ವಿಷಯಕ್ಕೆ ಹೋಗಿ

ಶಾಸ್ತ್ರೋಕ್ತವಾಗಿ ನಡೆಯಿತು ಶ್ರೀನಿವಾಸ ಕಲ್ಯಾಣೋತ್ಸವ

ಲೋಕ ಕಲ್ಯಾಣಾರ್ಥವಾಗಿ ಶೂರರಾಜ ಪೌತ್ರನಾದ ವಸುದೇವನ ಪುತ್ರನಾದ ಶ್ರೀ ವಶಿಷ್ಠ ಗೋತ್ರೋತ್ಪನ್ನನಾದ ಸಾಕ್ಷತ್ ಮನ್ಮಥನಾದ ರಮಾವಲ್ಲಭಾನಾದ, ಭೂವೈಕುಂಠಾಧಿಪತಿ ಶ್ರೀಶ್ರೀನಿವಾಸ ಶರ್ಮ ಹಾಗೂ ಸುಧರ್ಮರಾಜನ ಪೌತ್ರಿಯಾದ ಆಕಾಶರಾಜನ ಪುತ್ರಿಯಾದ ಶ್ರೀ ಅತ್ರಿಗೋತ್ತೋತ್ಪನ್ನಳಾದ ಶ್ರೀಪದ್ಮಾವತಿಯ ಕಲ್ಯಾಣೊತ್ಸವ ಗೊಧೋಳಿ ಲಗ್ನದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಹುಳಿಯಾರಿನ ಎಂಪಿಎಸ್ ಶಾಲಾವರಣ ಭವ್ಯವೇದಿಕೆಯಲ್ಲಿ ನಡೆದ ಶ್ರೀಶ್ರೀನಿವಾಸ-ಪದ್ಮಾವತಿಯ ಕಲ್ಯಾಣೋತ್ಸವ.


ಪಟ್ಟಣದ ಎಂಪಿಎಸ್ ಶಾಲಾವರಣದಲ್ಲಿ ಶನಿವಾರ ಸಂಜೆ ನಡೆದ ಕಲ್ಯಾಣೊತ್ಸವ ಕಾರ್ಯಕ್ರಮವು ಶ್ರೀಶ್ರೀನಿವಾಸ ಮತ್ತು ಪದ್ಮಾವತಿ ಅಮ್ಮನವರ ಕಲ್ಯಾಣ ಮಹೋತ್ಸವ ಸಮಿತಿ, ತಿರುಪತಿ -ತಿರುಮಲ ದಾಸ ಸಾಹಿತ್ಯ ಪ್ರಾಜೆಕ್ಟ್ ಹಾಗೂ ಪಟ್ಟಣದ ಸಮಸ್ತ ಭಜನಾ ಮಂಡಳಿ ಸಾರ್ವಜನಿಕರ ಸಹಯೋಗದಲ್ಲಿ ಕಲ್ಯಾಣೋತ್ಸವ ಅಯೋಜಿಸಲಾಗಿತ್ತು. ಇದಕ್ಕೆಂದೆ ಟಿಟಿಡಿ ತಿರುಪತಿಯಿಂದ ಶ್ರೀಶ್ರೀನಿವಾಸ ವಿಗ್ರಹವನ್ನು ಕರೆತರಲಾಗಿತ್ತು.ತಿರುಮಲ ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಿರ್ಮಿಸಿದ್ದ ವೇದಿಕೆಯಲ್ಲಿ ಕಲ್ಯಾಣೋತ್ಸವ ನಡೆಯಿತು.
ಹುಳಿಯಾರಿನಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಮುಖ್ಯಪ್ರಾಣ ಭಜನಾ ಮಂಡಳಿಯವರು ಗೋವಿಂದ ನಾಮ ಸ್ಮರಣೆ ಮಾಡಿದರು.
ಕಲ್ಯಾಣೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ವಾಸವಿ ದೇವಾಲಯದಲ್ಲಿ ವಿವಿಧ ಪೂಜಾ ವಿಧಿವಿಧಾನಗಳನ್ನು ನಡೆಸಿ ನಂತರ ಅಲಂಕೃತ ಶ್ರೀನಿವಾಸ ವಿಗ್ರಹದ ರಾಜಬೀದಿ ಉತ್ಸವ ನಡೆದು, ಎಂಪಿಎಸ್ ಶಾಲಾವರಣಕ್ಕೆ ಸಂಜೆ ತರಲಾಯಿತು. ಕಲ್ಯಾಣೋತ್ಸವಕ್ಕೆಂದೆ ಭವ್ಯವಾದ ಮಂಟಪ ಸಿದ್ದಗೊಳಿಸಲಾಗಿತ್ತು. ಮುಖ್ಯಪ್ರಾಣ ಭಜನಾ ಮಂಡಳಿ ಸದಸ್ಯರು ಗೋವಿಂದ ಕುರಿತು ಹಾಡನ್ನು ಗಾಯನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಟಿಟಿಡಿ ದಾಸ ಸಾಹಿತ್ಯ ಪ್ರಾಜೆಕ್ಟ್ ನ ವಿಶೇಷ ಅಧಿಕಾರಿಗಳಾದ ಶ್ರೀಆನಂದತೀರ್ಥಾಚಾರ್ಯ ಮತ್ತವರ ತಂಡದವರು ಕಲ್ಯಾಣೋತ್ಸವವನ್ನು ನಡೆಸಿಕೊಟ್ಟರು. ಸಂಕಲ್ಪ ಪುಣ್ಯಾಹ,ದೇವನಾಂದಿ, ವರಪೂಜೆ, ವರೋಪಚಾರ ಸಹಿತ ಕಂಕಣಧಾರಣೆ ನಡೆಯಿತು.ಶುಭಗಳಿಗೆಯಲ್ಲಿ ಸಹಸ್ರಾರು ಭಕ್ತರ ಗೋವಿಂದನ ಉದ್ಘೋಷದಲ್ಲಿ ಮಾಂಗಲ್ಯ ಧಾರಣೆ ನಡೆಯಿತು. ಮಹಾಮಂಗಳಾರತಿ ಎತ್ತಿ ಪೂಜೆ ಸಲ್ಲಿಸಿ ಪ್ರಸಾದ ವಿನಿಯೋಗ ಮಾಡುವ ಮೂಲಕ ಕಾರ್ಯಕ್ರಮಕ್ಕೆ ತೆರೆಎಳೆಯಲಾಯಿತು.

ಈ ವೇಳೆ ಶಾಸಕ ಸಿ.ಬಿ.ಸುರೇಶ್ ಬಾಬು ಸೇರಿದಂತೆ ಹುಳಿಯಾರು, ತುರುವೇಕೆರೆ,ನೆಲಮಂಗಲ,ಚನ್ನಗಿರಿ, ಚಿ.ನಾ.ಹಳ್ಳಿ,ಚನ್ನರಾಯಪಟ್ಟಣ ಮುಂತಾದೆಡೆಯಿಂದ ಆಗಮಿಸಿದ ಭಜನಾ ಮಂಡಳಿ ಸದಸ್ಯರುಗಳು ಹಾಗೂ ಸಹಸ್ರಾರು ಭಕ್ತರು ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡರು. ಭಕ್ತಾಧಿಗಳಿಗಾಗಿ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...