ವಿಷಯಕ್ಕೆ ಹೋಗಿ

ಲೈಸೆನ್ಸ್ ದಾರರಿಗೆ ಮದ್ಯದಂಗಡಿ ತೆರಯಲು ಅವಕಾಶ ಕೊಡಿ ಗ್ರಾಮಸ್ಥರ ಒತ್ತಾಯ

ಜಿಲ್ಲೆಯ ಗಡಿಭಾಗವಾಗಿರುವ ಹೋಬಳಿಯ ದಸೂಡಿ ಗ್ರಾಮದಲ್ಲಿ ಯಾವುದೇ ಲೈಸೆನ್ಸ್ ಪಡೆಯದೆ ಆಕ್ರಮವಾಗಿ ಮದ್ಯಮಾರಾಟ ನಡೆಯುತ್ತಿದ್ದು ಅಂತಹ ಅಂಗಡಿಗಳ ವಿರುದ್ದ ಕ್ರಮ ಕೈಗೊಂಡು, ಲೈಸನ್ಸ್ ಹೊಂದಿದವರಿಗೆ ಮದ್ಯದಂಗಡಿ ನಡೆಸಲು ಅನುಮತಿ ನೀಡುವಂತೆ ಇಲ್ಲಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹುಳಿಯಾರು ಹೋಬಳಿ ದಸೂಡಿ ಗ್ರಾಮದಲ್ಲಿ ಲೈಸೆನ್ಸ್ ದಾರರಿಗೆ ಮದ್ಯದಂಗಡಿ ತೆರೆಯಲು ಅವಕಾಶ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ದಸೂಡಿ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಹೆಚ್ಚುಜನ ರೈತರೇ ಆಗಿದ್ದು ದಿನನಿತ್ಯ ಮೈಮುರಿದು ದುಡಿಯುವಂತವರಾಗಿದ್ದು, ದಿನಪೂರ್ತಿಯ ಅಯಾಸವನ್ನು ಅವರು ಕಳೆದುಕೊಳ್ಳಬೇಕೆಂದರೆ ಮದ್ಯದ ಅವಶ್ಯಕತೆ ಅಗತ್ಯವಿದೆ. ಆದರೆ ತಮ್ಮ ಗ್ರಾಮದಲ್ಲಿ ಅಕ್ರಮವಾಗಿ ,ಕಲಬೆರಿಕೆ ಮದ್ಯವನ್ನು ತಮಗಿಷ್ಟ ಬಂದ ಹೆಚ್ಚಿನ ದರದಲ್ಲಿ ದಿನದ ೨೪ ಗಂಟೆಯೂ ಸಹ ಮಾರಾಟ ಮಾಡುತ್ತಿದ್ದಾರೆ. ಇಂತಹ ಹತ್ತನ್ನೆರಡು ಅಂಗಡಿಗಳು ಈ ಗ್ರಾಮದಲ್ಲಿದ್ದು ಇಲ್ಲಿನ ಬಡಜನರನ್ನು ಸುಲಿಗೆ ಮಾಡುತ್ತಿದ್ದಾರೆ ಇಂತಹ ಅಂಗಡಿದಾರರ ಮೇಲೆ ಕ್ರಮ ಕೈಗೊಂಡು ನಿಗದಿತ ದರದಲ್ಲಿ ಉತ್ತಮ ಮದ್ಯ ಮಾರಾಟ ಮಾಡುವ ಮದ್ಯಮಾರಾಟದ ಲೈಸನ್ಸ್ ಹೊಂದಿದವರಿಗೆ ಮದ್ಯದಂಗಡಿ ತೆರೆಯಲು ಅವಕಾಶ ಕೊಟ್ಟು ಇಲ್ಲಿನ ಜನರಿಗೆ ಉತ್ತಮ ಮದ್ಯ ದೊರೆಯುವಂತೆ ಮಾಡಿ ಎಂದು ಮಾಜಿ ಗ್ರಾ.ಪಂ.ಅಧ್ಯಕ್ಷ ರಂಗಧಾಮಯ್ಯ ಇಲಾಖೆಯವರಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಗ್ರಾಮದ ಬಹುಪಾಲು ಮಂದಿ ಜನರೂ ಸಹಮತ ವ್ಯಕ್ತಪಡಿಸಿದ್ದು, ಅಕ್ರಮವಾಗಿ ತಲೆಯೆತ್ತಿರುವ ಮದ್ಯದಂಗಡಿಗಳ ಬದಲಾಗಿ ಮದ್ಯ ಮಾರಾಟದ ಲೈಸೆನ್ಸ್ ಪಡೆದವರಿಗೆ ಮದ್ಯದಂಗಡಿ ನಡೆಸಲು ಅನುಮತಿ ನೀಡುವಂತೆ ಅಬಕಾರಿ ಇಲಾಖೆಯನ್ನು ಒತ್ತಾಯಿಸಿ, ಅಬಕಾರಿ ಡಿಸಿಯವರಿಗೆ ಮನವಿ ಪತ್ರ ಸಹ ನೀಡಿದ್ದೇವೆ. ಈ ಬಗ್ಗೆ ಹಿಂದೆ ಹಲವು ಬಾರಿ ಇಲಾಖೆಯ ಗಮನಕ್ಕೆ ತಂದು ಮನವಿಯನ್ನು ಸಲ್ಲಿಸಿದ್ದರೂ ಯಾವುದೇ ಪ್ರಯೋಜವಾಗಿಲ್ಲ, ಇಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ವಿಷಯ ತಿಳಿದಿದ್ದರೂ ಸಹ ಇಲಾಖೆಯವರೂ ಮೌನವಹಿಸಿರುವುದನ್ನು ನೋಡಿದರೆ ಮದ್ಯಮಾರಾಟದಾರರೊಂದಿಗೆ ಇಲಾಖೆ ಶಾಮಿಲ್ ಆಗಿರುವ ಸಂಶಯ ಮೂಡುವಂತೆ ಮಾಡಿದೆ. ಇನ್ನಾದರೂ ಇಲಾಖೆ ಈ ಬಗ್ಗೆ ಕ್ರಮ ಕೈಗೊಂಡು ಅನಧಿಕೃತವಾಗಿ ಮದ್ಯಮಾರಾಟ ಮಾಡುತ್ತಿರುವವರ ವಿರುದ್ದ ಶಿಸ್ತುಕ್ರಮ ಜರುಗಿಸಿ ಲೈಸೆನ್ಸ್ ಹೊಂದಿದವರಿಗೆ ಮದ್ಯದಂಗಡಿ ತೆರೆಯಲು ಅವಕಾಶ ಮಾಡಿಕೊಟ್ಟರೆ ಇಲ್ಲಿನ ಜನಕ್ಕೆ ಅನುಕೂಲವಾಗಲಿದೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.

ನಮಗೆ ಮದ್ಯದಂಗಡಿ ಬೇಕು ಅದಕ್ಕೆ ಲೈಸೆನ್ಸ್ ಹೊಂದಿದವರಿಗೆ ಮದ್ಯದಂಗಡಿ ತೆರೆಯಲು ಅವಕಾಶ ಕೊಡುವಂತೆ ಗ್ರಾಮಸ್ಥರಾದ ಕಾಂತರಾಜು, ಆರ್.ಜ್ಞಾನಮೂರ್ತಿ,ತ್ಯಾಗರಾಜು,ಅಂಗಡಿ ಮೂರ್ತಣ್ಣಶೆಟ್ಟಿ,ಗಿರೀಶ್ ಶೆಟ್ಟಿ,ಅನಿಲ್ ಕುಮಾರ್, ಪಾಂಡುರಂಗಯ್ಯ, ಸುರೇಶ್,ಕುಮಾರನಾಯ್ಕ,ರಾಮಲಿಂಗಯ್ಯ,ಪುಟ್ಟಯ್ಯ,ಹನುಮಂತಯ್ಯ, ರಂಗನಾಥ, ಜನಾರ್ಧನ್, ರವಿಕುಮಾರ್,ಜೈರಾಮಯ್ಯ, ಶಿವು,ಓಂಕಾರ,ಶ್ರೀನಿವಾಸ, ಲಾಲಾನಾಯ್ಕ,ಕರಿಯಪ್ಪ,ಗವಿರಂಗಯ್ಯ ಸೇರಿದಂತೆ ಇತರರು ಒತ್ತಾಯಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.