ವಿಷಯಕ್ಕೆ ಹೋಗಿ

ಬೇಕರಿ ತಿನಿಸುಗಳಿಂದ ಆರೋಗ್ಯ ಹಾಳು : ಡಾ..ಖಾದರ್

ಪ್ರಕೃತಿಯಲ್ಲಿ ಉತ್ತಮ ಆಹಾರ ಪದಾರ್ಥಗಳು ದೊರೆತರು ಸಹ ಸಾಕಷ್ಟು ಜನ ಬೇಕರಿಯಲ್ಲಿ ಮೈದಾ ಹಿಟ್ಟು ಬಳಸಿ ತಯಾರಿಸುವ ಬ್ರೆಡ್, ಬಿಸ್ಕೇಟ್ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಸೇವಿಸಲು ಮುಗಿಬೀಳುತ್ತಿದ್ದು ತಮ್ಮ ದೇಹಾರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಮೈಸೂರಿನ ಕೃಷಿ ವಿಜ್ಞಾನಿ ಡಾ.ಖಾದರ್ ಎಚ್ಚರಿಸಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ವತಿಯಿಂದ ಅಯೋಜಿಸಿದ ಕಾರ್ಯಕ್ರಮದಲ್ಲಿ ಡಾ.ಖಾದರ್ ಮಾತನಾಡಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ವತಿಯಿಂದ ಸೋಮವಾರ ಅಯೋಜಿಸಿದ್ದ "ಆರೋಗ್ಯಕ್ಕಾಗಿ ಆಹಾರ-ಆಹಾರಕ್ಕಾಗಿ ಕೃಷಿ " ವಿಚಾರಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೈದಾ ಹಿಟ್ಟಿನಿಂದ ತಯಾರಿಸುವ ತಿನಿಸುಗಳು ಬಾಯಿಗೆ ಹಿತವಾಗಿರುತ್ತವೆ ಹೋರತು ದೇಹಕ್ಕೆ ಒಳಿತಲ್ಲ. ನಮ್ಮ ದೇಹದಲ್ಲಿ ಆ ತಿನಿಸುಗಳು ಸರಿಯಾಗಿ ಜೀರ್ಣವಾಗದೆ ನಮ್ಮ ದೇಹಕ್ಕೆ ಬೇಕಾದ ಉತ್ತಮ ಪೋಷಕಾಂಶಗಳನ್ನು ನೀಡುವುದಿಲ್ಲ. ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಸಹಕಾರಿಯಾಗುವಂತೆ ಸೊಪ್ಪು,ತರಕಾರಿ ಅಂಗಡಿಗಳು ಗ್ರಾಮದಲ್ಲಿ ಕಾಣಬರುವುದಿಲ್ಲವಾದರೂ ಸಹ ಬೇಕರಿಗಳು ಮಾತ್ರ ಇದ್ದೇ ಇರುತ್ತವೆ ಎಂದರು.
ನಾವು ನಿತ್ಯ ಅಹಾರದಲ್ಲಿ ಬಳಸುವ ಅಕ್ಕಿ ಹೆಚ್ಚು ಪಾಲಿಶ್ ಮಾಡುವುದರಿಂದ ಅದರ ಪೌಷ್ಟಿಕಾಂಶ ಇಲ್ಲದಂತಾಗಿ, ಪಾಲಿಶ್ ಅಕ್ಕಿಯನ್ನು ಹೆಚ್ಚು ಪ್ರಮಾಣದಲ್ಲಿ ಬಳಸುವುದರಿಂದ ಆರೋಗ್ಯವನ್ನು ಅನಾರೋಗ್ಯದತ್ತ ಕರೆದೊಯ್ಯುತ್ತಿದ್ದೇವೆ ಎಂದರು. ಸಿರಿಧಾನ್ಯಗಳಾದ ಸಜ್ಜೆ, ಹಾರಕ, ನವಣೆ ಸೇರಿದಂತೆ ಇನ್ನಿತರ ಬೆಳೆಗಳನ್ನು ಬಳಕೆ ಮಾಡುವಲ್ಲಿ ನಮ್ಮ ಜನ ಹಿಂದೇಟಾಕುತ್ತಿದ್ದಾರೆ ಇನ್ನಾದರೂ ಎಚ್ಚೆತ್ತು ದೇಹವನ್ನು ಆರೋಗ್ಯಯುತವಾಗಿಡಲು ಸಹಕಾರಿಯಾಗುವಂತ ಆಹಾರ ಉತ್ಪನ್ನಗಳನ್ನು ಬಳಸುವಂತೆ ತಿಳಿಸಿದರು.
ಆಹಾರ ವಸ್ತುಗಳ ಉತ್ಪಾದನೆಗೆ ಪೂರಕವಾಗಿ ವಿವಿಧ ವೈಜ್ಞಾನಿಕ ವಿಧಾನಗಳಿದ್ದು ಅವುಗಳನ್ನು ಸರಿಯಾಗಿ ಬಳಸುವ ಮೂಲಕ " ಆರೋಗ್ಯಕ್ಕಾಗಿ ಆಹಾರ-ಆಹಾರಕ್ಕಾಗಿ ಕೃಷಿ" ಎಂಬ ಚಿಂತನೆಯಲ್ಲಿ ಆಹಾರ ಉತ್ಪಾದನೆಯಲ್ಲಿ ತೊಡಗಿಕೊಳ್ಳಿ ಎಂದರು.

ಈವೇಳೆ ಪ್ರಾಂಶುಪಾಲ ಕೃಷ್ಣಮೂರ್ತಿ ಬಿಳಿಗೆರೆ, ಶ್ರೀಮತಿ ಉಷಾಖಾದರ್, ಚಿ.ನಾಹಳ್ಳಿ ಸೃಜನಾ ಮಹಿಳಾ ವೇದಿಕೆಯ ಇಂದಿರಮ್ಮ, ಮಧುಗಿರಿ ವಿಜ್ಞಾನ ಕೇಂದ್ರದ ರಾಮಕೃಷ್ಟಪ್ಪ, ಉಪನ್ಯಾಸಕರಾದ ಶಂಕರಲಿಂಗಯ್ಯ, ಸೈಯದ್ ಇಬ್ರಾಹಿಂ ,ಶ್ರೀನಿವಾಸಪ್ಪ , ದೈಹಿಕ ಶಿಕ್ಷಣ ನಿರ್ದೇಶಕ ಶಿವಯ್ಯ, ಗ್ರಂಥಪಾಲಕ ಲೊಕೇಶನಾಯ್ಕ ಸೇರಿದಂತೆ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...