ವಿಷಯಕ್ಕೆ ಹೋಗಿ

ಹುಳಿಯಾರು : ಜಾತಿಗಣತಿ ಬಗ್ಗೆ ಗಣತಿದಾರರ ದೂರು

ಹುಳಿಯಾರು  ಹೋಬಳಿಯಲ್ಲಿ ಜಾತಿಗಣತಿ ಪ್ರಗತಿಯಲಿದ್ದು ಶನಿವಾರದಂದು ಪಟ್ಟಣದಲ್ಲಿ ಗಣತಿ ಭರದಿಂದ ಸಾಗಿತ್ತು. ಬಂದ್ ಹಿನ್ನಲೆಯಲ್ಲಿ ಹೆಚ್ಚಿನ ಜನ ಮನೆಯಲ್ಲಿ ಸಿಗುವ ನಿರೀಕ್ಷೆಯಿಂದ ಮುಂಜಾನೆಯಿಂದಲೇ ಗಣತಿದಾರರು ಮನೆಗಳನ್ನು ಎಡೆತಾಕುತ್ತಿದ್ದರು.
ಹುಳಿಯಾರಿನ ಮನೆಯೊಂದರ ಸದಸ್ಯರಿಂದ ಮಾಹಿತಿ ಪಡೆಯುತ್ತಿರುವ ಗಣತಿದಾರ 
ಹಿಂದಿನ ದಿನವೇ ಅಗತ್ಯ ಬೇಕಾದ ದಾಖಲಾತಿಗಳನ್ನು ಸಿದ್ದಪಡಿಸಿಕೊಳ್ಳಲು ತಿಳಿಸುತ್ತಿದ್ದರೂ ಸಹ ಕೆಲವರು ಆಧಾರ್ , ಐಡಿ ಕಾರ್ಡ್ ಕೊಡಲು ವಿಳಂಬಿಸುತ್ತಿರುವುದರಿಂದ ಗಣತಿ ತಡವಾಗುತ್ತಿದೆ.ಇನ್ನೂ ಹತ್ತುದಿನ ವಿಸ್ತರಣೆ ಮಾಡಿದಲ್ಲಿ ಅನುಕೂಲವಾಗುತ್ತದೆ ಎಂಬ ಮಾತು ಎಲ್ಲಾ ಗಣತಿದಾರರಲ್ಲೂ ಸಾಮಾನ್ಯವಾಗಿ ಕೇಳೀಬಂತು.
ದೂರೇನು: ಜಾತಿಗಣತಿಯ ಫಾರಂನಲ್ಲಿರುವ ಒಟ್ಟು ೫೫ ಪ್ರಶ್ನೆಗಳನ್ನು ಕುಟುಂಬದವರಿಗೆ ಹೇಳಿ ಅವರಿಂದ ಉತ್ತರ ಪಡೆಯಬೇಕಿದೆ. ಕೆಲ ಕುಟುಂಬದಲ್ಲಿ ಗಣತಿದಾರರು ಕೇಳಿದಾಗ ದಾಖಲೆಗಳನ್ನು ಹುಡುಕಲು ಮನೆಯವರು ಮುಂದಾಗುತ್ತಿದ್ದು ಸಮಯ ವ್ಯಯವಾಗುತ್ತಿದೆ. ಪಟ್ಟಣದಲ್ಲಿ ಬೆಳಿಗ್ಗೆ ಹತ್ತರ ನಂತರ ಮಾಹಿತಿ ಪಡೆಯಲು ಹೋದರೆ ಮನೆಯ ಯಜಮಾನರ ಬಳಿ ದಾಖಲೆಗಳಿವೆ ನಾಳೆ ಬನ್ನಿ ಎನ್ನುತ್ತಾರೆ. ಇದರಿಂದ ಕೆಲ ಮನೆಗಳಿಗೆ ಪದೇಪದೆ ಹೋಗುವಂತಾಗಿದೆ ಅಲ್ಲದೆ ಪಟ್ಟಣಗಳಲ್ಲಿ ಬೆಳಿಗ್ಗೆ ೧೦ರ ಒಳಗಾಗಿ ಗಣತಿಕಾರ್ಯ ಮಾಡುವಂತಾಗಿದೆ.
ನಾಲ್ಕು ಮಂದಿಯಿರುವ ಒಂದು ಕುಟುಂಬವರ ವಿವರವನ್ನು ಪಡೆಯಲು ಕನಿಷ್ಠ ೩೦ ನಿಮಿಷವಾಗುತ್ತಿದ್ದು, ಎಂಟತ್ತು ಮಂದಿ ಇರುವ ಕುಟುಂಬದವರಿಂದ ಮಾಹಿತಿ ಪಡೆಯಲು ಒಂದು ಗಂಟೆ ಸಮಯವಾಗುತ್ತಿದೆ, ದಿನಕ್ಕೆ ಹತ್ತು ಮನೆಯವರ ಮಾಹಿತಿ ಕಲೆ ಹಾಕುವುದೇ ದುಸ್ಥರವಾಗಿದೆ ಎನ್ನುತ್ತಾರೆ ಗಣತಿದಾರ ಉಮೇಶ್.
ಸಹಾಯ ಮಾಡದ ಸಹಾಯವಾಣಿ: ಗಣತಿ ವೇಳೆ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಹೆಲ್ಪ್ ಲೈನ್ ಇದ್ದು ಆ ನಂಬರ್ ಗೆ ಗಣತಿದಾರರು ಕರೆ ಮಾಡಿದರೆ ಕರೆಯನ್ನು ಹೋಲ್ದ್ ಮಾಡಿ, ಮಾಹಿತಿ ನೀಡಲು ತಡ ಮಾಡುತ್ತಾರೆ. ಉಚಿತವಾಗಿರಬೇಕಾದ ಹೆಲ್ಪ್ ಲೈನ್ ನಲ್ಲಿ ನಾವು ಮಾಡುವ ಕರೆಗೆ ಹಣ ಕಟ್ಟಾಗುತ್ತಿರುವುದಲ್ಲದೆ, ನಾವು ಕೇಳುವ ಸಮಸ್ಯೆಗಳಿಗೆ ಉತ್ತರ ಸಿಗದೆ ಪರದಾಡುವಂತಾಗಿದೆ. ಈ ಬಗ್ಗೆ ಸರ್ಕಾರ ಗಮನ ಕೊಡಬೇಕಿದೆ ಎನ್ನುತ್ತಾರೆ.
ಹೆಚ್ಚು ಕುಟುಂಬಗಳ ಹೊರೆ: ಸದ್ಯ ನಿಗಧಿ ಮಾಡಿರುವ ಕೊನೆ ದಿನಾಂಕದ ಒಳಗೆ ಒಬ್ಬ ಗಣತಿದಾರ ೧೫೦ ಮನೆಗಳಲ್ಲಿ ಮಾಹಿತಿ ಪಡೆಯಬಹುದಾಗಿದೆ. ಆದರೆ ಒಬ್ಬ ಗಣತಿದಾರನಿಗೆ ೧೫೦ರಿಂದ ೨೦೦ ಮನೆಗಳನ್ನು ನೀಡಿದ್ದು ಏಪ್ರಿಲ್ ೩೦ರ ಒಳಗೆ ಎಲ್ಲಾ ಮನೆಗಳ ಮಾಹಿತಿಯನ್ನು ಪಡೆಯಲು ಅಸಾಧ್ಯವಾಗಿದ್ದು, ಕಾಲಾವಕಾಶ ನೀಡಿದಲ್ಲಿ ಅನುಕೂಲವಾಗುತ್ತದೆ.

ಗ್ರಾಮೀಣ ಭಾಗದಲ್ಲಿ ಗಣತಿ ಮಾಡಬೇಕಾದಲ್ಲಿ ಕೆಲವೊಂದು ಪ್ರಶ್ನೆಗಳಿಗೆ ಮನೆಯವರಿಂದ ಸಮರ್ಪಕ ಉತ್ತರ ದೊರೆಯುವುದಿಲ್ಲ. ಮದುವೆಯಾದಾಗ ಎಷ್ಟು ವರ್ಷ, ಮನೆಯಾಕೆ ಮದುವೆಯಾದಾಗ ಎಷ್ಟು ವರ್ಷ, ಮನೆಯಲ್ಲಿ ಕಾರು, ಬೈಕ್,ಟಿವಿ, ಫ್ರಿಡ್ಜ್, ಆದಾಯ ಎಷ್ಟು ಎಂಬ ಕೆಲವೊಂದು ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ನೀಡದೆ ನಿಮಗೆ ಇದೆಲ್ಲಾ ಯಾಕೆ ಎಂದು ರೇಗಾಡಿದ ಸಂದರ್ಭವು ಎದುರಾಗಿವೆ. ಹಾಗಾಗಿ ಅವರು ನೀಡುವ ತಪ್ಪು ಮಾಹಿತಿಯಿಂದ ಸಮೀಕ್ಷೆ ಎಷ್ಟರ ಮಟ್ಟಿಗೆ ಸರಿ ಇರುತ್ತದೆ ಎನ್ನುವ ಅಭಿಪ್ರಾಯ ಕೆಲವು ಗಣತಿದಾರರು ವ್ಯಕ್ತಪಡಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...