ವಿಷಯಕ್ಕೆ ಹೋಗಿ

ಹುಳಿಯಾರು : ಜಾತಿಗಣತಿ ಬಗ್ಗೆ ಗಣತಿದಾರರ ದೂರು

ಹುಳಿಯಾರು  ಹೋಬಳಿಯಲ್ಲಿ ಜಾತಿಗಣತಿ ಪ್ರಗತಿಯಲಿದ್ದು ಶನಿವಾರದಂದು ಪಟ್ಟಣದಲ್ಲಿ ಗಣತಿ ಭರದಿಂದ ಸಾಗಿತ್ತು. ಬಂದ್ ಹಿನ್ನಲೆಯಲ್ಲಿ ಹೆಚ್ಚಿನ ಜನ ಮನೆಯಲ್ಲಿ ಸಿಗುವ ನಿರೀಕ್ಷೆಯಿಂದ ಮುಂಜಾನೆಯಿಂದಲೇ ಗಣತಿದಾರರು ಮನೆಗಳನ್ನು ಎಡೆತಾಕುತ್ತಿದ್ದರು.
ಹುಳಿಯಾರಿನ ಮನೆಯೊಂದರ ಸದಸ್ಯರಿಂದ ಮಾಹಿತಿ ಪಡೆಯುತ್ತಿರುವ ಗಣತಿದಾರ 
ಹಿಂದಿನ ದಿನವೇ ಅಗತ್ಯ ಬೇಕಾದ ದಾಖಲಾತಿಗಳನ್ನು ಸಿದ್ದಪಡಿಸಿಕೊಳ್ಳಲು ತಿಳಿಸುತ್ತಿದ್ದರೂ ಸಹ ಕೆಲವರು ಆಧಾರ್ , ಐಡಿ ಕಾರ್ಡ್ ಕೊಡಲು ವಿಳಂಬಿಸುತ್ತಿರುವುದರಿಂದ ಗಣತಿ ತಡವಾಗುತ್ತಿದೆ.ಇನ್ನೂ ಹತ್ತುದಿನ ವಿಸ್ತರಣೆ ಮಾಡಿದಲ್ಲಿ ಅನುಕೂಲವಾಗುತ್ತದೆ ಎಂಬ ಮಾತು ಎಲ್ಲಾ ಗಣತಿದಾರರಲ್ಲೂ ಸಾಮಾನ್ಯವಾಗಿ ಕೇಳೀಬಂತು.
ದೂರೇನು: ಜಾತಿಗಣತಿಯ ಫಾರಂನಲ್ಲಿರುವ ಒಟ್ಟು ೫೫ ಪ್ರಶ್ನೆಗಳನ್ನು ಕುಟುಂಬದವರಿಗೆ ಹೇಳಿ ಅವರಿಂದ ಉತ್ತರ ಪಡೆಯಬೇಕಿದೆ. ಕೆಲ ಕುಟುಂಬದಲ್ಲಿ ಗಣತಿದಾರರು ಕೇಳಿದಾಗ ದಾಖಲೆಗಳನ್ನು ಹುಡುಕಲು ಮನೆಯವರು ಮುಂದಾಗುತ್ತಿದ್ದು ಸಮಯ ವ್ಯಯವಾಗುತ್ತಿದೆ. ಪಟ್ಟಣದಲ್ಲಿ ಬೆಳಿಗ್ಗೆ ಹತ್ತರ ನಂತರ ಮಾಹಿತಿ ಪಡೆಯಲು ಹೋದರೆ ಮನೆಯ ಯಜಮಾನರ ಬಳಿ ದಾಖಲೆಗಳಿವೆ ನಾಳೆ ಬನ್ನಿ ಎನ್ನುತ್ತಾರೆ. ಇದರಿಂದ ಕೆಲ ಮನೆಗಳಿಗೆ ಪದೇಪದೆ ಹೋಗುವಂತಾಗಿದೆ ಅಲ್ಲದೆ ಪಟ್ಟಣಗಳಲ್ಲಿ ಬೆಳಿಗ್ಗೆ ೧೦ರ ಒಳಗಾಗಿ ಗಣತಿಕಾರ್ಯ ಮಾಡುವಂತಾಗಿದೆ.
ನಾಲ್ಕು ಮಂದಿಯಿರುವ ಒಂದು ಕುಟುಂಬವರ ವಿವರವನ್ನು ಪಡೆಯಲು ಕನಿಷ್ಠ ೩೦ ನಿಮಿಷವಾಗುತ್ತಿದ್ದು, ಎಂಟತ್ತು ಮಂದಿ ಇರುವ ಕುಟುಂಬದವರಿಂದ ಮಾಹಿತಿ ಪಡೆಯಲು ಒಂದು ಗಂಟೆ ಸಮಯವಾಗುತ್ತಿದೆ, ದಿನಕ್ಕೆ ಹತ್ತು ಮನೆಯವರ ಮಾಹಿತಿ ಕಲೆ ಹಾಕುವುದೇ ದುಸ್ಥರವಾಗಿದೆ ಎನ್ನುತ್ತಾರೆ ಗಣತಿದಾರ ಉಮೇಶ್.
ಸಹಾಯ ಮಾಡದ ಸಹಾಯವಾಣಿ: ಗಣತಿ ವೇಳೆ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಹೆಲ್ಪ್ ಲೈನ್ ಇದ್ದು ಆ ನಂಬರ್ ಗೆ ಗಣತಿದಾರರು ಕರೆ ಮಾಡಿದರೆ ಕರೆಯನ್ನು ಹೋಲ್ದ್ ಮಾಡಿ, ಮಾಹಿತಿ ನೀಡಲು ತಡ ಮಾಡುತ್ತಾರೆ. ಉಚಿತವಾಗಿರಬೇಕಾದ ಹೆಲ್ಪ್ ಲೈನ್ ನಲ್ಲಿ ನಾವು ಮಾಡುವ ಕರೆಗೆ ಹಣ ಕಟ್ಟಾಗುತ್ತಿರುವುದಲ್ಲದೆ, ನಾವು ಕೇಳುವ ಸಮಸ್ಯೆಗಳಿಗೆ ಉತ್ತರ ಸಿಗದೆ ಪರದಾಡುವಂತಾಗಿದೆ. ಈ ಬಗ್ಗೆ ಸರ್ಕಾರ ಗಮನ ಕೊಡಬೇಕಿದೆ ಎನ್ನುತ್ತಾರೆ.
ಹೆಚ್ಚು ಕುಟುಂಬಗಳ ಹೊರೆ: ಸದ್ಯ ನಿಗಧಿ ಮಾಡಿರುವ ಕೊನೆ ದಿನಾಂಕದ ಒಳಗೆ ಒಬ್ಬ ಗಣತಿದಾರ ೧೫೦ ಮನೆಗಳಲ್ಲಿ ಮಾಹಿತಿ ಪಡೆಯಬಹುದಾಗಿದೆ. ಆದರೆ ಒಬ್ಬ ಗಣತಿದಾರನಿಗೆ ೧೫೦ರಿಂದ ೨೦೦ ಮನೆಗಳನ್ನು ನೀಡಿದ್ದು ಏಪ್ರಿಲ್ ೩೦ರ ಒಳಗೆ ಎಲ್ಲಾ ಮನೆಗಳ ಮಾಹಿತಿಯನ್ನು ಪಡೆಯಲು ಅಸಾಧ್ಯವಾಗಿದ್ದು, ಕಾಲಾವಕಾಶ ನೀಡಿದಲ್ಲಿ ಅನುಕೂಲವಾಗುತ್ತದೆ.

ಗ್ರಾಮೀಣ ಭಾಗದಲ್ಲಿ ಗಣತಿ ಮಾಡಬೇಕಾದಲ್ಲಿ ಕೆಲವೊಂದು ಪ್ರಶ್ನೆಗಳಿಗೆ ಮನೆಯವರಿಂದ ಸಮರ್ಪಕ ಉತ್ತರ ದೊರೆಯುವುದಿಲ್ಲ. ಮದುವೆಯಾದಾಗ ಎಷ್ಟು ವರ್ಷ, ಮನೆಯಾಕೆ ಮದುವೆಯಾದಾಗ ಎಷ್ಟು ವರ್ಷ, ಮನೆಯಲ್ಲಿ ಕಾರು, ಬೈಕ್,ಟಿವಿ, ಫ್ರಿಡ್ಜ್, ಆದಾಯ ಎಷ್ಟು ಎಂಬ ಕೆಲವೊಂದು ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ನೀಡದೆ ನಿಮಗೆ ಇದೆಲ್ಲಾ ಯಾಕೆ ಎಂದು ರೇಗಾಡಿದ ಸಂದರ್ಭವು ಎದುರಾಗಿವೆ. ಹಾಗಾಗಿ ಅವರು ನೀಡುವ ತಪ್ಪು ಮಾಹಿತಿಯಿಂದ ಸಮೀಕ್ಷೆ ಎಷ್ಟರ ಮಟ್ಟಿಗೆ ಸರಿ ಇರುತ್ತದೆ ಎನ್ನುವ ಅಭಿಪ್ರಾಯ ಕೆಲವು ಗಣತಿದಾರರು ವ್ಯಕ್ತಪಡಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.