ವಿಷಯಕ್ಕೆ ಹೋಗಿ

ಮಧ್ಯದಂಗಡಿ ಸ್ಥಳಾಂತರ: ಅಬ್ಕಾರಿ ಉಪಆಯುಕ್ತರ ಆದೇಶಕ್ಕೆ ತಕರಾರು ಮತ್ತೆ ಮರುಅಳತೆಗೆ ಆಯುಕ್ತರ ಸೂಚನೆ

ವರದಿ ; ಡಿ.ಆರ್.ನರೇಂದ್ರಬಾಬು
------
ಹುಳಿಯಾರು : ಮಧ್ಯದಂಗಡಿ ಸ್ಥಳಾಂತರಗೊಳಿಸುವ ವಿಚಾರವಾಗಿ ಖುದ್ದು ಅಬ್ಕಾರಿ ಡಿಸಿಯವರೆ ಸ್ಥಳ ಪರಿಶೀಲನೆ ಮಾಡಿ,ದೇವಾಲಯಗಳಿಂದ ಮಧ್ಯದಂಗಡಿವರೆಗಿನ ದೂರವನ್ನು ಸಾರ್ವಜನಿಕರ ಸಮಕ್ಷಮದಲ್ಲಿ ಮರುಅಳತೆ ಮಾಡಿ ಸ್ಥಳಾಂತರಕ್ಕೆ ಅಂತಿಮ ಗಡುವು ನೀಡಿ ಅದೇಶ ಹೊರಡಿಸಿದ್ದರೂ ಸಹ ಇದೀಗ ಮತ್ತೊಮ್ಮೆ ಸ್ಥಳ ಪರಿಶೀಲನೆ ಮಾಡಿ,ಮರುಆಳತೆ ಮಾಡುವಂತೆ ಆಬಕಾರಿ ಆಯುಕ್ತರು ನೋಟೀಸ್ ಸೂಚಿಸಿರುವುದು ಸಾರ್ವಜನಿಕರ ಅಸಹನೆಗೆ ಕಾರಣವಾಗಿದೆ.
ಪಟ್ಟಣದ ಹೃದಯಭಾಗದಲ್ಲಿರುವ ದಿ ಟೌನ್ ಕೋಪರೇಟಿವ್ ಸೊಸೈಟಿಯ ಕಟ್ಟಡದಲ್ಲಿರವ ರಂಗನಾಥ ಲಿಕ್ಕರ್ ಷಾಪ್ ಅಬಕಾರಿ ನಿಯಮ ಉಲ್ಲಂಘಿಸಿ ಸಾರ್ವಜನಿಕ ಆಕ್ಷೇಪಣಾರ್ಹ ಸ್ಥಳದಲ್ಲಿದ್ದು ಇದನ್ನು ತೆರವುಗೊಳ್ಳಿಸಬೇಕೆಂದು ಕಟ್ಟಡದ ಮಾಲೀಕರಾದ ಟೌನ್ ಕೋಅಪರೇಟಿವ್ ಸೊಸೆ‘ಟಿಯವರು ೨೦೦೨ ರಿಂದ ಕಾನೂನು ಹೋರಾಟ ನಡೆಸುತ್ತಾ ಬಂದಿದ್ದರು.ಇವರೊಂದಿಗೆ ಗ್ರಾಮದೇವತೆ ಹುಳಿಯಾರಮ್ಮ ದೇವಸ್ಥಾನ ಸಮಿತಿ,ರಂಗನಾಥಸ್ವಾಮಿ ದೇವಾಲಯ ಟ್ರಸ್ಟ್,ಬೀರಲಿಂಗೇಶ್ವರ ದೇವಾಲಯ ಸಮಿತಿ , ಸೀತಾರಾಮ ಪ್ರತಿಷ್ಠಾನ ಟ್ರಸ್ಟ್, ಕರ್ನಾಟಕ ರಕ್ಷಣಾ ವೇದಿಕೆ ಘಟಕ,ಜಯಕರ್ನಾಟಕ ಘಟಕ, ರೈತಸಂಘದವರು, ಪಂಚಾಯ್ತಿ ಸದಸ್ಯರು ಸಹ ಸೊಸೈಟಿಯ ಹೋರಾಟಕ್ಕೆ ಕೈಜೋಡಿಸಿದ್ದರು.
ಹುಳಿಯಾರಿನಲ್ಲಿ ಅಕ್ಷೇಪಣಾರ್ಹ ಸ್ಥಳದಲ್ಲಿನ ಮದ್ಯದಂಗಡಿಯಿಂದ ದೇವಾಲಯಗಳಿರುವ ಅಂತರವನ್ನು ಖುದ್ದು ಅಬಕಾರಿ ಡಿಸಿ ಅವರೆ ಈ ಹಿಂದೆ ಅಳತೆ ಮಾಡಿಸಿದ್ದು.
ದೇವಾಲಯಗಳ ಭಕ್ತರ ಹಾಗೂ ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟುಮಾಡುತ್ತಿರುವ ರಂಗನಾಥ ಲಿಕ್ಕರ್ ಷಾಪ್ ಜನನಿಬಿಡ ಹಾಗೂ ಆಕ್ಷೇಪಣಾರ್ಹ ಸ್ಥಳದಲ್ಲಿದ್ದೂ ಇದನ್ನು ಮುಂದಿನ ಅವಧಿಗೆ ನವೀಕರಿಸದೆ ಸ್ಥಳಾಂತರಿಸಬೇಕೆಂದು ಕಾನೂನು ಹೋರಾಟ ನಡೆದಿತ್ತು.
ಅಬಕಾರಿ ನಿಯಮದ ಅನ್ವಯ ದೇವಾಲಯಗಳಿಂದ ೧೦೦ ಮೀ ಒಳಗೆ ಹಾಗೂ ರಾಷ್ಟ್ರೀಯಹೆದ್ದಾರಿಯಿಂದ ೨೨೦ ಮೀ ಒಳಗೆ ಯಾವುದೇ ಮದ್ಯದಂಗಡಿ ಇರಬಾರದೆಂಬ ನಿಯಮವನ್ನು ಎತ್ತಿ ಹಿಡಿದು ಸನ್ನದನ್ನೇ ರದ್ದು ಪಡಿಸಬೇಕೆಂದು ಅಬಕಾರಿ ಸಚಿವರವರೆಗೂ ಪ್ರಕರಣ ಸಾಗಿತ್ತು.
ಅಂತರ ಎಷ್ಟಿದೆ: ಈ ಮದ್ಯದಂಗಡಿಯಿಂದ ೪೬.೪ ಮೀ ಅಂತರದಲ್ಲಿ ಗ್ರಾಮದೇವತೆ ಹುಳಿಯಾರಮ್ಮ ದೇವಿ ದೇವಾಲಯ, ೯೬.೩ ಮೀ ಅಂತರದಲ್ಲಿ ಮುಜರಾಯಿಗೆ ಸೇರಿದ ಪುರಾಣ ಪ್ರಸಿದ್ದ ಶ್ರೀರಂಗನಾಥಸ್ವಾಮಿ ಸನ್ನಿಧಿ, ೯೩.೭ ಮೀ ದೂರದಲ್ಲಿ ಬೀರಲಿಂಗೇಶ್ವರ ಸ್ವಾಮಿ ದೇವಾಲಯ ಹಾಗೂ ೧೧೬ ಮೀ ಅಂತರದಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಿಂದ ೧೧೬ ಮೀ ಅಂತರದಲ್ಲಿದೆ.ಈ ಪ್ರಕಾರ ಕರ್ನಾಟಕ ಅಬಕಾರಿ ಸನ್ನದುಗಳು ೧೯೬೭ ನಿಯಮ ೫ರಂತೆ ಅಕ್ಷೇಪಣಾ ಸ್ಥಳವಾಗಿದೆ.
ಇದೀಗ ಮತ್ತೆ ಮರು ಅಳತೆ ಹಾಲಿ ಅಬಕಾರಿ ಉಪ ಆಯುಕ್ತರು ಕಳುಹಿಸಿರುವ ಸೂಚನಾ ಪತ್ರ.
ಹುಳಿಯಾರಮ್ಮ ದೇವಾಲಯ ಮದ್ಯದಂಗಡಿಯಿಂದ ೪೬.೪ ಮೀ ಅಂತರದಲ್ಲಿದ್ದರೂ ಸಹ ದೇವಾಲಯ ಸಮಿತಿಯು ನಿಯಮಾನುಸಾರ ನೋಂದಣಿಯಾಗಿಲ್ಲ ಎನ್ನುತ್ತಾ ಅಲ್ಲದೆ ರಂಗನಾಥಸ್ವಾಮಿ ದೇವಾಲಯಕ್ಕೂ ಮಧ್ಯದಂಗಡಿಗೂ ಅಂತರ 100 ಮೀಟರ್ ಗೂ ಹೆಚ್ಚಿದೆ ಎಂದು ಮದ್ಯದ ಅಂಗಡಿಯವರು ನೀಡಿದ್ದ ತಪ್ಪು ಮಾಹಿತಿಯನ್ನೆ ಪರಿಗಣಿಸುತ್ತ ಸನ್ನದುದಾರರ ಪರವಾನಿಗೆ ನವೀಕರಿಸುತ್ತ ಬಂದಿದ್ದು ಸಮಸ್ಯೆಗೆ ಕಾರಣವಾಗಿತ್ತು.
ದೂರು ಪ್ರತಿದೂರು, ಹೇಳಿಕೆ ಪ್ರತಿಹೇಳಿಕೆ ಇವುಗಳೆಲ್ಲಾ ವಿಚಾರಣೆ ನಡೆದು ಅಬಕಾರಿ ಡಿಸಿಯವರೇ ಖುದ್ದು ಸ್ಥಳಕ್ಕೆ ಬಂದು ಆಳತೆ ಮಾಡಿ ಅಳತೆಯ ವಿಡೀಯೋ ಚಿತ್ರಿಕರಿಸಿ ತಹಸೀಲ್ದಾರ್ ವರದಿ, ತಾಲ್ಲೂಕು ಹಾಗೂ ಜಿಲ್ಲಾ ನೊಂದಣಾಕಾರಿಗಳ ವರದಿ, ಚಿ.ನಾ.ಹಳ್ಳಿ ಅಬಕಾರಿ ನಿರೀಕ್ಷಕರ ವರದಿ,ತಿಪಟೂರು ಅಬಕಾರಿ ಉಪನಿರೀಕ್ಷಕರ ವರದಿ, ಹೆದ್ದಾರಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಲೋಕೋಪಯೋಗಿ ಇಲಾಖೆ ಇವರುಗಳ ವರದಿ ಆದರಿಸಿ ಅಂತಿಮವಾಗಿ ಜಿಲ್ಲಾ ಅಬಕಾರಿ ಉಪ ಆಯುಕ್ತರು ಡಿಸೆಂಬರ್ ೨೮ರ ಒಳಗೆ ಬೇರೊಂದು ನಿರಾಕ್ಷೇಪಣಾ ಸ್ಥಳಕ್ಕೆ ಸ್ಥಳಾಂತರಿಸಲು ಆದೇಶ ಹೊರಡಿಸಿದ್ದರು.

ಲಿಕ್ಕರ್ ಷಾಪ್ ಗೂ ಹಾಗೂ ರಂಗನಾಥ ಸ್ವಾಮಿ ದೇವಾಲಯಕ್ಕೂ ನೂರು ಮೀಟರ್ ಗೂ ಹೆಚ್ಚು ಅಂತರವಿದೆ ಎನ್ನುವ ಸನ್ನದುದಾರರು ಈ ಬಗ್ಗೆ ಮತ್ತೆ ತಕರಾರು ತೆಗೆದಿದ್ದರಿಂದ ಇದೀಗ ಅಂತಿಮವಾಗಿ ಅಬ್ಕಾರಿ ಆಯುಕ್ತರು ಮತ್ತೊಮ್ಮೆ ಸ್ಥಳ ಪರೀಕ್ಷೆ ಹಾಗೂ ಮರುಅಳತೆಗೆ ಸೂಚಿಸಿದ್ದಾರೆ.ಏಪ್ರಿಲ್ ೧೭ ರಂದು ಮರುಅಳತೆ ನಡೆಯಲಿದ್ದು ಮುಂದೇನಾಗಲಿದೆ ಎನ್ನುವ ಕುತುಹಲಕ್ಕೆ ಕಾರಣವಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.