ವಿಷಯಕ್ಕೆ ಹೋಗಿ

ಹಂದಿ ಹಿಡಿಯುವ ಕಾರ್ಯಾಚರಣೆಗೆ ಪ್ರತಿರೋಧ ಪಿಡಿಓ ವಿರುದ್ದ ಆಕ್ರೋಶ

ಎಚ್೧ಎನ್೧ ಸಮಸ್ಯೆಗೆ ಎಚ್ಚೆತ್ತ ಸ್ಥಳೀಯ ಪಂಚಾಯ್ತಿ ಹಂದಿ ಹಿಡಿಯುವ ಕಾರ್ಯಾಚರಣೆಗೆ ಮುಂದಾಗಿದ್ದ ವೇಳೆ ಹಂದಿ ಸಾಕಣೆದಾರರ ತೀವ್ರ ಪ್ರತಿರೋಧ ಹಾಗೂ ಪಿಡಿಓ, ಅಧ್ಯಕ್ಷರ ವಿರುದ್ದ ನಡೆದ ಮಾತಿನ ಘರ್ಷಣೆಯಿಂದಾಗಿ ಕಾರ್ಯಾಚರಣೆಯನ್ನು ಅರ್ಧಕ್ಕೆ ಸ್ಥಗಿತ ಗೊಳಿಸಿದ ಘಟನೆ ಬುಧವಾರ ಬೆಳಿಗ್ಗೆ ಪಟ್ಟಣದಲ್ಲಿ ನಡೆಯಿತು.
ಲಾರಿ ಅಡ್ಡಗಟ್ಟಿರುವ ಹಂದಿ ಸಾಕಣೆದಾರರು.

ಪೊಲೀಸ್ ಬಂದೋಬಸ್ತ್ ನಲ್ಲಿ ಹಂದಿ ಹಿಡಿದಿರುವ ಲಾರಿ.

ಅನೈರ್ಮಲ್ಯ ಸಮಸ್ಯೆ ಹಾಗೂ ಎಲ್ಲೆಡೆ ಹಬ್ಬಿದ ಎಚ್೧ ಎನ್೧ ರೋಗಕ್ಕೆ ಕಾರಣವಾಗಿದ್ದ ಹಂದಿಗಳನ್ನು ಹಿಡಿಯುವಂತೆ ಪಂಚಾಯ್ತಿಗೆ ಸಾರ್ವಜನಿಕರು ದೂರುನೀಡಿದ್ದ ಹಿನ್ನಲೆಯಲ್ಲಿ
ಹಂದಿ ಬಗ್ಗೆ ಎಚ್ಚರವಹಿಸುವಂತೆ ಹಂದಿ ಸಾಕಣೆದಾರರಿಗೆ ಹತ್ತು ದಿನಗಳ ಮುಂಚಿತವಾಗಿಯೇ ನೋಟೀಸ್ ನೀಡಿದ್ದಲ್ಲದೆ ಗ್ರಾಮದಲ್ಲಿ ಟಾಂ ಹಾಕಿ ಸಾರುವ ಮೂಲಕ ಹಂದಿ ಕಾರ್ಯಾಚರಣೆ ಬಗ್ಗೆ ಮಾಲೀಕರಿಗೆ ಸೂಚನೆ ನೀಡಲಾಗಿತ್ತು.ಅಲ್ಲದೆ ಪಿಡಿಓ ಅವರೇ ಖುದ್ದಾಗಿ ಹಂದಿ ಮಾಲೀಕರ ಮನೆಗೆ ತೆರಳಿ ಹಂದಿಯನ್ನು ಪಟ್ಟಣದೊಳಗೆ ಬಿಡದಂತೆ ಹಾಗೂ ೩ ಕಿಮೀ ದೂರ ಸಾಗಿಸುವಂತೆ ತಿಳಿಸಿದ್ದರು ಸಹ ಎಚ್ಚೆತ್ತುಕೊಳ್ಳದ ಹಂದಿ ಮಾಲೀಕರ ಕ್ರಮದಿಂದ ಹುಳಿಯಾರು ಪಟ್ಟಣದಲ್ಲಿ ಹಂದಿ ಹಿಡಿಸುವ ಕಾರ್ಯಾಚರಣೆಗೆ ಬುಧವಾರ ಮುಂದಾಗಲಾಗಿತ್ತು.
ರಾತ್ರಿಯೇ ವಾಹನ ಸಮೇತ ಬಂದಿದ್ದ ಹಂದಿ ಹಿಡಿಯುವವರು ಬೆಳ್ಳಂಬೆಳಗ್ಗೆ ಪಂಚಾಯ್ತಿ ಸಿಬ್ಬಂದಿ ಜೊತೆ ಹಂದಿ ಹಿಡಿಯಲು ಮುಂದಾಗಿ ಸುಮಾರು ೨೫ ರಿಂದ ೩೦ ಹಂದಿ ಹಿಡಿದಿದ್ದೆ ಪ್ರತಿರೋಧಕ್ಕೆ ಕಾರಣವಾಯಿತು. ಪಿಡಿಓ ಅಡವೀಶ್ ಕುಮಾರ್ ಹಾಗೂ ಅಧ್ಯಕ್ಷೆ ಕಾಳಮ್ಮ ಅವರ ಮೇಲೆ ಗರಂಆಗಿ ಮಾತಿನಚಕಮುಕಿಗೆ ಮುಂದಾದರು.
ರಾತ್ರಿಯೇ ಕಾರ್ಯಾಚರಣೆ ನಡೆಸಿ ಹಂದಿ ಹಿಡಿಸಿದ್ದು ಸರಿಯಲ್ಲ, ಯುಗಾದಿ ಹಬ್ಬದವರೆಗೂ ಸಮಯ ನೀಡಲೇ ಬೇಕಲ್ಲದೆ ಈ ಕೂಡಲೇ ಹಿಡಿದಿರುವ ಹಂದಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ಒತ್ತಾಯಿಸಿದರು. ಪೊಲೀಸ್ ಠಾಣೆಯ ಮುಂದೆಯೇ ಗಂಟೆಗಳಷ್ಟು ಕಾಲ ಏರಿದ ಧ್ವನಿಯಲ್ಲಿ ಗದ್ದಲ ನಡೆಯಿತು.ಹಂದಿ ಹಿಡಿಯುವ ಕಾರ್ಯಾಚರಣೆ ಬಗ್ಗೆ ಪರ ಹಾಗೂ ವಿರೋಧ ವ್ಯಕ್ತವಾಯಿತಲ್ಲದೆ, ಗ್ರಾ.ಪಂ.ಸದಸ್ಯರಾದ ಜಹೀರ್ ಸಾಬ್, ಪುಟ್ಟಣ್ಣ,ಶಿವಣ್ಣ ಅವರು ಪಿಡಿಓ ಅವರಿಗೆ ತಮ್ಮ ಸಂಪೂರ್ಣ ಬೆಂಬಲ ಸೂಚಿಸಿ ಹಂದಿ ಹಿಡಿಯುವುದರ ವಿರುದ್ದ ಯಾವುದೇ ಬೆದರಿಕೆ ಬಂದರೂ ಹಿಂಜರಿಯದಂತೆ ಬೆಂಬಲ ಸೂಚಿಸಿದರು.
ಈ ಮಧ್ಯೆ ಹಂದಿ ತುಂಬಿಕೊಂಡ ಲಾರಿ ನಂದಿಹಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದನ್ನು ಅರಿತ ಹಂದಿ ಮಾಲೀಕರು ಲಾರಿಯನ್ನು ಹಿಂಬಾಲಿಸಿ ಹೋಗಿ ಅಡ್ಡಗಟ್ಟಿದರಲ್ಲದೆ ಹಿಡಿದಿರುವ ಹಂದಿಗಳನ್ನು ವಾಪಸ್ಸ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಲಾರಿ ಅಡ್ಡಗಟ್ಟಿದ್ದ ಸ್ಥಳಕ್ಕಾಗಮಿಸಿದ ಪಿಎಸೈ ಪ್ರವೀಣ್ ಕುಮಾರ್ ಹಂದಿ ಕಾರ್ಯಾಚರಣೆಗೆ ಅಡ್ಡಿಪಡಿಸುವುದು ಕಾನೂನು ಉಲ್ಲಂಘನೆಯಾಗುವುದೆಂದು ಎಚ್ಚರಿಸಿದರಲ್ಲದೆ, ಹಂದಿ ತುಂಬಿದ್ದ ಲಾರಿಯನ್ನು ಗಡಿಯಾಚೆ ಹೋಗುವಂತೆ ಸೂಚಿಸಿದರು. ಪೊಲೀಸ್ ಮಧ್ಯಪ್ರವೇಶದಿಂದ ಸದ್ಯಕ್ಕೆ ಪರಿಸ್ಥಿತಿ ತಿಳಿಯಾಗಿದ್ದು ಪಂಚಾಯ್ತಿಯವರ ಕಿತ್ತಾಟದಿಂದ ಹಂದಿ ಹಿಡಿಯುವ ಕಾರ್ಯಾಚರಣೆ ಸ್ಥಗಿತಗೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
-----------

ಹಂದಿ ಹಿಡಿಯಲು ಮುಂದಾಗಿರುವ ಪಂಚಾಯ್ತಿಯ ಕ್ರಮ ಶ್ಲಾಘನೀಯ. ಸದಸ್ಯರ ಸಭೆ ನಡೆಸದೆ ಅವರ ಗಮನಕ್ಕೂ ತಾರದೆ ದಿಢೀರ್ ಕಾರ್ಯಾಚರಣೆ ನಡೆಸಿರುವ ಬಗ್ಗೆ ಸ್ಪಷ್ಟನೆ ನೀಡಬೇಕು. ಹುಳಿಯಾರೆಲ್ಲ ಗಬ್ಬುನಾರುತ್ತಿದ್ದು ಪಂಚಾಯ್ತಿ ಮುಂದೆ ಪ್ರತಿಭಟನೆ ನಡೆಸಿದ್ದರೂ ನಾಪತ್ತೆಯಾಗಿದ್ದ ಪಿಡಿಓ ಇದೀಗ ಹಂದಿ ಹಿಡಿಯುವವರ ಜೊತೆ ಶಾಮೀಲಾಗಿ ಹಂದಿ ಹಿಡಿಯಲು ಬೆಳಿಗ್ಗೆ ಆಗಮಿಸಿದ್ದಾರೆ. ಇದೇ ರೀತಿ ಹುಳಿಯಾರಿನ ಚರಂಡಿ ಹಾಗೂ ಸ್ವಚ್ಚತೆ ಕಡೆಗೂ ಗಮನಕೊಡಬೇಕು ಹಾಗೂ ದನ ಕಡಿಯುವ ಕಸಾಯಿಖಾನೆ ಮೇಲೂ ಕ್ರಮ ಕೈಗೊಳ್ಳಬೇಕು : ಗ್ರಾ.ಪಂ.ಸದಸ್ಯ ರಾಘವೇಂದ್ರ.
ಸಾರ್ವಜನಿಕರ ಒತ್ತಯದ ಮೇರೆಗೆ ತಾವು ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿದ್ದು ಹಂದಿ ಮಾಲೀಕರಿಗೆ ಹಂದಿಗಳನ್ನು ಹಿಡಿದು ಬೇರೆಡೆ ಸಾಗಿಸುವಂತೆ ಸ್ಪಷ್ಟ ಸೂಚನೆ ನೀಡಿದ್ದಾಗ್ಯೂ , ನಿರ್ಲಕ್ಷ ವಹಿಸಿದ ಮಾಲೀಕರ ಮೇಲೆ ಕ್ರಮಕೈಗೊಳ್ಳಲು ಮುಂದಾಗಿರುವೆ. ಹಂದಿ ಹಿಡಿಯುವುದು ತಪ್ಪೆಂದು ತಿಳಿಸಿದಲ್ಲಿ ಕಾರ್ಯಾಚರಣೆ ಕೈಬಿಡುವೆ : ಪಿಡಿಓ ಅಡವೀಶ್ ಕುಮಾರ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...