ವಿಷಯಕ್ಕೆ ಹೋಗಿ

ಹುಳಿಯಾರು ಪಂಚಾಯ್ತಿಗೆ ಬೀಗ ಹಾಕಿ ಸಾರ್ವಜನಿಕರಿಂದ ಪ್ರತಿಭಟನೆ ದನದ ಕೊಟ್ಟಿಗೆ ಮನೆ ಬಿಲ್ ಪಾವತಿಯಲ್ಲಿ ವಿಳಂಬ

ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿದ ದನದ ಕೊಟ್ಟಿಗೆಗಳ ಕಾಮಗಾರಿಗಳ ಬಿಲ್ ನಲ್ಲಿ ಅವ್ಯವಹಾರ ನಡೆದಿದೆ ಹಾಗೂ ಬಸವೇಶ್ವರ ನಗರ ವಾರ್ಡ್ ಸೇರಿದಂತೆ ಇನ್ನಿತರ ವಾರ್ಡ್ ಗಳಲ್ಲಿ ಕುಡಿಯುವ ನೀರು ಹಾಗೂ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ಜನಪರದಾವಂತಾಗಿದೆ ಎಂದು ಆರೋಪಿಸಿ ಪಟ್ಟಣದ ನಿವಾಸಿಗಳು ಸೋಮವಾರ ಬೆಳಿಗ್ಗೆ ಪಂಚಾಯ್ತಿ ಕಛೇರಿಗೆ ಬೀಜ ಹಾಕಿ ಪ್ರತಿಭಟಿಸಿದರು.
ದನದಕೊಟ್ಟಿಗೆ ಬಿಲ್ ಪಾವತಿಯಲ್ಲಿ ಅವ್ಯವಹಾರವಾಗಿದೆ ಎಂದು ಅರೋಪಿಸಿದ ಸಾರ್ವಜನಿಕರು ಹುಳಿಯಾರು ಗ್ರಾ.ಪಂ.ಕಛೇರಿಗೆ ಬೀಗ ಹಾಕಿ ಕಛೇರಿ ಮುಂದೆ ಧರಣಿ ನಡೆಸಿದರು
ಕಳೆದ ೨೦೧೩-೧೪ ನೇ ಸಾಲಿನಲ್ಲಿ ಖಾತ್ರಿ ಯೋಜನೆಯಡಿ ದನದಕೊಟ್ಟಿಗೆ ನಿರ್ಮಿಸಿ ಒಂದೂವರೆ ವರ್ಷ ಕಳೆಯುತ್ತಾ ಬಂದರೂ ಇದುವರೆಗೂ ಅದರ ಬಿಲ್ ಮಾಡಿಲ್ಲ, ಈ ಬಗ್ಗೆ ಪಿಡಿಓ ಅವರನ್ನು ಕೇಳಿದರೆ ಇಲ್ಲಸಲ್ಲದ ಸಬೂಬು ಹೇಳುತ್ತಾರೆ. ಈ ಹಿಂದೆ ನಾವು ಕಾಮಗಾರಿ ಮಾಡುವಾಗ ೩೫ಸಾವಿರ ಎಂದು ಹೇಳಿದ ಅಧಿಕಾರಿಗಳು ಇದೀಗ ೧೬ಸಾವಿರ ಮಾತ್ರ ಬಿಲ್ ಆಗುವುದು ಎನ್ನುತ್ತಿದ್ದಾರೆ. ತಮಗೆ ಬೇಕಾದವರಿಗೆ ೩೫ಸಾವಿರ ಬಿಲ್ ಸಹ ಮಾಡಿದ್ದು, ನಮಗೆ ಅನ್ಯಾಯ ಮಾಡುತ್ತಿದ್ದಾರೆಂದು ಪ್ರತಿಭಟನಾ ನಿರತರು ಆರೋಪಿಸಿದರು.
ಕಳೆದ ಒಂದುವರ್ಷದ ಹಿಂದೆಯೇ ಕೊಟ್ಟಿಗೆ ಮನೆ ನಿರ್ಮಿಸಿ ಪಿಡಿಓ ಅವರನ್ನೇ ಸ್ಥಳಕ್ಕೆ ಕರೆದುಕೊಂಡು ಹೋಗಿ ಪರಿಶೀಲಿಸಿದ್ದು ಅಗತ್ಯ ದಾಖಲೆಗಳನ್ನು ನೀಡಿದ್ದರೂ ಸಹ ನಮ್ಮ ಬಿಲ್ ಪಾವತಿಸದೆ ಹಾಗೆಯೇ ಪೆಂಡಿಂಗ್ ಇಟ್ಟು ಇದುವರೆಗೂ ಬಿಲ್ ಪಾವತಿಸಿಲ್ಲ, ಸಾಲ ಮಾಡಿ ಕೊಟ್ಟಿಗೆ ಮನೆ ಕಟ್ಟಿದ್ದೇವೆ. ಇಷ್ಟಾದರೂ ಸಹ ಅಧಿಕಾರಿಗಳು ಈ ಬಗ್ಗೆ ಗಮನಕೊಡದೆ ತಮ್ಮ ಮನಬಂದಂತೆ ನಡೆದುಕೊಳ್ಳುತ್ತಿದ್ದು, ನಮ್ಮ ಗೋಳು ಕೇಳುತ್ತಿಲ್ಲ, ಎಲ್ಲೆಡೆ ಖಾತ್ರಿ ಹಣ ಬಿಡುಗಡೆ ಯಾಗಿದೆಯಲ್ಲಾ ನಮ್ಮ ಬಿಲ್ಲನ್ನು ನೀಡಿ ಎಂದು ಅಂಗಲಾಚುತ್ತಿದ್ದರೂ ಸಹ, ಬಿಲ್ ಪಾವತಿಸಲು ಲಂಚ ಆಮಿಷವೊಡ್ಡುತ್ತಿದ್ದಾರೆ. ನಾವು ಖರ್ಚುಮಾಡಿದ ಹಣವನ್ನು ಪಡೆಯುವುದು ಸಹ ದುಸ್ಥರವಾಗಿದೆ ಈ ಬಗ್ಗೆ ಮೇಲಾಧಿಕಗಳು ಶಿಸ್ತುಕ್ರಮ ಕೈಗೊಳ್ಳುವಂತೆ ಪ್ರತಿಭಟನಾನಿರತ ವಿಶ್ವನಾಥ್ ದೂರಿದರು.
ಪಂಚಾಯ್ತಿಯ ಕೆಲ ವಾರ್ಡ್ ಗಳಲ್ಲಿ ಮಾತ್ರ ಚರಂಡಿಗಳನ್ನು ಸ್ವಚ್ಚಗೊಳಿಸುವುದು, ನೀರು ಬಿಡಿಸುವುದು, ವಿದ್ಯುತ್ ದೀಪದ ವ್ಯವಸ್ಥೆ ಮಾಡಿಸುತ್ತಾರೆ ಹೊರತು ನಮ್ಮ ವಾರ್ಡ್ ನಲ್ಲಿ ಚರಂಡಿ ಸ್ವಚ್ಚ ಮಾಡಿ, ಬೀದಿ ದೀಪದ ಬಲ್ಪ್ ಹೋಗಿ, ಕುಡಿಯುವ ನೀರು ಬಿಟ್ಟು ತಿಂಗಳುಗಳು ಉರುಳಿವೆ ಈ ಬಗ್ಗೆ ಪಿಡಿಓ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜಯಣ್ಣ ತಿಳಿಸುತ್ತಾರೆ.
೨೦೧೩-೧೪ನೇ ಸಾಲಿನಲ್ಲಿ ಖಾತ್ರಿ ಯೋಜನೆಯಡಿ ದನದ ಕೊಟ್ಟಿಗೆ ಕೆಲಸ ಪ್ರಾರಂಭಿಸುವಾಗ ೩೫ಸಾವಿರ ಹಣ ಬರುತ್ತದೆ ಎಂದು ಹೇಳಿದ್ದರಲ್ಲದೆ ಅಷ್ಟೆ ಹಣವನ್ನು ನೀಡಿದ್ದ ಅಧಿಕಾರಿಗಳು ಇದೀಗ ೧೬ ಸಾವಿರ ಮಾತ್ರ ಎನ್ನುತ್ತಿದ್ದು, ಆ ಬಿಲ್ ನೀಡಲು ಸಹ ಲಂಚ ಕೇಳುತ್ತಿದ್ದಾರೆ : ಶಶಿಧರ್ ,ಬಸವೇಶ್ವರನಗರ ನಿವಾಸಿ.
ಬೆಳಿಗ್ಗೆ ೧೧ ರಿಂದ ಧರಣಿ ಪ್ರಾರಂಭಗೊಂಡು ಸಂಜೆಯವರೆಗೂ ಸಾಗಿದರೂ ಸಹ ಯಾವೊಬ್ಬ ಅಧಿಕಾರಿಗಳು ಸ್ಥಳಕ್ಕಾಗಮಿಸದೆ ಧರಣಿ ನಿರತರನ್ನು ಕೆರಳುವಂತೆ ಮಾಡಿತ್ತು. ಫೋನ್ ಮೂಲಕ ಸಂಪರ್ಕಿಸಿದಾಗ ಮೀಟಿಂಗ್ ಇದೆ ಎಂದು ಸಬೂಬು ಹೇಳಿದರೆ ಹೊರತು ಪಂಚಾಯ್ತಿಗೆ ಸಂಬಂಧಿಸಿದ ಸಿಬ್ಬಂದಿಯವರು ಬಂದಿರಲಿಲ್ಲ. ಧರಣಿ ವಿಷಯ ತಿಳಿದ ಪೋಲೀಸ್ ನವರು ಸ್ಥಳಕ್ಕಾಗಮಿಸಿ ವಿಚಾರಿಸಿದರು.ಸರ್ಕಾರಿ ಕಛೇರಿಗಳಿಗೆ ಏಕಾಏಕಿ ಬೀಗ ಹಾಕುವುದು ಕಾನೂನುರೀತ್ಯಾ ಅಪರಾಧ ಈ ಬಗ್ಗೆ ಮೊದಲೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಬೇಕು ಎಂದು ಹೇಳಿದ ನಂತರ ಪಂಚಾಯ್ತಿಯ ಬೀಗ ತೆಗೆದರೂ ಸಹ ಸಾರ್ವಜನಿಕರು ಅಲ್ಲಿಂದ ಕದಲಡೆ ಪಿಡಿಓ ಹಾಗೂ ಇಓ ಅವರನ್ನು ಕರೆಸುವಂತೆ ಪಟ್ಟು ಹಿಡಿದು ಸಂಜೆಯಾದರೂ ಅಲ್ಲಿಂದ ಕದಲದೆ ಸಂಜೆಯಾದರೂ ಧರಣಿ ಮುಂದುವರಿಸಿದ್ದಾರೆ.

ಬೆಳಿಗ್ಗೆಯಿಂದ ಪ್ರಾರಂಭವಾದ ದಿಢೀರ್ ಧರಣಿಯಲ್ಲಿ ಮಲ್ಲಿಕಣ್ಣ, ಡಾಬಾ ಸೂರಪ್ಪ, ಚಿದಾನಂದಮೂರ್ತಿ(ಎಸ್.ಎಸ್..ಆರ್), ಮೋಹನ್ ಕುಮಾರ್ ರೈ, ಓಂಕಾರಮೂರ್ತಿ,ತಮ್ಮಯ್ಯ ಸೇರಿದಂತೆ ಪಟ್ಟಣದ ಬಸವೇಶ್ವರ ನಗರದ ಸಾರ್ವಜನಿಕರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...