ವಿಷಯಕ್ಕೆ ಹೋಗಿ

ಗ್ರಾ.ಪಂ ಕಟ್ಟಡ ಉದ್ಘಾಟನೆಗೆ ಹಾಜರಾಗದ ಜನಪ್ರತಿನಿಧಿಗಳು ,ಅಧಿಕಾರಿಗಳು ಸಂಜೆ ಉದ್ಘಾಟನಾ ಶಾಸ್ತ್ರ ಮುಗಿಸಿದ ತಾ.ಪಂ.ಅಧ್ಯಕ್ಷೆ

ಹುಳಿಯಾರು  ಹೋಬಳಿ ಯಳನಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ್ದ ಗ್ರಾ.ಪಂ.ಕಟ್ಟಡ ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆ ಗುರುವಾರ ಬೆಳಿಗ್ಗೆ ನಡೆಯಬೇಕಿದ್ದು, ಸಂಜೆಯಾದರೂ ಆಹ್ವಾನಪತ್ರಿಕೆಯಲಿದ್ದ ಜನಪ್ರತಿನಿಧಿಗಳು ಯಾರು ಆಗಮಿಸದೆ ಕಾದುಕಾದು ಬೇಸತ್ತು ಸಂಜೆ ೬ರ ಸಮಯದಲ್ಲಿ ತಾ.ಪಂ.ಅಧ್ಯಕ್ಷೆಯಿಂದ ಉದ್ಘಟನಾಶಾಸ್ತ್ರ ನೆರವೇರಿಸಿದ್ದು ಇಂದಿನ ಘಟನೆ ತಾಲ್ಲೂಕಿನ ಗಡಿಭಾಗದ ಗ್ರಾಮಗಳ ಬಗ್ಗೆ ಆಡಳಿತಶಾಹಿಗಳ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.
ಯಳನಡು ಗ್ರಾ.ಪಂ.ನ ನೂತನಕಟ್ಟಡದ ಉದ್ಘಾಟನೆಯಲ್ಲಿ ಜನಪ್ರತಿನಿಧಿಗಳ ಗೈರಿನಲ್ಲಿ ಉದ್ಘಾಟನೆ ನೆರವೇರಿಸಿದ ತಾ.ಪಂ.ಅಧ್ಯಕ್ಷೆ ಲತಾ.


ಹುಳಿಯಾರು ಹೋಬಳಿಯ ಯಳನಡು ಗ್ರಾಮ ಗಡಿಭಾಗದಲಿದ್ದು ಒಟ್ಟು ೧೪ ಲಕ್ಷ ವೆಚ್ಚದಲ್ಲಿ ಗ್ರಾ.ಪಂ.ಕಟ್ಟಡ ನಿರ್ಮಿಸಲಾಗಿತ್ತು. ಸರ್ಕಾರಿ ಕಾರ್ಯಕ್ರಮವಾದ್ದರಿಂದ ಶಾಸಕರು ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಿ ಉದ್ಘಾಟನಾ ದಿನವನ್ನು ನಿಗದಿ ಪಡಿಸಲಾಗಿತ್ತು. ಶಿಷ್ಟಾಚಾರದಂತೆ ಸಚಿವರು,ಹಾಲಿಶಾಸಕರು, ಸಂಸದರು,ಇಬ್ಬರು ವಿಧಾನಪರಿಷತ್ ಸದಸ್ಯರು,ಜಿ.ಪಂ.ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ಹೀಗೆ ಪ್ರತಿಯೊಬ್ಬರನ್ನು ಆಹ್ವಾನಪತ್ರಿಕೆಯಲ್ಲಿ ಮುದ್ರಿಸಿ ಎಲ್ಲರನ್ನು ಕಂಡು ಆಹ್ವಾನ ನೀಡಲಾಗಿತ್ತು.
ಯಳನಡು ಗ್ರಾ.ಪಂ.ನ ನೂತನಕಟ್ಟಡದ ಉದ್ಘಾಟನೆಗೆ ಸಿದ್ದಪಡಿಸಿದ್ದ ವೇದಿಕೆ.
ಅದರಂತೆ ಇಂದು ಸಂಸದರು,ಶಾಸಕರ ನಿರೀಕ್ಷೆಯಲ್ಲಿ ವೇದಿಕೆಯನ್ನು ಸಿದ್ದಗೊಳಿಸಿದ್ದಲ್ಲದೆ, ಲಘು ಉಪಹಾರದ ವ್ಯವಸ್ಥೆ ಮಾಡಿಕೊಂಡಿದ್ದರು. ನಿಗದಿತ ಸಮಯ ಮೀರಿ ಗಂಟೆಗಳೇ ಕಳೆದರೂ ಸಹ ಆಗಹೀಗ ಎಂದು ನಂತರ ಪೋನ್ ಸಂಪರ್ಕಕ್ಕೆ ಯಾರೊಬ್ಬರೂ ಸಿಗದಂತಾಗಿ ಪರಿಪಾಟಲು ಪಡುವಂತಾಯಿತು.ಶಾಸಕರಿಂದಲೇ ಕಟ್ಟಡದ ಉದ್ಘಾಟನೆ ಮಾಡಿಸಬೇಕೆಂಬ ಹಂಬಲದಿಂದಿದ ಸಂಜೆಯವರೆಗೂ ಕಾದೇಕಾದರು. ಇನ್ನೇನು ಸೂರ್ಯ ಮುಳುಗಿ ಕತ್ತಲಾಗುವ ಸಮಯವಾಗಿತ್ತದೆಂದು ಅರಿತು ಕಾರ್ಯಕ್ರಮಕ್ಕೆಂದೆ ಆಗಮಿಸಿದ್ದ ತಾ.ಪಂ.ಅಧ್ಯಕ್ಷೆಯಿಂದ ಉದ್ಘಾಟನಾ ಶಾಸ್ತ್ರ ನೆರವೇರಿಸಿದರು. ಎಲ್ಲರ ವರ್ತನೆಯಿಂದ ಬೇಸತ್ತಿದ್ದ ಸಾರ್ವಜನಿಕರು ಒಬ್ಬರೂ ಇತ್ತಡೆ ತಲೆಹಾಕದೆ ಅವರಿಗಾಗಿ ಹಾಕಿದ್ದ ಛೇರ್ ಗಳು ಸಹ ಸಂಜೆಯವರೆಗೂ ಖಾಲಿಯೇ ಉಳಿದಿದ್ದವು.
ಕಾರ್ಯಕ್ರಮದ ಬಗ್ಗೆ ಮುಂಚಿತವಾಗಿಯೇ ಕರಪತ್ರಗಳನ್ನು ಮಾಡಿಸಿ ಸಂಸದರಿಗೆ, ಶಾಸಕರಿಗೆ ಹಾಗೂ ಪಂಚಾಯ್ತಿಯ ಇಓ ಅವರಿಗೂ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ನೀಡಿ ಆಹ್ವಾನವಿತ್ತಿದ್ದರೂ ಸಹ ಯಾರೋಬ್ಬರು ಬಾರದಯಿದ್ದು ತಾ.ಪಂ.ಅಧ್ಯಕ್ಷರ ಹಾಗೂ ಸ್ಥಳೀಯ ಗ್ರಾ..ಪಂ.ಸದಸ್ಯರ ಅಸಮಾಧಾನಕ್ಕೆ ಕಾರಣವಾಯಿತು.
ಈ ಬಗ್ಗೆ ಬೇಸರದಿಂದಲೇ ಮಾತನಾಡಿದ ತಾ.ಪಂ.ಅಧ್ಯಕ್ಷೆ ಶ್ರೀಮತಿ ಲತಾಕೇಶವಮೂರ್ತಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಬಾರದು, ಕಾರ್ಯಕ್ರಮಕ್ಕೆ ತಡವಾಗಿ ಬರುವುದಾಗಿ ಅಥವಾ ಬರುವುದಿಲ್ಲ ಎಂದು ತಿಳಿಸಬಹುದಾಗಿತ್ತು ಆದರೆ ಏನೂ ಹೇಳದೆ ಈರೀತಿ ಮಾಡುವುದು ಸರಿಯಲ್ಲ. ಇದರಿಂದ ಜನರ ಅಸಮಾಧಾನಕ್ಕೆ ಗುರಿಯಾಗಬೇಕಾಗುತ್ತದೆ ಎಂದರು.

ಈವೇಳೆ ಗ್ರಾ.ಪಂ.ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷೆ ಗಂಗಮ್ಮ, ತಾ.ಪಂ.ಸದಸ್ಯೆ ಜಯಲಕ್ಷ್ಮಮ್ಮ ಸೇರಿದಂತೆ ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.