ವಿಷಯಕ್ಕೆ ಹೋಗಿ

ಹಂದಿ ಹಿಡಿಯುವ ಕಾರ್ಯಾಚರಣೆಗೆ ಪ್ರತಿರೋಧ ಪಿಡಿಓ ವಿರುದ್ದ ಆಕ್ರೋಶ

ಎಚ್೧ಎನ್೧ ಸಮಸ್ಯೆಗೆ ಎಚ್ಚೆತ್ತ ಸ್ಥಳೀಯ ಪಂಚಾಯ್ತಿ ಹಂದಿ ಹಿಡಿಯುವ ಕಾರ್ಯಾಚರಣೆಗೆ ಮುಂದಾಗಿದ್ದ ವೇಳೆ ಹಂದಿ ಸಾಕಣೆದಾರರ ತೀವ್ರ ಪ್ರತಿರೋಧ ಹಾಗೂ ಪಿಡಿಓ, ಅಧ್ಯಕ್ಷರ ವಿರುದ್ದ ನಡೆದ ಮಾತಿನ ಘರ್ಷಣೆಯಿಂದಾಗಿ ಕಾರ್ಯಾಚರಣೆಯನ್ನು ಅರ್ಧಕ್ಕೆ ಸ್ಥಗಿತ ಗೊಳಿಸಿದ ಘಟನೆ ಬುಧವಾರ ಬೆಳಿಗ್ಗೆ ಪಟ್ಟಣದಲ್ಲಿ ನಡೆಯಿತು.
ಲಾರಿ ಅಡ್ಡಗಟ್ಟಿರುವ ಹಂದಿ ಸಾಕಣೆದಾರರು.

ಪೊಲೀಸ್ ಬಂದೋಬಸ್ತ್ ನಲ್ಲಿ ಹಂದಿ ಹಿಡಿದಿರುವ ಲಾರಿ.

ಅನೈರ್ಮಲ್ಯ ಸಮಸ್ಯೆ ಹಾಗೂ ಎಲ್ಲೆಡೆ ಹಬ್ಬಿದ ಎಚ್೧ ಎನ್೧ ರೋಗಕ್ಕೆ ಕಾರಣವಾಗಿದ್ದ ಹಂದಿಗಳನ್ನು ಹಿಡಿಯುವಂತೆ ಪಂಚಾಯ್ತಿಗೆ ಸಾರ್ವಜನಿಕರು ದೂರುನೀಡಿದ್ದ ಹಿನ್ನಲೆಯಲ್ಲಿ
ಹಂದಿ ಬಗ್ಗೆ ಎಚ್ಚರವಹಿಸುವಂತೆ ಹಂದಿ ಸಾಕಣೆದಾರರಿಗೆ ಹತ್ತು ದಿನಗಳ ಮುಂಚಿತವಾಗಿಯೇ ನೋಟೀಸ್ ನೀಡಿದ್ದಲ್ಲದೆ ಗ್ರಾಮದಲ್ಲಿ ಟಾಂ ಹಾಕಿ ಸಾರುವ ಮೂಲಕ ಹಂದಿ ಕಾರ್ಯಾಚರಣೆ ಬಗ್ಗೆ ಮಾಲೀಕರಿಗೆ ಸೂಚನೆ ನೀಡಲಾಗಿತ್ತು.ಅಲ್ಲದೆ ಪಿಡಿಓ ಅವರೇ ಖುದ್ದಾಗಿ ಹಂದಿ ಮಾಲೀಕರ ಮನೆಗೆ ತೆರಳಿ ಹಂದಿಯನ್ನು ಪಟ್ಟಣದೊಳಗೆ ಬಿಡದಂತೆ ಹಾಗೂ ೩ ಕಿಮೀ ದೂರ ಸಾಗಿಸುವಂತೆ ತಿಳಿಸಿದ್ದರು ಸಹ ಎಚ್ಚೆತ್ತುಕೊಳ್ಳದ ಹಂದಿ ಮಾಲೀಕರ ಕ್ರಮದಿಂದ ಹುಳಿಯಾರು ಪಟ್ಟಣದಲ್ಲಿ ಹಂದಿ ಹಿಡಿಸುವ ಕಾರ್ಯಾಚರಣೆಗೆ ಬುಧವಾರ ಮುಂದಾಗಲಾಗಿತ್ತು.
ರಾತ್ರಿಯೇ ವಾಹನ ಸಮೇತ ಬಂದಿದ್ದ ಹಂದಿ ಹಿಡಿಯುವವರು ಬೆಳ್ಳಂಬೆಳಗ್ಗೆ ಪಂಚಾಯ್ತಿ ಸಿಬ್ಬಂದಿ ಜೊತೆ ಹಂದಿ ಹಿಡಿಯಲು ಮುಂದಾಗಿ ಸುಮಾರು ೨೫ ರಿಂದ ೩೦ ಹಂದಿ ಹಿಡಿದಿದ್ದೆ ಪ್ರತಿರೋಧಕ್ಕೆ ಕಾರಣವಾಯಿತು. ಪಿಡಿಓ ಅಡವೀಶ್ ಕುಮಾರ್ ಹಾಗೂ ಅಧ್ಯಕ್ಷೆ ಕಾಳಮ್ಮ ಅವರ ಮೇಲೆ ಗರಂಆಗಿ ಮಾತಿನಚಕಮುಕಿಗೆ ಮುಂದಾದರು.
ರಾತ್ರಿಯೇ ಕಾರ್ಯಾಚರಣೆ ನಡೆಸಿ ಹಂದಿ ಹಿಡಿಸಿದ್ದು ಸರಿಯಲ್ಲ, ಯುಗಾದಿ ಹಬ್ಬದವರೆಗೂ ಸಮಯ ನೀಡಲೇ ಬೇಕಲ್ಲದೆ ಈ ಕೂಡಲೇ ಹಿಡಿದಿರುವ ಹಂದಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ಒತ್ತಾಯಿಸಿದರು. ಪೊಲೀಸ್ ಠಾಣೆಯ ಮುಂದೆಯೇ ಗಂಟೆಗಳಷ್ಟು ಕಾಲ ಏರಿದ ಧ್ವನಿಯಲ್ಲಿ ಗದ್ದಲ ನಡೆಯಿತು.ಹಂದಿ ಹಿಡಿಯುವ ಕಾರ್ಯಾಚರಣೆ ಬಗ್ಗೆ ಪರ ಹಾಗೂ ವಿರೋಧ ವ್ಯಕ್ತವಾಯಿತಲ್ಲದೆ, ಗ್ರಾ.ಪಂ.ಸದಸ್ಯರಾದ ಜಹೀರ್ ಸಾಬ್, ಪುಟ್ಟಣ್ಣ,ಶಿವಣ್ಣ ಅವರು ಪಿಡಿಓ ಅವರಿಗೆ ತಮ್ಮ ಸಂಪೂರ್ಣ ಬೆಂಬಲ ಸೂಚಿಸಿ ಹಂದಿ ಹಿಡಿಯುವುದರ ವಿರುದ್ದ ಯಾವುದೇ ಬೆದರಿಕೆ ಬಂದರೂ ಹಿಂಜರಿಯದಂತೆ ಬೆಂಬಲ ಸೂಚಿಸಿದರು.
ಈ ಮಧ್ಯೆ ಹಂದಿ ತುಂಬಿಕೊಂಡ ಲಾರಿ ನಂದಿಹಳ್ಳಿ ಮಾರ್ಗವಾಗಿ ಸಂಚರಿಸುತ್ತಿದ್ದನ್ನು ಅರಿತ ಹಂದಿ ಮಾಲೀಕರು ಲಾರಿಯನ್ನು ಹಿಂಬಾಲಿಸಿ ಹೋಗಿ ಅಡ್ಡಗಟ್ಟಿದರಲ್ಲದೆ ಹಿಡಿದಿರುವ ಹಂದಿಗಳನ್ನು ವಾಪಸ್ಸ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಲಾರಿ ಅಡ್ಡಗಟ್ಟಿದ್ದ ಸ್ಥಳಕ್ಕಾಗಮಿಸಿದ ಪಿಎಸೈ ಪ್ರವೀಣ್ ಕುಮಾರ್ ಹಂದಿ ಕಾರ್ಯಾಚರಣೆಗೆ ಅಡ್ಡಿಪಡಿಸುವುದು ಕಾನೂನು ಉಲ್ಲಂಘನೆಯಾಗುವುದೆಂದು ಎಚ್ಚರಿಸಿದರಲ್ಲದೆ, ಹಂದಿ ತುಂಬಿದ್ದ ಲಾರಿಯನ್ನು ಗಡಿಯಾಚೆ ಹೋಗುವಂತೆ ಸೂಚಿಸಿದರು. ಪೊಲೀಸ್ ಮಧ್ಯಪ್ರವೇಶದಿಂದ ಸದ್ಯಕ್ಕೆ ಪರಿಸ್ಥಿತಿ ತಿಳಿಯಾಗಿದ್ದು ಪಂಚಾಯ್ತಿಯವರ ಕಿತ್ತಾಟದಿಂದ ಹಂದಿ ಹಿಡಿಯುವ ಕಾರ್ಯಾಚರಣೆ ಸ್ಥಗಿತಗೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
-----------

ಹಂದಿ ಹಿಡಿಯಲು ಮುಂದಾಗಿರುವ ಪಂಚಾಯ್ತಿಯ ಕ್ರಮ ಶ್ಲಾಘನೀಯ. ಸದಸ್ಯರ ಸಭೆ ನಡೆಸದೆ ಅವರ ಗಮನಕ್ಕೂ ತಾರದೆ ದಿಢೀರ್ ಕಾರ್ಯಾಚರಣೆ ನಡೆಸಿರುವ ಬಗ್ಗೆ ಸ್ಪಷ್ಟನೆ ನೀಡಬೇಕು. ಹುಳಿಯಾರೆಲ್ಲ ಗಬ್ಬುನಾರುತ್ತಿದ್ದು ಪಂಚಾಯ್ತಿ ಮುಂದೆ ಪ್ರತಿಭಟನೆ ನಡೆಸಿದ್ದರೂ ನಾಪತ್ತೆಯಾಗಿದ್ದ ಪಿಡಿಓ ಇದೀಗ ಹಂದಿ ಹಿಡಿಯುವವರ ಜೊತೆ ಶಾಮೀಲಾಗಿ ಹಂದಿ ಹಿಡಿಯಲು ಬೆಳಿಗ್ಗೆ ಆಗಮಿಸಿದ್ದಾರೆ. ಇದೇ ರೀತಿ ಹುಳಿಯಾರಿನ ಚರಂಡಿ ಹಾಗೂ ಸ್ವಚ್ಚತೆ ಕಡೆಗೂ ಗಮನಕೊಡಬೇಕು ಹಾಗೂ ದನ ಕಡಿಯುವ ಕಸಾಯಿಖಾನೆ ಮೇಲೂ ಕ್ರಮ ಕೈಗೊಳ್ಳಬೇಕು : ಗ್ರಾ.ಪಂ.ಸದಸ್ಯ ರಾಘವೇಂದ್ರ.
ಸಾರ್ವಜನಿಕರ ಒತ್ತಯದ ಮೇರೆಗೆ ತಾವು ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿದ್ದು ಹಂದಿ ಮಾಲೀಕರಿಗೆ ಹಂದಿಗಳನ್ನು ಹಿಡಿದು ಬೇರೆಡೆ ಸಾಗಿಸುವಂತೆ ಸ್ಪಷ್ಟ ಸೂಚನೆ ನೀಡಿದ್ದಾಗ್ಯೂ , ನಿರ್ಲಕ್ಷ ವಹಿಸಿದ ಮಾಲೀಕರ ಮೇಲೆ ಕ್ರಮಕೈಗೊಳ್ಳಲು ಮುಂದಾಗಿರುವೆ. ಹಂದಿ ಹಿಡಿಯುವುದು ತಪ್ಪೆಂದು ತಿಳಿಸಿದಲ್ಲಿ ಕಾರ್ಯಾಚರಣೆ ಕೈಬಿಡುವೆ : ಪಿಡಿಓ ಅಡವೀಶ್ ಕುಮಾರ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...