ವಿಷಯಕ್ಕೆ ಹೋಗಿ

ಹಳ್ಳಿಗೊಂದು ಕಲಾತಂಡವಿರಬೇಕು : ಮಲ್ಲಿಕಾರ್ಜುನ್ ಕೆಂಕೆರೆ

ಹಳ್ಳಿಗೊಂದು ಅರಳಿಮರ ಎಷ್ಟು ಮುಖ್ಯವೋ ಅಂತೆಯೇ ಹಳ್ಳಿಗೊಂದು ಕಲಾತಂಡ ಅಷ್ಟೇ ಮುಖ್ಯವಾಗಿದ್ದು , ಜಾನಪದ,ಪೌರಾಣಿಕ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾತಂಡ ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಕಲಾವಿದ ಮಲ್ಲಿಕಾರ್ಜುನ್ ಕೆಂಕೆರೆ ತಿಳಿಸಿದರು.
ಹುಳಿಯಾರು ಹೋಬಳಿ ಕೆಂಕೆರೆಯಲ್ಲಿ ಶ್ರೀಚನ್ನಬಸವೇಶ್ವರಸ್ವಾಮಿ ಕೃಪಾಪೂಷಿತ ನಾಟಕ ಮಂಡಳಿಯವತಿಯಿಂದ ನಡೆದ ಶನಿಪ್ರಭಾವ ನಾಟಕ ಪ್ರದರ್ಶನವನ್ನು ಕಲಾವಿದ ಮಲ್ಲಿಕಾರ್ಜುನ್ ಕೆಂಕೆರೆ ಉದ್ಘಾಟಿಸಿದರು.
ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀಚನ್ನಬಸವೇಶ್ವರಸ್ವಾಮಿ ಕೃಪಾಪೂಷಿತ ನಾಟಕ ಮಂಡಳಿಯ ಕಲಾವಿದರು ಮಂಗಳವಾರ ರಾತ್ರಿ ಅಭಿನಯಿಸಿದ ಶನಿಪ್ರಭಾವ ನಾಟಕ ಪ್ರದರ್ಶನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಒಬ್ಬ ಕಲಾವಿದನಿಗೆ ವಿವಿಧ ಗ್ರಾಮಗಳಲ್ಲಿ ಎಷ್ಟೇ ಪುರಸ್ಕಾರ,ಪ್ರಶಸ್ತಿಗಳು ಬಂದಿದ್ದರೂ ಸಹ ಆತನ ಸ್ವಂತ ಊರಿನವರು ಮಾಡುವ ಸನ್ಮಾನ ಎಲ್ಲದಕ್ಕಿಂತ ಮೀರಿದ್ದು ಅದಕ್ಕೆ ತಾನು ಅಬಾರಿಯಾಗಿರುವುದಾಗಿ ತಿಳಿಸಿದರು. ಟಿ.ವಿ.ಮಾಧ್ಯಮದಿಂದ ಪ್ರಸ್ತುತದಲ್ಲಿ ಪೌರಾಣಿಕ ಹಾಗೂ ಸಾಮಾಜಿಕ ನಾಟಕಗಳು ಕಣ್ಮರೆಯಾಗುತ್ತಿದ್ದರೂ ಸಹ ಕೆಂಕೆರೆಯಲ್ಲಿ ಮಾತ್ರ ಪ್ರತಿ ವರ್ಷ ತಪ್ಪದೇ ನಾಟಕಾಭಿನಯ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಚಿ.ನಾ.ಹಳ್ಳಿ ಕಸಾಪ ರವಿಕುಮಾರ್ ಮಾತನಾಡಿ, ಕೆಂಕೆರೆ ಗ್ರಾಮದಲ್ಲಿ ಹತ್ತಾರು ಹಿರಿಯರನ್ನೊಳಗೊಂಡ ಕಲಾತಂಡವಿದ್ದು ಯಾವುದೇ ಇಲಾಖೆಯ ಸಹಕಾರವನ್ನು ಬೇಡದೆ ತಾವುಗಳೆ ಸೇರಿ ನಾಟಕಾಭಿನಯ ಮಾಡಿಕೊಂಡು ಬರುತ್ತಿದ್ದಾರೆ ಎಂದರು. ಮುಂದಿನ ದಿನಗಳಲ್ಲಿ ಕಸಾಪವತಿಯಿಂದ ಈ ಕಲಾತಂಡಕ್ಕೆ ಹೆಚ್ಚಿನ ನೆರವು ನೀಡುವ ಭರವಸೆ ನೀಡಿದರು.
ಹುಳಿಯಾರು ಹೋಬಳಿ ಕೆಂಕೆರೆಯ ಶ್ರೀಚನ್ನಬಸವೇಶ್ವರಸ್ವಾಮಿ ಕೃಪಾಪೂಷಿತ ನಾಟಕ ಮಂಡಳಿಯವರು ಅಯೋಜಿಸಿದ್ದ ಶನಿಪ್ರಭಾವ ನಾಟಕ ಪ್ರದರ್ಶನದಲ್ಲಿ ಕಲಾವಿದ ಮಲ್ಲಿಕಾರ್ಜುನ್ ಕೆಂಕೆರೆ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಹಾರ್ಮೋನಿಯಂ ಮಾಸ್ಟರ್ ಕೆ.ಪಿ.ಚನ್ನಬಸವಯ್ಯ, ತಬಲವಾದಕ ಕಾಟಯ್ಯ, ಸ್ಟೇಜ್ ಮ್ಯಾನೇಜರ್ ವರದಯ್ಯ, ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಈಶ್ವರಯ್ಯ, ಪ್ಲಾಟ್ ಮ್ಯಾನೇಜರ್ ದೊರೆಚನ್ನಬಸವಯ್ಯ, ಕಲಾವಿದರಾದ ಕೆ.ಬಿ.ರಮೇಶ್, ಶೇಖರ್, ಶರತ್, ಗಂಗಾಧರ್,ಕಂಠೇಶ್,ಕೊಟ್ಟುರಯ್ಯ,ವಿರೂಪಾಕ್ಷ,ನಿಂಗರಾಜು,ಬಳ್ಳಾರಿಗಂಗಣ್ಣಮಂಜುನಾಥ,ಯುವರಾಜ,ಕಿರಣ್,ತ್ಯಾಗರಾಜ ಸೇರಿದಂತೆ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.