ವಿಷಯಕ್ಕೆ ಹೋಗಿ

ಶೀಘ್ರ ವೈದ್ಯ, ಸಿಬ್ಬಂದಿಯ ನೇಮಕ ಭರವಸೆ ಕೊನೆಗೊಂಡ ಪ್ರತಿಭಟನೆ

ಹುಳಿಯಾರು ಹೋಬಳಿ ದಸೂಡಿ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ಹಾಗೂ ಇನ್ನಿತರ ಖಾಲಿ ಹುದ್ದೆಗಳ ನೇಮಕಕ್ಕೆ ಒತ್ತಾಯಿಸಿ ಸೋಮವಾರದಂದು ಆರಂಭಗೊಂಡಿದ್ದ ಬೃಹತ್ ಪ್ರತಿಭಟನೆಯು ಮಾರ್ಚ್ ೧೦ ರೊಳಗೆ ಸಮಸ್ಯೆ ಈಡೇರಿಸುವ ತಾಲ್ಲೂಕು ವೈದ್ಯಾಧಿಕಾರಿಗಳ ಭರವಸೆ ಮೇರೆಗೆ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.
ದಸೂಡಿ ಆಸ್ಪತ್ರೆ ಮುಂದೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ವಿವಿಧ ಸಂಘ ಸಂಸ್ಥೆಯವರು ಪ್ರತಿಭಟನೆ ನಡೆಸಿದರು.


ದಸೂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೪೨ ಗ್ರಾಮಗಳು ಒಳಪಟ್ಟಿದ್ದು ಕಳೆದ ಒಂದು ವರ್ಷದಿಂದ ವೈದ್ಯಾಧಿಕಾರಿ ಹುದ್ದೆ ಖಾಲಿ ಇತ್ತು. ಅಲ್ಲದೆ ಔಷಧಿ ವಿತರಕ, ಕಿರಿಯ ಪುರುಷ ಆರೋಗ್ಯ ಸಹಾಯಕ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆ, ಲ್ಯಾಬ್ ಟೆಕ್ನಿಷಿಯನ್ , ಮಹಿಳಾ ಆರೋಗ್ಯ ಮೇಲ್ವಿಚಾರಕಿ ಹುದ್ದೆಗಳು ಸಹ ಖಾಲಿಯಿದ್ದು ಸಿಬ್ಬಂದಿ ನಿಯೋಜಿಸುವಂತೆ ಹಲವಾರು ಬಾರಿ ಮನವಿ ಮಾಡಿದಾಗ್ಯೂ ಸಮಸ್ಯೆ ಬಗೆಹರಿಯದ ಹಿನ್ನಲೆಯಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿಯ ಪ್ರತಿಭಟನೆಗೆ ಕರೆಕೊಡಲಾಗಿತ್ತು.
ಧರಣಿನಿರತರೊಂದಿಗೆ ಚರ್ಚಿಸುತ್ತಿರುವ ತಾಲ್ಲೂಕ್ ವೈದ್ಯಾಧಿಕಾರಿ ಶಿವಕುಮಾರ್.
ದಸೂಡಿ ಗ್ರಾ.ಪಂ ಸದಸ್ಯ ಡಿ.ಬಿ.ರವಿಕುಮಾರ್ ನೇತೃತ್ವದಲ್ಲಿ ರೈತಸಂಘ , ಸ್ತ್ರೀಶಕ್ತಿ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಬೆಂಬಲದೊಂದಿಗೆ ಸೋಮವಾರ ಬೆಳಿಗ್ಗೆ ಧರಣಿ ಆರಂಭಗೊಂಡಿತು.
ಆಸ್ಪತ್ರೆ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ರವಿಕುಮಾರ್ , ಸುಸಜ್ಜಿತ ಸರ್ಕಾರಿ ಆಸ್ಪತ್ರೆಯಿದ್ದರೂ ವೈದ್ಯರು ಹಾಗೂ ಸಿಬ್ಬಂದಿಯವರಿಲ್ಲದೆ ಜನ ಪರದಾಡುತ್ತಿದ್ದು ಶೀಘ್ರವೇ ವೈದ್ಯರು ಹಾಗೂ ಸಿಬ್ಬಂದಿಯನ್ನು ನೇಮಿಸುವಂತೆ ಒತ್ತಾಯಿಸಿದರು.
ಗಡಿ ಗ್ರಾಮವಾದ ದಸೂಡಿಯ ಸಾರ್ವಜನಿಕರು ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದು, ಸುಮಾರು ೮೦ ಲಕ್ಷ ವೆಚ್ಚದಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಲಾಗಿದ್ದರೂ ಸಹ ಖಾಯಂ ವೈದ್ಯರಾಗಲಿ, ಸಿಬ್ಬಂದಿಯವರಾಗಲಿ ಇಲ್ಲದಿದ್ದು ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಇಲಾಖೆ ಅಧಿಕಾರಿಗಳು ಮೌನವಹಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಧರಣಿಯಲ್ಲಿ ಪಾಲ್ಗೊಂಡಿದ್ದ ರೈತಸಂಘದ ಅಧ್ಯಕ್ಷ ನಾಗರಾಜಣ್ಣ ಮಾತನಾಡಿ, ದಸೂಡಿ ಆಸ್ಪತ್ರೆ ೨೪*೭ ಆಸ್ಪತ್ರೆಯಾಗಿದ್ದು ದಿನದ ೨೪ ಗಂಟೆಯೂ ಕಾರ್ಯ ನಿರ್ವಹಿಸಬೇಕಿದ್ದರೂ ಸಹ ಸಿಬ್ಬಂದಿ ಕೊರತೆಯಿಂದ ಸಮರ್ಪಕ ಸೇವೆ ದೊರೆಯುತ್ತಿಲ್ಲ. ಔಷಧಿ ಕೊರತೆ ಸೇರಿದಂತೆ ತುರ್ತು ಪರಿಸ್ಥಿತಿಗೆ ೧೦೮ ಅಂಬ್ಯುಲೆನ್ಸ್ ಸೇವೆ ದೊರೆಯುವುದೂ ದುಸ್ಥರವಾಗಿದ್ದು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಪಟ್ಟು ಹಿಡಿದರು.
ವಿಷಯ ತಿಳಿದ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಶಶಿಕಲಾ ಅವರು ಧರಣಿ ನಿರತರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಲ್ಲದೆ ತಾಲ್ಲೂಕು ವೈದ್ಯಾಧಿಕಾರಿ ಶಿವಕುಮಾರ್ ಹಾಗೂ ಕ್ಷೇತ್ರ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಮಧು ಅವರನ್ನು ಸ್ಥಳಕ್ಕೆ ಕಳುಹಿಸಿ ಸಮಸ್ಯೆ ಬಗ್ಗೆ ವಿವರ ಪಡೆದರು. ಡಿಎಚ್ ಓ ಅವರೊಂದಿಗೆ ಚರ್ಚಿಸಿದ ಶಿವಕುಮಾರ್ ಇನ್ನು ೧೦ ದಿನದ ಒಳಗೆ ಖಾಯಂ ವೈದ್ಯರು ಸೇರಿದಂತೆ ಸಿಬ್ಬಂದಿ ಸಮಸ್ಯೆ ಔಷಧಿ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದರು ಹಾಗೂ ಗುರುವಾರದಂದು ಆರೋಗ್ಯ ರಕ್ಷಣಾ ಸಮಿತಿಯ ಸಭೆ ಕರೆದು ಕುಂದುಕೊರತೆಗಳನ್ನು ವಿಚಾರಿಸಿ ಬಗೆಹರಿಸುವುದಾಗಿ ಆಶ್ವಾಸನೆಯಿತ್ತರು.

ಅವರ ಹೇಳಿಕೆಯಿಂದ ಸಮಾಧಾನಗೊಂಡ ಪ್ರತಿಭಟನಾಕಾರರು ಒಂದು ವಾರದ ಗಡುವು ನೀಡಿದ್ದು ಅಷ್ಟರೊಳಗೆ ಸಮಸ್ಯೆ ಬಗೆ ಹರಿಯದಿದ್ದಲ್ಲಿ ಪುನಃ ಹೋರಾಟದ ಹಾದಿ ಹಿಡಿಯುವ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಗ್ರಾ.ಪಂ.ಅಧ್ಯಕ್ಷ ಶಿವಣ್ಣ, ಪಿ.ಟಿ.ಅಶ್ವತನಾರಾಯಣ ಶೆಟ್ಟಿ, ಸುಂದರಮೂರ್ತಿ,ಆನಂದ್, ಹನುಮಯ್ಯ,ಲಕ್ಷ್ಮಕ್ಕ, ಲಲಿತಮ್ಮ ಸೇರಿದಂತೆ ವಿವಿಧ ಸಂಘ ಸಂಸ್ಥೆಯವರು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...