ವಿಷಯಕ್ಕೆ ಹೋಗಿ

ಹುಳಿಯಾರಿನ ಮಾರ್ನಿಂಗ್ ಮಾರ್ಕೆಟ್ ಶುರು ಮುಂಜಾನೆ ೫ ರಿಂದ ೧೧ ರವರೆಗೆ ವಹಿವಾಟು

ಹುಳಿಯಾರು  ಹೋಬಳಿಯ ರೈತಸಂಘ, ಹಸಿರುಸೇನೆ ಹಾಗೂ ರೈತರ ಸಹಕಾರದಲ್ಲಿ ಪಟ್ಟಣದಲ್ಲಿ ಇದೇ ಪ್ರಪ್ರಥಮ ಬಾರಿಗೆ ಪಟ್ಟಣದ ನಾಢಕಛೇರಿ ಆವರಣದಲ್ಲಿ ಮಾರ್ನಿಂಗ್ ಮಾರ್ಕೆಟ್ ಪ್ರಾರಂಭಿಸಿದ್ದು, ಜಿ.ಪಂ.ಸದಸ್ಯೆ ಮಂಜುಳಾ ಗವಿರಂಗಯ್ಯ ಭಾನುವಾರ ಬೆಳಿಗ್ಗೆ ಚಾಲನೆ ನೀಡಿದರು.
ಹುಳಿಯಾರಿನ ನಾಢಕಛೇರಿ ಆವರಣದಲ್ಲಿ ನೂತನವಾಗಿ ಪ್ರಾರಂಭವಾದ ಮುಂಜಾನೆ ಮಾರುಕಟ್ಟೆಗೆ ಜಿ.ಪಂ.ಸದಸ್ಯೆ ಮಂಜುಳಾ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು ರೈತರು ತಾವು ಬೆಳೆದ ಬೆಳೆಯನ್ನು ಮಧ್ಯವರ್ತಿಗಳ ಮೂಲಕ ಮಾರುತ್ತಿದ್ದರೇ ಹೊರತು ತಾವೇ ನೇರವಾಗಿ ಮಾರಾಟ ಮಾಡಲು ಮಾರುಕಟ್ಟೆ ವ್ಯವಸ್ಥೆ ಇರಲಿಲ್ಲ. ಇದೀಗ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈತ ಸಂಘದ ಸದಸ್ಯರೆಲ್ಲಾ ಸೇರಿ ಮುಂಜಾನೆ ಮಾರುಕಟ್ಟೆಯನ್ನು ತೆರೆದಿದ್ದು ರೈತರು ತಾವು ಬೆಳೆದ ಬೆಳೆಯನ್ನು ಈ ಮಾರುಕಟ್ಟೆಯಲ್ಲಿಗೆ ತಂದು ಮಾರುವಂತೆ ತಿಳಿಸಿದರು. ಅಲ್ಲದೆ ಯಾವುದೇ ಮಧ್ಯವರ್ತಿಗಳಿಗೆ ರೈತರು ತಾವು ಬೆಳೆದ ಉತ್ಪನ್ನವನ್ನು ಮಾರದೇ ತಾವೇ ಸ್ವತ: ವ್ಯಾಪಾರ ಮಾಡುವಂತೆ ಹೇಳಿದರು.
ರೈತ ಮುಖಂಡ ಹೊಸಹಳ್ಳಿ ಚಂದ್ರಪ್ಪ ಮಾತನಾಡಿ, ರೈತರು ತಾವು ಬೆಳೆದ ಬೆಳೆಯನ್ನು ಸೈಕಲ್ ಮೂಲಕ ಮನೆಮನೆ ಬಾಗಿಲಿಗೆ ಹೋಗಿ ಮಾರುವ ಬದಲು ರೈತರೆಲ್ಲಾ ಒಂದೆಡೆ ಸೇರಿ ತಾವು ಬೆಳೆದ ಉತ್ಪನ್ನಗಳನ್ನು ಮಾರುವಂತಾಗುವ ನಿಟ್ಟಿನಿಂದ ಈ ಮಾರುಕಟ್ಟೆ ತೆರೆದಿದ್ದು, ಪ್ರತಿನಿತ್ಯ ಮುಂಜಾನೆ ೫ ರಿಂದ ೧೧ರ ವರೆಗೆ ವಹಿವಾಟು ನಡೆಸಲಿದ್ದು, ಹೋಬಳಿಯ ಎಲ್ಲಾ ರೈತರು ಇಲ್ಲಿಯೇ ಬಂದು ವ್ಯಾಪಾರ ಮಾಡುವಂತೆ ಮನವಿ ಮಾಡಿದರು.
ನೂತನವಾಗಿ ಪ್ರಾರಂಭವಾದ ಮಾರುಕಟ್ಟೆಯಲ್ಲಿ ಹತ್ತಾರೂ ಬಗೆಯ ಸೊಪ್ಪು,ತರಕಾರಿ ಸೇರಿದಂತೆ ಅಡುಗೆಗೆ ಬೇಕಾದ ಇನ್ನಿತರ ಉತ್ಪನ್ನಗಳನ್ನು ರೈತರೇ ತಂದು ಮಾರಾಟ ಮಾಡಲು ಮುಂದಾಗಿದ್ದರು. ಹೋಬಳಿಯ ತಮ್ಮಡಿಹಳ್ಳಿ, ಕೋರಗೆರೆ,ಕೆಂಕೆರೆ, ಕರೆಸೂರಗೊಂಡನಹಳ್ಳಿ, ಉಪ್ಪಾರಹಳ್ಳಿ,ಭಟ್ಟರಹಳ್ಳಿ, ಮೋಟಿಹಳ್ಳಿ, ಬೋರನಕಣಿವೆ ಸೇರಿದಂತೆ ಸುತ್ತಮುತ್ತಲ ಅನೇಕ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಂದು ತಮ್ಮದೇ ಆದ ಸಣ್ಣ ಅಂಗಡಿಯನ್ನು ಹಾಕಿಕೊಂಡು ವ್ಯಾಪಾರದಲ್ಲಿ ತೊಡಗಿದ್ದರು.
ಮಾರುಕಟ್ಟೆಯಲ್ಲಿ ನೀರಾ ಮಾರಾಟ ಜೋರಾಗಿದ್ದು, ರೈತ ಈರಣ್ಣ ತಂದಿದ್ದ ಸಿಹಿ ನೀರಾಗೆ ಹೆಚ್ಚು ಬೇಡಿಕೆ ಇತ್ತು. ರೈತರು ತಂದು ಹಾಕಿಕೊಂಡಿದ್ದ ಫ್ರೆಶ್ ತರಕಾರಿ,ಸೊಪ್ಪನ್ನು ಕೊಂಡುಕೊಳ್ಳಲು ಸಾರ್ವಜನಿಕರು ಸಹ ಮುಂದಾಗಿದ್ದು ಕಂಡು ಬಂತು.

ಈ ವೇಳೆ ಬೆಸ್ಕಾಂನ ಗವಿರಂಗಯ್ಯ, ಪ್ರಗತಿಪರ ರೈತರಾದ ಉಪ್ಪಾರಹಳ್ಳಿ ರೇವಣ್ಣ, ಕೆರೆಸೂರಗೊಂಡನಹಳ್ಳಿ ಮರುಳಪ್ಪ, ಕೆಂಕೆರೆ ರಾಜಣ್ಣ, ಸಂಘದ ಪರಮೇಶ್,ಕೊಟ್ರೇಶ್, ಲಿಂಗರಾಜ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.