಗೊಳಿಸುವಂತೆ ಪೊಲೀಸ್ ಇಲಾಖೆಯವರು ಭಾನುವಾರ ನೋಟೀಸ್ ನೀಡಿದ್ದಾರೆ.
ಹುಳಿಯಾರು ಪಟ್ಟಣದ ಬಸ್ ನಿಲ್ದಾಣದ ಬಳಿ ಅನಧಿಕೃತವಾಗಿ ತಲೆಎತ್ತಿದ್ದ ಪೆಟ್ಟಿಗೆ ಅಂಗಡಿಗಳು.
ಬಸ್ ನಿಲ್ದಾಣದ ಈ ಕೆರೆಜಾಗವನ್ನು ಒತ್ತುವರಿ ಮಾಡಿಕೊಂಡು ನೂರಾರು ಅಂಗಡಿಗಳನ್ನು ತೆರೆದಿದ್ದರು. ಕೆರೆ ಒತ್ತುವರಿ ಜಾಗ ತೆರವಿನ ಹಿನ್ನಲೆಯಲ್ಲಿ ಹಾಗೂ ಸುಪ್ರಿಂಕೋರ್ಟ್ ಆದೇಶದ ಮೇರೆಗೆ ಇತ್ತೀಚೆಗೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸಮಕ್ಷಮದಲ್ಲಿ ಈ ಅಂಗಡಿಗಳನ್ನು ತೆರವುಗೊಳಿಸಿ ಕೆರೆ ಜಾಗವನ್ನು ವಿಶಾಲಗೊಳಿಸಲಾಗಿತ್ತು. ಅಲ್ಲದೆ ಈ ಜಾಗದಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯದಂತೆ ನಿರ್ಬಂಧ ಸಹ ಹೇರಲಾಗಿ ಯಾರೂ ಈ ಜಾಗದಲ್ಲಿ ಮತ್ತೆ ಅಂಗಡಿಯಿಡಲು ಮುಂದಾಗಿರಲಿಲ್ಲ.
ಇದೀಗ ಪಟ್ಟಣದ ಬಸ್ ನಿಲ್ದಾಣದ ಅಭಿವೃದ್ಧಿಕಾರ್ಯ ನಡೆಯುತ್ತಿದ್ದು, ಪ್ರಯಾಣಿಕರು ಕೂರಲು ಹಾಗೂ ನಿಲ್ಲುವ ಸ್ಥಳದಲ್ಲಿ ಕೆಲವರು ಹೂ,ಬಾಳೆಹಣ್ಣು, ಟೀ ಅಂಗಡಿ, ಎಲೆ,ಅಡಿಕೆ ಅಂಗಡಿಯಂತಹ ಸಣ್ಣಪುಟ್ಟ ಅಂಗಡಿಗಳನ್ನು ಅನಧಿಕೃತವಾಗಿ ಇಟ್ಟುಕೊಂಡಿದ್ದರು. ಇದೀಗ ಈ ಜಾಗದಲ್ಲಿ ನೆಲಹಾಸಿನ ಕಲ್ಲು ಹಾಕುವ ಕಾರ್ಯ ಪ್ರಗತಿಯಲ್ಲಿದ್ದು ಅಂಗಡಿಯನ್ನು ತೆಗೆಸಿದ್ದಾರೆ. ಈ ಸ್ಥಳದಿಂದ ಅಂಗಡಿಗಳನ್ನು ತೆಗೆದ ಅಂಗಡಿದಾರರು ತಮ್ಮ ಅಂಗಡಿಗಳನ್ನು ಇತ್ತೀಚೆಗೆ ತಾನೇ ತೆರವುಗೊಂಡು ವಿಶಾಲವಾಗಿದ್ದ ಕೆರೆ ಜಾಗಕ್ಕೆ ವರ್ಗಾಯಿಸಿಕೊಂಡು ತಮ್ಮ ವ್ಯಾಪರಕ್ಕೆ ಮುಂದಾಗಿದ್ದಾರೆ.
ಕೆರೆ ಜಾಗದಲ್ಲಿ ಅಂಗಡಿಯನ್ನಿಟ್ಟುಕೊಂಡು ತೆರವಾದ ಬಳಿಕ ಬೇರೆಡೆಗೆ ಹೋಗಿದ್ದ ಅಂಗಡಿದಾರರು ಇದನ್ನು ಕಂಡು ತಮ್ಮನ್ನು ಇಲ್ಲಿಂದ ತೆಗಿಸಿ ಇದೀಗ ಇವರು ಅಂಗಡಿ ಇಟ್ಟುಕೊಂಡಿದ್ದಾರಲ್ಲದೆಂದು ಅವರು ಸಹ ಅಂಗಡಿಯಿಡುವುದಾಗಿ ಬಂದು ಸಣ್ಣಪುಟ್ಟ ಪೆಟ್ಟಿಗಳನ್ನು ಇಟ್ಟಿದ್ದು, ಮತ್ತೆ ಕೆರೆ ಅಂಗಳದಲ್ಲಿ ಗೂಡಂಗಳು ತಲೆ ಎತ್ತುವಂತಾಗಿದೆ.
ಅಂಗಡಿ ತೆರವುಗೊಳಿಸುವಂತೆ ಅಂಗಡಿದಾರರಿಗೆ ಪೊಲೀಸ್ ಇಲಾಖೆಯಿಂದ ನೀಡಿರುವ ನೋಟೀಸ್.
ಇದನ್ನು ಗಮನಿಸಿದ ಪೊಲೀಸರು ಕೆರೆಜಾಗದಲ್ಲಿ ಯಾರ ಅನುಮತಿಯಿಲ್ಲದೆ ಇಟ್ಟಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ ನೋಟೀಸ್ ನೀಡಿರುವುದಲ್ಲದೆ, ತಪ್ಪಿದಲ್ಲಿ ಕಾನೂನುಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಪರವಾನಿಗೆಯಿಲ್ಲದೆ, ಯಾರ ಸಮ್ಮತಿಯೂ ಇಲ್ಲದೆ ಅತಿಕ್ರಮವಾಗಿ ಕೆರೆ ಜಾಗದಲ್ಲಿ ಅಂಗಡಿಗಳನ್ನು ಇಟ್ಟುಕೊಂಡಿರುವುದು ಕಾನೂನುಬಾಹಿರವಾಗಿದ್ದು, ನೋಟೀಸ್ ನಂತೆ ಅಂಗಡಿ ತೆರವುಗೊಳಿಸದೆ ಹೋದಲ್ಲಿ ಸೂಕ್ತ ಕಾನೂನುರೀತ್ಯಾ ಕ್ರಮ ಜರುಗಿಸಿ ನ್ಯಾಯಾಲಯಕ್ಕೆ ವರದಿಸಲ್ಲಿಸಲಾಗುವುದು ಎಂದು ಬಿ.ಪ್ರವೀಣ್ ಕುಮಾರ್ ತಿಳಿಸಿದರು.
--------------

ನಾವು ಮೊದಲಿನಿಂದಲೂ ಇಲ್ಲಿಯೇ ಅಂಗಡಿಗಳನ್ನಿಟ್ಟುಕೊಂಡು ವ್ಯಾಪಾರ ಮಾಡಿ ಬದುಕುತ್ತಿದ್ದೆವು, ಸ್ವಲ್ಪವೂ ಕರುಣೆಯಿಲ್ಲದೆ ನಮ್ಮನ್ನು ಇಲ್ಲಿಂದ ತೆರವುಗೊಳಿಸಿ ಇದೀಗ ಬೇರೆಯವರು ಇದೇ ಜಾಗದಲ್ಲಿ ಅಂಗಡಿಯಿಡಲು ಮುಂದಾಗಿದ್ದಾರೆ ಇದರಿಂದ ನಾವೂ ಸಹ ಅನಿವಾರ್ಯವಾಗಿ ಅಂಗಡಿಗಳನಿಡುವ ಪ್ರಯತ್ನ ಮಾಡಿದ್ದೇವೆ : ಕೋಳಿಶ್ರೀನಿವಾಸ್. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...