ವಿಷಯಕ್ಕೆ ಹೋಗಿ

ಮನೆಗೆ ಮಳೆನೀರು ನುಗ್ಗಿ ಗೋಡೆ ಕುಸಿತ

ಹುಳಿಯಾರು  ಪಟ್ಟಣ ಸೇರಿದಂತೆ ಹೋಬಳಿಯಾದ್ಯಂತ ಶುಕ್ರವಾರ ರಾತ್ರಿ ಉತ್ತಮ ಮಳೆಯಾಗಿದ್ದು ಪಟ್ಟಣದ ಮಾರುತಿನಗರದ ಐದನೇ ಬ್ಲಾಕ್ ನ ನೇಮತ್ ಬಿನ್ ಅನ್ವರ್ ಸಾಬ್ ಎಂಬುವರ ಮನೆಗೆ ಶುಕ್ರವಾರ ರಾತ್ರಿ ಬಂದ ಮಳೆಯ ನೀರು ನುಗ್ಗಿದ ಪರಿಣಾಮ ಮನೆಯ ಗೋಡೆಕುಸಿದಿದೆ.
ಹುಳಿಯಾರಿನ ೫ನೇ ಬ್ಲಾಕ್ ನ ಅವರ ಮನೆಗೆ ಮಳೆ ನೀರು ನುಗ್ಗಿ ಗೋಡೆ ಕುಸಿದಿರುವುದು ಹಾಗೂ ಮನೆಗೆ ನೀರು ನುಗ್ಗಿರುವುದು.
ಶುಕ್ರವಾರ ಸಂಜೆಯಿಂದ ಮಳೆ ಪ್ರಾರಂಭವಾಗಿ ಕೆಲ ಗಂಟೆಗಳಕಾಲ ಸುರಿದ ಹಿನ್ನಲೆಯಲ್ಲಿ ಪಟ್ಟಣದ ರಸ್ತೆಬದಿಯ ಚರಂಡಿಯ ತುಂಬಿ ರಸ್ತೆಯಲೆಲ್ಲಾ ನೀರು ಹರಿಯುವಂತಾಗಿತ್ತು. ನೇಮತ್ ಅವರ ಮನೆ ಮುಂದಿನ ಚರಂಡಿಯಲ್ಲಿಯೂ ಸಹ ತ್ಯಾಜ್ಯ ತುಂಬಿಕೊಂಡಿದ್ದ ಪರಿಣಾಮ ನೀರು ಸರಾಗವಾಗಿ ಹರಿಯದೆ ಅವರ ಮನೆಗೆ ನುಗ್ಗಿದ್ದು, ಗೋಡೆ ಕುಸಿದಿದೆ. ಮನೆ ಒಳಗೆ ನಿಲ್ಲಿಸಿದ ಬೈಕ್ ಮೇಲೆ ಗೋಡೆ ಬಿದ್ದು ಬೈಕ್ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಶನಿವಾರವೂ ಸಹ ಪಟ್ಟಣದೆಲ್ಲೆಡೆ ಉತ್ತಮಮಳೆಯಾಗಿದ್ದು ಬೆಳಿಗ್ಗಿನಿಂದ ಮೋಡಕವಿದ ವಾತಾವರಣವಿದ್ದು ಮಧ್ಯಾಹ್ನದ ವೇಳೆ ಗಾಳಿಸಹಿತ ಜೋರುಮಳೆ ಸುರಿಯಿತು. ಚರಂಡಿಗಳಲ್ಲಿ ತ್ಯಾಜ್ಯ ತುಂಬಿದ್ದರಿಂದ ರಸ್ತೆಯಲ್ಲಿ ನೀರು ಹರಿದು ರಸ್ತೆಯ ತುಂಬೆಲ್ಲಾ ಕಸ,ಕಡ್ಡಿ ಪ್ಲಾಸ್ಟಿಕ್ ವಸ್ತುಗಳು ಕಂಡುಬಂದವು. ಬಸ್ ನಿಲ್ದಾಣದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ಮಳೆ ನೀರು ಅಲ್ಲಿಯೇ ನಿಂತು ಕೆಸರುಂಟಾಗಿತ್ತು. ಅಲ್ಲದೆ ಬಸ್ ಗಳು ಬಂದಾಗ ಪ್ರಯಾಣಿಕರು ಕೆಸರ ಮಧ್ಯದಲ್ಲೇ ನಡೆದು ಬಸ್ ಹತ್ತಬೇಕಾಗಿತ್ತು. ಕೆಲ ಪ್ರಯಾಣಿಕರು ಜಾರಿಬಿದ್ದು ಮೈಕೈಗೆಲ್ಲಾ ಕೆಸರು ಮೆತ್ತಿಸಿಕೊಂಡರಲ್ಲದೆ, ಸ್ಥಳೀಯ ಆಡಳಿತದವರಿಗೆ ಹಿಡಿಶಾಪ ಹಾಕಿದರು.
ಗಾಣಧಾಳು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಬಂದ ಮಳೆಯಿಂದಾಗಿ ೪ ಮನೆಗಳು ಕುಸಿದಿದ್ದು, ಈಶ್ವರಯ್ಯ ಎಂಬುವರ ವಾಸದ ಮನೆ ಸೇರಿದಂತೆ ಮೂರು ದನದ ಕೊಟ್ಟಿಗೆ ಮನೆಗಳು ಕುಸಿದಿವೆ.

ಆಲಿಕಲ್ಲು ಸಹಿತ ಮಳೆ : ಹೋಬಳಿಯ ರಂಗನಕೆರೆ,ಸೋಮನಹಳ್ಳಿ ಭಾಗದಲ್ಲಿ ಶುಕ್ರವಾರ ರಾತ್ರಿ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದ್ದು, ತೋಟತುಡಿಕೆಗಳಲ್ಲಿ ನೀರು ತುಂಬಿದೆ. ಹೆಸರು ಕಾಳು ಬಿತ್ತಿದ್ದಾಯ್ತು ಮಳೆ ಬಂದರೆ ಸಾಕು ಎನ್ನುತ್ತಿದ್ದ ರೈತರಿಗೆ ಈ ಮಳೆ ಸಂತಸ ತಂದಿದ್ದು ಹೆಸರು ಚಿಗುರೊಡೆಯಲು ಸಹಕಾರಿಯಾಗಿದೆ. ಶುಕ್ರವಾರ ರಾತ್ರಿ ಹುಳಿಯಾರು ಮಳೆಮಾಪನಕೇಂದ್ರದಲ್ಲಿ ೪೮.೨ ಮಿ.ಮೀ ಮಳೆಯಾಗಿರುವುದಾಗಿ ಕಂದಾಯ ತನಿಖಾಧಿಕಾರಿ ಹನುಮಂತನಾಯಕ್ ತಿಳಿಸಿದ್ದಾರೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...