ವಿಷಯಕ್ಕೆ ಹೋಗಿ

ಮಾನವನ ಶರೀರ ಕಂಪ್ಯೂಟರ್ ನಂತೆ : ಪಾವಟೆ

 ಕಂಪ್ಯೂಟರ್ ಗೆ ಯಾವರೀತಿ ತಂತ್ರಾಂಶಗಳನ್ನು ಹಾಕಿದಾಗ ಅದು ಕಾರ್ಯ ಮಾಡುತ್ತದೋ ಅದರಂತೆ ಮಾನವನ ಶರೀರವೂ ಸಹ ವಿವಿಧ ವಿಷಯಗಳನ್ನು ಗ್ರಹಿಸುವ ಮೂಲಕ ತನ್ನ ಕಾರ್ಯ ಮಾಡುತ್ತದೆ. ಅ ನಿಟ್ಟಿನಲ್ಲಿ ಉತ್ತಮ ವಿಚಾರಗಳ ಗ್ರಹಿಕೆಯತ್ತ ದೃಢ ಸಂಕಲ್ಪವಿರಬೇಕು ಎಂದು ರಾಜ್ಯ ಸಾಮಾಜಿಕ ಅಭಿವೃದ್ದಿ ಸಲಹೆಗಾರ ತುಮಕೂರಿನ ಸಿ.ಸಿ.ಪಾವಟೆ ತಿಳಿಸಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಸಿ.ಬಿ.ಸುರೇಶ್ ಬಾಬು ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ೨೦೧೪-೧೫ನೇ ಸಾಲೀನ ಸಾಂಸ್ಕೃತಿಕ,ಕ್ರೀಡಾ,ಎನ್,ಎಸ್,ಎಸ್ ಹಾಗೂ ಯುವ ರೆಡ್ ಕ್ರಾಸ್ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ನಮ್ಮ ಸೃಷ್ಠಿಯಲ್ಲಿ ಸಕಲ ಜೀವರಾಶಿಗಳಿದ್ದರೂ ಸಹ ಮಾನವ ಮಾತ್ರ ಅವುಗಳಿಗಿಂತ ಭಿನ್ನವಾಗಿದ್ದು ತನಗೆ ಬೇಕಾದಾಗೆ ಬದುಕುವ,ಆಲೋಚಿಸುವ ವಿಶಿಷ್ಟತೆಯನ್ನು ಹೊಂದಿದ್ದಾನೆ. ಸೂರ್ಯ, ಚಂದ್ರ, ವಾಯು ಸೇರಿದಂತೆ ಪ್ರಕೃತಿಯಲ್ಲಿನ ಕೆಲ ಪ್ರಾಣಿಗಳು ಶತಶತಮಾನಗಳಿಂದಲೂ ಅಂದು ಯಾವರೀತಿ ಇದ್ದವೂ ಇಂದೂ ಸಹ ಅದೇ ರೀತಿ ಜೀವಿಸುತ್ತಿವೆ. ಆದರೆ ಮಾನವ ಮಾತ್ರ ತನ್ನಲ್ಲಿ ಬದಲಾವಣೆ ತಂದುಕೊಂಡು ತನ್ನದೇ ಆದ ರೀತಿಯಲ್ಲಿ ಬದುಕನ್ನು ಸಾಗಿಸುತ್ತಿದ್ದಾನೆ ಎಂದರು. ಪ್ರಪಂಚದಲ್ಲಿ ಹೆಚ್ಚು ಯುವಪೀಳಿಗೆಯನ್ನು ಹೊಂದಿರುವ ರಾಷ್ಟ್ರ ಭಾರತವಾಗಿದ್ದು ೨೦೨೦ರ ವೇಳೆಗೆ ಹೆಚ್ಚಿನ ಆವಿಷ್ಕಾರಗಳಿಂದ ಪ್ರಪಂಚದಲ್ಲೇ ಉನ್ನತ ಸ್ಥಾನಕ್ಕೇರಲಿದೆ. ಇದನ್ನು ಅರಿತ ಕೆಲ ನೆರೆಹೊರೆ ರಾಷ್ಟ್ರಗಳು ಭಾರತದ ಯುವಪೀಳಿಗೆಯ ದಿಕ್ಕುತಪ್ಪಿಸುವ ಹುನ್ನಾರ ಮಾಡುತ್ತಿವೆ. ಈ ಬಗ್ಗೆ ನಮ್ಮ ಯುವಪೀಳಿಗೆ ಎಚ್ಚರದಿಂದಿರಬೇಕು ಎಂದರು.
ವಿದ್ಯಾರ್ಥಿ ದೆಸೆಯಲ್ಲಿ ಕಾಲೇಜು ಜೀವನ ಮಹತ್ವದಾಗಿದ್ದು ಇಲ್ಲಿ ಪ್ರೀತಿ,ಪ್ರೇಮ, ವಿದ್ಯೆ ಎಲ್ಲವೂ ಇದ್ದು ಈ ಸಮಯದಲ್ಲಿ ವಿದ್ಯಾರ್ಥಿಗಳು ಸ್ವಲ್ಪ ಎಚ್ಚರ ತಪ್ಪಿದರೆ ಜೀವನದ ದಿಕ್ಕೆ ಬದಲಾಗುತ್ತದೆ. ಇಂತಹ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಉತ್ತಮ ವಿಚಾರಗಳತ್ತ ಗಮನಕೊಡುವ ಮೂಲಕ ತಮ್ಮ ಜೀವನದಲ್ಲಿ ಯಶಸ್ಸುಗಳಿಸಿ ಎಂದು ಹಾರೈಸಿದರು.
ಕ್ರೀಡೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದ ಶಾಸಸ ಸಿ.ಬಿ.ಸುರೇಶ್ ಬಾಬು ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಮಟ್ಟದ ಕ್ರೀಡಾಕೋಟದ ಜೊತೆಗೆ ರಾಷ್ಟ್ರೀಯಮಟ್ಟದ ಕ್ರೀಡಾಕೂಟಗಳಲ್ಲಿ ಸ್ಪರ್ಧಿಸಿ ಜಯಗಳಿಸಿ ಕಾಲೇಜಿಗೆ ಕೀರ್ತಿ ತನ್ನಿ ಎಂದರು. ಕಾಲೇಜು ಅಭಿವೃದ್ದಿ ಹಾಗೂ ಕ್ರೀಡೆಗೆ ಪೂರಕವಾದ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ತಿಳಿಸಿದರು.

ಈ ವೇಳೆ ಪ್ರಾಂಶುಪಾಲ ಬಿ.ಆರ್.ಕೃಷ್ಣಮೂರ್ತಿ ಬಿಳಿಗೆರೆ , ಕಾಲೇಜು ಅಭಿವೃದ್ದಿ ಸಮಿತಿಯ ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್,ಪರ್ವಿನ್, ಉಪನ್ಯಾಸಕರಾದ ಶಂಕರಲಿಂಗಯ್ಯ ,ಅಶೋಕ್, ಇಬ್ರಾಹಿಂ, ಶ್ರೀನಿವಾಸಪ್ಪ, ಹನುಮಂತಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಶಿವಯ್ಯ,ಲೋಕೇಶ್,ಉಮೇಶ್ ಸೇರಿದಂತೆ ಸಿಬ್ಬಂದಿಯವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಆಟೋಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...