ವಿಷಯಕ್ಕೆ ಹೋಗಿ

ದಾಸಿಮಯ್ಯನವರ ವಚನಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

 ೧೨ ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಜಾತಿಧರ್ಮಗಳ ಮೂಲಕ ಸಿಡಿದೆದ್ದು ಎಲ್ಲರೂ ಸಮಾನರು ಎಂದು ಸಾರಿದ ದೇವರ ದಾಸಿಮಯ್ಯನವರು ಸಾಮಾಜಿಕ ಕ್ರಾಂತಿಗೆ ಬುನಾದಿ ಹಾಕಿದರು ಎಂದು ನಿವೃತ್ತ ಶಿಕ್ಷಕ ತ.ಶಿ.ಬಸವಮೂರ್ತಿ ಅವರು ಹೇಳಿದರು.
ಹುಳಿಯಾರಿನ ಶ್ರೀಬನಶಂಕರಿ ದೇವಾಲಯದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿಯಲ್ಲಿ ನಿವೃತ್ತ ಶಿಕ್ಷಕ ಹಾಗೂ ಸಾಹಿತಿ ತ.ಶಿ.ಬಸವಮೂರ್ತಿ ಮಾತನಾಡಿದರು.

ಹುಳಿಯಾರಿನ ಶ್ರೀಬನಶಂಕರಿ ದೇವಾಲಯದಲ್ಲಿ ದೇವಾಂಗ ಮಂಡಳಿ ಹಾಗೂ ದೇವರ ದಾಸಿಮಯ್ಯ ನೇಕಾರ ಅಭಿವೃದ್ದಿ ಸೇವಾ ಟ್ರಸ್ಟ್ ವತಿಯಿಂದ ಬುಧವಾರ ಬೆಳಿಗ್ಗೆ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.

ಪಟ್ಟಣದ ಶ್ರೀಬನಶಂಕರಿ ದೇವಾಲಯದಲ್ಲಿ ಬನಶಂಕರಿ ಛಾರಿಟಬಲ್ ಟ್ರಸ್ಟ್ , ದೇವಾಂಗ ಮಂಡಳಿ ಹಾಗೂ ದೇವರ ದಾಸಿಮಯ್ಯ ನೇಕಾರ ಅಭಿವೃದ್ದಿ ಸೇವಾ ಟ್ರಸ್ಟ್ ವತಿಯಿಂದ ಬುಧವಾರ ಬೆಳಿಗ್ಗೆ ದೇವರ ದಾಸಿಮಯ್ಯ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.
ಬಟ್ಟೆ ನೇಯುವುದನ್ನೇ ಕಾಯಕವನ್ನಾಗಿಸಿಕೊಂಡಿದ್ದ ದಾಸಿಮಯ್ಯನವರ ಜನ್ಮ ಸ್ಥಳ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮವಾಗಿದ್ದು ದುಗ್ಗಳೆ ಆತನ ಪತ್ನಿ.ಇವರ ವಚನಗಳ ಅಂಕಿತ ರಾಮನಾಥ ಎಂದಾಗಿದ್ದು ಈವರೆಗೂ ಇವರು ೧೫೦ಕ್ಕೂ ಹೆಚ್ಚು ವಚನಗಳು ದೊರೆತಿವೆ ಎಂದು ದಾಸಿಮಯ್ಯನ ಪರಿಚಯ ಮಾಡಿಕೊಟ್ಟರು. ದಾಸಿಮಯ್ಯನ ವಚನಗಳಲ್ಲಿನ ಚಿಂತನೆಗಳನ್ನು ಹಾಗೂ ತೀವ್ರವಾದ ಅನುಭಾವವನ್ನು ಜೀವನದಲ್ಲಿ ಅನುಷ್ಠಾನಗೊಳಿಸಿಕೊಳ್ಳುವ ಮೂಲಕ ಹಿರಿಯ ಹಾದಿಯಲ್ಲಿ ಸಾಗೋಣ ಎಂದರು.
ಕಸಾಪದ ಹೆಚ್.ಕೆ.ರಾಮಯ್ಯ ಮಾತನಾಡಿ ೧೨ ನೇ ಶತಮಾನ ಸಾಹಿತ್ಯದ ಕ್ರಾಂತಿಕಾರಕ ಹಾಗೂ ಪರಿವರ್ತನೆಯ ಸಂದಿಕಾಲವಾಗಿದ್ದು ಇಂತಹ ಸಮಯದಲ್ಲಿ ಮೂಡಿಬಂದಿದ್ದೆ ವಚನಗಳು. ವಚನಗಳು ಆತ್ಮಸಾಕ್ಷಿಯಾಗಿ ಹೊರಬಂದ ಮಾತುಗಳಾಗಿದ್ದು ಇಂತಹ ವಚನಕಾರರಲ್ಲಿ ಪ್ರಪ್ರಥಮರಾಗಿದ್ದವರು ದಾಸಿಮಯ್ಯ ಎಂದರು. ಸಮಾಜ ತಿದ್ದುವ ಸಲುವಾಗಿ ಇವರ ನಿಲುವುಗಳು ಕಠೋರವಾಗಿದ್ದು, ವೃತ್ತಿಯಿಂದ ನೇಕಾರರಾಗಿದ್ದ ಇವರನ್ನು ಜೇಡರ ದಾಸಿಮಯ್ಯ ಎಂತಲೂ ಜೀವನದಲ್ಲಿ ಸಾಧಿಸಿದ ಸಾಕ್ಷಾತ್ಕಾರ ಕಂಡುಕೇಳಿ ಗೌರವಿಸಿ ದೇವರದಾಸಿಮಯ್ಯ ಎಂತಲೂ ಕರೆಯಲಾಯಿತು ಎಂದರು. ಇವರು ದೇವಾಂಗ ಸಮುದಾಯಕ್ಕೆ ಮಾತ್ರ ಮೀಸಲಾಗದೆ ಸರ್ವಸಮುದಾಯಕ್ಕೂ ಅನ್ವಯಿಸುವ ಋಷಿಗಳಾಗಿದ್ದು ಇವರ ತತ್ವವನ್ನು ಎಲ್ಲರೂ ಅಳವಡಿಸಿಕೊಂಡು ಆಚರಿಸಿ ಎಂದು ಕರೆ ನೀಡಿದರು.
ದೇವಾಂಗಮಂಡಳಿ ಅಧ್ಯಕ್ಷ ಅನಂತ್ ಕುಮಾರ್ ಮಾತನಾಡಿ ಸಮುದಾಯದವರ ಹೋರಾಟದ ಫಲವಾಗಿ ಇಂದು ದಾಸಿಮಯ್ಯ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ಮುಂದಾಗಿರುವುದು ಸ್ವಾಗತಾರ್ಹ. ಸಮುದಾಯದವರು ಇದನ್ನು ಒಂದು ದಿವಸಕ್ಕೆ ಮಾತ್ರ ಸೀಮಿತಗೊಳಿಸದೆ ನಿತ್ಯಜೀವನದಲ್ಲಿ ಅವರ ವಚನಸಾರ ಅಳವಡಿಸಿಕೊಳ್ಳಿ ಎಂದರು.

ಬನಶಂಕರಿ ಛಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಅಧ್ಯಕ್ಷ ಬಿ.ಟಿ.ರಾಜ್ ಗೋಪಾಲ್, ದೇವಾಂಗ ಸಮುದಾಯದ ದಾಸಪ್ಪ, ಶಂಕರಪ್ಪ, ಬಳೆಕುಮಾರ್,ಕೇಶವ್ ಸೇರಿದಂತೆ ದೇವಾಂಗ ಸಮುದಾಯದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...