ವಿಷಯಕ್ಕೆ ಹೋಗಿ

ಉತ್ಸಾಹದಿಂದ ಪರೀಕ್ಷೆ ಬರೆದ ಪಿಯು ವಿದ್ಯಾರ್ಥಿಗಳು

೨೦೧೪-೧೫ ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಗುರುವಾರದಿಂದ ಪ್ರಾರಂಭವಾಗಿದ್ದು ಪರೀಕ್ಷೆ ಬರೆಯಲು ಆಗಮಿಸಿದ್ದ ಪರೀಕ್ಷಾರ್ಥಿಗಳಲ್ಲಿ ಭಯಮಿಶ್ರಿತ ಉತ್ಸಾಹ ಕಂಡುಬಂತು.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದ ಪರಿಕ್ಷಾರ್ಥಿಗಳು.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ನಡೆದ ವಿಜ್ಞಾನ ವಿಭಾಗದ ರಸಾಯನಶಾಸ್ತ್ರ ಹಾಗೂ ವಾಣಿಜ್ಯ ವಿಭಾಗದ ಬ್ಯುಸಿನೆಸ್ ಸ್ಟಡೀಸ್ (ವ್ಯವಹಾರ ಅಧ್ಯಯನ) ವಿಷಯದ ಪರೀಕ್ಷೆಯನ್ನು ಸುಮಾರು ೧೮೦ ವಿದ್ಯಾರ್ಥಿಗಳು ಬರೆದರು.
ವರ್ಷವಿಡಿ ಕಷ್ಟಪಟ್ಟು ಓದಿದ ಪಾಠವನ್ನು ಕೇವಲ ಮೂರು ಗಂಟೆಗಳಲ್ಲಿ ಉತ್ತರಿಸಬೇಕಾದ್ದರಿಂದ ಹೇಗೋಏನೋ ಎಂಬ ಆತಂಕ ಕೆಲವರಲ್ಲಿ ಮನೆ ಮಾಡಿತ್ತು.ಬೆಳಗ್ಗೆ 9 ರಿಂದ ಮಧ್ಯಾಹ್ನ 12.15 ರವರೆಗೆ ಪರೀಕ್ಷೆಯಿದ್ದು ಮೊದಲ ದಿನವಾಗಿದ್ದರಿಂದ ವಿದ್ಯಾರ್ಥಿಗಳು ಪ್ರಾರಂಭಕ್ಕೂ ಒಂದುಗಂಟೆ ಮುಂಚಿತವಾಗಿಯೇ ಪರೀಕ್ಷಾಕೇಂದ್ರದಲ್ಲಿಗೆ ಬಂದಿದ್ದರು. ಕೆಲ ವಿದ್ಯಾರ್ಥಿಗಳನ್ನು ಪೋಷಕರೇ ಪರೀಕ್ಷಾಕೇಂದ್ರದಲ್ಲಿಗೆ ಕರೆದುಕೊಂಡು ಬಂದಿದ್ದು ಉತ್ತಮವಾಗಿ ಪರೀಕ್ಷೆ ಬರೆಯಲು ಶುಭ ಹಾರೈಸುತ್ತಿದ್ದಿದ್ದು ಕಂಡುಬಂತು.
ತಾಲ್ಲೂಕಿನಲ್ಲಿ ಹುಳಿಯಾರು ಹಾಗೂ ಚಿಕ್ಕನಾಯಕನಹಳ್ಳಿ ಸೇರಿ ಒಟ್ಟು ಎರಡು ಪರೀಕ್ಷಾಕೇಂದ್ರಗಳಿದ್ದು ಹುಳಿಯಾರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರವ್ಯಾಪ್ತಿಯಲ್ಲಿ ಬಾಲಕಿಯರ ಸ್ವಂತಂತ್ರ ಪದವಿ ಪೂರ್ವ ಕಾಲೇಜು , ಕನಕದಾಸ ಕಾಲೇಜು ಸೇರಿದಂತೆ ಬೋರನಕಣಿವೆ, ಎಣ್ಣೆಗೆರೆ , ಮತ್ತಿಘಟ್ಟ, ಬೆಳುಗುಲಿ ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದು ಉತ್ಸಾಹದಿಂದ ಹೊರಬರುತ್ತಿರುವ ವಿದ್ಯಾರ್ಥಿಗಳು.
ಪರೀಕ್ಷಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಬರೆದಿದ್ದು ಯಾವುದೇ ರೀತಿಯ ಅಹಿತರ ಘಟನೆಗಳು ನಡೆಯದಂತೆ ಭದ್ರತೆಗಾಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು. ಮಾ.27ರವರೆಗೆ ನಡೆಯಲಿದ್ದು ಪ್ರತಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್‌ವರೆಗೆ ನಿಷೇಧಾಜ್ಞೆಜಾರಿಯಲ್ಲಿರುತ್ತದೆ ಪ್ರಶ್ನೆ ಪತ್ರಿಕೆಗಳ ಪ್ಯಾಕ್ ಗಳನ್ನು ವಿದ್ಯಾರ್ಥಿಗಳ ಹಾಗೂ ಕೊಠಡಿ ಶಿಕ್ಷಕರ ಸಮ್ಮುಖದಲ್ಲಿ ತೆರೆದು ವಿತರಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೋಠಡಿಯನ್ನೂ ಸೂಕ್ಷವಾಗಿ ಗಮನಿಸುತ್ತಿದ್ದು, ಮುಂದೆ ನಡೆಯಲಿರುವ ಎಲ್ಲಾ ಪರೀಕ್ಷೆಯಲ್ಲೂ ಸಹ ಇದೇ ರೀತಿಯ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಕೇಂದ್ರದ ಪರೀಕ್ಷಾಮುಖ್ಯಾಧಿಕಾರಿ ಸಿ.ಶಿವರುದ್ರಯ್ಯ ತಿಳಿಸಿದರು.
----------------------
ಈ ಬಾರಿಯ ಬ್ಯುಸಿನೆಸ್ ಮ್ಯಾನೇಜ್ ಮೆಂಟ್ ಪ್ರಶ್ನೆ ಪತ್ರಿಕೆ ಕಳೆದ ಬಾರಿಗಿಂತ ಸುಲಭವಾಗಿದ್ದು, ಪ್ರಶ್ನೆಗಳು ಸರಳವಾಗಿದ್ದವು, ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ, ೮೦ಕ್ಕೂ ಅಧಿಕ ಅಂಕ ಬರುವ ನೀರೀಕ್ಷೆಯಿದೆ : ಕಿರಣ್, ಹುಳಿಯಾರು-ಕೆಂಕೆರೆ ಪಿಯುಕಾಲೇಜಿನ ಕಾಮರ್ಸ್ ವಿದ್ಯಾರ್ಥಿ.









----------------------

ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆಯಲ್ಲಿ ಕೆಲ ಪ್ರಶ್ನೆಗಳು ಮೊದಲು ಸರಿಯಾಗಿ ಅರ್ಥವಾಗಲಿಲ್ಲ ಓದಿದ ಬಳಿಕ ಎಲ್ಲವೂ ಸುಲಭದ ಪ್ರಶ್ನೆಗಳೇ ಆಗಿದ್ದವು, ಇನ್ನೂ ಸ್ವಲ್ಪ ಸಮಯ ಸಿಕ್ಕಿದರೆ ಚೆನ್ನಾಗಿ ಉತ್ತರ ಬರೆಯುತ್ತಿದೆ, ಈಗಲೂ ಉತ್ತಮ ಅಂಕ ಬಂದೆಬರುತ್ತೆ : ಮೇಘ , ಹುಳಿಯಾರು-ಬಾಲಕಿಯರ ಪಿಯು ಕಾಲೇಜಿನ ಸೈನ್ಸ್ ವಿದ್ಯಾರ್ಥಿನಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.