ವಿಷಯಕ್ಕೆ ಹೋಗಿ

ಆಟಲ್ ಜನಸ್ನೇಹಿ ಕೇಂದ್ರದಲ್ಲಿ ಪ್ರಿಂಟರ್ ಪ್ರಾಬ್ಲಂ ಗಣಕೀಕೃತ ದಾಖಲೆಗೆ ಜನರ ಪರದಾಟ

ಹುಳಿಯಾರು  ಪಟ್ಟಣದ ನಾಢಕಛೇರಿಯ ಆಟಲ್ ಜನಸ್ನೇಹಿ ಕೇಂದ್ರದಲ್ಲಿ ಕಳೆದ ಎರಡುಮೂರು ದಿನಗಳಿಂದ ಗಣಕಯಂತ್ರ ಹಾಗೂ ಪ್ರಿಂಟರ್ ನಲ್ಲಿ ದೋಷ ಉಂಟಾಗಿದ್ದು ಯಾವುದೇ ರೀತಿಯ ಅರ್ಜಿಗಳನ್ನು ಸ್ವೀಕರಿಸುವುದಾಗಲಿ, ಪಹಣಿ ನೀಡುವುದಾಗಲಿ ನಡೆಯದೆ ಸಾರ್ವಜನಿಕರಿಗೆ ದಾಖಲೆಗಳು ಸಿಗದೆ ಪರದಾಡುವಂತಾಗಿದೆ.
ಹುಳಿಯಾರಿನ ಆಟಲ್ ಜನಸ್ನೇಹಿ ಕೇಂದ್ರದಲ್ಲಿ ಗಣಯಂತ್ರದಲ್ಲಿ ತಾಂತ್ರಿಕ ದೋಷದಿಂದ ದಾಖಲೆ ದೊರೆಯದೆ ತಲೆಯ ಮೇಲೆ ಕೈಹೊತ್ತು ಕೂತಿರುವ ಹಳ್ಳಿ ಜನ.
ವಂಶವೃಕ್ಷ, ಜನನಪ್ರಮಾಣ ಪತ್ರ,ಮರಣ ಪ್ರಮಾಣಪತ್ರ, ಸಂಧ್ಯಾಸುರಕ್ಷಾ, ವಾಸಸ್ಥಳ ದೃಢೀಕರಣ ಪತ್ರ ಸೇರಿದಂತೆ ಇನ್ನಿತರ ಹಲವಾರು ದಾಖಲೆಗಳನ್ನು ಜನ ಸ್ನೇಹಿ ಕೇಂದ್ರದಲ್ಲೇ ಪಡೆಯಬೇಕಿದ್ದು ಹೋಬಳಿಯ ಹದಿನೈದು ಇಪ್ಪತ್ತು ಕಿ.ಮೀ ದೂರದ ನಾನಾ ಭಾಗದ ಗ್ರಾಮದ ಸಾರ್ವಜನಿಕರು ನಾಢಕಛೇರಿಯಲ್ಲಿಗೆ ನಿತ್ಯ ಬಂದು ವಾಪಸ್ಸ್ ಹೋಗುವಂತಾಗಿದೆ. ಪ್ರಿಂಟರ್ ನಲ್ಲಿ ತಾಂತ್ರಿಕ ತೊಂದರೆ ಉಂಟಾಗುವುದು ಸಹಜ, ಅದಕ್ಕೆ ಬದಲಾಗಿ ಮತ್ತೊಂದು ಪ್ರಿಂಟರ್ ತಂದು ಅರ್ಜಿ ದಾಖಲೆಗಳನ್ನು ಸ್ವೀಕರಿಸುವ ಕಾರ್ಯ ಮಾಡುವ ಬದಲು ಕೆಟ್ಟಿರುವ ಅದೇ ಪ್ರಿಂಟರನ್ನು ಸರಿ ಮಾಡಿಸುವಲ್ಲಿ ಮುಂದಾಗಿರುವುದರಿಂದ ಜನಕ್ಕೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದರು.ಇಂದು ಪ್ರತಿಯೊಂದಕ್ಕೂ ಗಣಕೀಕೃತ ದಾಖಲೆಗಳು ಅಗತ್ಯವಿದ್ದು ಅದಿಲ್ಲದೆ ಎಲ್ಲಾ ಕೆಲಸಗಳಿಗೆ ಎಡವಟ್ಟಾಗಿದೆ ಎಂದು ಬೆಳಿಗ್ಗಿನಿಂದ ಕಾಯುತ್ತಿರುವವರು ತಮ್ಮ ನಿಸ್ಸಾಹಯಕತೆ ವ್ಯಕ್ತಪಡಿಸಿದರು.

ಪ್ರಿಂಟರ್ ಕೆಟ್ಟು ಹೋಗಿರುವುದರ ಬಗ್ಗೆ ತಹಸೀಲ್ದಾರ್ ಅವರ ಗಮನಕ್ಕೆ ತಂದು, ತಾಲ್ಲೂಕ್ ಕಛೇರಿಯಲ್ಲಿ ಹೆಚ್ಚುವರಿಯಾಗಿ ಯಾವುದಾದರೂ ಪ್ರಿಂಟರ್ ಇದ್ದರೆ ಕೊಡುವಂತೆ ಕೇಳಿದ್ದೇವೆ. ಸದ್ಯ ಕೆಟ್ಟಿರುವ ಪ್ರಿಂಟರ್ ರನ್ನು ಆ ಕಂಪನಿಯವರೇ ಬಂದು ಸರಿ ಮಾಡಬೇಕಿದ್ದು, ಈಗಾಗಲೇ ಅವರಿಗೆ ವಿಷಯ ಮುಟ್ಟಿಸಿದ್ದೇವೆ ಎರಡು ದಿನ ರಜೆ ಇದ್ದು ಶನಿವಾರದ ಒಳಗಾಗಿ ಸರಿ ಮಾಡಿಸಲಿದ್ದು ಸಾರ್ವಜನಿಕರು ಸಹಕರಿಸುವಂತೆ ಉಪತಹಸೀಲ್ದಾರ್ ಸತ್ಯನಾರಾಯಣ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...