ವಿಷಯಕ್ಕೆ ಹೋಗಿ

ಉತ್ತಮ ಮಳೆ : ಹೆಸರು ಬಿತ್ತನೆಗೆ ಚಾಲನೆ

ವರದಿ : ಡಿ.ಆರ್.ನರೇಂದ್ರಬಾಬು.
ಹುಳಿಯಾರು: ಹೋಬಳಿ ವ್ಯಾಪ್ತಿಯ ಕೆಂಕೆರೆ, ಗಾಣಧಾಳು,ರಂಗನಕೆರೆ,ದಸೂಡಿ,ದಬ್ಬಗುಂಟೆ, ಹೊಯ್ಸಳಕಟ್ಟೆ ಸೇರಿದಂತೆ ಬಹುತೇಕ ಕಡೆ ಈ ಬಾರಿ ಉತ್ತಮ ಪೂರ್ವ ಮುಂಗಾರು ಮಳೆಯಿಂದಾಗಿ ಬಿತ್ತನೆ ಕಾರ್ಯ ಚುರುಕಾಗಿದೆ. ಕಳೆದೊಂದು ತಿಂಗಳಿಂದ ಜಾತ್ರೆ,ಹಬ್ಬ ಹರಿದಿನಗಳಲ್ಲಿ ತೊಡಗಿಕೊಂಡಿದ್ದ ರೈತರು , ಉತ್ತಮ ಮಳೆಯಾಗಿರುವುದರಿಂದ ತಮ್ಮ ಹೊಲಗಳತ್ತ ಮುಖಮಾಡಿ ಉತ್ತುಬಿತ್ತುವ ಕಾರ್ಯದಲ್ಲಿ ಮುಂದಾಗಿದ್ದಾರೆ.
ಹೆಸರನ್ನು ಪೂರ್ವ ಮುಂಗಾರಿನಲ್ಲಿ ಬೆಳೆಯುವ ವಾಡಿಕೆಯಿದ್ದು ಸುಮಾರು 2-3 ಬಾರಿ ಉತ್ತಮ ಹದಮಳೆ ಬಂದಿರುವುದರಿಂದ ಕೆಲವರು ತಮ್ಮ ಹೊಲಗಳ ಸ್ವಚ್ಚತೆಯಲ್ಲಿ ತೊಡಗಿದರೆ ಮತ್ತೆ ಕೆಲವರು ಹೆಸರು ಬಿತ್ತನೆಗೆ ಮುಂದಾಗಿದ್ದಾರೆ.
ಯಳನಡು,ಕೋರಗೆರೆ,ತಿಮ್ಲಾಪುರ,ಸೀಗೆಬಾಗಿ ಗ್ರಾಮಗಳ ರೈತರು ತಮ್ಮ ಹೊಲಗಳಲ್ಲಿ ಬೇಸಾಯ ಮಾಡಿ ಹೊಲಗಳನ್ನು ಸ್ವಚ್ಚಮಾಡಿಕೊಂಡಿದ್ದು ಸೊನೆಮಳೆ ಬಂದರೆ ಸಾಕು ಬಿತ್ತನೆ ಮಾಡಲು ಕಾದುಕೂತಿದ್ದಾರೆ. ಗುರುವಾರ ರಾತ್ರಿ ಗುರುವಾಪುರ,ಮೇಲನಹಳ್ಳಿ,ಸೋಮನಹಳ್ಳಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು ರೈತರು ಉತ್ಸಾಹದಿಂದ ಹೆಸರು ಬಿತ್ತನೆಗೆ ಮುಂದಾಗಿದ್ದಾರೆ.
ಹುಳಿಯಾರು ಹೋಬಳಿ ರಂಗನಕೆರೆ ಬಳಿ ಉಳುಮೆಯಲ್ಲಿ ತೊಡಗಿರುವ ರೈತ.
ಕೃಷಿ ಕೆಲಸಕ್ಕೆ ಕೂಲಿ ಕಾರ್ಮಿಕರ ಕೊರತೆ ಹಾಗೂ ರೈತರ ಬಳಿ ದನಗಳ ಸಂಖ್ಯೆ ಕೂಡ ಇಳಿಮುಖವಾಗಿರುವುದರಿಂದ ಉಳುಮೆಗಾಗಿ ಟ್ರಾಕ್ಟರ್ ಗಳ ಮೊರೆ ಹೋಗುತ್ತಿದ್ದಾರೆ. ೪೫ ದಿನಗಳ ಬೆಳೆಯಾದ ಹೆಸರು ಜೂನ್ ತಿಂಗಳೊಳಗೆ ಕೈ ಸೇರಲಿದೆ.ಪೂರ್ವ ಮುಂಗಾರಿನಲ್ಲಿ ಬೇಗ ಬಿತ್ತನೆ ಮಾಡುವುದರಿಂದ ಬೆಳೆ ಕಟಾವಿನ ನಂತರ ಮತ್ತೊಂದು ಬೆಳೆ ಮಾಡಬಹುದು ಎನ್ನುತ್ತಾರೆ ಅನುಭವಿ ರೈತರು.
ಸದ್ಯ ರೈತರು ಬೀಜ ಹಾಗೂ ರಸಗೊಬ್ಬರ ಖರೀದಿಗೆ ತೊಡಗಿದ್ದು, ಕೆಲ ರೈತರು ಮುಂದಿನ ಬೆಳೆಗೆಂದು ಉಳಿಸಿಕೊಂಡಿದ್ದ ಬೀಜವನ್ನು ಬಿತ್ತನೆಗೆ ಬಳಸುತ್ತಿದ್ದರೆ ಮತ್ತೆ ಕೆಲ ರೈತರು ರೈತ ಸಂಪರ್ಕ ಕೇಂದ್ರದತ್ತ ಮುಖಮಾಡಿದ್ದಾರೆ. ಕೃಷಿ ಇಲಾಖೆ ಈಗಾಗಲೇ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ ಹಾಗೂ ಜೈವಿಕ ಗೊಬ್ಬರ ಪೂರೈಕೆ ಮಾಡುತ್ತಿದೆ. ಹುಳಿಯಾರಿನ ರೈತ ಸಂಪರ್ಕ ಕೇಂದ್ರದಲ್ಲಿ ಸಬ್ಸಿಡಿ ದರ ೩೯೦ರೂ ಗೆ ೫ ಕೆಜಿ ಬಿತ್ತನೆ ಹೆಸರುಕಾಳು ಬೀಜ ನೀಡುತ್ತಿದ್ದು ಪಹಣಿ ಮತ್ತು ಐಡಿ ಕಾರ್ಡ್ ತಂದು ಪಡೆಯಬಹುದಾಗಿದೆ.
ಮಳೆ ಬರುವುದಕ್ಕೂ ಮೊದಲೆ ಗೊಬ್ಬರದ ಅಂಗಡಿಯವರು ರಸಗೊಬ್ಬರದ ದಾಸ್ತಾನಿಗೆ ಮುಂದಾಗಿದ್ದರಿಂದ ಎಲ್ಲೂ ಗೊಬ್ಬರದ ಕೊರತೆ ಕಾಣದೆ ದಂಡಿಯಾಗಿ ರಸಗೊಬ್ಬರ ದೊರೆಯುತ್ತಿದೆ. ಜಿಂಕ್, ಕ್ಯಾಲ್ಸಿಯಂ,ಬೋರಾನ್,ಜಿಪ್ಸಂ ಅವಶ್ಯಕತೆಯಿದ್ದು ರೈತಸಂಪರ್ಕ ಕೇಂದ್ರದಲ್ಲಿ ಬೋರಾನ್ ,ಬಿಪ್ಸಂ ಮಾತ್ರ ಲಭ್ಯವಿದ್ದು ಉಳಿದ ಗೊಬ್ಬರವನ್ನು ಶೀಘ್ರವೇ ವ್ಯವಸ್ಥೆ ಮಾಡಬೇಕಿದೆ.
ಕಳೆದ ಬಾರಿ ಕಾಯಿ ಹಿಡಿದು,ಬಲಿಯುವ ಸಮಯದಲ್ಲಿ ಮಳೆ ಕೈಕೊಟ್ಟಿದ್ದರಿಂದ ಕೆಲ ರೈತರಿಗೆ ಹೆಸರು ಕೈಹತ್ತಲಿಲ್ಲ. ವಾಡಿಕೆಯಂತೆ ಅಶ್ವಿನಿ,ಭರಣೆ ಮಳೆಗೆ ಮುಂಗಾರು ಬಿತ್ತನೆ ಪ್ರಾರಂಭಗೊಳ್ಳುವುದಿದ್ದು , ಇದೀಗ ರೈತರು ಮುಂಚಿತವಾಗಿಯೇ ಬಿತ್ತನೆ ಮಾಡಿದ್ದಾರೆ. ಇದೀಗ ಅಶ್ವಿನಿ ಮಳೆ ಪ್ರಾರಂಭವಾಗಿದ್ದು ಮುಂದಿನ್ನು ಭರಣಿ,ಕೃತಿಕಾ,ರೋಹಿಣಿ, ಮೃಗಶಿರಾ ಮಳೆಗಳಿದ್ದು ಬಿತ್ತನೆ ಮಾಡಿರುವ ಬೆಳೆಗೆ ಮಳೆ ಸಮಸ್ಯೆ ಅಷ್ಟಾಗಿ ಕಾಡುವುದಿಲ್ಲ ಎಂಬ ನಂಬಿಕೆ ರೈತರಲ್ಲಿ ಮನೆ ಮಾಡಿದೆ.ಮುಂದಿನಗಳಲ್ಲಿ ಮಳೆ ಉತ್ತಮವಾಗಿ ಬಂದರೆ ಹೆಸರು ಹುಲುಸಗಿ ಬೆಳೆದು ರೈತರ ಬಾಳನ್ನು ಹಸನು ಮಾಡಲಿದೆ.
----------
ಬಿತ್ತನೆಗೂ ಮುಂಚೆ ಹೆಸರುಕಾಳಿನ ಬೆಲೆ ಕೆಜಿಗೆ ೭೫ ರಿಂದ ೮೦ ಇದ್ದರೆ, ಬೆಳೆ ಬಂದ ಸಮಯದಲ್ಲಿ ದಿಢೀರ್ ಅಂತ ಕಡಿಮೆಯಾಗುತ್ತದೆ. ಹಾಕಿದ ಬೀಜ,ಗೊಬ್ಬರ,ಬೇಸಾಯದ ಕೂಲಿ ಇವನೆಲ್ಲ ಕಳೆದು ಉಳಿಯೋದು ಮಾತ್ರ ತೀರಾ ಕಡಿಮೆನೆ. ಈ ಬಾರಿಯಾದರೂ ಸಕಾಲಕ್ಕೆ ಮಳೆಬಂದಲ್ಲಿ ಒಂದಿಷ್ಟು ಹೆಸರುಕಾಳನ್ನು ದಾಸ್ತಾನು ಮಾಡುತ್ತೇವೆ : ಕೆಂಕೆರೆಯ ಕರೆಸಿದ್ದಯ್ಯನ ಚಂಬಣ್ಣ., ರೈತ .
--------

ಈ ಭಾಗದ ಹೆಸರುಕಾಳಿಗೆ ಗುಜರಾತ್, ಆಂಧ್ರಪ್ರದೇಶ, ರಾಜಸ್ತಾನ, ಹರಿಯಾಣ,ಪಶ್ಚಿಮ ಬಂಗಾಳ,ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಇಲ್ಲಿನ ಎಪಿಎಂಸಿ ಯಲ್ಲಿ ಹೆಚ್ಚಿನ ಪ್ರಮಾಣದ ಹೆಸರು ಖರೀದಿ ಆಗುತ್ತದೆ: ಬಾಲಾಜಿ, ರವಾನೆದಾರ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.