ವಿಷಯಕ್ಕೆ ಹೋಗಿ

ವೈಭವಯುತ ಕೆಂಕೆರೆ ಚನ್ನಬಸವೇಶ್ವರಸ್ವಾಮಿ ರಥೋತ್ಸವ

ಹುಳಿಯಾರು  ಹೋಬಳಿ ಕೆಂಕೆರೆ ಗ್ರಾಮದಲ್ಲಿ ಬಸವಜಯಂತಿ ಅಂಗವಾಗಿ ಶ್ರೀಚನ್ನಬವೇಶ್ವರಸ್ವಾಮಿ ರಥೋತ್ಸವ ಮಂಗಳವಾರ ಮಧ್ಯಾಹ್ನ ಅಪಾರ ಸಂಖ್ಯೆಯ ಭಕ್ತಾಧಿಗಳ ಹರ್ಷೋದ್ಗಾರದಲ್ಲಿ ವೈಭವಯುತವಾಗಿ ಜರುಗಿತು.
 ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದಲ್ಲಿ ಬಸವಜಯಂತಿ ಅಂಗವಾಗಿ ಶ್ರೀಚನ್ನಬವೇಶ್ವರಸ್ವಾಮಿ ರಥೋತ್ಸವ ಮಂಗಳವಾರ ಮಧ್ಯಾಹ್ನ ಅಪಾರ ಸಂಖ್ಯೆಯ ಭಕ್ತಾಧಿಗಳ ಹರ್ಷೋದ್ಗಾರದಲ್ಲಿ ವೈಭವಯುತವಾಗಿ ಜರುಗಿತು.


ಹುಳಿಯಾರು ಹೋಬಳಿ ಕೆಂಕೆರೆಯ ಶ್ರೀಬಸವಕೇಂದ್ರದವರು ಮಂಗಳವಾರ ಬಸವಜಯಂತಿ ಅಂಗವಾಗಿ ಗ್ರಾಮದ ಬೀದಿಗಳಲ್ಲಿ ಬಸವ ಭಜನೆ ಮಾಡುವ ಮೂಲಕ ಮೆರವಣಿಗೆ ನಡೆಸಿದರು.
ರಥೋತ್ಸವದ ಅಂಗವಾಗಿ ಮುಂಜಾನೆ ಮಹದೇವಜ್ಜನ ಮನೆಯವರಿಂದ ಕಾಳಮ್ಮದೇವಿ ಸಮ್ಮುಖದಲ್ಲಿ ರಥದ ಪುಣ್ಯಾಹ ಕಾರ್ಯ,ಅನ್ನಬಲಿ, ಕಳಸ ಸ್ಥಾಪನೆ ನಡೆಯಿತು. ನಂತರ ಗ್ರಾಮಸ್ಥರೆಲ್ಲಾ ಸೇರಿ ರಥಕ್ಕೆ ಬಗೆಬಗೆಯ ಹೂ,ಹಾರ, ಕೊಬ್ಬರಿ ಹಾರ, ಹತ್ತಿ ಹಾರ,ಬಾಳೆಗೊನೆ,ಎಳನೀರು ಗೊನೆ, ಬಾವುಟಗಳನ್ನು ಕಟ್ಟಿ ಅಲಂಕರಿಸಿದರು. ನಂತರ ದೇವಸ್ಥಾನದಿಂದ ಅಲಂಕೃತ ಚನ್ನಬಸವೇಶ್ವರಸ್ವಾಮಿಯನ್ನು ಕಾಳಮ್ಮದೇವಿ, ದಮ್ಮಡಿಹಟ್ಟಿ ಈರಬೊಮ್ಮಕ್ಕದೇವಿ, ಗೌಡಗೆರೆ ದುರ್ಗಮ್ಮದೇವಿ, ಬರದಲೇಪಾಳ್ಯದ ಅಂಬಿಕದೇವಿಯೊಂದಿಗೆ ಹೊರಡಿಸಿದರು. ಧ್ವಜಕುಣಿತ ಹಾಗೂ ಬಸವನ ಮೆರವಣಿಗೆಯೊಂದಿಗೆ ಸ್ವಾಮಿಯನ್ನು ರಥದಲ್ಲಿಗೆ ಕರೆತಂದು ರಥ ಪ್ರದಕ್ಷಿಣೆ ನಂತರ ಸ್ವಾಮಿ ಹಾಗೂ ಕಾಳಮ್ಮ ದೇವಿಯನ್ನು ರಥಕ್ಕೇರಿಸಿದರು. ಭಕ್ತರ ಜೈಕಾರದೊಂದಿಗೆ ಈಡುಗಾಯಿ ಹೊಡೆಯುವ ಮೂಲಕ ರಥವನ್ನೆಳೆಯಲಾಯಿತು.

ರಥೋತ್ಸವದ ನಂತರ ಮಹಿಳೆಯರು ರಥದ ಮೇಲಿದ್ದ ಸ್ವಾಮಿಗೆ ಹಣ್ಣುಕಾಯಿ ಮಾಡಿಸಲು ಮುಗಿಬಿದ್ದರು. ಭಕ್ತಾಧಿಗಳಿಗಾಗಿ ಪನಿವಾರ,ಪಾನಕ, ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಬಿಸಿಲನ್ನು ಲೆಕ್ಕಿಸದೆ ಕೆಂಕೆರೆ ಸೇರಿದಂತೆ ಬರದಲೇಪಾಳ್ಯ,ಹೊನ್ನಯ್ಯನಪಾಳ್ಯ,ಬಸವನಗುಡಿ,ಗೊಲ್ಲರಹಟ್ಟಿ,ಪುರದಮಠ,ಕಂಪನಹಳ್ಳಿಯ ಸುತ್ತಮುತ್ತಲ ಜನ ಆಗಮಿಸಿದ್ದು ಸ್ವಾಮಿಯ ದರ್ಶನ ಪಡೆದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...