ವಿಷಯಕ್ಕೆ ಹೋಗಿ

ಲೈಸೆನ್ಸ್ ದಾರರಿಗೆ ಮದ್ಯದಂಗಡಿ ತೆರಯಲು ಅವಕಾಶ ಕೊಡಿ ಗ್ರಾಮಸ್ಥರ ಒತ್ತಾಯ

ಜಿಲ್ಲೆಯ ಗಡಿಭಾಗವಾಗಿರುವ ಹೋಬಳಿಯ ದಸೂಡಿ ಗ್ರಾಮದಲ್ಲಿ ಯಾವುದೇ ಲೈಸೆನ್ಸ್ ಪಡೆಯದೆ ಆಕ್ರಮವಾಗಿ ಮದ್ಯಮಾರಾಟ ನಡೆಯುತ್ತಿದ್ದು ಅಂತಹ ಅಂಗಡಿಗಳ ವಿರುದ್ದ ಕ್ರಮ ಕೈಗೊಂಡು, ಲೈಸನ್ಸ್ ಹೊಂದಿದವರಿಗೆ ಮದ್ಯದಂಗಡಿ ನಡೆಸಲು ಅನುಮತಿ ನೀಡುವಂತೆ ಇಲ್ಲಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹುಳಿಯಾರು ಹೋಬಳಿ ದಸೂಡಿ ಗ್ರಾಮದಲ್ಲಿ ಲೈಸೆನ್ಸ್ ದಾರರಿಗೆ ಮದ್ಯದಂಗಡಿ ತೆರೆಯಲು ಅವಕಾಶ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ದಸೂಡಿ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಹೆಚ್ಚುಜನ ರೈತರೇ ಆಗಿದ್ದು ದಿನನಿತ್ಯ ಮೈಮುರಿದು ದುಡಿಯುವಂತವರಾಗಿದ್ದು, ದಿನಪೂರ್ತಿಯ ಅಯಾಸವನ್ನು ಅವರು ಕಳೆದುಕೊಳ್ಳಬೇಕೆಂದರೆ ಮದ್ಯದ ಅವಶ್ಯಕತೆ ಅಗತ್ಯವಿದೆ. ಆದರೆ ತಮ್ಮ ಗ್ರಾಮದಲ್ಲಿ ಅಕ್ರಮವಾಗಿ ,ಕಲಬೆರಿಕೆ ಮದ್ಯವನ್ನು ತಮಗಿಷ್ಟ ಬಂದ ಹೆಚ್ಚಿನ ದರದಲ್ಲಿ ದಿನದ ೨೪ ಗಂಟೆಯೂ ಸಹ ಮಾರಾಟ ಮಾಡುತ್ತಿದ್ದಾರೆ. ಇಂತಹ ಹತ್ತನ್ನೆರಡು ಅಂಗಡಿಗಳು ಈ ಗ್ರಾಮದಲ್ಲಿದ್ದು ಇಲ್ಲಿನ ಬಡಜನರನ್ನು ಸುಲಿಗೆ ಮಾಡುತ್ತಿದ್ದಾರೆ ಇಂತಹ ಅಂಗಡಿದಾರರ ಮೇಲೆ ಕ್ರಮ ಕೈಗೊಂಡು ನಿಗದಿತ ದರದಲ್ಲಿ ಉತ್ತಮ ಮದ್ಯ ಮಾರಾಟ ಮಾಡುವ ಮದ್ಯಮಾರಾಟದ ಲೈಸನ್ಸ್ ಹೊಂದಿದವರಿಗೆ ಮದ್ಯದಂಗಡಿ ತೆರೆಯಲು ಅವಕಾಶ ಕೊಟ್ಟು ಇಲ್ಲಿನ ಜನರಿಗೆ ಉತ್ತಮ ಮದ್ಯ ದೊರೆಯುವಂತೆ ಮಾಡಿ ಎಂದು ಮಾಜಿ ಗ್ರಾ.ಪಂ.ಅಧ್ಯಕ್ಷ ರಂಗಧಾಮಯ್ಯ ಇಲಾಖೆಯವರಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಗ್ರಾಮದ ಬಹುಪಾಲು ಮಂದಿ ಜನರೂ ಸಹಮತ ವ್ಯಕ್ತಪಡಿಸಿದ್ದು, ಅಕ್ರಮವಾಗಿ ತಲೆಯೆತ್ತಿರುವ ಮದ್ಯದಂಗಡಿಗಳ ಬದಲಾಗಿ ಮದ್ಯ ಮಾರಾಟದ ಲೈಸೆನ್ಸ್ ಪಡೆದವರಿಗೆ ಮದ್ಯದಂಗಡಿ ನಡೆಸಲು ಅನುಮತಿ ನೀಡುವಂತೆ ಅಬಕಾರಿ ಇಲಾಖೆಯನ್ನು ಒತ್ತಾಯಿಸಿ, ಅಬಕಾರಿ ಡಿಸಿಯವರಿಗೆ ಮನವಿ ಪತ್ರ ಸಹ ನೀಡಿದ್ದೇವೆ. ಈ ಬಗ್ಗೆ ಹಿಂದೆ ಹಲವು ಬಾರಿ ಇಲಾಖೆಯ ಗಮನಕ್ಕೆ ತಂದು ಮನವಿಯನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ, ಇಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ವಿಷಯ ತಿಳಿದಿದ್ದರೂ ಸಹ ಇಲಾಖೆಯವರೂ ಮೌನವಹಿಸಿರುವುದನ್ನು ನೋಡಿದರೆ ಮದ್ಯಮಾರಾಟದಾರರೊಂದಿಗೆ ಇಲಾಖೆ ಶಾಮಿಲ್ ಆಗಿರುವ ಸಂಶಯ ಮೂಡುವಂತೆ ಮಾಡಿದೆ. ಇನ್ನಾದರೂ ಇಲಾಖೆ ಈ ಬಗ್ಗೆ ಕ್ರಮ ಕೈಗೊಂಡು ಅನಧಿಕೃತವಾಗಿ ಮದ್ಯಮಾರಾಟ ಮಾಡುತ್ತಿರುವವರ ವಿರುದ್ದ ಶಿಸ್ತುಕ್ರಮ ಜರುಗಿಸಿ ಲೈಸೆನ್ಸ್ ಹೊಂದಿದವರಿಗೆ ಮದ್ಯದಂಗಡಿ ತೆರೆಯಲು ಅವಕಾಶ ಮಾಡಿಕೊಟ್ಟರೆ ಇಲ್ಲಿನ ಜನಕ್ಕೆ ಅನುಕೂಲವಾಗಲಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.

ನಮಗೆ ಮದ್ಯದಂಗಡಿ ಬೇಕು ಅದಕ್ಕೆ ಲೈಸೆನ್ಸ್ ಹೊಂದಿದವರಿಗೆ ಮದ್ಯದಂಗಡಿ ತೆರೆಯಲು ಅವಕಾಶ ಕೊಡುವಂತೆ ಗ್ರಾಮಸ್ಥರಾದ ಕಾಂತರಾಜು, ಆರ್.ಜ್ಞಾನಮೂರ್ತಿ,ತ್ಯಾಗರಾಜು,ಅಂಗಡಿ ಮೂರ್ತಣ್ಣಶೆಟ್ಟಿ,ಗಿರೀಶ್ ಶೆಟ್ಟಿ,ಅನಿಲ್ ಕುಮಾರ್, ಪಾಂಡುರಂಗಯ್ಯ, ಸುರೇಶ್,ಕುಮಾರನಾಯ್ಕ,ರಾಮಲಿಂಗಯ್ಯ,ಪುಟ್ಟಯ್ಯ,ಹನುಮಂತಯ್ಯ, ರಂಗನಾಥ, ಜನಾರ್ಧನ್, ರವಿಕುಮಾರ್,ಜೈರಾಮಯ್ಯ, ಶಿವು,ಓಂಕಾರ,ಶ್ರೀನಿವಾಸ, ಲಾಲಾನಾಯ್ಕ,ಕರಿಯಪ್ಪ,ಗವಿರಂಗಯ್ಯ ಸೇರಿದಂತೆ ಇತರರು ಒತ್ತಾಯಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...